ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ದಿನಾಂಕ 31-12-2024 ರಂದು ಬೆಳಗ್ಗೆ 10.30 ಕ್ಕೆ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ರವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಸಾವಿಗೀಡಾದ ಹುತಾತ್ಮ ಸೈನಿಕ ಅನೂಪ್ ಪೂಜಾರಿಯವರ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು. ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರು ಅನೂಪ್ ಪೂಜಾರಿರವರ ಭಾವಚಿತ್ರಕ್ಕೆ ದೀಪ ಹಚ್ಚಿ ಪುಷ್ಪ ಅರ್ಚನೆ ಮಾಡಿ ಅನೂಪ್ ಪೂಜಾರಿ ರವರ ತ್ಯಾಗ ಬಲಿದಾನ ಬಗ್ಗೆ ಸ್ಮರಿಸಿದರು. ಸಭೆಯಲ್ಲಿ ಕೇಂದ್ರ ಸಂಘಟನೆ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ , ಜಿಲ್ಲಾ ಗೌರವಾಧ್ಯಕ್ಷ ಕೃಷ್ಣ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಜಯರಾಮ್ ಪೂಜಾರಿ, ಕಾರ್ಮಿಕ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮಿನಗರ , ಮಹಿಳಾ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿ , ಮಹಿಳಾ ಕೋಶಾಧಿಕಾರಿ ಸುನಂದ ಕೋಟ್ಯಾನ್, ಜ್ಯೋತಿ , ಲಕ್ಷ್ಮಿ ಬಾಯಿ , ಅವಿನಾಶ್ ಶೆಟ್ಟಿ, ಮಮತಾ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
