ಬ್ರಹ್ಮಾವರ ತಾಲೂಕಿನ ಕೋಟ ಸಮೀಪ ಅಕ್ರಮ ಐಪಿಎಲ್ ಬೆಟ್ಟಿಂಗ್ ದಂಧೆಯನ್ನು ಕೋಟ ಪೊಲೀಸರು ಭೇದಿಸಿದ್ದು, ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಕೋಟ ಮಣೂರು ಗ್ರಾಮದ ಬಾಳೆಬೆಟ್ಟು ಬಸ್ ನಿಲ್ದಾಣದ ಬಳಿ ನಡೆದ ದಾಳಿಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ.
ಏಪ್ರಿಲ್ 2ರಂದು ಸಂಜೆ 5.45ರ ಸುಮಾರಿಗೆ ಖಚಿತ ಮಾಹಿತಿಯ ಮೇರೆಗೆ ಪಿಎಸ್ಐ ಮಹಾಂತೇಶ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದರು. ಈ ವೇಳೆ ಸ್ಥಳದಲ್ಲಿದ್ದ ವ್ಯಕ್ತಿಯೋರ್ವ ಮೊಬೈಲ್ ಮೂಲಕ ಸಾರ್ವಜನಿಕರಿಂದ ಹಣ ಸಂಗ್ರಹಿಸಿ, Kolkata Knight Riders (KKR) ಮತ್ತು Sunrisers Hyderabad (SRH) ತಂಡಗಳ ನಡುವಿನ ಐಪಿಎಲ್ ಟಿ20 ಪಂದ್ಯಕ್ಕೆ ಸಂಬಂಧಿಸಿದಂತೆ ಅಕ್ರಮ ಬೆಟ್ಟಿಂಗ್ ನಡೆಸುತ್ತಿರುವುದು ಪತ್ತೆಯಾಯಿತು.
ತಕ್ಷಣವೇ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆತನು ಆದಿತ್ಯ ಶೆಟ್ಟಿ (28) ಎಂದು ಗುರುತಿಸಲ್ಪಟ್ಟಿದ್ದಾನೆ. ನೂಜಿಯ ಸಂದೀಪ ಗಾಣಿಗನ ಸೂಚನೆಯಂತೆ “PARKER” ಎಂಬ ಕ್ರಿಕೆಟ್ ಬೆಟ್ಟಿಂಗ್ ವೆಬ್ಸೈಟ್ ಮೂಲಕ ಈ ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದುದಾಗಿ ಆತ ಒಪ್ಪಿಕೊಂಡಿದ್ದಾನೆ.
ಹೆಚ್ಚುವರಿ ವಿಚಾರಣೆಯಲ್ಲಿ, ಇತ್ತೀಚೆಗೆ ನಡೆದ Lucknow Super Giants (LSG) ಮತ್ತು Delhi Capitals ನಡುವಿನ ಪಂದ್ಯದಲ್ಲೂ ಇದೇ ರೀತಿಯಲ್ಲಿ ಬೆಟ್ಟಿಂಗ್ ಹಣ ಸಂಗ್ರಹಿಸಿ, ಬ್ಯಾಂಕ್ ಖಾತೆಗೆ ಜಮಾ ಮಾಡಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಪೊಲೀಸರು ಆರೋಪಿಯಿಂದ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದು, ಪ್ರಕರಣದಲ್ಲಿ ಇನ್ನೊಬ್ಬ ಪ್ರಮುಖ ಆರೋಪಿಯಾದ ಸಂದೀಪ ಗಾಣಿಗನಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 57/2026 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಕಲಂ 78 KP Act, 112 BNS ಹಾಗೂ 66(D) IT Act ಅಡಿಯಲ್ಲಿ ತನಿಖೆ ಮುಂದುವರಿಯುತ್ತಿದೆ.
Trending
- ಸಂತೆಕಟ್ಟೆಯಲ್ಲಿ 50 ವರ್ಷ ಹಳೆಯ ಬೃಹತ್ ಮರ ಕಡಿತ ಪರಿಸರದ ಮೇಲಿನ ಕ್ರೌರ್ಯ; ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ: ತುಳುನಾಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ
- ಉಡುಪಿ ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಜೆಡಿಎಸ್ ಬರ ಹಾಗೂ ಪ್ರಕೃತಿ ವಿಕೋಪ ಅಧ್ಯಯನ ತಂಡ ಭೇಟಿ- ಕೂಡಲೇ ಸ್ಪಂದಿಸಿ ಅಧಿಕಾರಿಗಳಿಗೆ ಎಸ್. ಎಲ್. ಭೋಜೆಗೌಡ ಆಗ್ರಹ
- ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಕಾರ್ಯವೈಖರಿಗೆ ಮೆಚ್ಚುಗೆ; ನಮ್ಮ ಕರ್ನಾಟಕ ಸೇನೆಯಿಂದ ಅಭಿನಂದನೆ
- ಬಿ.ಸಿ.ರೋಡ್ ಹತ್ಯೆ ಪ್ರಕರಣ: ಮರಣೋತ್ತರ ಪರೀಕ್ಷೆ ಪೂರ್ಣ – ಲಾವಣ್ಯ ಪಾರ್ಥಿವ ಶರೀರ ಸ್ವಗ್ರಾಮಕ್ಕೆ ರವಾನೆ
- ಮಂಗಳೂರು :ನಾಗೋರಿ ಭೂಕುಸಿತ ಹಾಗೂ ಸೋಮೇಶ್ವರ ಕಡಲುಕೊರೆತ ಪ್ರದೇಶಗಳಿಗೆ ಭೇಟಿ ನೀಡಿದ ವಿಧಾನ ಪರಿಷತ್ ಶಾಸಕ ಎಸ್.ಎಲ್. ಭೋಜೆಗೌಡ, ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸಲು ಸರ್ಕಾರಕ್ಕೆ ಶಿಫಾರಸು – ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ
- ಬಿ.ಸಿ.ರೋಡ್ನಲ್ಲಿ ಯುವತಿಯ ಭೀಕರ ಹತ್ಯೆ,ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಮಾರಕಾಸ್ತ್ರದಿಂದ ದಾಳಿ; ಆರೋಪಿ ಪರಾರಿ – ವ್ಯಾಪಕ ತನಿಖೆ ಆರಂಭ
- ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಜೆಡಿಎಸ್ ನೂತನ ಪದಾಧಿಕಾರಿಗಳಿಗೆ ನೇಮಕ ಪತ್ರ ವಿತರಣೆ,ಪಕ್ಷ ಸಂಘಟನೆಗೆ ಮತ್ತಷ್ಟು ವೇಗ ನೀಡಲಾಗುವುದು: ಎನ್.ಪಿ. ಪುಷ್ಪರಾಜನ್
- ಡಿ.ಕೆ. ಟ್ರಾನ್ಸ್ಪೋರ್ಟ್ & ಲಾಜಿಸ್ಟಿಕ್ ಸರ್ವೀಸಸ್ಗೆ ಯಶಸ್ವಿ ಒಂದು ವರ್ಷದ ಸಂಭ್ರಮ,ವಿಶ್ವಾಸ, ಸಮಯಪಾಲನೆ ಮತ್ತು ಗುಣಮಟ್ಟದ ಸೇವೆಯಿಂದ ಸಾರಿಗೆ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು

