ಉಡುಪಿ: ಕಡಿಯಾಳಿ ದೇವಸ್ಥಾನದ ತಿರುಗುವ ಮುಚ್ಚಿಗೆಗೆ ಅಮಿತಾಬ್ ಬಚ್ಚನ್ ಮೆಚ್ಚುಗೆ
ಉಡುಪಿ: ದೇಶಾದ್ಯಂತ ಮೆಚ್ಚುಗೆ ಗಳಿಸಿದ ಕಡಿಯಾಳಿ ದೇವಳದ ತಿರುಗುವ ಮುಚ್ಚಿಗೆ ಮತ್ತು ತಾಯಿ ಮಹಿಷಮರ್ದಿನಿಯ ಚಿತ್ರವನ್ನು ಬಿಗ್ ಬಿ ಖ್ಯಾತಿಯ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ದೇವಳದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಜೂನ್ 10ರಂದು ತಮ್ಮ ಸಾಮಾಜಿಕ ಜಾಲತಾಣದ ಫೇಸ್ಬುಕ್ಕಿನಲ್ಲಿ”May God Remember all hopes” ಎಂದು ಬರೆದು ದೇವರ ಚಿತ್ರದ ಜೊತೆಗೆ ತಮ್ಮಅಭಿಪ್ರಾಯ ಹಂಚಿಕೊಂಡಿದ್ದಾರೆ.ಈ ಚಿತ್ರವನ್ನು 30 ಸಾವಿರಕ್ಕೂ ಹೆಚ್ಚು ಜನ ಲೈಕ್ ಮಾಡಿದ್ದು ಸಾವಿರಾರು ಜನ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
