ರಾಷ್ಟ್ರೀಯ ವೈದ್ಯರ ದಿನಾಚರಣೆಯ ರಾಷ್ಟ್ರ ಪುರಸ್ಕಾರ ಡಾ ಕುಲಾಲ್ ಅವರಿಗೆ
ನೂರು ವರ್ಷಗಳ ಸಂಭ್ರಮದ ಹೊಸ್ತಿಲಲ್ಲಿ ಇರುವ ಭಾರತೀಯ ವೈದ್ಯಕೀಯ ಸಂಘ ತನ್ನ ರಾಷ್ಟ್ರ ಮಟ್ಟದ ಪ್ರತಿಷ್ಠಿತ ಸಮುದಾಯ ಸೇವಾ ಪುರಸ್ಕಾರಕ್ಕೆ
ಡಾ. ಎಂ. ಅಣ್ಣಯ್ಯ ಕುಲಾಲ್ ಉಳ್ತೂರು ಇವರನ್ನ ಆಯ್ಕೆಮಾಡಿದ್ದು
ಅವರ ಒಡನಾಟದಲ್ಲಿ ಇರುವ ಕರಾವಳಿ ಮಲೆನಾಡು ಹಾಗು ರಾಜ್ಯದ ಎಲ್ಲಾ ವರ್ಗಗಳ ಹಿತೈಷಿಗಳಿಗೆ ಹೆಮ್ಮೆಯ ವಿಚಾರ
ಸಮಾಜ ಮುಖಿ ವೈದ್ಯಕೀಯ ಸೇವೆ, ವೈದ್ಯಕೀಯ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕ, ಸಿಡಿಲಬ್ಬರದ ಸಂಘಟಕ, ನೇರ ಮಿಂಚಿನ ಮಾತು, ದಿಟ್ಟ ಸ್ಪಷ್ಟ ಬರಹ, ಸಾಮಾಜಿಕ ನ್ಯಾಯಕ್ಕಾಗಿ ಬಡಿದಾಟ ಮಾಡಬಲ್ಲ ವೈದ್ಯ ಎಂಬ ಖ್ಯಾತಿಯ ಡಾ ಕುಲಾಲ್, ಐಎಂಎ, ಕುಟುಂಬ ವೈದ್ಯರ ಸಂಘ, ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನ, ಕನ್ನಡಕಟ್ಟೆ, ಸರ್ವಜ್ಞ ಸೆಕೆಂಡ್ ಒಪೀನಿಯನ್ ಸೆಂಟರ್, ವೈದ್ಯ ಬರಹಗಾರರ ಬಳಗ, ಯುವ ವೇದಿಕೆ ಸಹಿತ ನೂರಾರು ಸಂಘಟನೆಗಳ ಜೊತೆ ಸದ್ದಿಲ್ಲದೇ ದುಡಿಯುತ್ತಾ, ತನು ಮನ ಧನಗಳ ಸಹಕಾರ ನೀಡುತ್ತಾ, ಮುಗುಳ್ನಗುತ್ತಾ ಸದ್ದಿಲ್ಲದೇ ಸುದ್ದಿಯಾದವರು. ನಾಡಿನ ಶ್ರೇಷ್ಠ ಪುರಸ್ಕಾರ ವಾದ ದೇವರಾಜ ಅರಸು ಪುರಸ್ಕಾರ, ರಾಜ್ಯ
ಐಎಂಎ ರಾಜ್ಯ ಡಾ ಬಿ ಸಿ ರಾಯ್ ಪುರಸ್ಕಾರ, ಜಿಲ್ಲಾ ರಾಜ್ಯೋತ್ಸವ ಪುರಸ್ಕಾರ, ಹೊಯ್ಸಳ ಪುರಸ್ಕಾರ, ಅಂತರಾಷ್ಟ್ರೀಯ ಆರ್ಯಭಟ ಪುರಸ್ಕಾರ, ಮಂಗಳೂರು ಐಎಂಎ ಯಿಂದ ಜೀವ ಮಾನ ಸಾಧನ ಪುರಸ್ಕಾರ ಸಹಿತ ನೂರಾರು ಗೌರವ ಪಡೆದಿರುವ ಇವರು ರಾಷ್ಟ್ರೀಯ ವೈದ್ಯರ ದಿನದ ಅಂಗವಾಗಿ ಡಾ ಬಿ ಸಿ ರಾಯ್ ರಾಷ್ಟ್ರ ಪುರಸ್ಕಾರವನ್ನ ಹೊಸದೆಹಲಿಯಲ್ಲಿ ಜುಲೈ ೧೩ ರಂದು ಕೇಂದ್ರಸರಕಾರದ ಪ್ರತಿನಿಧಿ ಯವರ ಉಪಸ್ಥಿತಿ ಯಲ್ಲಿ ರಾಷ್ಟ್ರೀಯ ಐಎಂಎ ನಾಯಕರ ಕೈಯಿಂದ ಸ್ವೀಕರಿಸಲಿದ್ದಾರೆ ಎಂಬುದೇ ಅವರ ಹಿತೈಷಿ ಮಿತ್ರರುಗಳಿಗೆ ಹೆಮ್ಮೆ. ವೈದ್ಯಕೀಯ ವೃತ್ತಿ ಯಲ್ಲಿ ಜೀವ ಮಾನದ ಸಾಧನೆಗೆ ಪಡೆಯುವ ಈ ಪುರಸ್ಕಾರಕ್ಕೆ ಭಾಜನಾಗುವ ಬೆರಳೆಣಿಕೆಯಷ್ಟು ಮಂದಿಯಲ್ಲಿ ಡಾ ಕುಲಾಲ್ ಅತಿ ಕಿರಿಯ ವಯಸ್ಸಿನ ಸಾಧಕರು.
Trending
- ರೋಗಿ ಸೇವೆಯಲ್ಲಿ ಕನ್ನಡಕ್ಕೆ ಆದ್ಯತೆ: ವೆನ್ಲಾಕ್ ಆಸ್ಪತ್ರೆಯ ನಿರ್ದೇಶನಕ್ಕೆ ಕೆಎಂಸಿ ವಿದ್ಯಾರ್ಥಿಗಳಿಂದ ಸಕಾರಾತ್ಮಕ ಸ್ಪಂದನೆ
- ಆಟದ ಮೈದಾನ ಉಳಿಸಿ ಮಕ್ಕಳ ಹಕ್ಕು ಕಾಪಾಡಿದ ತುಳುನಾಡ ರಕ್ಷಣಾ ವೇದಿಕೆ
- ಜೆಇಇ ಅಡ್ವಾನ್ಸ್ನಲ್ಲಿ ರಾಷ್ಟ್ರ ಮಟ್ಟದ ಸಾಧನೆ: ವಿದ್ಯಾರ್ಥಿ ಬಿ. ವಿಶ್ರುತ್ ಕೃಷ್ಣ ಆರ್. ಭಟ್ಗೆ ಶಾಸಕ ವೇದವ್ಯಾಸ ಕಾಮತ್ ಅಭಿನಂದನೆ
- ದಿವಂಗತ ದೇವಕಿ ಸಂಜೀವ ಶೆಟ್ಟಿ ಸ್ಮರಣಾರ್ಥ ಬಡ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ
- ಕುಡುಪು ದೇವಳದಲ್ಲಿ ತುಳು ‘ಮಂದಾರ ರಾಮಾಯಣ’ ಸಪ್ತಾಹ
- ದಾವಣಗೆರೆ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ – 10 ಮಂದಿ ವಶಕ್ಕೆ, ತನಿಖೆ ಮುಂದುವರಿಕೆ
- ಹನಿಟ್ರ್ಯಾಪ್ ಮೂಲಕ ಕೋಟ್ಯಂತರ ರೂಪಾಯಿ ವಸೂಲಿ ಆರೋಪ: ಇಬ್ಬರ ಬಂಧನ
- 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟಕ್ಕೆ ಕಟ್ಟುನಿಟ್ಟಿನ ಕಡಿವಾಣ ‘No ID, No Entry’ ನಿಯಮ ಜಾರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

