ರಾಷ್ಟ್ರೀಯ ವೈದ್ಯರ ದಿನಾಚರಣೆಯ ರಾಷ್ಟ್ರ ಪುರಸ್ಕಾರ ಡಾ ಕುಲಾಲ್ ಅವರಿಗೆ
ನೂರು ವರ್ಷಗಳ ಸಂಭ್ರಮದ ಹೊಸ್ತಿಲಲ್ಲಿ ಇರುವ ಭಾರತೀಯ ವೈದ್ಯಕೀಯ ಸಂಘ ತನ್ನ ರಾಷ್ಟ್ರ ಮಟ್ಟದ ಪ್ರತಿಷ್ಠಿತ ಸಮುದಾಯ ಸೇವಾ ಪುರಸ್ಕಾರಕ್ಕೆ
ಡಾ. ಎಂ. ಅಣ್ಣಯ್ಯ ಕುಲಾಲ್ ಉಳ್ತೂರು ಇವರನ್ನ ಆಯ್ಕೆಮಾಡಿದ್ದು
ಅವರ ಒಡನಾಟದಲ್ಲಿ ಇರುವ ಕರಾವಳಿ ಮಲೆನಾಡು ಹಾಗು ರಾಜ್ಯದ ಎಲ್ಲಾ ವರ್ಗಗಳ ಹಿತೈಷಿಗಳಿಗೆ ಹೆಮ್ಮೆಯ ವಿಚಾರ
ಸಮಾಜ ಮುಖಿ ವೈದ್ಯಕೀಯ ಸೇವೆ, ವೈದ್ಯಕೀಯ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕ, ಸಿಡಿಲಬ್ಬರದ ಸಂಘಟಕ, ನೇರ ಮಿಂಚಿನ ಮಾತು, ದಿಟ್ಟ ಸ್ಪಷ್ಟ ಬರಹ, ಸಾಮಾಜಿಕ ನ್ಯಾಯಕ್ಕಾಗಿ ಬಡಿದಾಟ ಮಾಡಬಲ್ಲ ವೈದ್ಯ ಎಂಬ ಖ್ಯಾತಿಯ ಡಾ ಕುಲಾಲ್, ಐಎಂಎ, ಕುಟುಂಬ ವೈದ್ಯರ ಸಂಘ, ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನ, ಕನ್ನಡಕಟ್ಟೆ, ಸರ್ವಜ್ಞ ಸೆಕೆಂಡ್ ಒಪೀನಿಯನ್ ಸೆಂಟರ್, ವೈದ್ಯ ಬರಹಗಾರರ ಬಳಗ, ಯುವ ವೇದಿಕೆ ಸಹಿತ ನೂರಾರು ಸಂಘಟನೆಗಳ ಜೊತೆ ಸದ್ದಿಲ್ಲದೇ ದುಡಿಯುತ್ತಾ, ತನು ಮನ ಧನಗಳ ಸಹಕಾರ ನೀಡುತ್ತಾ, ಮುಗುಳ್ನಗುತ್ತಾ ಸದ್ದಿಲ್ಲದೇ ಸುದ್ದಿಯಾದವರು. ನಾಡಿನ ಶ್ರೇಷ್ಠ ಪುರಸ್ಕಾರ ವಾದ ದೇವರಾಜ ಅರಸು ಪುರಸ್ಕಾರ, ರಾಜ್ಯ
ಐಎಂಎ ರಾಜ್ಯ ಡಾ ಬಿ ಸಿ ರಾಯ್ ಪುರಸ್ಕಾರ, ಜಿಲ್ಲಾ ರಾಜ್ಯೋತ್ಸವ ಪುರಸ್ಕಾರ, ಹೊಯ್ಸಳ ಪುರಸ್ಕಾರ, ಅಂತರಾಷ್ಟ್ರೀಯ ಆರ್ಯಭಟ ಪುರಸ್ಕಾರ, ಮಂಗಳೂರು ಐಎಂಎ ಯಿಂದ ಜೀವ ಮಾನ ಸಾಧನ ಪುರಸ್ಕಾರ ಸಹಿತ ನೂರಾರು ಗೌರವ ಪಡೆದಿರುವ ಇವರು ರಾಷ್ಟ್ರೀಯ ವೈದ್ಯರ ದಿನದ ಅಂಗವಾಗಿ ಡಾ ಬಿ ಸಿ ರಾಯ್ ರಾಷ್ಟ್ರ ಪುರಸ್ಕಾರವನ್ನ ಹೊಸದೆಹಲಿಯಲ್ಲಿ ಜುಲೈ ೧೩ ರಂದು ಕೇಂದ್ರಸರಕಾರದ ಪ್ರತಿನಿಧಿ ಯವರ ಉಪಸ್ಥಿತಿ ಯಲ್ಲಿ ರಾಷ್ಟ್ರೀಯ ಐಎಂಎ ನಾಯಕರ ಕೈಯಿಂದ ಸ್ವೀಕರಿಸಲಿದ್ದಾರೆ ಎಂಬುದೇ ಅವರ ಹಿತೈಷಿ ಮಿತ್ರರುಗಳಿಗೆ ಹೆಮ್ಮೆ. ವೈದ್ಯಕೀಯ ವೃತ್ತಿ ಯಲ್ಲಿ ಜೀವ ಮಾನದ ಸಾಧನೆಗೆ ಪಡೆಯುವ ಈ ಪುರಸ್ಕಾರಕ್ಕೆ ಭಾಜನಾಗುವ ಬೆರಳೆಣಿಕೆಯಷ್ಟು ಮಂದಿಯಲ್ಲಿ ಡಾ ಕುಲಾಲ್ ಅತಿ ಕಿರಿಯ ವಯಸ್ಸಿನ ಸಾಧಕರು.
Trending
- ಮೂಡಬಿದಿರೆ ಇನ್ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಅಕ್ಕ ಪ್ರಪುಲ್ಲ ನಾಯ್ಕ್ ಪ್ರತಿಕ್ರಿಯೆ
- ದಕ್ಷಿಣ ಕನ್ನಡ ವಿದ್ಯಾರ್ಥಿ ಜನತಾದಳ ಸಭೆ: ನಿಹಾಲ್ ಎಸ್. ಕೋಡ್ತುಗುಳಿ ಜಿಲ್ಲಾಧ್ಯಕ್ಷರಾಗಿ ಅಧಿಕಾರ ಹಸ್ತಾಂತರ
- ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ದತ್ತು ಸ್ವೀಕರಿಸಿ ಮಾಸಿಕ ಧನಸಹಾಯ ಪಡೆಯುತ್ತಿರುವ ಪಲಾನುಭವಿಗಳಿಗೆ ಸಹಾಯಧನದ ಚೆಕ್ ವಿತರಣಾ ಕಾರ್ಯಕ್ರಮ
- ಉಡುಪಿ : ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ಅನಿಲ ಸೋರಿಕೆ ಶಂಕೆ, ಅಗ್ನಿಶಾಮಕ ದಳದಿಂದ ತುರ್ತು ಕಾರ್ಯಾಚರಣೆ
- ಕರವೇ ಉಡುಪಿ ಜಿಲ್ಲಾ ಸಂಘಟನೆಗೆ ರಿಕ್ಷಾ ಚಾಲಕರ ಸೇರ್ಪಡೆ
- ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ರಂಜಾನ್ ಸೌಹಾರ್ಧ ಇಫ್ತಾರ್ ಕೂಟ – ಶಾಂತಿ ಸಂದೇಶ ಸಾರಿದ ಕಾರ್ಯಕ್ರಮ
- ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿ ಘೋಷಣೆ. ಕೇರಳ, ಅಸ್ಸಾಂ, ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಪಶ್ಚಿಮ ಬಂಗಾಳದಲ್ಲಿ ಎರಡು ಹಂತಗಳಲ್ಲಿ ಚುನಾವಣೆ
- ದಕ್ಷಿಣ ಕನ್ನಡ ಜಿಲ್ಲಾ ವಿದ್ಯಾರ್ಥಿ ಜನತಾದಳಕ್ಕೆ ನೂತನ ಪದಾಧಿಕಾರಿಗಳ ನೇಮಕ – ಸಂಘಟನೆ ಬಲವರ್ಧನೆಗೆ ಹೊಸ ಚೈತನ್ಯ

