Wednesday, April 24, 2024
spot_img
More

    Latest Posts

    ಗುಡ್ಡ ಕುಸಿತ, ಆಗುಂಬೆ ಘಾಟ್ ರಸ್ತೆ ಬಂದ್

    ಶಿವಮೊಗ್ಗ: ಮಳೆಯ ಅರ್ಭಟಕ್ಕೆ ಆಗುಂಬೆ ಘಾಟಿಯ ಸೋಮೇಶ್ವರ ಕಡೆಯಿಂದ ಬರುವ ಮೂರನೇ ತಿರುವಿನಲ್ಲಿ ರಸ್ತೆಯ ಮೇಲೆ ಭಾನುವಾರ ನಸುಕಿನಲ್ಲಿ ಗುಡ್ಡ ಕುಸಿದಿದೆ.

    ಹೀಗಾಗಿ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ತೀರ್ಥಹಳ್ಳಿ- ಹೆಬ್ರಿ ನಡುವಿನ ರಾಷ್ಟ್ರೀಯ ಹೆದ್ದಾರಿ 169 ಎ ಸಂಪರ್ಕ ಕಡಿತಗೊಂಡಿದೆ.

    ಆಗುಂಬೆ ಹಾಗೂ ಸೋಮೇಶ್ವರ ಚೆಕ್ ಪೋಸ್ಟ್ ಗಳಲ್ಲಿಯೇ ವಾಹನಗಳನ್ನು ಮರಳಿ ಕಳುಹಿಸಲಾಗುತ್ತಿದೆ.

    ಅರಣ್ಯ ಇಲಾಖೆ ಹಾಗೂ ಹೆದ್ದಾರಿ ಪ್ರಾಧಿಕಾರದವರು ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss