Thursday, April 25, 2024
spot_img
More

    Latest Posts

    ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ; ಆರೋಪಿ ಶಾರೀಕ್‌ ಗೆ ನಾಳೆ ಶಸ್ತ್ರಚಿಕಿತ್ಸೆ

    ಬೆಂಗಳೂರು: ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಾರೀಕ್​ಗೆ ನಾಳೆ ಶಸ್ತ್ರಚಿಕಿತ್ಸೆ ನಡೆಯಲಿದೆ.

    ಈ ಪರಿಣಾಮದಿಂದಾಗಿ ಶಾರೀಕ್ ಮುಖ ಹಾಗೂ ಎದೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜನ್ ಕೆ.ಟಿ.ರಮೇಶ್ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನಡೆಯಲಿದೆ. ಶಸ್ತ್ರಚಿಕಿತ್ಸೆ ಬಳಿಕ ಏಳೆಂಟು ದಿನಗಳಲ್ಲಿ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ. ಎನ್‌ಐಎ ತನಿಖಾಧಿಕಾರಿಗಳ ತಂಡ ಆರೋಪಿಯನ್ನು ವಶಕ್ಕೆ ಪಡೆಯಲಿದೆ.

    ಬಾಂಬ್ ಸ್ಫೋಟ ಪ್ರಕರಣದ ಶಾರೀಕ್​ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ನಂತರ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವುದರಿಂದ ಡಿಸೆಂಬರ್ 16ರ ರಾತ್ರಿ ಮಂಗಳೂರಿನಿಂದ ಬಿಗಿ ಭದ್ರತೆಯಲ್ಲಿ ಆಂಬುಲೆನ್ಸ್ ಮೂಲಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆತರಲಾಗಿತ್ತು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss