ಈ ಅಕಾಲಿಕ ಸಾವು ಚಿತ್ರರಂಗಕ್ಕೆ ಬರಸಿಡಿಲಂತೆ ಬಂದೊರಗಿದೆ. ಅವರ ಸಾವಿಗೆ ಚಿತ್ರರಂಗದ ಅನೇಕ ನಟ-ನಟಿಯರು ಕಂಬನಿ ಮಿಡಿದಿದ್ದಾರೆ.ಕೋವಿಡ್ ಸೋಂಕಿನಿಂದಾಗಿ ರಾಮು ಇಂದು ಇಹಲೋಕ ತ್ಯಜಿಸಿದ್ದಾರೆ. ತಮ್ಮ ಪ್ರೀತಿ ಮಡದಿ ನಟಿ ಮಾಲಶ್ರೀ ಹಾಗೂ ಇಬ್ಬರು ಮುದ್ದಾದ ಮಕ್ಕಳನ್ನು ಅಗಲಿದ್ದಾರೆ. ಸ್ಯಾಂಡಲ್ವುಡ್ನಲ್ಲಿ ಅನೇಕ ಹಿಟ್ ಚಿತ್ರಗಳನ್ನು ನೀಡಿದ ರಾಮು ಬಿಗ್ ಬಜೆಟ್ ಪ್ರಡ್ಯೂಸರ್ ಆಗಿ ಗುರುತಿಸಿಕೊಂಡಿದ್ದರು. ಅವರ ಈ ಅಕಾಲಿಕ ಸಾವು ಚಿತ್ರರಂಗಕ್ಕೆ ಬರಸಿಡಿಲಂತೆ ಬಂದೊರಗಿದೆ. ಅವರ ಸಾವಿಗೆ ಚಿತ್ರರಂಗದ ಅನೇಕ ನಟ-ನಟಿಯರು ಕಂಬನಿ ಮಿಡಿದಿದ್ದಾರೆ. ನಟ ಪುನೀತ್, ಮಾಜಿ ಸಿಎಂ ಕುಮಾರಸ್ವಾಮಿ, ರಾಮು ನಿರ್ಮಾಣದ ಕಲಾಸಿಪಾಳ್ಯ ಚಿತ್ರದ ನಟಿ ರಕ್ಷಿತಾ ಪ್ರೇಮ್ ಸೇರಿದಂತೆ ಚಿತ್ರರಂಗದ ಅನೇಕ ತಾರೆಯರು ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.ಕನ್ನಡ ಚಲನಚಿತ್ರ ನಿರ್ಮಾಣದಲ್ಲಿ ಅದಮ್ಯ ಆಸಕ್ತಿ ಹೊಂದಿದ ರಾಮು ಅವರು ಇನ್ನಿಲ್ಲ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪುನೀತ್ ರಾಜ್ ತಿಳಿಸಿದ್ದಾರೆ.
©2021 Tulunada Surya | Developed by CuriousLabs