ಚಿತ್ರದುರ್ಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿ ಮಾಡಿಸಿ, ಬಳಿಕ ಗರ್ಭಪಾತ ಮಾಡಿಸಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕನನ್ನು ತಳಕು ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.
ಬಂಧಿತ ಆರೋಪಿಯನ್ನು ಡಿಓ ರಾಜಣ್ಣ ಎಂದು ಗುರುತಿಸಲಾಗಿದ್ದು, ಆತ ಹತ್ತನೇ ತರಗತಿಯ ವಿದ್ಯಾರ್ಥಿನಿಯನ್ನು ದುರುಪಯೋಗಪಡಿಸಿಕೊಂಡು ಗರ್ಭಿಣಿ ಮಾಡಿದ್ದಾನೆ ಎನ್ನಲಾಗಿದೆ. ಬಳಿಕ ಪ್ರಕರಣ ಬಯಲಾಗುವ ಭೀತಿಯಿಂದ ಲಕ್ಷ್ಮಿ ಶ್ರೀನಿವಾಸ್ ನರ್ಸಿಂಗ್ ಹೋಂನಲ್ಲಿ ಗರ್ಭಪಾತ ಮಾಡಿಸಿದ ಸಂಗತಿ ತನಿಖೆಯಲ್ಲಿ ಬಹಿರಂಗವಾಗಿದೆ.
ಆರೋಪಿ ಬಂಧನವಾಗುತ್ತಿದ್ದಂತೆ ಗರ್ಭಪಾತ ನಡೆಸಿದರೆಂದು ಆರೋಪಿಸಲಾಗಿರುವ ವೈದ್ಯೆ ಡಾ. ಶಂಕರ್ ಲಕ್ಷ್ಮಿ ನಾಪತ್ತೆಯಾಗಿದ್ದು, ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇವರ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ.
ತಳಕು ಪೊಲೀಸ್ ಠಾಣೆ ಪಿಎಸ್ಐ ಶಿವಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಈ ಸಂಬಂಧ ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
Trending
- SSLC ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ SDPI ಕೊಳಂಬೆ ಬ್ರಾಂಚ್ ವತಿಯಿಂದ ಸನ್ಮಾನ
- ಮನೆಗೆ ಬೀಗ ಹಾಕಿ ಹೊರಗಡೆ ಹೋಗ್ತಿದ್ದೀರಾ..? ಇನ್ನು ಚಿಂತೆ ಬೇಡ; ನಿಮ್ಮ ಮನೆಯ ಕಾವಲು ಉಡುಪಿ ಪೊಲೀಸರಿಂದ..!
- ಸುಲ್ತಾನ್ ಬತ್ತೇರಿ–ತಣ್ಣೀರುಬಾವಿಯ ಸೇತುವೆ : ಸೆಪ್ಟೆಂಬರ್ಗೆ ವಾಹನ ಸಂಚಾರ ಆರಂಭ ಸಾಧ್ಯತೆ
- ಅಮಿತ್ ಶಾ ಸಮ್ಮುಖದಲ್ಲಿ ಮಹತ್ವದ ಸಭೆ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಸುವೇಂದು ಅಧಿಕಾರಿ ಆಯ್ಕೆ; ಬಂಗಾಳದ ಮೊದಲ ಬಿಜೆಪಿ CM ಆಗಿ ಮೇ 9 ಪ್ರಮಾಣವಚನ
- ಫಲ್ಗುಣಿ ನದಿಯಲ್ಲಿ ಮೀನುಗಳ ಸಾಮೂಹಿಕ ಸಾವು ಮಳವೂರು–ಕೆಂಜಾರ್ ಪ್ರದೇಶದಲ್ಲಿ ಪರಿಸರ ವಿಷಕಾರಿ ತ್ಯಾಜ್ಯ ಹರಿವು ಶಂಕೆ, ಜನರ ಆಕ್ರೋಶ
- ಪತ್ರಕರ್ತ ಝಕರಿಯ ಮೇಲಿನ ಹಲ್ಲೆ ಪ್ರಕರಣ : ಮೂವರು ಆರೋಪಿಗಳ ಬಂಧನ
- ಜನಸಾಮಾನ್ಯರ ಹೃದಯ ಗೆದ್ದ ವೈದ್ಯಾಧಿಕಾರಿಗೆ ಭಾವಪೂರ್ಣ ಬೀಳ್ಕೊಡುಗೆ ,“ಡಾ. ಪ್ರಭಾ ಎನ್. ಅವರ ಸೇವೆ ಬೆಲೆ ಕಟ್ಟಲಾಗದದ್ದು” : ಫ್ರ್ಯಾಂಕಿ ಡಿಸೋಜ
- ಸುಳ್ಯ ತಾಲೂಕು ಜನತಾದಳ (ಜಾ) ಅಧ್ಯಕ್ಷರ ನಿವಾಸಕ್ಕೆ ಯೋಗಿಶ್ ಶೆಟ್ಟಿ ಜಪ್ಪುರವರ ಸೌಹಾರ್ದ ಭೇಟಿ

