ಮಂಗಳೂರು: ಹಿಂದೂ ಯುವ ಸೇನೆ ಭಾರ್ಗವ ಶಾಖೆ ಅಳಪೆ ಇದರ ನೇತೃತ್ವದಲ್ಲಿ ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಬಲಿಯಾದ 26 ಪ್ರವಾಸಿಗರ ಆತ್ಮಕ್ಕೆ ಶಾಂತಿ ಸಿಗಲು ಶ್ರದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಮತ್ತು ಹುತಾತ್ಮರಾದ ರವರ ಕುಟುಂಬಕ್ಕೆ ಪರಿಹಾರ ನೀಡುವಂತೆ ಪ್ರತಿಭಟನೆಯಲ್ಲಿ ಆಗ್ರಹಿಸಲಾಯಿತು..

ಈ ಪ್ರತಿಭಟನೆಯಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷರಾದ ಯೋಗೀಶ್ ಶೆಟ್ಟಿ ಅವರು ಮಾತನಾಡಿ ರಾಷ್ಟ್ರೀಯತೆಯನ್ನು ಪ್ರತಿಯೊಬ್ಬ ಭಾರತೀಯ ತನ್ನ ಮೈಗೂಡಿಸಿಕೊಳ್ಳುವುದು ಪ್ರಮುಖವಾದ ಅಂಶವಾಗಿದೆ. ನಮ್ಮ ದೇಶದ 140 ಕೋಟಿ ನಿವಾಸಿಗಳು ನಮ್ಮ ದೇಶಕ್ಕಾಗಿ ಪ್ರಾಣ ತ್ಯಾಗ ಬಲಿದಾನ ಮಾಡಿದ ಮಹಾಪುರುಷರ ಸ್ಮರಣೆ ಮಾಡಬೇಕು ಪ್ರತಿ ಮನೆಯಲ್ಲೂ ದೇಶಕ್ಕಾಗಿ ಹೊರಡುವ ಕಿಚ್ಚು ಮೈಗೂಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಹಿಂದೂ ಯುವ ಸೇನೆ ಕೇಂದ್ರೀಯ ಮಂಡಳಿಯ ಅಧ್ಯಕ್ಷರಾದ ಯಶೋಧರ ಚೌಟರವರು ಮಾತನಾಡಿ ಹಿಂದೂ ಜಾಗೃತವಾದಲ್ಲಿ ಮಾತ್ರ ಭರತ ಕಂಡ ಶಾಶ್ವತವಾಗಿ ಸನಾತನ ಸಂಸ್ಕೃತಿಯಲ್ಲಿ ಮುಂದುವರಿಯುತ್ತದೆ. ಆದ್ದರಿಂದ ತಾವೆಲ್ಲರೂ ಜಾಗೃತರಾಗಬೇಕೆಂದು ಕರೆ ನೀಡಿದರು. ಅಲ್ಲದೆ ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಶೋಭಾ ಪೂಜಾರಿ, ದುರ್ಗ ವಾಹಿನಿಯ ಶ್ರೀಮತಿ ರೂಪ, ಯುವ ಮೋರ್ಚಾ ನಾಯಕರದ ಮೌನೀಶ್ ಚೌಟ, ಹಿಂದೂ ಯುವ ಸೇನೆ ಭಾರ್ಗವ ಶಾಖೆಯ ಗೌರವಾಧ್ಯಕ್ಷರಾದ ನ್ಯಾಯವಾದಿ ದಿನಕರ್ ಶೆಟ್ಟಿ, ಅಧ್ಯಕ್ಷರಾದ ವಿನಯ್ ಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.

ಹರೀಶ್ ಕುಮಾರ್ ರವರು ಅತಿಥಿಗಳನ್ನು ಸ್ವಾಗತಿಸಿದರು.

ಕಾರ್ಯಕ್ರಮವನ್ನು ಪ್ರಮೋದ್ ಅಳಪೆ ನಿರೂಪಿಸಿದರು. ಪದ್ಮನಾಭ ಅಳಪೆ ಧನ್ಯವಾದ ಅರ್ಪಿಸಿದರು..
