ಉಡುಪಿ, ಜುಲೈ 8: ಉಡುಪಿ ಜಿಲ್ಲೆಯ ಹಿರಿಯಡ್ಕ ಸಮೀಪದ ಖಾಸಗಿ ರೆಸಾರ್ಟ್ನಲ್ಲಿ ಅಂದರ್-ಬಾಹರ್ ಇಸ್ಪೀಟು ಜುಗಾರಿ ಆಟ ನಡೆಯುತ್ತಿದ್ದ ವೇಳೆ ಪೊಲೀಸರು ದಿಢೀರ್ ದಾಳಿ ನಡೆಸಿ 26 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮಾಹಿತಿಯ ಪ್ರಕಾರ, ರೆಸಾರ್ಟ್ನಲ್ಲಿ ಮೆಹಂದಿ ಕಾರ್ಯಕ್ರಮ ಮುಕ್ತಾಯಗೊಂಡ ಬಳಿಕ ಕೆಲವರು ಸೇರಿ ಹಣ ಪಣಕ್ಕಿಟ್ಟು ಅಂದರ್-ಬಾಹರ್ ಜುಗಾರಿ ಆಟದಲ್ಲಿ ತೊಡಗಿದ್ದರು. ಈ ಜುಗಾರಿ ಅಡ್ಡೆಯಲ್ಲಿ ಕೆಲವು ಉದ್ಯಮಿಗಳು ಸಹ ಭಾಗಿಯಾಗಿದ್ದರು ಎನ್ನಲಾಗಿದೆ.
ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ 26 ಮಂದಿಯನ್ನು ವಶಕ್ಕೆ ಪಡೆದು, ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳದಿಂದ ಜುಗಾರಿ ಆಟಕ್ಕೆ ಬಳಸಲಾಗುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಬಂಧಿತರ ಸಂಪೂರ್ಣ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದ್ದು, ವಶಕ್ಕೆ ಪಡೆದವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಬಹಿರಂಗವಾಗುವ ನಿರೀಕ್ಷೆಯಿದೆ.
Trending
- ಮಲ್ಪೆ ಬಂದರಿನಲ್ಲಿ ಮೀನುಗಾರ ಕಾರ್ಮಿಕನ ಕೊಲೆಬೋಟಿನ ಕ್ಯಾಬಿನ್ನಲ್ಲೇ ಚೂರಿ ಇರಿತ; ಪರಾರಿಯಾಗುತ್ತಿದ್ದ ಆರೋಪಿ ರೈಲು ನಿಲ್ದಾಣದಲ್ಲಿ ಬಂಧನ
- ₹5 ಕೋಟಿಗೂ ಅಧಿಕ ಹಣ ಸಂಗ್ರಹದ ಲೆಕ್ಕಪತ್ರ ಎಲ್ಲಿದೆ? — ಮಂಗಳಾ ಸ್ವಿಮ್ಮಿಂಗ್ ಕ್ಲಬ್ ವಿರುದ್ಧ ಮಾಜಿ ಕಾರ್ಯದರ್ಶಿ ಆರ್. ಧನರಾಜ್ ಆರೋಪ
- ಮುದರಂಗಡಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮುಂಬೈ ನಟೋರಿಯಸ್ ಗ್ಯಾಂಗ್ಸ್ಟರ್ ಅನುಜ್ ಪಾಟೀಲ್ ಬಂಧನ
- ಆಟಿದ ಐಸಿರಿ’ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸದಸ್ಯರಿಗೆ ಗೌರವ ಅಭಿನಂದನೆ
- 30–50ರ ವಯೋಮಾನದವರಲ್ಲಿ ಸ್ಟ್ರೋಕ್ ಪ್ರಕರಣಗಳ ಏರಿಕೆ; ‘ಸುವರ್ಣಾವಧಿ’ಯಲ್ಲಿ ಚಿಕಿತ್ಸೆ ಪಡೆಯಲು ಕರೆ
- ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆ ಖಂಡನೀಯ: ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಉಡುಪಿ ಪತ್ರಕರ್ತರ ಸಂಘ ಆಗ್ರಹ
- ಆರೂರು ಅಡ್ಜಿಲು ಭಾಗದ ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಮೆಸ್ಕಾಂ ಒಂದು ತಿಂಗಳೊಳಗೆ ಹೊಸ ಟಿಸಿ ಅಳವಡಿಸುವ ಭರವಸೆ – ತುಳುನಾಡು ರಕ್ಷಣಾ ವೇದಿಕೆ ಆಗ್ರಹ
- ಆಗಸ್ಟ್ 23ರಂದು ಮಂಗಳೂರಿನಲ್ಲಿ ಅಂತರರಾಷ್ಟ್ರೀಯ ಬಂಟ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ “ಮರಿಯಾಳದ ಮಿನದನ” ಪೂರ್ವಭಾವಿ ಸಭೆ

