ಮೂಡುಬಿದಿರೆ, ಫೆ. 20: ಹೆಕ್ಕಡ್ಕ–ಬೈಲೂರು ಭಾಗದ ಶಿಕ್ಷಣ ಕ್ಷೇತ್ರಕ್ಕೆ ಅಮೂಲ್ಯ ಸೇವೆ ಸಲ್ಲಿಸಿದ್ದ ಸೌಟಬೆಟ್ಟು ಗುತ್ತುಮಾಳದ ಹಿರಿಯ ಶಿಕ್ಷಕ ಶ್ರೀ ಭುಜಬಲಿ ಅಧಿಕಾರಿಯವರು (85) ಶುಕ್ರವಾರ ನಿಧನರಾದರು. ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಇಹಲೋಕ ತ್ಯಜಿಸಿದರೆಂಬ ಸುದ್ದಿ ತಿಳಿದು ಬಂದಿದೆ.
ಹಳೆ ಕನ್ನಡ ಸಾಹಿತ್ಯದ ಮೇಲೆ ಅಪಾರ ಆಸಕ್ತಿ ಮತ್ತು ಪಾಂಡಿತ್ಯ ಹೊಂದಿದ್ದ ಶ್ರೀಯುತರು, ಪ್ರಾಚೀನ ಕನ್ನಡ ಕೃತಿಗಳನ್ನು ಸುಲಭ ಹಾಗೂ ಅರ್ಥಪೂರ್ಣವಾಗಿ ವಿದ್ಯಾರ್ಥಿಗಳಿಗೆ ತಿಳಿಸುವಲ್ಲಿ ವಿಶೇಷ ಖ್ಯಾತಿ ಪಡೆದಿದ್ದರು. ಶಿಕ್ಷಕರಾಗಿ ಮಾತ್ರವಲ್ಲದೆ ಮಾರ್ಗದರ್ಶಕರಾಗಿಯೂ ಅನೇಕ ವಿದ್ಯಾರ್ಥಿಗಳ ಬದುಕಿಗೆ ದಿಕ್ಕು ತೋರಿದ ಆದರ್ಶಗುರುರಾಗಿದ್ದರು.
ಹೆಕ್ಕಡ್ಕ, ಬೈಲೂರು, ಅಳಿಯೂರು, ಬಜಗೋಳಿ, ಪಡಂಗಡಿ, ಕೂಡಬೆಟ್ಟು, ನಲ್ಲೂರು ಮೊದಲಾದ ಪ್ರದೇಶಗಳ ಪ್ರಾಥಮಿಕ ಶಾಲೆಗಳಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ಜನಪ್ರಿಯ ಶಿಕ್ಷಕರಾಗಿ ನಿವೃತ್ತಿ ಹೊಂದಿದ್ದರು. ಶಿಸ್ತು, ಪ್ರಾಮಾಣಿಕತೆ ಮತ್ತು ಮಮತೆಯ ಸಂಯೋಜನೆಯೇ ಅವರ ವ್ಯಕ್ತಿತ್ವದ ವಿಶೇಷತೆಯಾಗಿತ್ತು.
ಇವರು ಮಾಜಿ ಕೇಂದ್ರ ಸಚಿವರಾದ Dhananjaya Kumar ಅವರ ಬಂಧುತನ ಹೊಂದಿದ್ದರು. ಪತ್ನಿ ಕೆಲವು ವರ್ಷಗಳ ಹಿಂದೆ ನಿಧನರಾಗಿದ್ದು, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಶಿಕ್ಷಣ ಕ್ಷೇತ್ರದ ಜೊತೆಗೆ ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದ ಅವರು ಸಮಾಜದಲ್ಲಿ ಗೌರವಾನ್ವಿತ ಸ್ಥಾನ ಹೊಂದಿದ್ದರು.
ಅಗಲಿದ ಆತ್ಮಕ್ಕೆ ಸದ್ಗತಿ ಲಭಿಸಲಿ ಹಾಗೂ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿ ಲಭಿಸಲಿ ಎಂದು ಶ್ರೀ ಜಿನಭಗವಂತನಲ್ಲಿ ಪ್ರಾರ್ಥಿಸಲಾಗಿದೆ.
– ಜಿನೇಂದ್ರ ಸ್ಮರಣೆಗಳೊಂದಿಗೆ
ಶ್ರೀ ದಿಗಂಬರ ಜೈನ ಮಠ, ಭಟ್ಟಾರಕ ನಗರ
ಮೂಡುಬಿದಿರೆ, ದ.ಕ.
Trending
- ಕುಂದಾಪುರ: ಎಕ್ಸಲೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ರಾಜ್ಯ ಮಟ್ಟದ ಅದ್ಭುತ ಸಾಧನೆ
- ದ್ವಿತೀಯ ಪಿಯುಸಿ ಫಲಿತಾಂಶ: ಆಳ್ವಾಸ್ ಕಾಲೇಜಿನ ದಿಶಾ ಟಾಪರ್ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ ಮೂಡುಬಿದಿರೆಯ ದಿಶಾ – 600ಕ್ಕೆ 600 ಅಂಕಗಳ ಸಾಧನೆ
- ಏಪ್ರಿಲ್ 12ರಂದು 3 ಗಂಟೆಗೆ ಉಡುಪಿಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಪ್ರಮುಖ ಸಭೆ, ಸದಸ್ಯರಿಗೆ ಕಡ್ಡಾಯ ಹಾಜರಾತಿ, ಸಂಘಟನಾ ಅಭಿವೃದ್ಧಿಗೆ ಮಹತ್ವದ ಚರ್ಚೆ
- ಅಜೆಕಾರು ಕಲಾಭಿಮಾನಿ ಬಳಗದ ರಜತ ಪರ್ವ – ಮುಂಬಯಿ ಯಕ್ಷಗಾನ ಸಮ್ಮೇಳನ-2026 : ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಪ್ರವೀಣ್ ಭೋಜ ಶೆಟ್ಟಿ ನೇಮಕ
- ಮಂಗಳೂರು : ಗುರುಪುರ ಲಾರಿ -ಬಸ್ಸಿನ ನಡುವೆ ಭೀಕರ ಅಪಘಾತ,ಚಾಲಕ ಸೇರಿ ಹಲವರಿಗೆ ಗಾಯ
- ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸೆ ಶಿಬಿರ
- ತಂದೆ-ಮಗ ಹತ್ಯೆ ಪ್ರಕರಣದಲ್ಲಿ ಐತಿಹಾಸಿಕ ತೀರ್ಪು ತೂತುಕುಡಿ ಲಾಕಪ್ ಸಾವು ಪ್ರಕರಣ: 9 ಪೊಲೀಸರಿಗೆ ಮರಣದಂಡನೆ
- ಮತದಾನದ ಮಹತ್ವ ಸಾರುವ ಕಂದಮ್ಮ – ಐದು ಭಾಷೆಗಳಲ್ಲಿ ಜಾಗೃತಿ ಮೂಡಿಸುತ್ತಿರುವ ಸನ್ನಿಧಿ

