ವಿಟ್ಲ;ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ವ್ಯಕ್ತಿಯೊಬ್ಬರಿಗೆ ಕತ್ತಿಯಿಂದ ಕಡಿದ ಘಟನೆ ಅಡ್ಯನಡ್ಕ ದ ಪುಣಚ ಸೊಸೈಟಿ ಮುಂಭಾಗ ನಡೆದಿದೆ.
ಘಟನೆಯಲ್ಲಿ ಕೊಳ್ಳಪದವು ನಿವಾಸಿ ದಿನೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ.ಕುಡಿದ ಮತ್ತಿನಲ್ಲಿ ಗಲಾಟೆ ನಡೆದಿದೆ ಎನ್ನಲಾಗಿದೆ. ಸದ್ಯ ಗಂಭೀರ ಗಾಯಗೊಂಡಿರುವ ದಿನೇಶ್ ನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.