ಮಂಗಳೂರು: Mangaluru ನಗರ ಪೊಲೀಸ್ ಕಮಿಷನರೇಟ್ ಹಾಗೂ Udupi ಜಿಲ್ಲೆ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ಹಲವು ಗಂಭೀರ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಅನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತನನ್ನು ಹಳೆಯಂಗಡಿ ವಿಲೇಜ್ ನಿವಾಸಿ ಸಜ್ವಾನ್ ಹುಸೈನ್ (42) ಎಂದು ಗುರುತಿಸಲಾಗಿದೆ. ಈತನ ವಿರುದ್ಧ 02 ಕೊಲೆ, 04 ಕೊಲೆಯತ್ನ, ಗ್ಯಾಂಗ್ ರೇಪ್, 05 ದರೋಡೆ, ಅಪಹರಣ, ಸುಲಿಗೆ, ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ, ಕಳ್ಳತನ, ಸರಗಳ್ಳತನ, ಜೈಲಿನಲ್ಲಿಯೇ ಸಹಖೈದಿಗಳ ಮೇಲೆ ಹಲ್ಲೆ, ಅಕ್ರಮ ಕೂಟ ಸೇರಿ ಹಲ್ಲೆ, ಕೊಲೆ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ, ದರೋಡೆಗೆ ತಯಾರಿ ಹಾಗೂ ಸಂಚು ಸೇರಿದಂತೆ ವಿವಿಧ ಗಂಭೀರ ಅಪರಾಧಗಳಿಗೆ ಸಂಬಂಧಿಸಿದಂತೆ ಒಟ್ಟು ಸುಮಾರು 21 ಪ್ರಕರಣಗಳು ದಾಖಲಾಗಿವೆ.
ಈತನ ವಿರುದ್ಧ Mulkhi Police Station ವ್ಯಾಪ್ತಿಯಲ್ಲಿ 2008ರಲ್ಲಿ ದಾಖಲಾಗಿದ್ದ ಪ್ರವೀಣ್ ಎಂಬವರ ಅಪಹರಣ, ದರೋಡೆ ಹಾಗೂ ಕೊಲೆ ಪ್ರಕರಣದಲ್ಲಿ ಮಾನ್ಯ Karnataka High Court ದಿನಾಂಕ 28-02-2020ರಂದು ಜೀವಾವಧಿ ಶಿಕ್ಷೆ ವಿಧಿಸಿದೆ. ಅದಲ್ಲದೆ Karkala Police Station ವ್ಯಾಪ್ತಿಯಲ್ಲಿ 2008ರಲ್ಲಿ ದಾಖಲಾಗಿದ್ದ ದರೋಡೆ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯವು 3 ವರ್ಷಗಳ ಶಿಕ್ಷೆ ವಿಧಿಸಿದೆ.
ಬಂಧಿತನ ವಿರುದ್ಧ ಇನ್ನೂ 13 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದ್ದು, ವಿವಿಧ ನ್ಯಾಯಾಲಯಗಳಿಂದ ದಸ್ತಗಿರಿ ವಾರೆಂಟ್ಗಳು ಜಾರಿಗೊಂಡಿವೆ. ಅಲ್ಲದೆ 05 ಪ್ರಕರಣಗಳಲ್ಲಿ ನ್ಯಾಯಾಲಯವು ಎಲ್.ಪಿ.ಸಿ (Long Pending Case) ಎಂದು ಘೋಷಿಸಿರುವುದು ತಿಳಿದುಬಂದಿದೆ.
ಸುದೀರ್ಘ ಅವಧಿಯಿಂದ ಕಾನೂನು ಚೌಕಟ್ಟಿನಿಂದ ತಪ್ಪಿಸಿಕೊಳ್ಳುತ್ತಿದ್ದ ಆರೋಪಿ ಮೇಲೆ ವಿಶೇಷ ನಿಗಾವಹಿಸಿ ಸೂಕ್ತ ಮಾಹಿತಿ ಸಂಗ್ರಹಿಸಿದ ಪೊಲೀಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯಕ್ಷಮತೆಯನ್ನು ಹಿರಿಯ ಅಧಿಕಾರಿಗಳು ಶ್ಲಾಘಿಸಿದ್ದಾರೆ.
Trending
- ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ ಆರೋಪಿ ಸರೆ
- ಖ್ಯಾತ ಶಿಕ್ಷಣ ತಜ್ಞ, ದೀರ್ಘದೃಷ್ಟಿಯ ಶಿಕ್ಷಣ ಸಂಸ್ಥಾಪಕ ಹಾಗೂ ಉದ್ಯಮಿ ಡಾ. ಸಿಎ ಎ. ರಾಘವೇಂದ್ರ ರಾವ್ ನಿಧನ
- ಯಶ್ ಪಾಲ್ ಸುವರ್ಣ ನಿತೇಶ್ ರಾಣೆ ಭೇಟಿ ಅಂತಾರಾಜ್ಯ ಮೀನುಗಾರಿಕೆ ಸಮಸ್ಯೆ ಪರಿಹಾರಕ್ಕೆ ಭರವಸೆ
- ದಲಿತ ಮಹಿಳೆಯ ಗಂಬೀರ ಆರೋಪ ಸಿ.ಐ.ಡಿ. ತನಿಖೆ ಒಪ್ಪಿಸಿ ಆರೋಪಿತನ ಹಾಗೂ ಸಂಬಂಧಿತ ವ್ಯಕ್ತಿಗಳ ದೂರವಾಣಿ ಕರೆಗಳ ಪರಿಶೀಲನೆ ಮಾಡುವಂತೆ ತುಳುನಾಡ ರಕ್ಷಣಾ ವೇದಿಕೆ ಪ್ರಶಾಂತ್ ಭಟ್ ಕಡಬ ಆಗ್ರಹ
- ಮಂಗಳೂರು: ದರ್ಶನ ಪಾತ್ರಿ ಮುಂಡ್ಕೂರು ಜಾರಿಗೆಕಟ್ಟೆ ದಿವಾಕರ ಪೂಜಾರಿ ದೈವಾರಾಧನೆ ಕ್ಷೇತ್ರದಲ್ಲಿ ಮಾದರಿ ಸೇವಕ : ಮುಲ್ಕಿ ಕರುಣಾಕರ ಶೆಟ್ಟಿ
- ಕುಂದಾಪುರ: ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಶಶಾಂಕ್ ಶೆಟ್ಟಿ ಬಂಧನ
- ಮೇ 31ರಿಂದ ಜೂನ್ 6ರವರೆಗೆ ಯಕ್ಷಧ್ರುವ ಸಮುದ್ರಯಾನ
- ಮಂಗಳೂರು: MFC CHAI Bank ಭವ್ಯ ಉದ್ಘಾಟನೆ – ಜನಸಮೂಹದ ಸಮ್ಮುಖದಲ್ಲಿ ಹೊಸ ಹೆಜ್ಜೆ

