ಮಂಗಳೂರು: ಪಶ್ಚಿಮ ವಲಯ ಡಿಐಜಿಪಿ ಆಗಿ ಐಪಿಎಸ್ ಅಧಿಕಾರಿ ಅಮಿತ್ ಸಿಂಗ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಅವರು ಅಮಿತ್ ಸಿಂಗ್ ಅವರನ್ನು ಬರಮಾಡಿಕೊಂಡರು. ಅಮಿತ್ ಸಿಂಗ್ ಅವರು ಮಂಗಳೂರು ಮತ್ತು ಪುತ್ತೂರಿನಲ್ಲಿ ಎಎಸ್ಪಿಯಾಗಿ, ಹಾಸನ ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ನಾಲ್ಕು ವರ್ಷ ಕಾರ್ಯನಿರ್ವಹಿಸಿದ್ದರು. ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮಾದಕ ಪದಾರ್ಥ ಮಾರಾಟ ದಂಧೆ, ಕೋಮು ದ್ವೇಷ ಹರಡುವಿಕೆ ನಿಗ್ರಹಕ್ಕೆ ಆದ್ಯತೆ ನೀಡುತ್ತೇನೆ. ಸೈಬರ್ ಅಪರಾಧ ಚಟುವಟಿಕೆ ನಿಯಂತ್ರಣಕ್ಕೂ ಹೆಚ್ಚಿನ ನಿಗಾ ವಹಿಸಲಾಗುವುದು’ ಎಂದರು. ಹಿಂದಿನ ಡಿಐಜಿ ಚಂದ್ರಗುಪ್ತ ಅವರು ಬೆಂಗಳೂರು ಅಪರಾಧ ವಿಭಾಗದ ಐಜಿಪಿಯಾಗಿ ಬಡ್ತಿ ಪಡೆದಿದ್ದಾರೆ.
Trending
- ರೋಗಿ ಸೇವೆಯಲ್ಲಿ ಕನ್ನಡಕ್ಕೆ ಆದ್ಯತೆ: ವೆನ್ಲಾಕ್ ಆಸ್ಪತ್ರೆಯ ನಿರ್ದೇಶನಕ್ಕೆ ಕೆಎಂಸಿ ವಿದ್ಯಾರ್ಥಿಗಳಿಂದ ಸಕಾರಾತ್ಮಕ ಸ್ಪಂದನೆ
- ಆಟದ ಮೈದಾನ ಉಳಿಸಿ ಮಕ್ಕಳ ಹಕ್ಕು ಕಾಪಾಡಿದ ತುಳುನಾಡ ರಕ್ಷಣಾ ವೇದಿಕೆ
- ಜೆಇಇ ಅಡ್ವಾನ್ಸ್ನಲ್ಲಿ ರಾಷ್ಟ್ರ ಮಟ್ಟದ ಸಾಧನೆ: ವಿದ್ಯಾರ್ಥಿ ಬಿ. ವಿಶ್ರುತ್ ಕೃಷ್ಣ ಆರ್. ಭಟ್ಗೆ ಶಾಸಕ ವೇದವ್ಯಾಸ ಕಾಮತ್ ಅಭಿನಂದನೆ
- ದಿವಂಗತ ದೇವಕಿ ಸಂಜೀವ ಶೆಟ್ಟಿ ಸ್ಮರಣಾರ್ಥ ಬಡ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ
- ಕುಡುಪು ದೇವಳದಲ್ಲಿ ತುಳು ‘ಮಂದಾರ ರಾಮಾಯಣ’ ಸಪ್ತಾಹ
- ದಾವಣಗೆರೆ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ – 10 ಮಂದಿ ವಶಕ್ಕೆ, ತನಿಖೆ ಮುಂದುವರಿಕೆ
- ಹನಿಟ್ರ್ಯಾಪ್ ಮೂಲಕ ಕೋಟ್ಯಂತರ ರೂಪಾಯಿ ವಸೂಲಿ ಆರೋಪ: ಇಬ್ಬರ ಬಂಧನ
- 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟಕ್ಕೆ ಕಟ್ಟುನಿಟ್ಟಿನ ಕಡಿವಾಣ ‘No ID, No Entry’ ನಿಯಮ ಜಾರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ
