- ಹೈಟೆನ್ಷನ್ ವಿದ್ಯುತ್ ತಂತಿ ತಾಗಿ ಗುತ್ತಿಗೆದಾರ ದಾರುಣ ಸಾವು ಶೀಟ್ ಮೇಲ್ಛಾವಣಿ ಕಾಮಗಾರಿ ವೇಳೆ ದುರ್ಘಟನೆ; ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲು
- 15ಕ್ಕೂ ಅಧಿಕ ವಿದ್ಯಾರ್ಥಿಗಳು ಅಪಾಯದಿಂದ ಪಾರು; ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ | ಸ್ಥಳೀಯರಿಂದ ಮಕ್ಕಳ ರಕ್ಷಣೆ | ವಿದ್ಯಾರ್ಥಿ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಮನವಿ ನೀಡಿದ್ದರೂ ಮತ್ತೊಂದು ಘಟನೆ
- ತುಳುನಾಡ ರಕ್ಷಣಾ ವೇದಿಕೆ🌾 ಆಟಿ ಅಮಾವಾಸ್ಯೆ ಪ್ರಯುಕ್ತ ಪಾಲೆ ಕೆತ್ತೆ ಕಷಾಯ ವಿತರಣೆ
- ಕೆದಂಬಾಡಿ ರಾಮಯ್ಯ ಗೌಡರ ಸ್ಮರಣೆಯೊಂದಿಗೆ ಸ್ವಾತಂತ್ರ್ಯೋತ್ಸವ ಆಚರಣೆಆ.15ರಂದು ಬಾವುಟ ಗುಡ್ಡದಲ್ಲಿ ಧ್ವಜಾರೋಹಣ – ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮನವಿ
- ಉಡುಪಿಯಲ್ಲಿ ಸಹಕಾರಿ ಸೊಸೈಟಿ ಸಿಇಒ ಆತ್ಮಹತ್ಯೆ ,ಅಂಬಲಪಾಡಿ ಫ್ಲಾಟಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ; ಸಾವಿನ ಹಿಂದಿನ ಕಾರಣ ನಿಗೂಢ
- ‘ರೌಟ್ಲೆಜ್’ ನಿಂದ ಮಹತ್ವದ ಪುಸ್ತಕ ಬಿಡುಗಡೆ:’21ನೇ ಶತಮಾನದ ಭಾರತದಲ್ಲಿ ಅಸ್ಪೃಶ್ಯತೆ’
- ಡೇವಿಡ್ ಡಿಸೋಜ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ 10 ದಿನಗಳ ಪೊಲೀಸ್ ಕಸ್ಟಡಿ
- ಡಾ.ಮಾಲತಿ ಶೆಟ್ಟಿ ಮಾಣೂರು ರವರಿಗೆ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ
Author: Tulunada Surya
ಮಂಗಳೂರು, ಆ.11: ಶೀಟ್ ಮೇಲ್ಛಾವಣಿ ನಿರ್ಮಾಣ ಕಾಮಗಾರಿ ನಡೆಸುತ್ತಿದ್ದ ವೇಳೆ ಕಬ್ಬಿಣದ ರಾಡ್ ಹೈಟೆನ್ಷನ್ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಪ್ರವಹಿಸಿದ ಪರಿಣಾಮ ಗುತ್ತಿಗೆದಾರರೊಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ 6ನೇ ಬ್ಲಾಕ್ನಲ್ಲಿ ಸಂಭವಿಸಿದೆ. ಮೃತರನ್ನು ಕೃಷ್ಣಾಪುರ ಚಕ್ರವರ್ತಿ ಕ್ರೀಡಾಂಗಣ ಸಮೀಪದ ನಿವಾಸಿ ಹಾಗೂ ಶೀಟ್ ಮೇಲ್ಛಾವಣಿ ನಿರ್ಮಾಣ ಕಾಮಗಾರಿ ಗುತ್ತಿಗೆದಾರ ಭಾಸ್ಕರ ಎಂದು ಗುರುತಿಸಲಾಗಿದೆ. ಕೃಷ್ಣಾಪುರ 6ನೇ ಬ್ಲಾಕ್ನಲ್ಲಿರುವ ವಸತಿ ಸಮುಚ್ಚಯವೊಂದರಲ್ಲಿ ತಗುಡು ಶೀಟ್ ಮೇಲ್ಛಾವಣಿ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಕಾಮಗಾರಿಯ ಭಾಗವಾಗಿ ಭಾಸ್ಕರ ಅವರು ಕಬ್ಬಿಣದ ರಾಡ್ ಬಳಸಿ ಅಳತೆ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಕಬ್ಬಿಣದ ರಾಡ್ ಅನ್ನು ಕಂಕುಳಲ್ಲಿಟ್ಟುಕೊಂಡು ತಿರುಗುತ್ತಿದ್ದ ಸಂದರ್ಭದಲ್ಲಿ, ಕಟ್ಟಡದ ಪಕ್ಕದಲ್ಲೇ ಹಾದುಹೋಗುತ್ತಿದ್ದ ಹೈಟೆನ್ಷನ್ ವಿದ್ಯುತ್ ತಂತಿಗೆ ರಾಡ್ ಆಕಸ್ಮಿಕವಾಗಿ ಸ್ಪರ್ಶಿಸಿದೆ ಎನ್ನಲಾಗಿದೆ. ತಂತಿಗೆ ರಾಡ್ ತಾಗುತ್ತಿದ್ದಂತೆಯೇ ಭಾರೀ ಪ್ರಮಾಣದ ವಿದ್ಯುತ್ ಪ್ರವಹಿಸಿದ್ದು, ತೀವ್ರ ವಿದ್ಯುತ್ ಆಘಾತಕ್ಕೊಳಗಾದ ಭಾಸ್ಕರ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು…
ವಿಟ್ಲ, ಆ. 11: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಶಾಲೆಯ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ ಕುಂಟುಕುಡೇಲು ಎಂಬಲ್ಲಿ ಮಂಗಳವಾರ ನಡೆದಿದೆ. ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ ಕುಂಟುಕುಡೇಲು ಇಳಿಜಾರು ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಏಕಾಏಕಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ ಎನ್ನಲಾಗಿದೆ. ಇದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿಗೆ ಚಲಿಸಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಘಟನೆ ನಡೆದ ಸಂದರ್ಭದಲ್ಲಿ ಬಸ್ನಲ್ಲಿ 15ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದರು. ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಹೊರತೆಗೆದು ಅಪಾಯದಿಂದ ಪಾರು ಮಾಡಿದ್ದಾರೆ. ಅದೃಷ್ಟವಶಾತ್ ಯಾವುದೇ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿಲ್ಲ ಹಾಗೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಪಘಾತದ ತೀವ್ರತೆಗೆ ಬಸ್ಸಿನ ಮುಂಭಾಗಕ್ಕೆ ಹಾನಿಯಾಗಿದ್ದು, ವಿದ್ಯುತ್ ಕಂಬವೂ ಹಾನಿಗೊಳಗಾಗಿದೆ. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್…
ಉಡುಪಿ : ತುಳುನಾಡಿನ ಸಾಂಪ್ರದಾಯಿಕ ಆಚರಣೆಗೆ ಗೌರವ – ಆರೋಗ್ಯಕರ ಬದುಕಿನ ಸಂದೇಶ ತುಳುನಾಡ ರಕ್ಷಣಾ ವೇದಿಕೆ (ರಿ.) ವತಿಯಿಂದ ಉಡುಪಿ ಜಿಲ್ಲಾ ಘಟಕದ ಆಶ್ರಯದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಆಟಿ ಅಮಾವಾಸ್ಯೆ ಪ್ರಯುಕ್ತ ಪಾಲೆ ಕೆತ್ತೆ ಕಷಾಯ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ತುಳುನಾಡಿನ ವಿಶಿಷ್ಟ ಸಂಸ್ಕೃತಿ, ಸಂಪ್ರದಾಯ ಹಾಗೂ ಜನಪದ ಆಚರಣೆಗಳಲ್ಲಿ ಆಟಿ ಅಮಾವಾಸ್ಯೆಗೆ ವಿಶೇಷ ಮಹತ್ವವಿದೆ. ಆಟಿ ತಿಂಗಳ ಅಮಾವಾಸ್ಯೆಯಂದು ಪಾಲೆ ಮರದ ಕಡ್ಡಿಯಿಂದ ತಯಾರಿಸುವ ಕಷಾಯ ಸೇವಿಸುವುದು ತುಳುನಾಡಿನ ಹಲವು ಪ್ರದೇಶಗಳಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಾಂಪ್ರದಾಯಿಕ ಆಚರಣೆಯಾಗಿದೆ. ನಮ್ಮ ಹಿರಿಯರು ಪಾಲಿಸಿಕೊಂಡು ಬಂದಿರುವ ಇಂತಹ ಸ್ಥಳೀಯ ಸಂಪ್ರದಾಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಹಾಗೂ ಸಂರಕ್ಷಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 📅 ಕಾರ್ಯಕ್ರಮದ ವಿವರ ದಿನಾಂಕ: 12-08-2026, ಬುಧವಾರಸಮಯ: ಬೆಳಿಗ್ಗೆ 5.00 ಗಂಟೆಗೆಸ್ಥಳ: 📍 ಕ್ಲಾಕ್ ಟವರ್, ಉಡುಪಿ ಕಾರ್ಯಕ್ರಮದಲ್ಲಿ ಪಾಲೆ ಕೆತ್ತೆ ಕಷಾಯ ವಿತರಣೆ ನಡೆಯಲಿದ್ದು, ತುಳುನಾಡಿನ ಸಾಂಪ್ರದಾಯಿಕ ಆಟಿ ಅಮಾವಾಸ್ಯೆಯ ಆಚರಣೆಯಲ್ಲಿ…
ಮಂಗಳೂರು, ಆ.11: ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಅವರ ಸ್ಮರಣೆಯೊಂದಿಗೆ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರನ್ನು ಗೌರವಿಸುವ ಉದ್ದೇಶದಿಂದ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ರಾಷ್ಟ್ರೀಯ ಸ್ಮಾರಕ ಸಮಿತಿ (ರಿ.), ಮಂಗಳೂರು.ಮತ್ತು ತುಳುನಾಡ ರಕ್ಷಣಾ ವೇದಿಕೆ (ರಿ.), ಮಂಗಳೂರು ಇವರ ಸಹಯೋಗದಲ್ಲಿ ಪ್ರತಿ ವರ್ಷದಂತೆ ಈ ವರ್ಷ ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವವನ್ನು ವಿಶೇಷವಾಗಿ ಆಚರಿಸಲಾಗುವುದು. ಆಗಸ್ಟ್ 15ರಂದು ಬಾವುಟ ಗುಡಿಯಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಮುಂಭಾಗದಲ್ಲಿ ರಾಷ್ಟ್ರೀಯ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಪ್ರತಿಮೆಯ ಆವರಣವನ್ನು ತ್ರಿವರ್ಣ ಧ್ವಜಗಳು ಹಾಗೂ ದೇಶಭಕ್ತಿ ಸಾರುವ ಅಲಂಕಾರಗಳಿಂದ ಸಜ್ಜುಗೊಳಿಸಲಾಗುವುದು. ಕೆದಂಬಾಡಿ ರಾಮಯ್ಯ ಗೌಡರು ಸೇರಿದಂತೆ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ. ಇಂತಹ ಕಾರ್ಯಕ್ರಮಗಳ ಮೂಲಕ ನಮ್ಮ ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ಯುವಜನತೆ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ದೇಶಾಭಿಮಾನಿಗಳು, ಸಾರ್ವಜನಿಕರು,…
ಉಡುಪಿ, ಆ. 10: ಉಡುಪಿಯಲ್ಲಿ ಸಹಕಾರಿ ಸೊಸೈಟಿಯೊಂದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು, ಘಟನೆಯಿಂದ ಕುಟುಂಬಸ್ಥರು, ಸಹೋದ್ಯೋಗಿಗಳು ಹಾಗೂ ಪರಿಚಿತರಲ್ಲಿ ಆಘಾತ ಉಂಟಾಗಿದೆ. ಕಲ್ಪನಾ ಟಾಕೀಸ್ ಸಮೀಪದ ಸಾಯಿರಾಜ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸಿಇಒ ಸಚಿನ್ ಶೆಟ್ಟಿ (44) ಅವರು ಅಂಬಲಪಾಡಿ ಸಮೀಪ ತಾವು ವಾಸವಿದ್ದ ಫ್ಲಾಟಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಚಿನ್ ಶೆಟ್ಟಿ ಅವರು ಕಳೆದ ನಾಲ್ಕು ವರ್ಷಗಳಿಂದ ಸಾಯಿರಾಜ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಸೋಮವಾರ ಬೆಳಗ್ಗೆ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಘಟನೆ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಸದ್ಯಕ್ಕೆ ನಿಗೂಢವಾಗಿದ್ದು, ವೈಯಕ್ತಿಕ, ವೃತ್ತಿ ಸಂಬಂಧಿತ ಅಥವಾ ಇತರ ಯಾವುದೇ ಕಾರಣಗಳ ಬಗ್ಗೆ ಈವರೆಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಉಡುಪಿಯ ಸಹಕಾರಿ ವಿಭಾಗದಲ್ಲಿ ಸಚಿನ್…
ಮಂಗಳೂರು : ಮಂಗಳೂರು ಮೂಲದ ಕಾನೂನು ತಜ್ಞೆ ಡಾ. ಪ್ರೀತಿ ಲೋಲಾಕ್ಷ ನಾಗವೇಣಿ ಅವರ Untouchability in 21st Century India (21ನೇ ಶತಮಾನದ ಭಾರತದಲ್ಲಿ ಅಸ್ಪೃಶ್ಯತೆ) ಕೃತಿಯನ್ನು ಜಾಗತಿಕ ಖ್ಯಾತಿಯ ಪ್ರಕಾಶನ ಸಂಸ್ಥೆ ‘ರೌಟ್ಲೆಜ್’ ಪ್ರಕಟಿಸಿ ಇಂದು ಬಿಡುಗಡೆ ಮಾಡಿದೆ. ಆಧುನಿಕ ಭಾರತದಲ್ಲಿ ಅಸ್ಪೃಶ್ಯತೆ ಇನ್ನೂ ಮುಂದುವರಿದಿರುವ ವಾಸ್ತವಿಕತೆಯನ್ನು ಕಾನೂನು ಹಾಗೂ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ದೃಷ್ಟಿಕೋನದಿಂದ ವಿಶ್ಲೇಷಿಸಿರುವ ಅಪರೂಪದ ಸಂಶೋಧನಾ ಕೃತಿ ಇದಾಗಿದೆ. ಈ ಕೃತಿಯಲ್ಲಿ ಅಸ್ಪೃಶ್ಯತೆಯ ಎರಡು ಪ್ರಮುಖ ಸಮಕಾಲೀನ ರೂಪಗಳಾದ ಮ್ಯಾನುಯಲ್ ಸ್ಕ್ಯಾವೆಂಜಿಂಗ್ (ಕೈಯಾರೆ ಮಲ ವಿಲೇವಾರಿ) ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯ ಕುರಿತಾಗಿ ಆಳವಾದ ಅಧ್ಯಯನ ನಡೆಸಲಾಗಿದೆ. ಅಸ್ಪೃಶ್ಯತೆ ಭಾರತದ ಇತಿಹಾಸದ ಭಾಗವಾಗಿಬಿಟ್ಟಿದೆ ಎಂಬ ಸಾಮಾನ್ಯ ನಂಬಿಕೆಯನ್ನು ಪ್ರಶ್ನಿಸಿರುವ ಲೇಖಕಿ, ಸಂವಿಧಾನಾತ್ಮಕ ಖಾತರಿಗಳು ಹಾಗೂ ಕಾನೂನುಗಳಿದ್ದರೂ ಸಹ ಅಸ್ಪೃಶ್ಯತೆ ಇಂದು ಬಹಿರಂಗವಾಗಿಯೂ, ಸೂಕ್ಷ್ಮ ಹಾಗೂ ಪರೋಕ್ಷ ರೂಪಗಳಲ್ಲಿಯೂ ಮುಂದುವರಿದಿದೆ ಎಂದು ಪ್ರತಿಪಾದಿಸಿದ್ದಾರೆ. ಸಮಗ್ರ ಕಾನೂನು ಅಧ್ಯಯನ, ಸಾಮಾಜಿಕ-ಕಾನೂನು ಸಂಶೋಧನೆ ಹಾಗೂ…
ಉಡುಪಿ, ಆ. 10: ಮುದರಂಗಡಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಇಬ್ಬರು ಆರೋಪಿಗಳನ್ನು ಉಡುಪಿ ನ್ಯಾಯಾಲಯವು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಸೋಮವಾರ ಆದೇಶಿಸಿದೆ. ಉತ್ತರಾಖಂಡ ಮೂಲದ ಆಕಾಶ್ ಅಲಿಯಾಸ್ ಅನ್ಮೋಲ್ ರಸ್ತಗಿ ಹಾಗೂ ಬಿಹಾರ ಮೂಲದ ಜಿಯಾವುಲ್ಲಾ ಅಲಿಯಾಸ್ ದೀಪಕ್ ಅವರನ್ನು ಪ್ರಕರಣದ ತನಿಖಾಧಿಕಾರಿ ಹಾಗೂ ಕಾಪು ಪೊಲೀಸ್ ನಿರೀಕ್ಷಕ ಅಝ್ಮತ್ ಅಲಿ ಅವರ ನೇತೃತ್ವದ ಪೊಲೀಸ್ ತಂಡ ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿತು. ಪ್ರಕರಣದ ಹೆಚ್ಚಿನ ತನಿಖೆ ನಡೆಸಬೇಕಿರುವ ಹಿನ್ನೆಲೆಯಲ್ಲಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದರು. ಮನವಿಯನ್ನು ಪುರಸ್ಕರಿಸಿದ ನ್ಯಾಯಾಧೀಶ ಪುರುಷೋತ್ತಮ ಅವರು ಇಬ್ಬರು ಆರೋಪಿಗಳನ್ನು 10 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದರು. ಪೊಲೀಸ್ ಕಸ್ಟಡಿಗೆ ಪಡೆದಿರುವ ಆರೋಪಿಗಳಿಂದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲು ಪೊಲೀಸರು ಮುಂದಾಗಿದ್ದಾರೆ. ವಿಶೇಷವಾಗಿ ಹತ್ಯೆಯ ಹಿಂದಿರುವ ನಿಖರ ಕಾರಣ, ಸಂಚಿನ…
ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಡಾ.ಮಾಲತಿ ಶೆಟ್ಟಿ ಮಾಣೂರು ರವರಿಗೆ ಪ್ರದಾನ ಬೆಂಗಳೂರಿನ ನಿರ್ಮಾತೃ ನಾಡ ಪ್ರಭು ಕೆಂಪೇಗೌಡ ಸ್ಮರಣಾರ್ಥ ಬೆಂಗಳೂರಿನ ಸಮಥ ಸಾಹಿತ್ಯ, ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಆಗಸ್ಟ್ 9 ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಚಾಮರಾಜಪೇಟೆ ಇಲ್ಲಿ ನಡೆಯುವ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿಗೆ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಸಾಹಿತಿ ,ಡಾ. ಮಾಲತಿ ಶೆಟ್ಟಿ ಮಾಣೂರು ಆಯ್ಕೆಯಾಗಿದ್ದು . ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಚಾಮರಾಜಪೇಟೆ ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು . ಕಾರ್ಯಕ್ರಮದ ಉದ್ಘಾಟನೆಯನ್ನು ಜೆ.ಕೆ ರಶ್ಮಿ ಐಪಿಎಸ್ ಪೊಲೀಸ್ ಮಹಾ ನಿರೀಕ್ಷಕರು ಬೆಂಗಳೂರು ಮಾಡಿದರು .ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಂ ಶ್ರೀನಿವಾಸ್ ಪ್ರಶಸ್ತಿ ಪ್ರದಾನ ಮಾಡಿದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಡಾ. ಶರವಣ , ಕರ್ನಾಟಕ ಕೈಗಾರಿಕೆ ಮತ್ತು ವಾಣಿಜ್ಯ ಉದ್ಯಮ ಕನ್ನಡ ಪರ…
ಮೂಡುಬಿದಿರೆ: ತಾಲೂಕಿನ ನಿಡ್ಡೋಡಿ ಗ್ರಾಮದ ಬಂಗೇರಪದವು ಎಂಬಲ್ಲಿ ಕಲ್ಲಿನ ಕ್ವಾರಿಯಲ್ಲಿ ಕಲ್ಲು ಸಾಗಾಟದಲ್ಲಿ ತೊಡಗಿದ್ದ ಲಾರಿಯೊಂದು ಏಕಾಏಕಿ ನಿಯಂತ್ರಣ ತಪ್ಪಿ ನೀರು ತುಂಬಿದ್ದ ಕ್ವಾರಿ ಕೋರೆಗೆ ಉರುಳಿ ಬಿದ್ದ ಘಟನೆ ನಡೆದಿದೆ. ಕ್ವಾರಿಯಲ್ಲಿ ಕಲ್ಲು ಸಾಗಾಟ ಮಾಡುತ್ತಿದ್ದ ವೇಳೆ ಲಾರಿ ಚಾಲಕನ ನಿಯಂತ್ರಣ ತಪ್ಪಿ ನೀರು ತುಂಬಿದ್ದ ಕೋರೆಗೆ ಉರುಳಿ ಬಿದ್ದಿದೆ ಎನ್ನಲಾಗಿದೆ. ಲಾರಿ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿದರೂ, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಘಟನೆಯ ಬಳಿಕ ಕ್ವಾರಿ ಕೋರೆಗೆ ಬಿದ್ದ ಲಾರಿಯನ್ನು ಮೇಲಕ್ಕೆತ್ತಲು ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು. ಲಾರಿ ಯಾವ ಕಾರಣಕ್ಕೆ ನಿಯಂತ್ರಣ ತಪ್ಪಿತು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಮೂಡುಬಿದಿರೆ, ಆ. 9: ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಯ ಸಂರಕ್ಷಣೆ ಮತ್ತು ಬೆಳವಣಿಗೆಗೆ ನಿರಂತರವಾಗಿ ಶ್ರಮಿಸುತ್ತಿರುವ ತುಳು ಕೂಟ (ರಿ.) ಬೆದ್ರ ಇದರ ಮುಂದಿನ ಎರಡು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ತುಳು ಕೂಟ ಬೆದ್ರದ ನಿರ್ಗಮನ ಅಧ್ಯಕ್ಷ ಹೆಚ್. ಧನಕೀರ್ತಿ ಬಲಿಪ ಅವರ ಅಧ್ಯಕ್ಷತೆಯಲ್ಲಿ ಕನ್ನಡ ಭವನದಲ್ಲಿ ಭಾನುವಾರ ನಡೆದ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತನ ಅಧ್ಯಕ್ಷರಾಗಿ ತುಳು ಸಾಹಿತಿ ಜಯಂತಿ ಎಸ್. ಬಂಗೇರ, ಕಾರ್ಯದರ್ಶಿಯಾಗಿ ಚೇತನಾ ಹೆಗ್ಡೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಶ್ವೇತಾ ಜೈನ್, ಜತೆ ಕಾರ್ಯದರ್ಶಿಯಾಗಿ ಸದಾನಂದ ನಾರಾವಿ ಹಾಗೂ ಕೋಶಾಧಿಕಾರಿಯಾಗಿ ಜಿನೇಂದ್ರ ಜೈನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಭೆಯ ಆರಂಭದಲ್ಲಿ ಜತೆ ಕಾರ್ಯದರ್ಶಿ ಸದಾನಂದ ನಾರಾವಿ ಸ್ವಾಗತಿಸಿದರು. ನಿರ್ಗಮನ ಕಾರ್ಯದರ್ಶಿ ವೇಣುಗೋಪಾಲ್ ಶೆಟ್ಟಿ ವಾರ್ಷಿ ವಾರ್ಷಿಕ ವರದಿಯನ್ನು ಮಂಡಿಸಿದರು. ಕೋಶಾಧಿಕಾರಿ ಸುಭಾಶ್ಚಂದ್ರ ಚೌಟ ಸಂಸ್ಥೆಯ ಖರ್ಚು-ವೆಚ್ಚದ ವಿವರಗಳನ್ನು ಸಭೆಯ ಮುಂದಿಟ್ಟರು. ಸಭೆಯಲ್ಲಿ ತುಳು ಕೂಟ ಬೆದ್ರದ ಸ್ಥಾಪಕ ಅಧ್ಯಕ್ಷ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
