ಸಿದ್ದಾಪುರ | ಕುಂದಾಪುರ
ಕುಂದಾಪುರ ತಾಲೂಕಿನ ಸಿದ್ದಾಪುರ ಸಮೀಪದ ಜನ್ಸಾಲೆ ಪ್ರದೇಶದಲ್ಲಿರುವ ತೆಂಗಿನ ಎಣ್ಣೆ ಮಿಲ್ ಒಂದರಲ್ಲಿ ತಡರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿ ಅಪಾರ ಆರ್ಥಿಕ ನಷ್ಟ ಉಂಟಾದ ಘಟನೆ ವರದಿಯಾಗಿದೆ.
ಶ್ರೀ ಮಧುಮಾಯ ಆಯಿಲ್ಸ್ (ಮಧು) ಫ್ಯಾಕ್ಟರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು. ಕುಂದಾಪುರ, ಬೈಂದೂರು ಹಾಗೂ ಹೊಸಂಗಡಿ ಕೆಪಿಟಿಸಿಎಲ್ನಿಂದ ತಲಾ ಒಂದೊಂದು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡವು.
ತೆಂಗಿನೆಣ್ಣೆ ಸಂಗ್ರಹ ಹೆಚ್ಚಿದ್ದರಿಂದ ಬೆಂಕಿಯ ತೀವ್ರತೆ ಹೆಚ್ಚಾಗಿ ನಿಯಂತ್ರಣಕ್ಕೆ ತರಲು ಸಾಕಷ್ಟು ಸಮಯ ತೆಗೆದುಕೊಂಡಿತು. ಸ್ಥಳೀಯರ ಸಹಕಾರದೊಂದಿಗೆ ರಾತ್ರಿಯಿಂದ ಬೆಳಿಗ್ಗೆ ಸುಮಾರು 9 ಗಂಟೆಯವರೆಗೆ ನಿರಂತರವಾಗಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಯಿತು.
ಘಟನಾ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿ ಅವಘಡದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Trending
- ಬೆಳ್ಮಾರು ಸರ್ಕಾರಿ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಸಂಭ್ರಮ ವಿದ್ಯಾರ್ಥಿಗಳಿಗೆ ಉಚಿತ ಸೌಲಭ್ಯಗಳ ಮೂಲಕ ಶಿಕ್ಷಣಕ್ಕೆ ಪ್ರೋತ್ಸಾಹ
- ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ,ನಾರಾಯಣ ಗುರು ಕಾಲೇಜು ಹಳೆ ವಿದ್ಯಾರ್ಥಿ ಸಂಘದಿಂದ ಶೈಕ್ಷಣಿಕ ಪ್ರೋತ್ಸಾಹ
- ದ್ವೇಷ ಮತ್ತು ವೈಮನಸ್ಸು ಪ್ರಚೋದನೆ ಆರೋಪ: ಯೂಟ್ಯೂಬ್ ವಿಡಿಯೊ ವಿರುದ್ಧ ಪೊಲೀಸ್ ಕ್ರಮ
- ಜೆಡಿಎಸ್ ಜಿಲ್ಲಾ ಪದಾಧಿಕಾರಿಗಳ ಮಹಾ ಸಭೆ ಯಶಸ್ವಿಸಂಘಟನೆ ಬಲವರ್ಧನೆಗೆ ಮಹತ್ವದ ನಿರ್ಣಯಗಳು
- ಪ್ರಕೃತಿಯೊಂದಿಗೆ ವಿನಯ ಮತ್ತು ಸಹಬಾಳ್ವೆಯ ಬದುಕು ಅಗತ್ಯ: ಮಾತಾ ಅಮೃತಾನಂದಮಯಿ ದೇವಿ
- ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಂಗಳೂರು, ಉಪ್ಪಿನಂಗಡಿ, ಸುರತ್ಕಲ್ ಠಾಣೆಗಳ ಹಲವು ಕ್ರಿಮಿನಲ್ ಪ್ರಕರಣಗಳ ಆರೋಪಿ ಕೊನೆಗೂ ಪೊಲೀಸರ ವಶಕ್ಕೆ
- ಕರ್ನಾಟಕ ರಾಜಕೀಯದಲ್ಲಿ ಅಸ್ಥಿರತೆ ಹೆಚ್ಚಳ: ಸಿದ್ದರಾಮಯ್ಯ ರಾಜಿನಾಮೆ ಕಾಂಗ್ರೆಸ್ ಒಳಜಗಳದ ಪರಾಕಾಷ್ಠೆಯೇ?
- ಮೇ 30ರಂದು ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಪದಾಧಿಕಾರಿಗಳ ಮಹಾ ಸಭೆ ಪಕ್ಷ ಸಂಘಟನೆ ಬಲವರ್ಧನೆ,ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆ ಹಾಗೂ ಜನಪರ ಹೋರಾಟಗಳ ಕುರಿತು ಮಹತ್ವದ ಚರ್ಚೆ

