Friday, March 29, 2024
spot_img
More

    Latest Posts

    ಮಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಪ್ರಕರಣ-ಆರೋಪಿಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್

    ಮಂಗಳೂರು: ಆದಾಯಕ್ಕಿಂತ ಅಧಿಕ ಪ್ರಮಾಣದ ಆಸ್ತಿ ಹೊಂದಿರುವ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಮಂಗಳೂರು ಮನಪಾ ಹಿರಿಯ ನೈರ್ಮಲ್ಯ ನಿರೀಕ್ಷಕ ಶಿವಲಿಂಗ ಕೊಂಡಗುಳಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ 4ವರ್ಷಗಳ ಸಾದಾ ಸಜೆ ಹಾಗೂ 1 ಕೋಟಿ ರೂ. ದಂಡ ವಿಧಿಸಿ ಆದೇಶಿಸಿದೆ.

    ಆರೋಪಿ ಶಿವಲಿಂಗ ಕೊಂಡಗುಳಿ ಆದಾಯಕ್ಕಿಂತ ಅಧಿಕ ಪ್ರಮಾಣದ ಆಸ್ತಿ ಹೊಂದಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸ್ 2013ರ ಫೆಬ್ರವರಿ 15ರಂದು ದಾಳಿ ನಡೆಸಿ ಬಂಧಿಸಿತ್ತು. ಈ ಬಗ್ಗೆ ಲಂಚ ವಿರೋಧಿ ಕಾಯ್ದೆ 1988ರನ್ವಯ ಪ್ರಕರಣ ದಾಖಲಾಗಿತ್ತು. ಅಂದಿನ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಉಮೇಶ್ ಜಿ. ಶೇಟ್ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

    ಪ್ರಕರಣದ ವಿಚಾರಣೆ ನಡೆಸಿದ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಆರೋಪಿ ಶಿವಲಿಂಗ ಕೊಂಡಗುಳಿ ಮೇಲಿನ ಆರೋಪ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶ ಬಿ.ಬಿ ಜಕಾತಿಯವರು ಆರೋಪಿಗೆ 4ವರ್ಷಗಳ ಸಾದಾ ಸಜೆ ಹಾಗೂ 1 ಕೋಟಿ ರೂ. ದಂಡ ವಿಧಿಸಿದ್ದಾರೆ. ಆರೋಪಿ ದಂಡ ತೆರಲು ವಿಫಲನಾದಲ್ಲಿ ಮತ್ತೆ ಒಂದು ವರ್ಷ ಸಾದಾ ಸಜೆ ಅನುಭವಿಸಬೇಕೆಂದು ಆದೇಶಿಸಿದ್ದಾರೆ.

    ಸರಕಾರದ ಪರವಾಗಿ ಕರ್ನಾಟಕ ಲೋಕಾಯುಕ್ತ ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಿಪಾಡಿ ವಾದಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss