ಉಡುಪಿ, ಜೂನ್ 23: ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.
ಬೆದರಿಕೆ ಸಂದೇಶದ ಮಾಹಿತಿ ಲಭಿಸುತ್ತಿದ್ದಂತೆ ಉಡುಪಿ ನಗರ ಪೊಲೀಸರು, ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ನ್ಯಾಯಾಲಯ ಸಂಕೀರ್ಣಕ್ಕೆ ಧಾವಿಸಿ ಶೋಧ ಕಾರ್ಯಾಚರಣೆ ಆರಂಭಿಸಿದರು. ನ್ಯಾಯಾಲಯದ ಕಟ್ಟಡ ಹಾಗೂ ಆವರಣದ ವಿವಿಧ ಭಾಗಗಳಲ್ಲಿ ಸುದೀರ್ಘ ಪರಿಶೀಲನೆ ನಡೆಸಲಾಯಿತು.
ಭದ್ರತಾ ದೃಷ್ಟಿಯಿಂದ ನ್ಯಾಯಾಲಯ ಸಂಕೀರ್ಣದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ನ್ಯಾಯಾಲಯಕ್ಕೆ ಆಗಮಿಸುವ ಸಾರ್ವಜನಿಕರು ಹಾಗೂ ಸಿಬ್ಬಂದಿಯ ಮೇಲೂ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ.
ಇದೇ ವೇಳೆ ಬೆದರಿಕೆ ಸಂದೇಶ ಕಳುಹಿಸಿದವರ ಪತ್ತೆಗಾಗಿ ಪೊಲೀಸರು ತನಿಖೆ ಆರಂಭಿಸಿದ್ದು, ಇಮೇಲ್ನ ಮೂಲವನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ.
ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಶೋಧ ಕಾರ್ಯಾಚರಣೆ ಪೂರ್ಣಗೊಂಡ ಬಳಿಕವೇ ಬೆದರಿಕೆ ಸಂದೇಶದ ಸತ್ಯಾಸತ್ಯತೆ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ
Trending
- ಸರ್ಕಾರಿ ಆಸ್ಪತ್ರೆಗಳಲ್ಲಿ ದಲ್ಲಾಳಿಗಳಿಗೆ ಬ್ರೇಕ್: ಆರೋಗ್ಯ ಸಚಿವರಿಂದ 24×7 ನೇರ ಸಹಾಯವಾಣಿ ಘೋಷಣೆ
- ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇಮೇಲ್; ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ
- NEET ಪರೀಕ್ಷಾ ವ್ಯವಸ್ಥೆಯ ಅಮಾನವೀಯ ಧೋರಣೆ ಖಂಡನೀಯ: ತುಳುನಾಡ ರಕ್ಷಣಾ ವೇದಿಕೆ
- ಉಡುಪಿ ಸಂತೆಕಟ್ಟೆ: ಅಕ್ರಮ ದತ್ತು ಪ್ರಕರಣ ಬೆಳಕಿಗೆ: ವೈದ್ಯ ಸೇರಿದಂತೆ ಇಬ್ಬರ ಬಂಧನ
- ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ: ಬಡವರ ಮೇಲೆಯೇ ಕಾನೂನು ಯಾಕೆ? – ತುಳುನಾಡ ರಕ್ಷಣಾ ವೇದಿಕೆ ಕಾರ್ಮಿಕ ಘಟಕ ರಾಜ್ಯ ಸಂಚಾಲಕ ಪ್ರಶಾಂತ್ ಭಟ್ ಕಡಬ ಪ್ರಶ್ನೆ
- ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಮಹಿಳಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
- ಮೂಡುಬಿದಿರೆಯಲ್ಲಿ ಆಗಸ್ಟ್ 7-8ರಂದು ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ ಮೇಳ 300ಕ್ಕೂ ಅಧಿಕ ಕಂಪನಿಗಳ ಭಾಗಿ; ಸಾವಿರಾರು ಉದ್ಯೋಗಾವಕಾಶಗಳ ನಿರೀಕ್ಷೆ
- ಪಡಿತರ ಚೀಟಿ ಸಮಸ್ಯೆ: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಜೆಡಿಎಸ್ ನಿಯೋಗ ಭೇಟಿ, ಅಧಿಕಾರಿಗಳಿಗೆ ತರಾಟೆ

