ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಅಡ್ಯಾರ್ ಶಾಖೆಯ ಚತುರ್ಥ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಅಡ್ಯಾರ್ ಶಾಖೆಯಲ್ಲಿ ನಡೆಯಿತು.
ಸಂಘದ ಗ್ರಾಹಕರಾದ ಶ್ರೀ ಜಯಶೀಲ ಅಡ್ಯಂತಾಯ, ಶ್ರೀ ಉಮೇಶ್ ಶೆಟ್ಟಿ ಹಾಗೂ ಶ್ರೀ ಹರೀಶ್ ಅಡ್ಯಾರ್ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸದಸ್ಯರಾದ ಶ್ರೀ ಉಮೇಶ್ ಶೆಟ್ಟಿ ಅವರು ಮಾತನಾಡಿ, “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ನೇತೃತ್ವದಲ್ಲಿ ಗ್ರಾಹಕರಿಗೆ ಉತ್ತಮ ರೀತಿಯಲ್ಲಿ ಸೇವೆಯನ್ನು ನೀಡುತ್ತಾ ಬರುತ್ತಿದೆ” ಎಂದರು.
ಸಂಘದ ಸದಸ್ಯರಾದ ಶ್ರೀ ಜಯಶೀಲ ಅಡ್ಯಂತಾಯ ಅವರು ಮಾತನಾಡಿ, “ಸಂಘವು 35 ಶಾಖೆಗಳನ್ನು ಹೊಂದಿದ್ದು, ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಹಾಗೂ ಇನ್ನೂ ಮುಂದಕ್ಕೆ ಹೆಚ್ಚಿನ ಶಾಖೆಗಳನ್ನು ಹೊಂದಲಿ” ಎಂದು ಶುಭ ಹಾರೈಸಿದರು.
ಸದಸ್ಯರಾದ ಶ್ರೀ ಹರೀಶ್ ಅಡ್ಯಾರ್ ಅವರು ಮಾತನಾಡಿ, “ಅಡ್ಯಾರ್ ಶಾಖೆಯು ಗ್ರಾಹಕರಿಗೆ ಉತ್ತಮ ಶಾಖೆಯಾಗಿ, ಉತ್ತಮ ಸೇವೆಯನ್ನು ನೀಡುತ್ತಿದೆ” ಎಂದು ಶ್ಲಾಘಿಸಿದರು.
ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರು ಮಾತನಾಡಿ, “ನಮ್ಮ ಸಂಸ್ಥೆಯಲ್ಲಿ ಹೆಚ್ಚಿನ ಸಿಬ್ಬಂದಿಗಳು ಮಹಿಳೆಯರಾಗಿದ್ದು, ಗ್ರಾಹಕರ ಸಹಕಾರದಿಂದ ಈ ಸಂಸ್ಥೆಯನ್ನು ಉತ್ತಮ ರೀತಿಯಲ್ಲಿ ನಡೆಸಿಕೊಂಡು ಬರಲು ಸಾಧ್ಯವಾಗಿದೆ. ಸಂಘದ ಸದಸ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಚಿನ್ನಾಭರಣ ಸಾಲದ ಸೇವೆಯನ್ನು ಹೆಚ್ಚಾಗಿ ನೀಡುತ್ತಿದೆ.
ಸಂಘವು ಕೇವಲ ಬ್ಯಾಂಕಿಂಗ್ ಮಾತ್ರವಲ್ಲದೆ, ವಿವಿಧ ಸಾಮಾಜಿಕ ಕಾರ್ಯಕ್ರಮಗಳಲ್ಲಿಯೂ ತೊಡಗಿಸಿಕೊಂಡಿದೆ. ಜೊತೆಗೆ ಸದಸ್ಯರ ಆರೋಗ್ಯದ ಕಾಳಜಿಯಿಂದ ನಿರಂತರವಾಗಿ ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತಾ ಬರುತ್ತಿದೆ. ಸಂಘದ ಸದಸ್ಯರಿಗೆ ಸ್ಪರ್ಧಾತ್ಮಕ ದರದಲ್ಲಿ ವಿಮಾ ಸೌಲಭ್ಯಗಳನ್ನು ನೀಡುತ್ತಿದೆ.
ಅಡ್ಯಾರ್ ಶಾಖೆಯ ಚತುರ್ಥ ವಾರ್ಷಿಕೋತ್ಸವ ಪ್ರಯುಕ್ತ 500 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿದರ ಶೇ. 10 ಹಾಗೂ 1000 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿದರ ಶೇ. 10.50 ಅನ್ನು ನೀಡಲಾಗುತ್ತಿದೆ. ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂಗೆ ಗರಿಷ್ಠ ಮೌಲ್ಯ ರೂ. 12,000/- ವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು” ಎಂದರು.
ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ನಿರ್ದೇಶಕರಾದ ಶ್ರೀ ಗೋಪಾಲ್ ಎಂ., ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಉಪಸ್ಥಿತರಿದ್ದರು.
ಶಾಖೆಯ ಸಿಬ್ಬಂದಿಯಾದ ಕುಮಾರಿ ನವ್ಯ ಅವರು ಸ್ವಾಗತಿಸಿದರು. ಶ್ರೀಮತಿ ಅಶ್ವಿನಿ ಅವರು ವಂದಿಸಿದರು. ಶಾಖೆಯ ಶಾಖಾಧಿಕಾರಿಯಾದ ಶ್ರೀಮತಿ ಕವಿತಾ ಅವರು ಕಾರ್ಯಕ್ರಮ ನಿರೂಪಿಸಿದರು.
Trending
- ಮೂಲ್ಕಿಯಲ್ಲಿ ಬ್ಯಾರಿ ಸಾಹಿತ್ಯ ಪರಿಷತ್ ತಾಲೂಕು ಘಟಕಕ್ಕೆ ಚಾಲನೆ: ಸದಸ್ಯತ್ವ ಅಭಿಯಾನ, ಸಮಿತಿ ರಚನೆ ಹಾಗೂ ಸಾಧಕರಿಗೆ ಸನ್ಮಾನ
- ಬಿಕರ್ಣಕಟ್ಟೆ–ಬಜ್ಜೋಡಿ ಗುಡ್ಡ ಕುಸಿತದ ಆತಂಕದ ಪ್ರದೇಶಕ್ಕೆ ಜೆಡಿಎಸ್ ಮುಖಂಡರ ಭೇಟಿ,ನಾಗೋರಿ ದುರಂತ ಮರುಕಳಿಸದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ; ಜೀವಹಾನಿಗೂ ಮುನ್ನ ಸರ್ಕಾರ ಎಚ್ಚೆತ್ತುಕೊಳ್ಳಲಿ – ಜೆಡಿಎಸ್ ಆಗ್ರಹ
- ಮಲ್ಲಾರು–ಮಜೂರು ಬದ್ರಿಯಾ ಜುಮುಅ ಮಸೀದಿ ಆಡಳಿತ ಸಮಿತಿಗೆ ಗೌರವಾಭಿನಂದನೆ
- ವೃಕ್ಷ ಸಂತ್ರಸ್ತರಿಗೆ ತ್ವರಿತ ನ್ಯಾಯ, ಕೊಳಂಬೆ ಜಲಾವೃತ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಅಪರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ತುಳುನಾಡ ರಕ್ಷಣಾ ವೇದಿಕೆ ಮನವಿ
- ಸಕ್ರಿಯ ರಾಜಕಾರಣಕ್ಕೆ ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಅಸೈಗೋಳಿ ಮರಳಿಕೆ; ಜೆಡಿಎಸ್ಗೆ ಮತ್ತಷ್ಟು ಬಲ
- ಹೊಂಡಕ್ಕೆ ಬಿದ್ದು ಪ್ರಾಣಾಪಾಯದಲ್ಲಿದ್ದ ಗೋವಿನ ರಕ್ಷಣೆ ಮಾಡಿದ ಬಾಲಕರು
- ಪತ್ರಿಕಾ ದಿನಾಚರಣೆ: ನೈಜ ಸುದ್ದಿಗಳೇ ಆರೋಗ್ಯಕರ ಸಮಾಜದ ಅಡಿಪಾಯ – ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ
- ನಾಗೋರಿ ದುರಂತ ಸ್ಥಳಕ್ಕೆ ಜೆಡಿಎಸ್ ನಿಯೋಗ ಭೇಟಿ: ಮೃತರ ಕುಟುಂಬಕ್ಕೆ ನ್ಯಾಯಸಮ್ಮತ ಪರಿಹಾರ, ಅಪಾಯದ ಪ್ರದೇಶಗಳಿಗೆ ಶಾಶ್ವತ ಸುರಕ್ಷತಾ ಕ್ರಮ ಕೈಗೊಳ್ಳಲು ಒತ್ತಾಯ

