ಉಡುಪಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಇದರ ಜನಪರ, ಸಾಮಾಜಿಕ ಚಟುವಟಿಕೆಗಳಲ್ಲಿ ಸಂಪೂರ್ಣ ಸಹಕಾರ ಹಾಗು ಉಡುಪಿ ಜಿಲ್ಲಾ ಖಾಝಿ ಯಾಗಿದ್ದ ತಾಜುಲ್ ಫುಕಹಾಹ್ ಬೇಕಲ್ ಉಸ್ತಾದ್ ಇಬ್ರಾಹಿಂ ಮುಸ್ಲಿಯಾರ್ ಅವರ ಅನುಸ್ಮರಣೆ ನಿಮಿತ್ತ ನಡೆದ ಬೃಹತ್ ವಿದ್ವಾಂಸ, ಉಮರಾ ಸಮಾವೇಶಕ್ಕೆ ಸ್ಥಳಾವಕಾಶ ಹಾಗೂ ಸಂಪೂರ್ಣ ಸಹಕಾರ ನೀಡಿದ ಬದ್ರಿಯಾ ಜುಮುಅ ಮಸ್ಜಿದ್ ಮಲ್ಲಾರು – ಮಜೂರು ಆಡಳಿತ ಸಮಿತಿಗೆ ಸುನ್ನೀ ಸಂಯುಕ್ತ ಜಮಾಅತ್ ಕಮಿಟಿ ವತಿಯಿಂದ ಮೂಳೂರು ಸುನ್ನೀ ಸೆಂಟರ್ ನಲ್ಲಿ ನಡೆದ ಅಸಂಬ್ಲೇಜ್ ಕಾರ್ಯಕ್ರಮದಲ್ಲಿ ಉಪ ಖಾಝಿ ಅಬ್ದುರ್ರಹ್ಮಾನ್ ಮದನಿ ಯವರ ದಿವ್ಯ ಹಸ್ತದ ಮೂಲಕ
ಗೌರವ ಸಲ್ಲಿಸಲಾಯಿತು. ಗೌರವ ಸಮರ್ಪಣೆಯನ್ನು ಸ್ವೀಕರಿಸಿದ ಅಧ್ಯಕ್ಷ ಡಾ.ಎಂ.ಫಾರೂಕ್ ರವರು ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸಿದರು. ಮುಂದಿನ ದಿನಗಳಲ್ಲಿ ನಮ್ಮ ಸಹಕಾರವು ಮುಂದುವರೆಯಲಿದೆ ಎಂದು ಡಾ.ಫಾರೂಕ್ ರವರು ತಿಳಿಸಿದರು.
ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಅಬೂಬಕರ್ ನೇಜಾರ್,
ಕಾರ್ಯದರ್ಶಿ ಬಾವು ಹಾಜಿ ಮೂಳೂರು, ಖತೀಬ್ ಅಬ್ದುರ್ರಶೀದ್ ಸಖಾಫಿ, ಮೂಳೂರು ಮುದರ್ರಿಸ್ ಹಾಫಿಳ್ ಅಶ್ರಫ್ ಸಖಾಫಿ, ಸುನ್ನೀ ಉಲಮಾ ಒಕ್ಕೂಟದ ಕಾರ್ಯದರ್ಶಿ ಸುಲೈಮಾನ್ ಸಅದಿ, ಸುನ್ನೀ ಮ್ಯಾನೇಜ್ಮೆಂಟ್ ಅಸೋಸಿಯೇಶನ್ ಇದರ ಅಧ್ಯಕ್ಷರಾದ ಹುಸೈನ್ ಪಡುಕೆರೆ
ಉಪಸ್ಥಿತರಿದ್ದರು. ಮಿತ್ತೂರು ಹಂಝ ಮದನಿ ಧ್ಯೇಯೋದ್ದೇಶ ತರಗತಿ ಮಂಡಿಸಿದರು.
ಸಂಘಟನಾ ಕಾರ್ಯದರ್ಶಿ ಕಲ್ಕಟ್ಟ ಅಬ್ದುರ್ರಹ್ಮಾನ್ ರಝ್ವೀ ಕಾರ್ಯಕ್ರಮವನ್ನು ನಿರೂಪಿಸಿದರು.
ಕಾರ್ಯದರ್ಶಿ ಮುಹಮ್ಮದ್ ಅಶ್ರಫ್ ಫುರ್ಖಾನೀ ಸ್ವಾಗತವನ್ನು, ಕಾರ್ಯದರ್ಶಿ ಎನ್.ಸಿ.ರಹೀಮ್ ಧನ್ಯವಾದವನ್ನು ಸಮರ್ಪಿಸಿದರು. ಈ ಸಂದರ್ಭದಲ್ಲಿ ಬಿ.ಜೆ.ಎಂ ಜಮಾತ್ ಕಮಿಟಿ ಪರವಾಗಿ ಸಮಿತಿ ಕಾರ್ಯದರ್ಶಿ ಅಶ್ರಫ್ ಕರಂದಾಡಿ ಸದಸ್ಯರಾದ ರಝಕ್ ಕೊಪ್ಪ ಭಾಗವಹಿಸಿದ್ದರು
Trending
- ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆ ಖಂಡನೀಯ: ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಉಡುಪಿ ಪತ್ರಕರ್ತರ ಸಂಘ ಆಗ್ರಹ
- ಆರೂರು ಅಡ್ಜಿಲು ಭಾಗದ ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಮೆಸ್ಕಾಂ ಒಂದು ತಿಂಗಳೊಳಗೆ ಹೊಸ ಟಿಸಿ ಅಳವಡಿಸುವ ಭರವಸೆ – ತುಳುನಾಡು ರಕ್ಷಣಾ ವೇದಿಕೆ ಆಗ್ರಹ
- ಆಗಸ್ಟ್ 23ರಂದು ಮಂಗಳೂರಿನಲ್ಲಿ ಅಂತರರಾಷ್ಟ್ರೀಯ ಬಂಟ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ “ಮರಿಯಾಳದ ಮಿನದನ” ಪೂರ್ವಭಾವಿ ಸಭೆ
- ₹5 ಕೋಟಿ ನಕಲಿ ಔಷಧಿ ಜಾಲ ಬಯಲು: ಫಾರ್ಮ್ಹೌಸ್ನಲ್ಲಿ ನಡೆಯುತ್ತಿದ್ದ ಅಕ್ರಮ ದಂಧೆಗೆ ಅಧಿಕಾರಿಗಳ ದಾಳಿ ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ನಕಲಿ ಲೇಬಲ್ ಅಂಟಿಸಿ ಔಷಧಿಗಳ ಮರುಪ್ಯಾಕಿಂಗ್ – ಅವಧಿ ಮೀರಿದ ಔಷಧಿಗಳೂ ಪತ್ತೆ
- ಉಡುಪಿ: ತುಳುನಾಡಿನ ಸಂಸ್ಕೃತಿ, ಪರಂಪರೆ ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿ: ಸೂರಜ್ ನಾಯಕ್ ಸೋನಿ
- INDIA through my EYES’ ಚಿತ್ರಕಲಾ ಸ್ಪರ್ಧೆಯಲ್ಲಿ ಚಿನ್ಮಯಿ ಎಸ್. ವಿಜೇತೆ
- ಕರಂಬಾರು ಶಾಲೆಯಲ್ಲಿ ಸಂಭ್ರಮ ಸಡಗರದಿಂದ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ
- ಕೋರ್ದಬ್ಬು ದೈವದ ಪಾತ್ರಿ ಸೀನ ಪಾತ್ರಿ ನಂದಿಕೂರು ಮೆರೆಗ್ ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್ದ “ತುಳುವಾಲ ಕುಲಸಿರಿ – 2026” ಪ್ರಶಸ್ತಿ ಘೋಷಣೆ

