ಉಡುಪಿ:
ಉಡುಪಿ ಜಿಲ್ಲೆ ಬ್ರಹ್ಮಾವರ ವಲಯದ ಅಧೀನಕ್ಕೆ ಒಳಪಡುವ ಅಮ್ಮುಂಜೆ ಸೇಕ್ರೆಡ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಚ್ಚದಂತೆ ಕ್ರಮ ಕೈಗೊಳ್ಳುವಂತೆ ಹೋರಾಟ ನಡೆಸುತ್ತಿರುವ ತುಳುನಾಡ ರಕ್ಷಣಾ ವೇದಿಕೆಯ ಕಾರ್ಯ ಶ್ಲಾಘನೀಯವಾಗಿದ್ದು, ಇದು ಕನ್ನಡ ಭಾಷೆ ಮತ್ತು ಕನ್ನಡ ಶಿಕ್ಷಣವನ್ನು ಉಳಿಸಿ ಬೆಳೆಸುವ ದಿಕ್ಕಿನಲ್ಲಿ ಕೈಗೊಂಡಿರುವ ಮಹತ್ವದ ಹೋರಾಟವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ಅವರು ಹೇಳಿದರು.
ಕನ್ನಡ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪುತ್ತಿರುವ ಇಂದಿನ ಪರಿಸ್ಥಿತಿಯಲ್ಲಿ, ಮಕ್ಕಳ ಭವಿಷ್ಯ ಹಾಗೂ ಕನ್ನಡ ಭಾಷೆಯ ಅಸ್ತಿತ್ವಕ್ಕಾಗಿ ಧ್ವನಿ ಎತ್ತಿರುವ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಸಮಾಜಕ್ಕೆ ದಿಕ್ಕು ತೋರಿಸುವಂತಿದೆ. ಶಿಕ್ಷಣವೇ ಭಾಷೆಯ ಜೀವಾಳವಾಗಿದ್ದು, ಪ್ರಾಥಮಿಕ ಹಂತದಲ್ಲೇ ಮಕ್ಕಳಿಗೆ ಮಾತೃಭಾಷೆಯಲ್ಲಿ ಶಿಕ್ಷಣ ದೊರಕಬೇಕೆಂಬ ಉದ್ದೇಶದಿಂದ ಈ ಹೋರಾಟ ನಡೆಸುತ್ತಿರುವುದು ಶ್ಲಾಘನೀಯ ಎಂದು ಅವರು ಅಭಿಪ್ರಾಯಪಟ್ಟರು.
ಕನ್ನಡವನ್ನು ಉಳಿಸಿ ಬೆಳೆಸುವ ಈ ಹೋರಾಟದಲ್ಲಿ ಕನ್ನಡ ಹಾಗೂ ತುಳು ಸಂಘಟನೆಗಳು ಒಂದೇ ಮನೋಭಾವದೊಂದಿಗೆ ಕೈಜೋಡಿಸುವುದು ಅತ್ಯಂತ ಅಗತ್ಯವಾಗಿದ್ದು, ಇಂತಹ ಹೋರಾಟಗಳು ಭಾಷಾ ಸಂಘಟನೆಗಳ ನಡುವೆ ಪ್ರೀತಿ–ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸುವ ಕೆಲಸ ಮಾಡುತ್ತದೆ. ಭಾಷೆ, ಸಂಸ್ಕೃತಿ ಹಾಗೂ ಶಿಕ್ಷಣದ ರಕ್ಷಣೆಗೆ ಸಂಘಟನೆಗಳ ಒಗ್ಗಟ್ಟು ಅವಶ್ಯಕವೆಂದು ಸುಜಯ್ ಪೂಜಾರಿ ಅವರು ಹೇಳಿದರು.
ತುಳುನಾಡ ರಕ್ಷಣಾ ವೇದಿಕೆಯ ಈ ನಿಲುವಿಗೆ ಕರ್ನಾಟಕ ರಕ್ಷಣಾ ವೇದಿಕೆ ಸಂಪೂರ್ಣ ಬೆಂಬಲ ನೀಡುವುದರ ಜೊತೆಗೆ, ಕನ್ನಡ ಶಾಲೆಗಳ ಉಳಿವಿಗಾಗಿ ಮುಂದಿನ ದಿನಗಳಲ್ಲಿ ಸಂಯುಕ್ತ ಹೋರಾಟಕ್ಕೆ ಸಿದ್ಧವಿರುವುದಾಗಿ ಅವರು ತಿಳಿಸಿದರು.
Trending
- ಕಾಡಿನ ಮಧ್ಯೆ ಹೆಬ್ರಿ ಪೊಲೀಸ್ ಠಾಣೆ: ಸಾರ್ವಜನಿಕರು ಹಾಗೂ ಸಿಬ್ಬಂದಿ ಸಂಕಷ್ಟದಲ್ಲಿ – ಸ್ಥಳಾಂತರಕ್ಕೆ ಜೆಡಿಎಸ್ ಆಗ್ರಹ
- ಮಂಗಳೂರು ಖಾಝಿ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ ಗಣ್ಯರ ಸಂತಾಪ
- ಹೊಸ ಪಡಿತರ ಚೀಟಿ ವಿತರಣೆಗೆ ಆಗ್ರಹಿಸಿ ಸಚಿವರಿಗೆ ಜೆಡಿಎಸ್ ನಿಯೋಗದಿಂದ ಮನವಿ ಸಲ್ಲಿಕೆ
- ಉದ್ಯಾವರ ಪಾಪನಾಶಿನಿ ಸೇತುವೆಯಿಂದ ನದಿಗೆ ಹಾರಿ ಯುವಕ ಆತ್ಮಹತ್ಯೆ; ಮೃತದೇಹ ಪತ್ತೆ
- ಸರ್ಕಾರಿ ಆಸ್ಪತ್ರೆಗಳಲ್ಲಿ ದಲ್ಲಾಳಿಗಳಿಗೆ ಬ್ರೇಕ್: ಆರೋಗ್ಯ ಸಚಿವರಿಂದ 24×7 ನೇರ ಸಹಾಯವಾಣಿ ಘೋಷಣೆ
- ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇಮೇಲ್; ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ
- NEET ಪರೀಕ್ಷಾ ವ್ಯವಸ್ಥೆಯ ಅಮಾನವೀಯ ಧೋರಣೆ ಖಂಡನೀಯ: ತುಳುನಾಡ ರಕ್ಷಣಾ ವೇದಿಕೆ
- ಉಡುಪಿ ಸಂತೆಕಟ್ಟೆ: ಅಕ್ರಮ ದತ್ತು ಪ್ರಕರಣ ಬೆಳಕಿಗೆ: ವೈದ್ಯ ಸೇರಿದಂತೆ ಇಬ್ಬರ ಬಂಧನ

