ನವದೆಹಲಿ: 275ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಒಡಿಶಾ ರೈಲು ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳ ಶಾಲಾ ಶಿಕ್ಷಣದ ಜವಾಬ್ದಾರಿಯನ್ನು ಅದಾನಿ ಗ್ರೂಪ್ ತೆಗೆದುಕೊಳ್ಳಲಿದೆ ಎಂದು ಕೈಗಾರಿಕೋದ್ಯಮಿ ಗೌತಮ್ ಅದಾನಿ ಭಾನುವಾರ ಪ್ರಕಟಿಸಿದ್ದಾರೆ.
‘ಒರಿಸ್ಸಾ ರೈಲು ಅಪಘಾತದಿಂದ ನಾವೆಲ್ಲರೂ ತೀವ್ರ ದುಃಖಿತರಾಗಿದ್ದೇವೆ. ಈ ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡ ಮುಗ್ಧ ಶಾಲಾ ಮಕ್ಕಳ ಶಿಕ್ಷಣದ ಜವಾಬ್ದಾರಿಯನ್ನು ಅದಾನಿ ಗ್ರೂಪ್ ತೆಗೆದುಕೊಳ್ಳಲು ನಾವು ನಿರ್ಧರಿಸಿದ್ದೇವೆ’ ಎಂದು ಅದಾನಿ ಟ್ವೀಟ್ ಮಾಡಿದ್ದಾರೆ.
‘ಸಂತ್ರಸ್ತರು ಮತ್ತು ಅವರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ. ಮಕ್ಕಳಿಗೆ ಉತ್ತಮ ಭವಿಷ್ಯವನ್ನು ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ’ ಎಂದು ಬಿಲಿಯನೇರ್ ಹೇಳಿದರು.