ನೆಲ್ಯಾಡಿ: ಎರಡು ಕಾರುಗಳ ಮಧ್ಯೆ ಅಪಘಾತ ಸಂಭವಿಸಿ ಓರ್ವ ಗಾಯಗೊಂಡ ಘಟನ ಕೌಕ್ರಾಡಿ ಗ್ರಾಮದ ಪಟ್ಲಡ್ಕ ಎಂಬಲ್ಲಿ ನಡೆದಿದೆ. ಉಡುಪಿಯಿಂದ ಧರ್ಮಸ್ಥಳ ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ಸಂಚರಿಸುತ್ತಿದ್ದ ಕಾರು ಮತ್ತು ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಒಂದು ಕಾರು ಪಲ್ಟಿ ಹೊಡೆದು ನಜ್ಜುಗುಜ್ಜಾಗಿದೆ.ಇದರಲ್ಲಿದ್ದ ಓರ್ವ ಗಾಯಗೊಂಡು ಆತನನ್ನು ಉಜಿರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಸ್ಥಳಕ್ಕೆ ನೆಲ್ಯಾಡಿಯ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
©2021 Tulunada Surya | Developed by CuriousLabs