Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರುವಂಜ ದಂಪತಿಗೆ ಸನ್ಮಾನ

    18 May 2025

    ಅಕ್ರಮ ಮರಳು ಸಂಗ್ರಹ : ಪೊಲೀಸರಿಂದ ದಾಳಿ…!!

    15 May 2025

    ಮಂಗಳೂರು : ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

    15 May 2025
    Facebook WhatsApp Telegram
    Trending
    • ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರುವಂಜ ದಂಪತಿಗೆ ಸನ್ಮಾನ
    • ಅಕ್ರಮ ಮರಳು ಸಂಗ್ರಹ : ಪೊಲೀಸರಿಂದ ದಾಳಿ…!!
    • ಮಂಗಳೂರು : ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ
    • ಕೋಟ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ : ಇಬ್ಬರು ಸಾವು..!
    • ಕಾರ್ಕಳ : ಶಸ್ತ್ರ ಚಿಕಿತ್ಸೆ ವೇಳೆ ಮಹಿಳೆ ಮೃತ್ಯು : ವೈದ್ಯರ ವಿರುದ್ಧ ಸಂಬಂಧಿಕರ ಆಕ್ರೋಶ…!!
    • ಮೇ 16 ರಂದು ಮುಖ್ಯಮಂತ್ರಿಗಳು ದಕ್ಷಿಣ ಕನ್ನಡ ಜಿಲ್ಲೆಗೆ
    • ಕಡಲು ಕೊರೆತ ಕಾಮಗಾರಿ:ಸ್ಥಳೀಯರ ವಿಶ್ವಾಸ ತೆಗೆದುಕೊಳ್ಳಲು ಸ್ಪೀಕರ್ ಸೂಚನೆ
    • ಎಳನೀರು-ದಿಡುಪೆ ರಸ್ತೆಯ ಅಭಿವೃದ್ಧಿಗೆ ಉಸ್ತುವಾರಿ ಸಚಿವರಿಂದ ಮುಖ್ಯಮಂತ್ರಿಗಳಿಗೆ ಮನವಿ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Monday, May 19
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ದೇಶಕ್ಕಾಗಿ ಬಲಿದಾನ ಮಾಡಿದವರ ಸ್ಮರಣೆ ಮಾಡಬೇಕು, ಪ್ರತಿ ಮನೆಯಲ್ಲೂ ದೇಶಕ್ಕಾಗಿ ಹೊರಡುವ ಕಿಚ್ಚು ಮೈಗೂಡಿಸಿಕೊಳ್ಳಬೇಕು – ಯೋಗೀಶ್ ಶೆಟ್ಟಿ ಜಪ್ಪು

    ದೇಶಕ್ಕಾಗಿ ಬಲಿದಾನ ಮಾಡಿದವರ ಸ್ಮರಣೆ ಮಾಡಬೇಕು, ಪ್ರತಿ ಮನೆಯಲ್ಲೂ ದೇಶಕ್ಕಾಗಿ ಹೊರಡುವ ಕಿಚ್ಚು ಮೈಗೂಡಿಸಿಕೊಳ್ಳಬೇಕು – ಯೋಗೀಶ್ ಶೆಟ್ಟಿ ಜಪ್ಪು

    Tulunada SuryaBy Tulunada Surya30 April 2025Updated:1 May 2025 ದೇಶ-ವಿದೇಶ No Comments1 Min Read
    Share
    Facebook WhatsApp
    Share on:

    ಮಂಗಳೂರು: ಹಿಂದೂ ಯುವ ಸೇನೆ ಭಾರ್ಗವ ಶಾಖೆ ಅಳಪೆ ಇದರ ನೇತೃತ್ವದಲ್ಲಿ ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಬಲಿಯಾದ 26 ಪ್ರವಾಸಿಗರ ಆತ್ಮಕ್ಕೆ ಶಾಂತಿ ಸಿಗಲು ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಮತ್ತು ಹುತಾತ್ಮರಾದ ರವರ ಕುಟುಂಬಕ್ಕೆ ಪರಿಹಾರ ನೀಡುವಂತೆ ಪ್ರತಿಭಟನೆಯಲ್ಲಿ ಆಗ್ರಹಿಸಲಾಯಿತು..

    ಈ ಪ್ರತಿಭಟನೆಯಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷರಾದ ಯೋಗೀಶ್ ಶೆಟ್ಟಿ ಅವರು ಮಾತನಾಡಿ ರಾಷ್ಟ್ರೀಯತೆಯನ್ನು ಪ್ರತಿಯೊಬ್ಬ ಭಾರತೀಯ ತನ್ನ ಮೈಗೂಡಿಸಿಕೊಳ್ಳುವುದು ಪ್ರಮುಖವಾದ ಅಂಶವಾಗಿದೆ. ನಮ್ಮ ದೇಶದ 140 ಕೋಟಿ ನಿವಾಸಿಗಳು ನಮ್ಮ ದೇಶಕ್ಕಾಗಿ ಪ್ರಾಣ ತ್ಯಾಗ ಬಲಿದಾನ ಮಾಡಿದ ಮಹಾಪುರುಷರ ಸ್ಮರಣೆ ಮಾಡಬೇಕು ಪ್ರತಿ ಮನೆಯಲ್ಲೂ ದೇಶಕ್ಕಾಗಿ ಹೊರಡುವ ಕಿಚ್ಚು ಮೈಗೂಡಿಸಿಕೊಳ್ಳಬೇಕು ಎಂದರು.

    ಕಾರ್ಯಕ್ರಮದಲ್ಲಿ ಹಿಂದೂ ಯುವ ಸೇನೆ ಕೇಂದ್ರೀಯ ಮಂಡಳಿಯ ಅಧ್ಯಕ್ಷರಾದ ಯಶೋಧರ ಚೌಟರವರು ಮಾತನಾಡಿ ಹಿಂದೂ ಜಾಗೃತವಾದಲ್ಲಿ ಮಾತ್ರ ಭರತ ಕಂಡ ಶಾಶ್ವತವಾಗಿ ಸನಾತನ ಸಂಸ್ಕೃತಿಯಲ್ಲಿ ಮುಂದುವರಿಯುತ್ತದೆ. ಆದ್ದರಿಂದ ತಾವೆಲ್ಲರೂ ಜಾಗೃತರಾಗಬೇಕೆಂದು ಕರೆ ನೀಡಿದರು. ಅಲ್ಲದೆ ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಶೋಭಾ ಪೂಜಾರಿ, ದುರ್ಗ ವಾಹಿನಿಯ ಶ್ರೀಮತಿ ರೂಪ, ಯುವ ಮೋರ್ಚಾ ನಾಯಕರದ ಮೌನೀಶ್ ಚೌಟ, ಹಿಂದೂ ಯುವ ಸೇನೆ ಭಾರ್ಗವ ಶಾಖೆಯ ಗೌರವಾಧ್ಯಕ್ಷರಾದ ನ್ಯಾಯವಾದಿ ದಿನಕರ್ ಶೆಟ್ಟಿ, ಅಧ್ಯಕ್ಷರಾದ ವಿನಯ್ ಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.

    ಹರೀಶ್ ಕುಮಾರ್ ರವರು ಅತಿಥಿಗಳನ್ನು ಸ್ವಾಗತಿಸಿದರು.

    ಕಾರ್ಯಕ್ರಮವನ್ನು ಪ್ರಮೋದ್ ಅಳಪೆ ನಿರೂಪಿಸಿದರು. ಪದ್ಮನಾಭ ಅಳಪೆ ಧನ್ಯವಾದ ಅರ್ಪಿಸಿದರು..

    Share on:

    Keep Reading

    ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರುವಂಜ ದಂಪತಿಗೆ ಸನ್ಮಾನ

    ಅಕ್ರಮ ಮರಳು ಸಂಗ್ರಹ : ಪೊಲೀಸರಿಂದ ದಾಳಿ…!!

    ಮಂಗಳೂರು : ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.