ದಕ್ಷಿಣ ವಲಯದ ಕಪಿತಾನಿಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾದ ಅಖಿಲೇಶ್ ವಿಶೇಷ ಸಾಧನೆಗೈದು ಗಮನ ಸೆಳೆದಿದ್ದಾನೆ. ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಯಾಗಿರುವ ಅಖಿಲೇಶ್, ಇತ್ತೀಚೆಗೆ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ರಲ್ಲಿ 550 ಅಂಕಗಳನ್ನು ಪಡೆದು 58 ಶೇಕಡಾ ಫಲಿತಾಂಶ ದಾಖಲಿಸಿದ್ದಾನೆ.
ಅಖಿಲೇಶ್ ಅವರ ತಂದೆ ಉದಯ್ ಕುಮಾರ್ ಫೋಟೋಗ್ರಾಫರ್ ಆಗಿದ್ದು, ತಾಯಿ ಕುಂಪಲಾ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತಮ್ಮ ಮಗನ ಸಾಧನೆಗೆ ಪೋಷಕರು ಸಂತೋಷ ವ್ಯಕ್ತಪಡಿಸಿದ್ದಾರೆ.
ಸಾಮಾನ್ಯ ಮಕ್ಕಳಿಗಿಂತ ನಾನು ಕಡಿಮೆ ಇಲ್ಲ ಎಂಬ ಮನೋಭಾವದೊಂದಿಗೆ ಅಖಿಲೇಶ್ ಈ ಸಾಧನೆ ಮಾಡಿದ್ದು, ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ. ಭವಿಷ್ಯದಲ್ಲಿ ಜಿಲ್ಲಾಧಿಕಾರಿಯಾಗಬೇಕು ಎಂಬುದು ಈ ವಿದ್ಯಾರ್ಥಿಯ ಕನಸಾಗಿದೆ.
ಈ ಹಿನ್ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಅಖಿಲೇಶ್ ಅವರನ್ನು ಸನ್ಮಾನಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್.ಆರ್. ಈಶ್ವರ್, ಬಿ.ಆರ್.ಸಿ. ಅಧಿಕಾರಿ ಸುಷ್ಮಾ ಕಿಣಿ ಹಾಗೂ ಕಚೇರಿಯ ಪತ್ರಾಂಕಿತ ವ್ಯವಸ್ಥಾಪಕರಾದ ಶ್ರೀಮತಿ ಶಾರಿಕಾ ಅವರು ವಿದ್ಯಾರ್ಥಿಗೆ ಅಭಿನಂದನೆ ಸಲ್ಲಿಸಿ ಗೌರವಿಸಿದರು.
ಈ ಸಾಧನೆ ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳ ಸಾಮರ್ಥ್ಯವನ್ನು ತೋರಿಸುವುದರ ಜೊತೆಗೆ, ಸಮರ್ಪಕ ಮಾರ್ಗದರ್ಶನ ಮತ್ತು ಪರಿಶ್ರಮ ಇದ್ದರೆ ಯಾವುದೇ ಗುರಿ ಸಾಧಿಸಲು ಸಾಧ್ಯವೆಂಬುದನ್ನು ಸಾಬೀತುಪಡಿಸಿದೆ.

