ಇರಾನ್ನಲ್ಲಿ ನಡೆಯುತ್ತಿರುವ ನಿರಂತರ ಯುದ್ಧದಿಂದ ಉಡುಪಿ ಜಿಲ್ಲೆಯಲ್ಲಿಯೂ ದಿನದಿಂದ ದಿನಕ್ಕೆ ಗ್ಯಾಸ್ ಸಿಲಿಂಡರಿನ ಸಮಸ್ಯೆ ಉಲ್ಬಣಿಸುತ್ತಿದೆ. ಸಾಮಾನ್ಯ ಜನರ ಜೀವನಕ್ಕೂ ಇದರ ಬಿಸಿ ತಟ್ಟುತ್ತಿದೆ. ಈವರೆಗೆ ಗೃಹ ಬಳಕೆಯ ಸಿಲಿಂಡರ್ ಆದರೂ ಸಿಗುತ್ತಿತ್ತು. ಈಗ ಅದರ ಲಭ್ಯತೆಯು ಇಲ್ಲದಂತಾಗಿ ಜನಸಾಮಾನ್ಯರಿಗೂ ಸಹ ಅಡುಗೆ ಮಾಡಲಾಗದೆ ಪರಿತಪಿಸುವಂತಾಗಿದೆ. ಸಣ್ಣ ಹೋಟೆಲ್ಗಳು, ದೊಡ್ಡ ಹೋಟೆಲ್ಗಳು, ಲಾಡ್ಜ್ಗಳು, ಸ್ವಂತ ಮನೆಯಲ್ಲಿ ವಾಸಿಸುವವರು, ಬಾಡಿಗೆ ಮನೆಯಲ್ಲಿರುವ ಜನಸಾಮಾನ್ಯರು ಎಂಬ ತಾರತಮ್ಯವಿಲ್ಲದೇ ಎಲ್ಲರೂ ಸಹ ಸಿಲಿಂಡರಿನ ಸಮಸ್ಯೆಗೆ ಸಿಲುಕಿದ್ದಾರೆ. ಕಾರ್ಮಿಕರು ಕೆಲಸವಿಲ್ಲದೆ ಕಂಗಾಲಾಗಿದ್ದು ತುತ್ತು ಅನ್ನಕ್ಕೂ ಪರದಾಡುವಂತಾಗಿದೆ. ವರ್ಷವೂ ಈ ಸಂದರ್ಭದಲ್ಲಿ ಧಾರ್ಮಿಕ ಉತ್ಸವ, ವಿವಾಹ ಮುಂತಾದ ಸಮಾರಂಭ ನಡೆಯುವ ಕಾಲವಾಗಿದ್ದು, ಈಗ ಅದಕ್ಕೂ ಅನಿಲ ಪೂರೈಕೆಯ ಸಮಸ್ಯೆಯಾಗಿದ್ದು, ಸಾರ್ವಜನಿಕರಿಗೆ ಯಾವುದೇ ಸಭೆ ಸಮಾರಂಭವವನ್ನು ನಡೆಸಲಾಗದೆ ಸಿಲಿಂಡರಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಸಂಬಂಧಪಟ್ಟವರು ಈ ಬಗ್ಗೆ ಸೂಕ್ತ ಗಮನಹರಿಸಬೇಕಾಗಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾಧ್ಯಕ್ಷರಾದ ಸುಜಯ ಪೂಜಾರಿ ಇವರ ವಿನಂತಿ.
Trending
- ಬ್ರಹ್ಮಾವರ ಬೈಕಾಡಿಯಲ್ಲಿ ನೂತನ ತುಳು ಟೆಲಿ ಮೂವಿಗೆ ಮುಹೂರ್ತ ತುಳು ಭಾಷೆ, ಸಂಸ್ಕೃತಿ ಹಾಗೂ ಕರಾವಳಿಯ ಬದುಕಿನ ಅನಾವರಣಕ್ಕೆ ಹೊಸ ಪ್ರಯತ್ನ
- ಶಿವಪುರದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿದ ಶ್ರೀ ರಾಯರ 52ನೇ ಆರಾಧನಾ ಮಹೋತ್ಸವ
- ಪೋಕ್ಸೋ ಪ್ರಕರಣ: ಆರೋಪಿ ಬಂಧನಕ್ಕೆ ಆಗ್ರಹ ರಾಜಕೀಯ ಒತ್ತಡಕ್ಕೆ ಮಣಿಯದೆ ತನಿಖೆ ನಡೆಸಲಿ – ಹಕೀಂ ಕೂರ್ನಡ್ಕ
- ತುಳುವ ಮಹಾಸಭೆ ಇಂಟರ್ನ್ಯಾಷನಲ್ನ ಮಂಗಳೂರು ವಲಯ ಸಮಿತಿ ರೂಪೀಕರಣ ಸಭೆ ಸೆ.3ರಂದು
- ಮಂಗಳೂರು ಪಶ್ಚಿಮ ವಲಯದ ಐಜಿಪಿ ಅಮಿತ್ ಸಿಂಗ್ ವರ್ಗಾವಣೆ – ಆರ್. ಚೇತನ್ ನೂತನ ಡಿಐಜಿಯಾಗಿ ನೇಮಕ
- ಕಾನ್ಪುರ ತರಬೇತಿ ವಿಮಾನ ದುರಂತ – ಕರ್ನಾಟಕದ ಯುವ ಪೈಲಟ್ ಸಾವು
- ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಶ್ರೀ ದುರ್ಗಾನಂದ ಸ್ವಾಮೀಜಿಗೆ ಮಂತ್ರೋಪದೇಶ
- ಗುರು ವಂದನಾ: ಡಾ. ಸಿಸ್ಟರ್ ಸಾಧನಾ ಅವರಿಗೆ ‘ಅಧ್ಯಕ್ಷ ಆಚಾರ್ಯ’ ಪ್ರಶಸ್ತಿ ಶಿಕ್ಷಣ ಕ್ಷೇತ್ರದ ಸಮರ್ಪಣೆ, ಶೈಕ್ಷಣಿಕ ನಾಯಕತ್ವ ಹಾಗೂ ಆಡಳಿತ ಸೇವೆಗೆ ಸಂದ ಗೌರವ

