ಉಡುಪಿ:
ಉಡುಪಿ ಜಿಲ್ಲೆ ಬ್ರಹ್ಮಾವರ ವಲಯದ ಅಧೀನಕ್ಕೆ ಒಳಪಡುವ ಅಮ್ಮುಂಜೆ ಸೇಕ್ರೆಡ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಚ್ಚದಂತೆ ಕ್ರಮ ಕೈಗೊಳ್ಳುವಂತೆ ಹೋರಾಟ ನಡೆಸುತ್ತಿರುವ ತುಳುನಾಡ ರಕ್ಷಣಾ ವೇದಿಕೆಯ ಕಾರ್ಯ ಶ್ಲಾಘನೀಯವಾಗಿದ್ದು, ಇದು ಕನ್ನಡ ಭಾಷೆ ಮತ್ತು ಕನ್ನಡ ಶಿಕ್ಷಣವನ್ನು ಉಳಿಸಿ ಬೆಳೆಸುವ ದಿಕ್ಕಿನಲ್ಲಿ ಕೈಗೊಂಡಿರುವ ಮಹತ್ವದ ಹೋರಾಟವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ಅವರು ಹೇಳಿದರು.
ಕನ್ನಡ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪುತ್ತಿರುವ ಇಂದಿನ ಪರಿಸ್ಥಿತಿಯಲ್ಲಿ, ಮಕ್ಕಳ ಭವಿಷ್ಯ ಹಾಗೂ ಕನ್ನಡ ಭಾಷೆಯ ಅಸ್ತಿತ್ವಕ್ಕಾಗಿ ಧ್ವನಿ ಎತ್ತಿರುವ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಸಮಾಜಕ್ಕೆ ದಿಕ್ಕು ತೋರಿಸುವಂತಿದೆ. ಶಿಕ್ಷಣವೇ ಭಾಷೆಯ ಜೀವಾಳವಾಗಿದ್ದು, ಪ್ರಾಥಮಿಕ ಹಂತದಲ್ಲೇ ಮಕ್ಕಳಿಗೆ ಮಾತೃಭಾಷೆಯಲ್ಲಿ ಶಿಕ್ಷಣ ದೊರಕಬೇಕೆಂಬ ಉದ್ದೇಶದಿಂದ ಈ ಹೋರಾಟ ನಡೆಸುತ್ತಿರುವುದು ಶ್ಲಾಘನೀಯ ಎಂದು ಅವರು ಅಭಿಪ್ರಾಯಪಟ್ಟರು.
ಕನ್ನಡವನ್ನು ಉಳಿಸಿ ಬೆಳೆಸುವ ಈ ಹೋರಾಟದಲ್ಲಿ ಕನ್ನಡ ಹಾಗೂ ತುಳು ಸಂಘಟನೆಗಳು ಒಂದೇ ಮನೋಭಾವದೊಂದಿಗೆ ಕೈಜೋಡಿಸುವುದು ಅತ್ಯಂತ ಅಗತ್ಯವಾಗಿದ್ದು, ಇಂತಹ ಹೋರಾಟಗಳು ಭಾಷಾ ಸಂಘಟನೆಗಳ ನಡುವೆ ಪ್ರೀತಿ–ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸುವ ಕೆಲಸ ಮಾಡುತ್ತದೆ. ಭಾಷೆ, ಸಂಸ್ಕೃತಿ ಹಾಗೂ ಶಿಕ್ಷಣದ ರಕ್ಷಣೆಗೆ ಸಂಘಟನೆಗಳ ಒಗ್ಗಟ್ಟು ಅವಶ್ಯಕವೆಂದು ಸುಜಯ್ ಪೂಜಾರಿ ಅವರು ಹೇಳಿದರು.
ತುಳುನಾಡ ರಕ್ಷಣಾ ವೇದಿಕೆಯ ಈ ನಿಲುವಿಗೆ ಕರ್ನಾಟಕ ರಕ್ಷಣಾ ವೇದಿಕೆ ಸಂಪೂರ್ಣ ಬೆಂಬಲ ನೀಡುವುದರ ಜೊತೆಗೆ, ಕನ್ನಡ ಶಾಲೆಗಳ ಉಳಿವಿಗಾಗಿ ಮುಂದಿನ ದಿನಗಳಲ್ಲಿ ಸಂಯುಕ್ತ ಹೋರಾಟಕ್ಕೆ ಸಿದ್ಧವಿರುವುದಾಗಿ ಅವರು ತಿಳಿಸಿದರು.
Trending
- ಆಯುರ್ವೇದ ಚಿಕಿತ್ಸೆಯ ಹೆಸರಿನಲ್ಲಿ ಮೋಸನಂಬಿಕೆ ಮೂಡಿಸಿ ಲಕ್ಷಾಂತರ ರೂಪಾಯಿ ವಂಚನೆಒಟ್ಟು ₹12.09 ಲಕ್ಷ ದೋಚಿದ ಆರೋಪ
- ಕರಾವಳಿಗೆ ಕ್ರಿಕೆಟ್ ಹಬ್ಬ: ‘ಗಜಾನನ ಕ್ರಿಕೆಟರ್ಸ್’ ಮೇ 22ಕ್ಕೆ ಗ್ರ್ಯಾಂಡ್ ಎಂಟ್ರಿ!
- ಪಂಚರಾಜ್ಯ ಫಲಿತಾಂಶ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವು ಮಮತಾ ಆಡಳಿತ ಅಂತ್ಯ ,ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಜಯ ,ಪುದುಚೇರಿಯಲ್ಲಿ ಎನ್ಡಿಎ ಮತ್ತೆ ಅಧಿಕಾರ, ತಮಿಳುನಾಡಿನಲ್ಲಿ ‘ವಿಜಯ್ ಅಲೆ’ – ಟಿವಿಕೆ ಅತಿದೊಡ್ಡ ಪಕ್ಷ ಡಿಎಂಕೆಗೆ ಭಾರೀ ಹಿನ್ನಡೆ , ಕೇರಳದಲ್ಲಿ ಯುಡಿಎಫ್ ಭರ್ಜರಿ ಜಯ – ಎಲ್ಡಿಎಫ್ ಸೋಲು
- ಉಡುಪಿ: ಉಡುಪಿಯಲ್ಲಿ ಅರ್ಥಪೂರ್ಣ ಕಾರ್ಮಿಕ ದಿನಾಚರಣೆ – ಸಾಧಕರಿಗೆ ಸನ್ಮಾನ,ತುಳು ಭಾಷೆಗೆ ಅಧಿಕೃತ ಮಾನ್ಯತೆ: ಜೆಡಿಎಸ್ ಕಾಪು ಯೋಗಿಶ್. ವಿ. ಶೆಟ್ಟಿ ಭರವಸೆ,ಕಾರ್ಮಿಕರ ಹೃದಯ ಗೆದ್ದ ಉದ್ಯಮಿ ಅಜಿತ್ ಶೆಟ್ಟಿ ಗೌರವ,ಕಾರ್ಮಿಕರ ಹಕ್ಕುಗಳ ಜಾಗೃತಿ – ವಿಜೇಂದ್ರ ಕೆ.ರಿಂದ ಸಮಗ್ರ ಮಾಹಿತಿ
- ನಾಡ್ಪಾಲ್ನಲ್ಲಿ ಕಸದ ಹಾವಳಿ: ಅರಣ್ಯ ಪ್ರದೇಶಕ್ಕೂ ವ್ಯಾಪಿಸಿದ ಮಾಲಿನ್ಯ – ಶ್ರೀಕಾಂತ್ ಪೂಜಾರಿ ಕುಚ್ಚೂರು ಎಚ್ಚರಿಕೆ
- ಬಂಟರ ಯಾನೆ ನಾಡವರ ಮಾತೃ ಸಂಘ ದ ಅಧ್ಯಕ್ಷರಾಗಿ ಅಜಿತ್ ಕುಮಾರ್ ರೈ ಪುನರಾಯ್ಕೆ
- ಮಹಿಳಾ ಮೀಸಲಾತಿಗೆ ಜೆಡಿಎಸ್ ಧ್ವನಿ: ಮಂಗಳೂರಿನಲ್ಲಿ ಪ್ರತಿಭಟನೆ:ಮಹಿಳಾ ಹಕ್ಕಿಗಾಗಿ ಹೋರಾಟ ಮುಂದುವರಿಯಲಿದೆ: ಎಸ್.ಎಲ್. ಬೋಜೆಗೌಡ
- ಬಜೆಟ್ನಲ್ಲಿ ಘೋಷಿಸಿರುವ 56,432 ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸಲು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಒತ್ತಾಯ

