ಚಿತ್ರದುರ್ಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿ ಮಾಡಿಸಿ, ಬಳಿಕ ಗರ್ಭಪಾತ ಮಾಡಿಸಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕನನ್ನು ತಳಕು ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.
ಬಂಧಿತ ಆರೋಪಿಯನ್ನು ಡಿಓ ರಾಜಣ್ಣ ಎಂದು ಗುರುತಿಸಲಾಗಿದ್ದು, ಆತ ಹತ್ತನೇ ತರಗತಿಯ ವಿದ್ಯಾರ್ಥಿನಿಯನ್ನು ದುರುಪಯೋಗಪಡಿಸಿಕೊಂಡು ಗರ್ಭಿಣಿ ಮಾಡಿದ್ದಾನೆ ಎನ್ನಲಾಗಿದೆ. ಬಳಿಕ ಪ್ರಕರಣ ಬಯಲಾಗುವ ಭೀತಿಯಿಂದ ಲಕ್ಷ್ಮಿ ಶ್ರೀನಿವಾಸ್ ನರ್ಸಿಂಗ್ ಹೋಂನಲ್ಲಿ ಗರ್ಭಪಾತ ಮಾಡಿಸಿದ ಸಂಗತಿ ತನಿಖೆಯಲ್ಲಿ ಬಹಿರಂಗವಾಗಿದೆ.
ಆರೋಪಿ ಬಂಧನವಾಗುತ್ತಿದ್ದಂತೆ ಗರ್ಭಪಾತ ನಡೆಸಿದರೆಂದು ಆರೋಪಿಸಲಾಗಿರುವ ವೈದ್ಯೆ ಡಾ. ಶಂಕರ್ ಲಕ್ಷ್ಮಿ ನಾಪತ್ತೆಯಾಗಿದ್ದು, ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇವರ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ.
ತಳಕು ಪೊಲೀಸ್ ಠಾಣೆ ಪಿಎಸ್ಐ ಶಿವಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಈ ಸಂಬಂಧ ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
Trending
- ಬೆಳ್ಮಾರು ಸರ್ಕಾರಿ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಸಂಭ್ರಮ ವಿದ್ಯಾರ್ಥಿಗಳಿಗೆ ಉಚಿತ ಸೌಲಭ್ಯಗಳ ಮೂಲಕ ಶಿಕ್ಷಣಕ್ಕೆ ಪ್ರೋತ್ಸಾಹ
- ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ,ನಾರಾಯಣ ಗುರು ಕಾಲೇಜು ಹಳೆ ವಿದ್ಯಾರ್ಥಿ ಸಂಘದಿಂದ ಶೈಕ್ಷಣಿಕ ಪ್ರೋತ್ಸಾಹ
- ದ್ವೇಷ ಮತ್ತು ವೈಮನಸ್ಸು ಪ್ರಚೋದನೆ ಆರೋಪ: ಯೂಟ್ಯೂಬ್ ವಿಡಿಯೊ ವಿರುದ್ಧ ಪೊಲೀಸ್ ಕ್ರಮ
- ಜೆಡಿಎಸ್ ಜಿಲ್ಲಾ ಪದಾಧಿಕಾರಿಗಳ ಮಹಾ ಸಭೆ ಯಶಸ್ವಿಸಂಘಟನೆ ಬಲವರ್ಧನೆಗೆ ಮಹತ್ವದ ನಿರ್ಣಯಗಳು
- ಪ್ರಕೃತಿಯೊಂದಿಗೆ ವಿನಯ ಮತ್ತು ಸಹಬಾಳ್ವೆಯ ಬದುಕು ಅಗತ್ಯ: ಮಾತಾ ಅಮೃತಾನಂದಮಯಿ ದೇವಿ
- ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಂಗಳೂರು, ಉಪ್ಪಿನಂಗಡಿ, ಸುರತ್ಕಲ್ ಠಾಣೆಗಳ ಹಲವು ಕ್ರಿಮಿನಲ್ ಪ್ರಕರಣಗಳ ಆರೋಪಿ ಕೊನೆಗೂ ಪೊಲೀಸರ ವಶಕ್ಕೆ
- ಕರ್ನಾಟಕ ರಾಜಕೀಯದಲ್ಲಿ ಅಸ್ಥಿರತೆ ಹೆಚ್ಚಳ: ಸಿದ್ದರಾಮಯ್ಯ ರಾಜಿನಾಮೆ ಕಾಂಗ್ರೆಸ್ ಒಳಜಗಳದ ಪರಾಕಾಷ್ಠೆಯೇ?
- ಮೇ 30ರಂದು ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಪದಾಧಿಕಾರಿಗಳ ಮಹಾ ಸಭೆ ಪಕ್ಷ ಸಂಘಟನೆ ಬಲವರ್ಧನೆ,ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆ ಹಾಗೂ ಜನಪರ ಹೋರಾಟಗಳ ಕುರಿತು ಮಹತ್ವದ ಚರ್ಚೆ

