Author: Tulunada Surya

ದಕ್ಷಿಣ ಭಾರತದ ಸಿನಿರಂಗದಲ್ಲಿ ಬಹುಕಾಲದಿಂದ ಚರ್ಚೆಗೆ ಗ್ರಾಸವಾಗಿದ್ದ ಪ್ರೇಮಕಥೆ ಕೊನೆಗೂ ಮದುವೆಯ ಮಂಟಪದಲ್ಲಿ ಸಾಕಾರವಾಗಿದೆ. ಜನಪ್ರಿಯ ನಟ ವಿಜಯ್ ದೇವರಕೊಂಡ ಹಾಗೂ ನಟಿ ರಶ್ಮಿಕಾ ಮಂದಣ್ಣ ಅವರು ರಾಜಸ್ಥಾನದ ಸುಂದರ ನಗರಿ **ಉದಯಪುರ**ದಲ್ಲಿ ವೈಭವವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ದೀರ್ಘಕಾಲದಿಂದ ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿ, ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಸಪ್ತಪದಿ ತುಳಿದು ಜೀವನಸಫರ ಆರಂಭಿಸಿದ್ದಾರೆ. ಐಷಾರಾಮಿ ವೇದಿಕೆಯಲ್ಲಿ ಅದ್ದೂರಿ ಸಮಾರಂಭ ಈ ವಿಶೇಷ ಕ್ಷಣಕ್ಕೆ ಸಾಕ್ಷಿಯಾದದ್ದು ಉದಯಪುರದ ಪ್ರಸಿದ್ಧ ಐಷಾರಾಮಿ ರೆಸಾರ್ಟ್ ITC Mementos Udaipur. ಅರಮನೆ ಶೈಲಿಯ ವಿನ್ಯಾಸ, ನೈಸರ್ಗಿಕ ಸೌಂದರ್ಯ ಮತ್ತು ಶಾಂತ ವಾತಾವರಣದ ನಡುವೆ ನಡೆದ ವಿವಾಹ ಸಮಾರಂಭ ಕಣ್ಣಿಗೆ ಹಬ್ಬವಾಯಿತು. ಆಂಧ್ರ ಮತ್ತು ಕೊಡವ ಸಂಪ್ರದಾಯಗಳ ಸಮ್ಮಿಶ್ರಣದಲ್ಲಿ ನಡೆದ ಈ ಮದುವೆ ಸಂಪ್ರದಾಯ ಮತ್ತು ಆಧುನಿಕತೆಯ ಸುಂದರ ಸಂಯೋಜನೆ ಆಗಿತ್ತು. ಭಾವುಕ ಕ್ಷಣಗಳು ವಿಜಯ್ ದೇವರಕೊಂಡ ಹಂಚಿಕೊಂಡಿರುವ ಮದುವೆ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ತಾಳಿಕಟ್ಟುವ ಪವಿತ್ರ ಕ್ಷಣದಲ್ಲಿ ರಶ್ಮಿಕಾ ಮಂದಣ್ಣ…

Read More

Kundapura: Udupi ಜಿಲ್ಲೆಯ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಂಡ್ಲೂರು ಪೇಟೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಲಾದ ವಿಡಿಯೋ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಕಂಡ್ಲೂರು ಪೇಟೆಯ ಕಟಿಂಗ್ ಶಾಪ್‌ನಲ್ಲಿ ಬಿಹಾರ ಮೂಲದ ಕಾನೂನು ಸಂಘರ್ಷಕ್ಕೊಳಗಾದ ಬಾಲಕನೊಬ್ಬ ಹೇಳಿದ ಮಾತುಗಳನ್ನು ಕೆಲವರು ಮೊಬೈಲ್‌ನಲ್ಲಿ ಚಿತ್ರೀಕರಿಸಿ, ಸಾರ್ವಜನಿಕರಲ್ಲಿ ಪ್ರಚೋದನೆ ಉಂಟುಮಾಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ ಎಂಬ ದೂರನ್ನು ಬಾಲಕನ ತಂದೆ ನೀಡಿದ್ದರು. ಈ ದೂರಿನ ಮೇರೆಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೇ ವೇಳೆ, ಘಟನೆಯ ಹಿನ್ನೆಲೆಯಲ್ಲಿ ಕಟಿಂಗ್ ಶಾಪ್ ಎದುರು 20-30 ಮಂದಿ ಗುಂಪುಗೂಡಿ ಬೆದರಿಕೆ ಹಾಕಿದ ಬಗ್ಗೆ ಶಾಪ್ ಮಾಲೀಕ ಶಶಾಂಕ ಭಂಡಾರಿ ನೀಡಿದ ದೂರಿನ ಆಧಾರದ ಮೇಲೆ ಮತ್ತೊಂದು ಪ್ರಕರಣವೂ ದಾಖಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಘಟನೆಗೆ ಸಂಬಂಧಿಸಿ ಈಗಾಗಲೇ 20-30 ಮಂದಿಯನ್ನು ಗುರುತಿಸಲಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಪ್ರಕ್ರಿಯೆ ಮುಂದುವರಿದಿದೆ. ಪ್ರಕರಣದಲ್ಲಿ ಶಶಾಂಕ…

Read More

ಮಂಗಳೂರು: ಸಹಕಾರ ಕ್ಷೇತ್ರದ ಭೀಷ್ಮ, ‘ಸಹಕಾರ ರತ್ನ’ ಎಂದು ಕೀರ್ತಿಸಲ್ಪಡುವ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಜನ್ಮದಿನದ ಅಂಗವಾಗಿ ಅಭಿವಂದನಾ ಸಮಾರಂಭ ಹಾಗೂ 77 ಮಂದಿ ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮವು ಪ್ರಧಾನ ಕಚೇರಿಯ ಬ್ಯಾಂಕ್ ಸಭಾಂಗಣದಲ್ಲಿ ಭವ್ಯವಾಗಿ ನೆರವೇರಿತು. ಕಾರ್ಯಕ್ರಮವನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, “ಸಹಕಾರಿ ಕ್ಷೇತ್ರದಲ್ಲಿ ಡಾ. ರಾಜೇಂದ್ರ ಕುಮಾರ್ ಸಾಧಿಸಿರುವುದು ಅಭೂತಪೂರ್ವ. ತಮ್ಮ ಹುಟ್ಟುಹಬ್ಬವನ್ನೇ ಸಮಾಜಮುಖಿ ಕಾರ್ಯಕ್ರಮದ ರೂಪದಲ್ಲಿ ಆಚರಿಸುವುದು ಅವರ ಜನಪರ ಮನೋಭಾವಕ್ಕೆ ಸಾಕ್ಷಿ. ಅವರು ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯ ಅವರಿಗೆ ಸರಿಸಮನಾಗಿ ಬೆಳೆಯಲಿ,” ಎಂದು ಹಾರೈಸಿದರು. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಅಭಿವಂದನಾ ಭಾಷಣದಲ್ಲಿ, “ಡಾ. ರಾಜೇಂದ್ರ ಕುಮಾರ್ ಭಾರತ ಕಂಡ ಸಮರ್ಥ ಸಹಕಾರಿ ನಾಯಕರು. ಕೃಷಿ ಆಧಾರಿತ ಸಮಾಜದಲ್ಲಿ ರೈತರ ಆರ್ಥಿಕ ನ್ಯಾಯಕ್ಕಾಗಿ ಅವರು ನಿರಂತರ ಶ್ರಮಿಸಿದ್ದಾರೆ. ಬ್ಯಾಂಕ್ ಇಂದು ಹಿಮಾಲಯದ ಎತ್ತರಕ್ಕೆ…

Read More

ನಗರದ ಮಹಾಕಾಳಿ ಪಡ್ಪು ಅಂಡರ್ ಪಾಸ್ ರಸ್ತೆಯಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ನೀರು ನಿಲ್ಲುವುದು, ಮೊಯ್ಲಿಕೆರೆಯ ನೀರು ಸಂಪೂರ್ಣ ಕಲುಷಿತಗೊಂಡಿರುವುದು ಸೇರಿದಂತೆ ಸ್ಥಳೀಯ ಸಮಸ್ಯೆಗಳ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಸ್ಥಳ ವೀಕ್ಷಣೆ ನಡೆಸಿದರು. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮೊಯ್ಲಿಕೆರೆಯನ್ನು ಮೂಡಾ ವತಿಯಿಂದ ಸಂಪೂರ್ಣ ಅಭಿವೃದ್ಧಿಗೊಳಿಸಲಾಗಿತ್ತು. ಆದರೆ ನಂತರದ ದಿನಗಳಲ್ಲಿ ಈ ಕೆರೆಗೆ ಬೇರೆ ಕಡೆಗಳ ಡ್ರೈನೇಜ್ ನಿಂದಾಗಿ ನೀರು ಕಲುಷಿತಗೊಂಡಿರುವ ಬಗ್ಗೆ ಅನೇಕ ಸಾರ್ವಜನಿಕರ ದೂರುಗಳು ಬಂದಿವೆ. ಮುಂದಿನ ದಿನಗಳಲ್ಲಿ ಈ ಕೆರೆಗೆ ಡ್ರೈನೇಜ್ ನೀರು ಬರದ ಹಾಗೆ ಅಗತ್ಯವಿರುವ ಎಲ್ಲಾ ಯೋಜನೆಗಳನ್ನು ಸಮಗ್ರವಾಗಿ ರೂಪಿಸುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು. ಕಳೆದ ಹಲವಾರು ವರ್ಷಗಳಿಂದ ಈ ಭಾಗಕ್ಕೆ ವೆಟ್ ವೆಲ್ ನಿರ್ಮಾಣದ ಅವಶ್ಯಕತೆಯಿದ್ದು ಆ ಸಲುವಾಗಿ ಪಕ್ಕದಲ್ಲಿರುವ ಸುಮಾರು 10 ಸೆಂಟ್ಸ್ ಖಾಸಗಿ ಜಾಗವನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿಯೂ ಮಾತುಕತೆ ನಡೆದಿದೆ ಎಂದರು. ಅಲ್ಲದೇ ಇತ್ತೀಚೆಗೆ ಉದ್ಘಾಟನೆಗೊಂಡ ಮಹಾಕಾಳಿ ಪಡ್ಪು ಅಂಡರ್ ಪಾಸ್ ರಸ್ತೆಯ ಭಾಗದಲ್ಲಿ…

Read More

ಉಡುಪಿ/ಹಾವೇರಿ: ಕರ್ನಾಟಕ ರಕ್ಷಣಾ ವೇದಿಕೆ ಹಾವೇರಿ ಜಿಲ್ಲಾಧ್ಯಕ್ಷರಾದ ಹನುಮಂತ ಬೋವಿ ಅವರು ಅನಾರೋಗ್ಯದಿಂದ ಕೆ.ಎಸ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ತುಳುನಾಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಅವರು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯೋಗೀಶ್ ಶೆಟ್ಟಿ ಜಪ್ಪು ಅವರು, ನಾಡು–ನುಡಿಗಾಗಿ ನಿರಂತರ ಹೋರಾಟ ನಡೆಸಿ ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಹನುಮಂತ ಬೋವಿಯವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು. ಅವರ ಮುಂದಿನ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿ ವೆಚ್ಚ ಅಗತ್ಯವಿದ್ದು, ರಾಜ್ಯದ ಜನತೆ ಹಾಗೂ ಸಂಘಟನೆಯ ಕಾರ್ಯಕರ್ತರು ಸಾಧ್ಯವಾದಷ್ಟು ಧನ ಸಹಾಯ ನೀಡಿ ಮಾನವೀಯತೆ ತೋರಿಸಬೇಕು ಎಂದು ಮನವಿ ಮಾಡಿದರು. ಹನುಮಂತ ಬೋವಿಯವರು ದೀರ್ಘಕಾಲದಿಂದ ಕನ್ನಡ ಪರ ಹೋರಾಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಹೋರಾಟಗಾರರಾಗಿದ್ದು, ಇಂತಹ ಸಂದರ್ಭಗಳಲ್ಲಿ ಸಮಾಜವು ಅವರ ಬೆನ್ನಿಗೆ ನಿಲ್ಲುವುದು ಅವಶ್ಯಕ ಎಂದು ಅವರು ತಿಳಿಸಿದರು. ಈ ಭೇಟಿ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಸುಜಯ್…

Read More

ಮಂಗಳೂರು, ಫೆಬ್ರವರಿ 23: Indian Red Cross Society ದಕ್ಷಿಣ ಕನ್ನಡ ಜಿಲ್ಲಾ ಘಟಕದ 2026–29ನೇ ಸಾಲಿನ ಆಡಳಿತ ಮಂಡಳಿ ಚುನಾವಣೆಯಲ್ಲಿ ಹಾಲಿ ಚೇರ್ಮನ್ ಸಿ.ಪಿ. ಶಾಂತಾರಾಮ ಶೆಟ್ಟಿ ಅವರ ನೇತೃತ್ವದ ತಂಡ ಅಪೂರ್ವ ಸಾಧನೆ ಮಾಡಿದ್ದು, ಸ್ಪರ್ಧಿಸಿದ ಎಲ್ಲಾ 10 ಸ್ಥಾನಗಳನ್ನು ಗೆಲ್ಲುವ ಮೂಲಕ ‘ಕ್ಲೀನ್ ಸ್ವೀಪ್’ ದಾಖಲಿಸಿದೆ. ಇಂದು (ಸೋಮವಾರ, ಫೆಬ್ರವರಿ 23) ರೆಡ್ ಕ್ರಾಸ್ ಸಂಸ್ಥೆಯ ಕಟ್ಟಡದಲ್ಲಿ ನಡೆದ ಮತ ಎಣಿಕೆಯಲ್ಲಿ ಶಾಂತಾರಾಮ ಶೆಟ್ಟಿ ತಂಡದ ಅಭ್ಯರ್ಥಿಗಳು ಭಾರಿ ಮತಗಳ ಅಂತರದಿಂದ ಜಯಗಳಿಸಿದರು. ಬೆಳಗ್ಗೆಯಿಂದಲೇ ಮತ ಎಣಿಕೆ ಪ್ರಕ್ರಿಯೆ ಕಟ್ಟುನಿಟ್ಟಿನ ಮೇಲ್ವಿಚಾರಣೆಯಲ್ಲಿ ನಡೆಯಿತು. ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಶೆಟ್ಟಿ ತಂಡದ ಬೆಂಬಲಿಗರು ಹರ್ಷೋದ್ಗಾರ ವ್ಯಕ್ತಪಡಿಸಿದರು. ವಿಜೇತ ಅಭ್ಯರ್ಥಿಗಳು ಹಾಗೂ ಪಡೆದ ಮತಗಳು:• ಸಿ.ಪಿ. ಶಾಂತಾರಾಮ ಶೆಟ್ಟಿ – 1005• ಡಾ. ಸುಮನಾ ಬಿ. – 876• ಡಾ. ಸತೀಶ್ ರಾವ್ – 870• ಡಾ. ಬಿ. ಸುಭ್ರಾನಂದ ರೈ – 868• ರಾಘವೇಂದ್ರ ರಾವ್ – 844• ಪುಷ್ಪರಾಜ್…

Read More

ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಇನ್ನಂಜೆ ಹಾಗೂ ಸುತ್ತಮುತ್ತಲಿನ ಗ್ರಾಮ ಪ್ರದೇಶಗಳಲ್ಲಿ ಇತ್ತೀಚೆಗೆ ಚಿರತೆಗಳ ಸಂಚರಣೆ ಹೆಚ್ಚಾಗಿದ್ದು, ಸಾರ್ವಜನಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ರಾತ್ರಿ ವೇಳೆಯಲ್ಲಿ ವಾಸಸ್ಥಾನಗಳ ಹತ್ತಿರ ಚಿರತೆ ಕಾಣಿಸಿಕೊಂಡಿರುವ ಘಟನೆಗಳು ವರದಿಯಾಗಿದ್ದು,ಇತ್ತಿಚಿನ ದಿನಗಳಲ್ಲಿ ಇನ್ನಂಜೆ ಪಾಂಗಳ ಮಂಡೆಡಿ ಪರಿಸರದಲ್ಲಿ ದಿನನಿತ್ಯ ಸಾಕುಪ್ರಾಣಿ ನಾಯಿಗಳನ್ನು ಮನೆ ಅವರಣದಿಂದ ದಾಳಿ ಮಾಡಿ ಕೊಂಡೊಯಿದ್ದರು ಅರಣ್ಯ ಇಲಾಖೆ ತುರ್ತು ಕ್ರಮ ಕೈಗೊಳ್ಳದಿರುವುದು ಸ್ಥಳೀಯರು ತುಳುನಾಡ ರಕ್ಷಣಾ ವೇದಿಕೆ ಗಮನಕ್ಕೆ ತಂದಿರುತ್ತಾರೆ. ಈ ಹಿನ್ನೆಲೆಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ಅವರು ಅರಣ್ಯ ಇಲಾಖೆಯ ತುರ್ತು ಹಸ್ತಕ್ಷೇಪಕ್ಕೆ ಆಗ್ರಹಿಸಿದ್ದಾರೆ. ಜನವಸತಿ ಪ್ರದೇಶಗಳ ಸಮೀಪ ಚಿರತೆಗಳ ಓಡಾಟ ಹೆಚ್ಚುತ್ತಿರುವುದು ಗ್ರಾಮಸ್ಥರ ಸುರಕ್ಷತೆಗೆ ಗಂಭೀರ ಸವಾಲಾಗಿದ್ದು, ಯಾವುದೇ ಅನಾಹುತ ಸಂಭವಿಸುವ ಮುನ್ನವೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ. ಮುಖ್ಯ ಆಗ್ರಹಗಳು:1. ಚಿರತೆ ಸಂಚರಿಸುತ್ತಿರುವ ಪ್ರದೇಶಗಳಲ್ಲಿ ತಕ್ಷಣ ಬೋನುಗಳನ್ನು, ಕೇಜ್‌ಗಳನ್ನು ಅಳವಡಿಸಿ ಹಿಡಿಯುವ ಕ್ರಮ ಕೈಗೊಳ್ಳಬೇಕು.2. ರಾತ್ರಿ ವೇಳೆಯಲ್ಲಿ…

Read More

ಉಡುಪಿ: ನಗರದ ಹೃದಯ ಭಾಗದಲ್ಲಿರುವ ಸರ್ವಿಸ್ ಬಸ್ ನಿಲ್ದಾಣದ ಅವ್ಯವಸ್ಥೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ನಗರಸಭೆ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಉಡುಪಿ ಸರ್ವಿಸ್ ಬಸ್ ನಿಲ್ದಾಣಕ್ಕೆ ಪ್ರತಿದಿನ ಸಾವಿರಾರು ಪ್ರಯಾಣಿಕರು ಆಗಮಿಸುತ್ತಾರೆ. ಆದರೆ ಮೂಲಭೂತ ಸೌಕರ್ಯಗಳ ಕೊರತೆಯಿಂದ ನಿಲ್ದಾಣವು ಅವ್ಯವಸ್ಥೆಯ ಆಗರವಾಗಿ ಪರಿಣಮಿಸಿದೆ. ಕುಡಿಯುವ ನೀರಿನ ಘಟಕ ಅಶುದ್ಧವಾಗಿದ್ದು, ಪ್ರಯಾಣಿಕರು ಹಣ ಕೊಟ್ಟು ನೀರು ಖರೀದಿಸಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಯಾಣಿಕರಿಗಾಗಿ ಅಳವಡಿಸಿರುವ ಕುರ್ಚಿಗಳಲ್ಲಿ ಹಲವು ಮುರಿದು ಬಿದ್ದಿದ್ದು, ಸಮರ್ಪಕ ಆಸನ ವ್ಯವಸ್ಥೆ ಇಲ್ಲದ ಕಾರಣ ವೃದ್ಧರು, ಮಹಿಳೆಯರು ಹಾಗೂ ಮಕ್ಕಳಿಗೆ ತೀವ್ರ ತೊಂದರೆ ಉಂಟಾಗಿದೆ. ಮಹಿಳೆಯರು ಮತ್ತು ಪುರುಷರಿಗಾಗಿ ಪ್ರತ್ಯೇಕ ಶೌಚಾಲಯಗಳಿದ್ದರೂ ಅವು ನಿರ್ವಹಣೆಯ ಕೊರತೆಯಿಂದ ನಿರುಪಯುಕ್ತವಾಗಿವೆ. ಕಳಪೆ ಕಾಮಗಾರಿ ಹಾಗೂ ಸ್ವಚ್ಛತೆಯ ಅಭಾವದಿಂದ ಸುತ್ತಮುತ್ತ ದುರ್ವಾಸನೆ ವ್ಯಾಪಿಸಿದೆ. ನಿಲ್ದಾಣದ ಆವರಣದಲ್ಲಿ ಧೂಳು, ಕಸದ ರಾಶಿ ಹಾಗೂ ತಿಂಡಿ ಪೊಟ್ಟಣಗಳ ಅವಶೇಷಗಳು…

Read More

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದ ಜನವಸತಿ ಪ್ರದೇಶದಲ್ಲಿ ಸ್ಥಾಪನೆಯಾಗುತ್ತಿರುವ ಫಿಶ್ ಮೀಲ್ ಘಟಕದ ವಿರುದ್ಧ ಗ್ರಾಮಸ್ಥರ ಆಕ್ರೋಶ ತಾರಕಕ್ಕೇರಿದೆ. ಪರಿಸರ ಮತ್ತು ಸಾರ್ವಜನಿಕ ಆರೋಗ್ಯಕ್ಕೆ ಹಾನಿಕಾರಕವಾಗಬಹುದಾದ ಈ ಘಟಕವನ್ನು ತಕ್ಷಣವೇ ಕೈಬಿಡುವಂತೆ ಒತ್ತಾಯಿಸಿ, ಫೆಬ್ರವರಿ 23 ಸೋಮವಾರ ಬೆಳಿಗ್ಗೆ ಪಳ್ಳಿ ಗ್ರಾಮ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ಹಾಗೂ ಶಾಂತಿಯುತ ಧರಣಿ ಹಮ್ಮಿಕೊಳ್ಳಲಾಗಿದೆ. ಈ ಹಿಂದೆ ಪಡುಬಿದ್ರೆ ಪ್ರದೇಶದಲ್ಲಿ ಸಾರ್ವಜನಿಕರ ತೀವ್ರ ವಿರೋಧಕ್ಕೆ ಗುರಿಯಾಗಿ ಸ್ಥಳಾಂತರಗೊಂಡಿದ್ದ ಫಿಶ್ ಮೀಲ್ ಘಟಕವೊಂದು ಇದೀಗ ಪಳ್ಳಿಯ ಶಾಂತ ಹಾಗೂ ಹಸಿರ್ಮಯ ವಾತಾವರಣಕ್ಕೆ ಬರುತ್ತಿರುವುದು ಗ್ರಾಮಸ್ಥರಲ್ಲಿ ಆತಂಕ ಮತ್ತು ಆಕ್ರೋಶ ಹುಟ್ಟಿಸಿದೆ. ಜನವಸತಿ ಪ್ರದೇಶದ ಸಮೀಪದಲ್ಲೇ ಇಂತಹ ಕೈಗಾರಿಕಾ ಘಟಕ ಸ್ಥಾಪನೆಯಾಗುತ್ತಿರುವುದು ಸ್ಥಳೀಯರ ಜೀವನಮಟ್ಟದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಗ್ರಾಮಸ್ಥರ ಪ್ರಕಾರ, ಫಿಶ್ ಮೀಲ್ ಘಟಕದಿಂದ ಹೊರಬರುವ ಭಾರೀ ದುರ್ವಾಸನೆ ವಾತಾವರಣವನ್ನು ದುಷ್ಪರಿಣಾಮಗೊಳಿಸುವುದಲ್ಲದೆ, ತ್ಯಾಜ್ಯ ನೀರಿನ ನಿರ್ವಹಣೆ ಸರಿಯಾಗಿ ನಡೆಯದಿದ್ದರೆ ಅಂತರ್ಜಲ…

Read More

ಉಡುಪಿ: ಆಯುಷ್ ವೈದ್ಯರು ತಮ್ಮ ವ್ಯಾಸಂಗದ ಅವಧಿಯಲ್ಲಿ ಪಡೆದುಕೊಂಡ ತರಬೇತಿ ಹಾಗೂ ಅರ್ಹತೆಯ ಆಧಾರದ ಮೇಲೆ ಅಲೋಪಥಿ ಸೇವೆಗೆ ಸಂಬಂಧಿಸಿದ ವೈದ್ಯಕೀಯ ಪದ್ಧತಿಗಳ ಮೂಲಕ ಚಿಕಿತ್ಸೆ ನೀಡಲು ಕಾನೂನಿನಲ್ಲಿ ಸ್ಪಷ್ಟ ಅವಕಾಶವಿದೆ ಎಂದು ತುಳುನಾಡ ರಕ್ಷಣಾ ವೇದಿಕೆ ವೈದರ ಘಟಕದ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ. ರವೀಂದ್ರ ತಿಳಿಸಿದ್ದಾರೆ. ಇಂತಹ ಚಿಕಿತ್ಸೆಯನ್ನು ನೀಡುತ್ತಿರುವ ಆಯುಷ್ ವೈದ್ಯರ ವಿರುದ್ಧ ಯಾವುದೇ ರೀತಿಯ ಕಾನೂನು ಕ್ರಮ ಕೈಗೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿರುವುದನ್ನು ಸ್ಮರಿಸಿದರು. ಸುಪ್ರೀಂ ಕೋರ್ಟ್ ಆದೇಶದ ಅನ್ವಯ, ಅರ್ಹತೆ ಹಾಗೂ ತರಬೇತಿ ವ್ಯಾಪ್ತಿಯೊಳಗೆ ಸೇವೆ ಸಲ್ಲಿಸುವ ಆಯುಷ್ ವೈದ್ಯರ ವಿರುದ್ಧ ದೌರ್ಜನ್ಯ ಅಥವಾ ಅನಗತ್ಯ ಕಾನೂನು ಕ್ರಮ ಕೈಗೊಳ್ಳುವುದು ನ್ಯಾಯಾಂಗ ಅವಮಾನಕ್ಕೆ ಒಳಪಡುವ ವಿಷಯವಾಗುತ್ತದೆ ಎಂದು ಎಚ್ಚರಿಸಿದರು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೆಲವು ಅಧಿಕಾರಿಗಳು ಹಾಗೂ ಸಂಘಟನೆಗಳು ರಾಜಕೀಯ ಪ್ರೇರಿತವಾಗಿ ಆಯುಷ್ ವೈದ್ಯರನ್ನು ಗುರಿಯಾಗಿಸಿಕೊಂಡು ತಂತ್ರಗಳನ್ನು ರೂಪಿಸುತ್ತಿರುವುದು ಗಮನಕ್ಕೆ ಬಂದಿದೆ. ಇದು ವೈದ್ಯಕೀಯ ಸೇವಾ ವಲಯದಲ್ಲಿ ಅನಗತ್ಯ ಗೊಂದಲ ಉಂಟುಮಾಡುವುದಲ್ಲದೆ,…

Read More