Saturday, July 27, 2024
spot_img
More

    Latest Posts

    ಲಂಚ ಆರೋಪ: ಕೇರಳದಲ್ಲಿ ಕರ್ನಾಟಕದ ನಾಲ್ವರು ಪೊಲೀಸ್ ಅಧಿಕಾರಿಗಳು ವಶಕ್ಕೆ

    ತಿರುವನಂತಪುರ: ಕ್ರಿಪ್ಟೋ ಕರೆನ್ಸಿ ತನಿಖೆಗಾಗಿ ಕೇರಳಕ್ಕೆ ಬಂದಿದ್ದ ಬೆಂಗಳೂರು ವೈಟ್ ಫೀಲ್ಡ್ ಪೊಲೀಸ್ ನ ನಾಲ್ವರು ಅಧಿಕಾರಿಗಳನ್ನು ಲಂಚ ಸ್ವೀಕರಿಸಿದ ಆರೋಪದಲ್ಲಿಕೇರಳದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

    ವೈಟ್ ಫೀಲ್ಡ್ ಪೊಲೀಸ್ ಅಧಿಕಾರಿಗಳು ಕೊಚ್ಚಿಯ ಕುಂಬಲಂಗಿಯಿಂದ ಇಬ್ಬರನ್ನು ಕಸ್ಟಡಿಗೆ ತೆಗೆದುಕೊಂಡಿದ್ದರು. ಈ ಇಬ್ಬರನ್ನು ಬಿಡುಗಡೆ ಮಾಡಲು 10 ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. 4 ಲಕ್ಷ ರೂ. ಪಾವತಿಸಿದ ಹೊರತಾಗಿಯೂ ಪೊಲೀಸ್ ಅಧಿಕಾರಿಗಳು ಇಬ್ಬರನ್ನು ಬಿಡುಗಡೆ ಮಾಡಿರಲಿಲ್ಲ ಎಂದು ಕುಟುಂಬ ಸದಸ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಕೊಚ್ಚಿ ನಗರದಲ್ಲಿ ಪೊಲೀಸರು ವಾಹನ ಹಾಗೂ ನಗದನ್ನು ಪತ್ತೆ ಹಚ್ಚಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಮಲಯಾಳಂ ಮಾಧ್ಯಮಗಳು ವರದಿ ಮಾಡಿವೆ. ಬಂಧಿತ ಪೋಲೀಸರ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss