Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್:-

    5 July 2025

    ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ : ಶಾಸಕ ವೇದವ್ಯಾಸ ಕಾಮತ್.!

    4 July 2025

    ತುಮಕೂರು ; ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ,ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾ‌ನ ನ್ಯಾಯಾಲಯ ಮಹತ್ವದ ತೀರ್ಪು

    2 July 2025
    Facebook WhatsApp Telegram
    Trending
    • ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್:-
    • ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ : ಶಾಸಕ ವೇದವ್ಯಾಸ ಕಾಮತ್.!
    • ತುಮಕೂರು ; ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ,ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾ‌ನ ನ್ಯಾಯಾಲಯ ಮಹತ್ವದ ತೀರ್ಪು
    • ಮಂಗಳೂರು : ಸಹಕಾರಿ ಬ್ಯಾಂಕ್‌ನಲ್ಲಿ ಗೋಲ್ಡ್’ ಗೋಲ್‌ಮಾಲ್| ಗ್ರಾಹಕರು ಅಡವಿಟ್ಟ ಚಿನ್ನಕ್ಕೆ ಕನ್ನ ಹಾಕಿದ ಬ್ಯಾಂಕ್ ಕ್ಯಾಷಿಯರ್
    • ತುಳುರಂಗಭೂಮಿಯ ಹೆಸರಾಂತ ನಾಟಕ ಸಂಸ್ಥೆ ಚಾಪರ್ಕ ತಂಡದ 60ನೇ ನಾಟಕ “ಎನ್ನನೇ ಕಥೆ” ಮುಹೂರ್ತ
    • ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಹ್ವಾನ..!
    • ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ , ವೈದ್ಯ ಸಂಘ ಅಧ್ಯಕ್ಷರುಗಳಿಗೆ ಗೌರವ ಸನ್ಮಾನ
    • ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಆಯ್ಕೆ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, July 6
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಸಾಧಕ ಮಹಿಳೆಯರಿಗೆ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ “ಆತ್ಮಸಮ್ಮಾನ’

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಸಾಧಕ ಮಹಿಳೆಯರಿಗೆ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ “ಆತ್ಮಸಮ್ಮಾನ’

    Tulunada SuryaBy Tulunada Surya12 March 2025Updated:12 March 2025 ಸುದ್ದಿ No Comments2 Mins Read
    Share
    Facebook WhatsApp
    Share on:

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಸಾಧಕ ಮಹಿಳೆಯರಿಗೆ “ಆತ್ಮಸಮ್ಮಾನ” ಕಾರ್ಯಕ್ರಮವನ್ನು ಸಂಘದ ಪ್ರಧಾನ ಕಚೇರಿ ಪಡೀಲ್‌ನಲ್ಲಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಅವರ ಅಧ್ಯಕ್ಷತೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಆಚರಿಸಲಾಯಿತು.
    ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಸಾಧಕ ಮಹಿಳೆಯರಾದ ಶಿಕ್ಷಕರು ಮತ್ತು ಸಮಾಜ ಸೇವಕರಾದ ಕೆ.ಎ. ರೋಹಿಣಿ ಹಾಗೂ ಪ್ರಾಧ್ಯಾಪಕರು ಮತ್ತು ಹಾಸ್ಯ ಸಾಹಿತಿಗಾರರಾದ ಭುವನೇಶ್ವರಿ ಹೆಗಡೆ ಅವರನ್ನು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರು ಅತಿಥಿ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸುವ ಮೂಲಕ ಗೌರವಿಸಿದರು.
    ಸನ್ಮಾನ ಸ್ವೀಕರಿಸಿ ಮಾತನಾಡಿದ ಶಿಕ್ಷಕರು ಮತ್ತು ಸಮಾಜ ಸೇವಕರಾದ ಕೆ.ಎ. ರೋಹಿಣಿ ರವರು “ಮಹಿಳಾ ದಿನವನ್ನು ಒಂದೇ ದಿನಕ್ಕೆ ಸೀಮಿತಗೊಳಿಸಬಾರದು. ಹೆಣ್ಣು ಸಹನಾಮಯಿ. ಮನೆ, ಕುಟುಂಬ, ಕಚೇರಿ, ಮಕ್ಕಳು, ಕೆಲಸ ಹೀಗೆ ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸುವ ಹೆಣ್ಣಿನ ಶಕ್ತಿಗೆ ಅದರದ್ದೇ ಆದ ಮಹತ್ವವಿದೆ. ಹೆಣ್ಣು ಮಕ್ಕಳು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವುದರಿಂದ ಹೆಚ್ಚಿನ ಕಡೆಗಳಲ್ಲಿ ಕೆಲಸಕ್ಕೆ ಇತ್ತೀಚಿನ ದಿನಗಳಲ್ಲಿ ಮಹಿಳೆಯರಿಗೆ ಪ್ರಾಶಸ್ತ್ಯ ಸಿಗುತ್ತಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕೇವಲ ಬ್ಯಾಂಕಿಂಗ್ ಸೇವೆಗೆ ಸೀಮಿತವಾಗಿರದೇ ಇತರ ಸಮಾಜಮುಖಿ ಚಟುವಟಿಕೆಗಳನ್ನು ವರ್ಷಂಪ್ರತಿ ಮಾಡುತ್ತಾ ಬರುತ್ತಿರುವುದು ಶ್ಲಾಘನೀಯ” ಎಂದರು.
    ಪ್ರಾಧ್ಯಾಪಕರು ಮತ್ತು ಹಾಸ್ಯ ಸಾಹಿತಿ ಭುವನೇಶ್ವರಿ ಹೆಗಡೆ ರವರು ಮಾತನಾಡುತ್ತಾ “ಸುವ್ಯವಸ್ಥಿತವಾಗಿ ರೂಪುಗೊಂಡಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಮಹಿಳಾ ಸಬಲೀಕರಣದ ಪ್ರತೀಕವಾಗಿದೆ. ಈ ಸಂಸ್ಥೆಯಲ್ಲಿ ಶೇ. 95ಕ್ಕೂ ಮಹಿಳಾ ಸಿಬ್ಬಂದಿಗಳಿಗೆ ಉದ್ಯೋಗವನ್ನು ನೀಡಿರುವುದನ್ನು ನೋಡಿದರೆ ಮಹಿಳೆಯರಿಗೆ ನೀಡುವ ಗೌರವ ಗೊತ್ತಾಗುತ್ತದೆ ಎಂದರು.
    ತಮ್ಮ ಹಾಸ್ಯಭರಿತ ಮಾತಿನಿಂದ ಸಂಘದ ಸಿಬ್ಬಂದಿಗಳನ್ನು ನಗೆಕಡಲಲ್ಲಿ ತೆಲಿಸಿದರು.
    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ವರ್ಷಂಪ್ರತಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸಾಧಕ ಮಹಿಳೆಯರನ್ನು ಗುರುತಿಸಿ ಸನ್ಮಾನಿಸುವ ಮೂಲಕ ಆಚರಿಸಿಕೊಂಡು ಬರುತ್ತಿದೆ. ಅದೇ ರೀತಿ ಈ ವರ್ಷವೂ ಕೂಡ ಸಾಧಕ ಮಹಿಳೆಯರಾದ ಶಿಕ್ಷಕರು ಮತ್ತು ಸಮಾಜ ಸೇವಕರಾದ ಕೆ.ಎ. ರೋಹಿಣಿ ಮತ್ತು ಪ್ರಾಧ್ಯಾಪಕರು ಮತ್ತು ಹಾಸ್ಯ ಸಾಹಿತಿ
    ಭುವನೇಶ್ವರಿ ಹೆಗಡೆ ಯವರನ್ನು ಗುರುತಿಸಿ ಸನ್ಮಾನಿಸಲು ಸಂಘವು ತುಂಬಾ ಹೆಮ್ಮೆ ಪಡುತ್ತಿದೆ. ಸಂಘವು ಮಹಿಳಾ ಸಬಲೀಕರಣದ ಧ್ಯೇಯದೊಂದಿಗೆ ಶೇ.95 ರಷ್ಟು ಮಹಿಳಾ ಸಿಬ್ಬಂದಿಗಳಿಗೆ ಉದ್ಯೋಗವನ್ನು ನೀಡಿದ್ದು, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ 30 ಶಾಖೆಗಳ ಶಾಖಾಧಿಕಾರಿಗಳು ಕೂಡ ಮಹಿಳೆಯರೇ ಆಗಿದ್ದಾರೆ ಎಂದರು. ಉಳ್ಳಾಲ ಶಾಖೆ ಶಾಖಾಧಿಕಾರಿ ಸಚಿನ್ ರವರು ಸ್ವಾಗತಿಸಿದರು.ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ, ಜಿ. ಪರಮೇಶ್ವರ್ ಪೂಜಾರಿ, ದಿವಾಕರ ಬಿ,ಪಿ., ಗೋಪಾಲ್ ಎಂ., ಉಮಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೆಬಲ್ ಟ್ರಸ್ಟ್ನ ಗೌರವ ಅಧ್ಯಕ್ಷರಾದ ವಾಮನ್ ಕೆ. ಅಧ್ಯಕ್ಷರಾದ ಗೋಪಾಲ ಪೂಜಾರಿ ವೀರನಗರ, ಕೋಶಾಧಿಕಾರಿಯಾದ ಬಾಬು ಎಸ್ ಕರ್ಕೇರ, ಮತ್ತಿತ್ತರರು ಉಪಸ್ಥಿತರಿದ್ದರು.

    Share on:

    Keep Reading

    ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್:-

    ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ : ಶಾಸಕ ವೇದವ್ಯಾಸ ಕಾಮತ್.!

    ತುಮಕೂರು ; ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ,ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾ‌ನ ನ್ಯಾಯಾಲಯ ಮಹತ್ವದ ತೀರ್ಪು

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.