ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಅಡ್ಯಾರ್ ಶಾಖೆಯ ಚತುರ್ಥ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಅಡ್ಯಾರ್ ಶಾಖೆಯಲ್ಲಿ ನಡೆಯಿತು.
ಸಂಘದ ಗ್ರಾಹಕರಾದ ಶ್ರೀ ಜಯಶೀಲ ಅಡ್ಯಂತಾಯ, ಶ್ರೀ ಉಮೇಶ್ ಶೆಟ್ಟಿ ಹಾಗೂ ಶ್ರೀ ಹರೀಶ್ ಅಡ್ಯಾರ್ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸದಸ್ಯರಾದ ಶ್ರೀ ಉಮೇಶ್ ಶೆಟ್ಟಿ ಅವರು ಮಾತನಾಡಿ, “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ನೇತೃತ್ವದಲ್ಲಿ ಗ್ರಾಹಕರಿಗೆ ಉತ್ತಮ ರೀತಿಯಲ್ಲಿ ಸೇವೆಯನ್ನು ನೀಡುತ್ತಾ ಬರುತ್ತಿದೆ” ಎಂದರು.
ಸಂಘದ ಸದಸ್ಯರಾದ ಶ್ರೀ ಜಯಶೀಲ ಅಡ್ಯಂತಾಯ ಅವರು ಮಾತನಾಡಿ, “ಸಂಘವು 35 ಶಾಖೆಗಳನ್ನು ಹೊಂದಿದ್ದು, ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಹಾಗೂ ಇನ್ನೂ ಮುಂದಕ್ಕೆ ಹೆಚ್ಚಿನ ಶಾಖೆಗಳನ್ನು ಹೊಂದಲಿ” ಎಂದು ಶುಭ ಹಾರೈಸಿದರು.
ಸದಸ್ಯರಾದ ಶ್ರೀ ಹರೀಶ್ ಅಡ್ಯಾರ್ ಅವರು ಮಾತನಾಡಿ, “ಅಡ್ಯಾರ್ ಶಾಖೆಯು ಗ್ರಾಹಕರಿಗೆ ಉತ್ತಮ ಶಾಖೆಯಾಗಿ, ಉತ್ತಮ ಸೇವೆಯನ್ನು ನೀಡುತ್ತಿದೆ” ಎಂದು ಶ್ಲಾಘಿಸಿದರು.
ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರು ಮಾತನಾಡಿ, “ನಮ್ಮ ಸಂಸ್ಥೆಯಲ್ಲಿ ಹೆಚ್ಚಿನ ಸಿಬ್ಬಂದಿಗಳು ಮಹಿಳೆಯರಾಗಿದ್ದು, ಗ್ರಾಹಕರ ಸಹಕಾರದಿಂದ ಈ ಸಂಸ್ಥೆಯನ್ನು ಉತ್ತಮ ರೀತಿಯಲ್ಲಿ ನಡೆಸಿಕೊಂಡು ಬರಲು ಸಾಧ್ಯವಾಗಿದೆ. ಸಂಘದ ಸದಸ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಚಿನ್ನಾಭರಣ ಸಾಲದ ಸೇವೆಯನ್ನು ಹೆಚ್ಚಾಗಿ ನೀಡುತ್ತಿದೆ.
ಸಂಘವು ಕೇವಲ ಬ್ಯಾಂಕಿಂಗ್ ಮಾತ್ರವಲ್ಲದೆ, ವಿವಿಧ ಸಾಮಾಜಿಕ ಕಾರ್ಯಕ್ರಮಗಳಲ್ಲಿಯೂ ತೊಡಗಿಸಿಕೊಂಡಿದೆ. ಜೊತೆಗೆ ಸದಸ್ಯರ ಆರೋಗ್ಯದ ಕಾಳಜಿಯಿಂದ ನಿರಂತರವಾಗಿ ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತಾ ಬರುತ್ತಿದೆ. ಸಂಘದ ಸದಸ್ಯರಿಗೆ ಸ್ಪರ್ಧಾತ್ಮಕ ದರದಲ್ಲಿ ವಿಮಾ ಸೌಲಭ್ಯಗಳನ್ನು ನೀಡುತ್ತಿದೆ.
ಅಡ್ಯಾರ್ ಶಾಖೆಯ ಚತುರ್ಥ ವಾರ್ಷಿಕೋತ್ಸವ ಪ್ರಯುಕ್ತ 500 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿದರ ಶೇ. 10 ಹಾಗೂ 1000 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿದರ ಶೇ. 10.50 ಅನ್ನು ನೀಡಲಾಗುತ್ತಿದೆ. ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂಗೆ ಗರಿಷ್ಠ ಮೌಲ್ಯ ರೂ. 12,000/- ವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು” ಎಂದರು.
ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ನಿರ್ದೇಶಕರಾದ ಶ್ರೀ ಗೋಪಾಲ್ ಎಂ., ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಉಪಸ್ಥಿತರಿದ್ದರು.
ಶಾಖೆಯ ಸಿಬ್ಬಂದಿಯಾದ ಕುಮಾರಿ ನವ್ಯ ಅವರು ಸ್ವಾಗತಿಸಿದರು. ಶ್ರೀಮತಿ ಅಶ್ವಿನಿ ಅವರು ವಂದಿಸಿದರು. ಶಾಖೆಯ ಶಾಖಾಧಿಕಾರಿಯಾದ ಶ್ರೀಮತಿ ಕವಿತಾ ಅವರು ಕಾರ್ಯಕ್ರಮ ನಿರೂಪಿಸಿದರು.
Trending
- ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆ ಖಂಡನೀಯ: ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಉಡುಪಿ ಪತ್ರಕರ್ತರ ಸಂಘ ಆಗ್ರಹ
- ಆರೂರು ಅಡ್ಜಿಲು ಭಾಗದ ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಮೆಸ್ಕಾಂ ಒಂದು ತಿಂಗಳೊಳಗೆ ಹೊಸ ಟಿಸಿ ಅಳವಡಿಸುವ ಭರವಸೆ – ತುಳುನಾಡು ರಕ್ಷಣಾ ವೇದಿಕೆ ಆಗ್ರಹ
- ಆಗಸ್ಟ್ 23ರಂದು ಮಂಗಳೂರಿನಲ್ಲಿ ಅಂತರರಾಷ್ಟ್ರೀಯ ಬಂಟ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ “ಮರಿಯಾಳದ ಮಿನದನ” ಪೂರ್ವಭಾವಿ ಸಭೆ
- ₹5 ಕೋಟಿ ನಕಲಿ ಔಷಧಿ ಜಾಲ ಬಯಲು: ಫಾರ್ಮ್ಹೌಸ್ನಲ್ಲಿ ನಡೆಯುತ್ತಿದ್ದ ಅಕ್ರಮ ದಂಧೆಗೆ ಅಧಿಕಾರಿಗಳ ದಾಳಿ ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ನಕಲಿ ಲೇಬಲ್ ಅಂಟಿಸಿ ಔಷಧಿಗಳ ಮರುಪ್ಯಾಕಿಂಗ್ – ಅವಧಿ ಮೀರಿದ ಔಷಧಿಗಳೂ ಪತ್ತೆ
- ಉಡುಪಿ: ತುಳುನಾಡಿನ ಸಂಸ್ಕೃತಿ, ಪರಂಪರೆ ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿ: ಸೂರಜ್ ನಾಯಕ್ ಸೋನಿ
- INDIA through my EYES’ ಚಿತ್ರಕಲಾ ಸ್ಪರ್ಧೆಯಲ್ಲಿ ಚಿನ್ಮಯಿ ಎಸ್. ವಿಜೇತೆ
- ಕರಂಬಾರು ಶಾಲೆಯಲ್ಲಿ ಸಂಭ್ರಮ ಸಡಗರದಿಂದ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ
- ಕೋರ್ದಬ್ಬು ದೈವದ ಪಾತ್ರಿ ಸೀನ ಪಾತ್ರಿ ನಂದಿಕೂರು ಮೆರೆಗ್ ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್ದ “ತುಳುವಾಲ ಕುಲಸಿರಿ – 2026” ಪ್ರಶಸ್ತಿ ಘೋಷಣೆ

