Tuesday, April 16, 2024
spot_img
More

    Latest Posts

    ಜೀಪ್ ಹಾಗೂ ಲಾರಿ ನಡುವೆ ಭೀಕರ ಅಪಘಾತ; 6 ಮಂದಿ ದುರ್ಮರಣ

    ಚಿಕ್ಕಬಳ್ಳಾಪುರ: ಜೀಪ್, ಕ್ಯಾಂಟರ್​ ನಡುವೆ ಡಿಕ್ಕಿ ಆಗಿ 6 ಜನರ ದುರ್ಮರಣ ಆಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮದಿನಾಯಕನಹಳ್ಳಿ ಬಳಿ ನಡೆದಿದೆ. ಲಾರಿ ಹಾಗೂ ಜೀಪ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಸ್ಥಳದಲ್ಲಿ ಮಾಲೂರು ಶಾಸಕ ಕೆ.ವೈ. ನಂಜೇಗೌಡರಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವ ಕಾರ್ಯ ನಡೆದಿದೆ. ಶಾಸಕರು ರಸ್ತೆ ಮಾರ್ಗವಾಗಿ ಹೋಗುತ್ತಿದ್ದರು. ಅಪಘಾತ ಕಂಡು ರಕ್ಷಣಾ ಕಾರ್ಯ ನಡೆಸಲು ಮುಂದಾಗಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    ಲಾರಿ ಹಾಗೂ ಜೀಪ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಬಳ್ಳಾಪುರ ಎಸ್​ಪಿ ಜಿ.ಜೆ. ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ. ಅಪಘಾತ ಆದ ಜೀಪ್‌ನಲ್ಲಿ 14 ಪ್ರಯಾಣಿಕರು ಇದ್ದರು. ಜೀಪ್​ನಲ್ಲಿ ಇದ್ದ ಇಬ್ಬರು ಮಹಿಳೆಯರು ಹಾಗೂ ನಾಲ್ವರು ಪುರುಷರು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಜೀರೋ ಟ್ರಾಫಿಕ್‌ನಲ್ಲಿ ಕೋಲಾರಕ್ಕೆ ರವಾನೆ ಮಾಡಲಾಗಿದೆ. ಪ್ರಯಾಣಿಕರನ್ನು ಸಾಗಿಸುತ್ತಿದ್ದ ಜೀಪ್​ನಲ್ಲಿ ಇಬ್ಬರು ಮಕ್ಕಳು ಕೂಡ ಇದ್ದರು ಎಂದು ತಿಳಿಸಿದ್ದಾರೆ. ಮದಿನಾಯಕನಹಳ್ಳಿ ಬಳಿ ಭೀಕರ ಅಪಘಾತ ಘಟನಾಸ್ಥಳಕ್ಕೆ ಶ್ರೀನಿವಾಸಪುರ ಕ್ಷೇತ್ರದ ಶಾಸಕ ರಮೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ತೀವ್ರತೆಗೆ ಜೀಪ್ ನಜ್ಜುಗುಜ್ಜಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss