Author: Tulunada Surya

ಮಂಗಳೂರು, ಮಾ. 7:ರಾಜ್ಯ ಸರ್ಕಾರ ಮಂಡಿಸಿರುವ ಇತ್ತೀಚಿನ ಕರ್ನಾಟಕ ಬಜೆಟ್ ಕುರಿತು ಜೆಡಿಎಸ್ ರಾಜ್ಯ ವಕ್ತಾರ ಎಂ. ಬಿ. ಸದಾಶಿವ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕರಾವಳಿ ಭಾಗದ ಜನರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಕುರಿತು ಬಜೆಟ್‌ನಲ್ಲಿ ಸಮರ್ಪಕ ಗಮನ ಹರಿಸಲಾಗಿಲ್ಲ ಎಂದು ಅವರು ಟೀಕಿಸಿದರು. ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿ ಕರ್ನಾಟಕದ ವಿಶೇಷ ಪರಿಸ್ಥಿತಿ ಮತ್ತು ಜನಜೀವನದ ಅಗತ್ಯತೆಗಳನ್ನು ಪರಿಗಣಿಸಿ ಯೋಜನೆಗಳನ್ನು ರೂಪಿಸಬೇಕಾಗಿತ್ತು. ಆದರೆ ಈ ಬಾರಿ ಮಂಡನೆಯಾದ ಬಜೆಟ್‌ನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಮುಖ ಸಮಸ್ಯೆಗಳು ನಿರ್ಲಕ್ಷ್ಯಕ್ಕೆ ಗುರಿಯಾಗಿರುವುದು ವಿಷಾದನೀಯ ಎಂದರು. ದಕ್ಷಣಕನ್ನಡ ಜಿಲ್ಲೆ ಜಿಲ್ಲಾದ್ಯಕ್ಷ ಜಾಕೆ ಮಾಧವ ಗೌಡರವರು ಜೊತೆಗಿದ್ದರು ಕರಾವಳಿ ಭಾಗದಲ್ಲಿ ಮನೆ ನಿರ್ಮಾಣಕ್ಕೆ ಅಗತ್ಯವಾಗಿರುವ ಕೆಂಪು ಕಲ್ಲು (laterite stone) ಹಾಗೂ ಮರಳು ಪೂರೈಕೆಯ ಸಮಸ್ಯೆ ಹಲವು ವರ್ಷಗಳಿಂದ ಮುಂದುವರಿದಿದೆ. ಪರಿಸರ ನಿಯಮಗಳು ಹಾಗೂ ವಿವಿಧ ಅನುಮತಿಗಳ ಹೆಸರಿನಲ್ಲಿ ಈ ಸಂಪನ್ಮೂಲಗಳ ಲಭ್ಯತೆ ಕಷ್ಟಕರವಾಗಿದ್ದು, ಸಾಮಾನ್ಯ…

Read More

ಮಂಗಳೂರು ಮಹಾನಗರ ಪಾಲಿಕೆಯ ಸಹಕಾರದೊಂದಿಗೆ ಸಮರ ವೀರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸೇವಾ ಸಮಿತಿ (ರಿ.), ಮಂಗಳೂರು ಮತ್ತು ತುಳುನಾಡ ರಕ್ಷಣಾ ವೇದಿಕೆ (ರಿ.), ಮಂಗಳೂರುಇವರ ಸಹಭಾಗಿತ್ವದಲ್ಲಿ ತುಳುನಾಡಿನ ವೀರ ರೈತರಿಂದ ನಡೆದ ಸ್ವಾತಂತ್ರ್ಯ ಸಂಗ್ರಾಮ ತುಳುನಾಡ ಅಮರ ಸುಳ್ಯ ಸಮರ – 1837 ಸಂಸ್ಮರಣಾ ಹಾಗೂ ವಿಜಯ ದಿನಾಚರಣೆ ಪ್ರಯುಕ್ತ 🎨 ಚಿತ್ರಕಲಾ ಸ್ಪರ್ಧೆ 🎨 ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗಾಗಿ ವಿಶೇಷವಾಗಿ ಆಯೋಜಿಸಲಾದ ಚಿತ್ರಕಲಾ ಸ್ಪರ್ಧೆ. 👨‍🎓 ಸ್ಪರ್ಧಾ ವಿಭಾಗಗಳು 📅 ದಿನಾಂಕ : 05 ಏಪ್ರಿಲ್ 2026📍 ಸ್ಥಳ : ಭಾವುಟಗುಡ್ಡೆ, ಮಂಗಳೂರು⏰ ಸಮಯ : ಬೆಳಿಗ್ಗೆ 9.00 ಗಂಟೆ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಅವರ ಜೀವನ ಮತ್ತು ತುಳುನಾಡಿನ ಸ್ವಾತಂತ್ರ್ಯ ಹೋರಾಟದ ಹಿನ್ನೆಲೆಯೊಂದಿಗೆ ಆಕರ್ಷಕ ಚಿತ್ರಗಳನ್ನು ಬಿಡಿಸಲು ಅವಕಾಶ. ⏱ ಸಮಯ : 120 ನಿಮಿಷಗಳು 🖌 ವಿಷಯಗಳು 1 ರಿಂದ 4ನೇ ತರಗತಿ :🇮🇳 ತ್ರಿವರ್ಣ ಧ್ವಜ 5 ರಿಂದ 7ನೇ…

Read More

ಹಾಸನ : ವಿದೇಶಿ ಮಹಿಳೆಯರನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ನಗರದ ಹೊರವಲಯದಲ್ಲಿರುವ ಲಾಡ್ಜ್‌ೊಂದರ ಮೇಲೆ ಪೊಲೀಸರು ದಾಳಿ ನಡೆಸಿ ಮೂವರು ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಓರ್ವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ನಗರದ ಬೂವನಹಳ್ಳಿ ಸಮೀಪ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ‘ಕರಾವಳಿ ಕಂಫರ್ಟ್’ ಲಾಡ್ಜ್‌ನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಖಚಿತ ಮಾಹಿತಿ ಬಡಾವಣೆ ಪೊಲೀಸ್ ಠಾಣೆಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಬಡಾವಣೆ ಠಾಣೆ ಪೊಲೀಸರು ಹಾಗೂ ‘ಒಡನಾಡಿ’ ಸಂಸ್ಥೆಯ ಕಾರ್ಯಕರ್ತರು ಜಂಟಿಯಾಗಿ ದಾಳಿ ನಡೆಸಿದರು. ದಾಳಿಯ ವೇಳೆ ಲಾಡ್ಜ್‌ನಲ್ಲಿ ಇದ್ದ ಮೂವರು ಮಹಿಳೆಯರನ್ನು ಪೊಲೀಸರು ರಕ್ಷಿಸಿದ್ದು, ಅವರನ್ನು ವಿದೇಶದಿಂದ ಕರೆತರಲಾಗಿದ್ದು ಅಕ್ರಮ ದಂಧೆಗೆ ಬಳಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ. ದಾಳಿಯ ಸಮಯದಲ್ಲಿ ಇನ್ನೂ ಕೆಲವರು ಸ್ಥಳದಿಂದ ಪರಾರಿಯಾಗಿದ್ದು, ಅವರನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ. ಈ ಕುರಿತು…

Read More

ಬೆಂಗಳೂರು : ದಕ್ಷಿಣ ಕನ್ನಡ–ಉಡುಪಿ ಜಿಲ್ಲೆಗಳ ರಾಜಕೀಯ ವಲಯದಲ್ಲಿ ಇಂದು ಗಮನ ಸೆಳೆಯುವ ಬೆಳವಣಿಗೆಯೊಂದು ನಡೆದಿದೆ. ಕೆಲವು ಕಾಲ ಸಕ್ರಿಯ ರಾಜಕಾರಣದಿಂದ ದೂರವಾಗಿದ್ದ ಜನತಾದಳ ಪಕ್ಷದ ಹಳೆಯ ಮುಖಂಡರು ಇದೀಗ ಮತ್ತೆ ರಾಜಕೀಯ ರಂಗ ಪ್ರವೇಶಿಸಿದ್ದು, ಜಿಲ್ಲೆಯ ರಾಜಕೀಯ ಚಟುವಟಿಕೆಗಳಿಗೆ ಹೊಸ ಚೈತನ್ಯ ತುಂಬುವ ಲಕ್ಷಣಗಳು ಕಾಣಿಸುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಮುಖಂಡರಾಗಿ ಗುರುತಿಸಿಕೊಂಡಿದ್ದ ಶಶಿರಾಜ್ ಶೆಟ್ಟಿ ಕೊಳಂಬೆ ಹಾಗೂ ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ವಿದ್ಯಾರ್ಥಿ ಜನತಾದಳದ ಜಿಲ್ಲಾಧ್ಯಕ್ಷರಾಗಿಯೂ, ರಾಜ್ಯ ಸಮಿತಿ ಪದಾಧಿಕಾರಿಯಾಗಿಯೂ ಕಾರ್ಯನಿರ್ವಹಿಸಿದ್ದ ಯೋಗಿಶ್ ಶೆಟ್ಟಿ ಜಪ್ಪು ಅವರು ಅಧಿಕೃತವಾಗಿ Janata Dal (Secular) ಪಕ್ಷಕ್ಕೆ ಮರು ಸೇರ್ಪಡೆಗೊಂಡಿದ್ದಾರೆ. ಈ ಇಬ್ಬರು ನಾಯಕರು ಹಿಂದೆ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ಸಂಘಟನೆಯ ಬಲವರ್ಧನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಆದರೆ ಕೆಲ ಕಾರಣಗಳಿಂದ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿದಿದ್ದರು. ಇದೀಗ ಪಕ್ಷದ ಸಿದ್ಧಾಂತ, ನಾಯಕತ್ವ ಹಾಗೂ ಕಾರ್ಯಪದ್ಧತಿಗಳ ಮೇಲೆ ಮತ್ತೊಮ್ಮೆ ನಂಬಿಕೆ ವ್ಯಕ್ತಪಡಿಸಿ ರಾಜಕೀಯ ಬದುಕಿನ ಹೊಸ ಅಧ್ಯಾಯಕ್ಕೆ ಚಾಲನೆ…

Read More

ಮಂಗಳೂರು: ನಗರದ ಪಿ.ಎ. ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಆಯಿಷತ್ ಲುತ್‌ಫಾ ನಜಾ ಕೆ.ಎ. ಅವರು ಬಿ.ಎಸ್‌.ಸಿ. (ಆಹಾರ, ಪೋಷಣಾ ವಿಜ್ಞಾನ ಮತ್ತು ಡಯಟೆಟಿಕ್ಸ್) ಪದವಿ ಪರೀಕ್ಷೆಯಲ್ಲಿ ಪ್ರಥಮ ರ‍್ಯಾಂಕ್ ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಒಟ್ಟು 4550 ಅಂಕಗಳಲ್ಲಿ 4220 ಅಂಕಗಳನ್ನು ಪಡೆದಿರುವ ಅವರು ಶೇಕಡಾ 92.75 ಫಲಿತಾಂಶದೊಂದಿಗೆ 9.56 ಸಿಜಿಪಿಎ (CGPA) ದಾಖಲಿಸಿ ಅತ್ಯುತ್ತಮ ಶೈಕ್ಷಣಿಕ ಸಾಧನೆ ಮೆರೆದಿದ್ದಾರೆ. ತಮ್ಮ ನಿರಂತರ ಪರಿಶ್ರಮ ಮತ್ತು ಗುರಿಯುತ ಅಧ್ಯಯನದ ಫಲವಾಗಿ ಈ ಯಶಸ್ಸು ಸಾಧ್ಯವಾಗಿದೆ. ಈ ಗಣನೀಯ ಸಾಧನೆಗಾಗಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿ, ಮುಂದಿನ ವಿದ್ಯಾಭ್ಯಾಸದಲ್ಲಿಯೂ ಹೆಚ್ಚಿನ ಯಶಸ್ಸು ದೊರಕಲಿ ಎಂದು ಹಾರೈಸಿದ್ದಾರೆ. ಕುಮಾರಿ ಲುತ್‌ಫಾ ಅವರು ಕಾಸರಗೋಡು ಜಿಲ್ಲೆಯ ತೆಕ್ಕಿಲ್ ನಿವಾಸಿಗಳಾದ ಶ್ರೀ ಅಬ್ದುಲ್ಲ ಕೆ ಹಾಗೂ ಶ್ರೀಮತಿ ಆಯಿಶತ್ ಫರೀದಾ ಅವರ ಪುತ್ರಿ. ಪ್ರಸ್ತುತ ಅವರು ಮಂಗಳೂರು ವಿಶ್ವವಿದ್ಯಾಲಯದ ಮಂಗಳಗಂಗೋತ್ರಿ ಕ್ಯಾಂಪಸ್‌ನಲ್ಲಿ ಆಹಾರ ವಿಜ್ಞಾನ ಮತ್ತು ಪೋಷಣಾ…

Read More

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಟನೆ ಬಲಪಡಿಸುವ ಉದ್ದೇಶದಿಂದ ಜಿಲ್ಲಾ ಓಬಿಸಿ ಮೋರ್ಚಾ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಪಕ್ಷದ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ ತಿಳಿಸಿದ್ದಾರೆ. ಜಿಲ್ಲಾ ಓಬಿಸಿ ಮೋರ್ಚಾದ ಅಧ್ಯಕ್ಷರಾಗಿ ಮಹೇಶ್ ಜೋಗಿ ಅವರನ್ನು ನೇಮಕ ಮಾಡಲಾಗಿದೆ. ಉಪಾಧ್ಯಕ್ಷರಾಗಿ ದಿನೇಶ್ ಉಚ್ಚಿಲ, ವಸಂತ್ ಹೊಸಬೆಟ್ಟು, ರಾಘವೇಂದ್ರ ರಾವ್, ಪುರುಷೋತ್ತಮ ಸಾಲ್ಯಾನ್ ಹಾಗೂ ಚಂದ್ರಹಾಸ ರಾವ್ ತಾರನಾಥ್ ಕಂಪ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಧಾನ ಕಾರ್ಯದರ್ಶಿಗಳಾಗಿ ಮೋನಪ್ಪ ದೇವಸ್ಯ ಶಶ್ದರ ಕಲ್ಮಂಜ ಮತ್ತು ಬಾಲಕೃಷ್ಣ ಅವರನ್ನು ನೇಮಕ ಮಾಡಲಾಗಿದೆ. ಕಾರ್ಯದರ್ಶಿಗಳಾಗಿ ಕಿಶೋರ್ ಬಾಬು, ಶ್ರೀಮತಿ ದೀಪಿಕಾ ಮನೋಜ್, ರವಿ ಸೋವುರು, ಸಂಪತ್ ಕುಕ್ಯನ್ ಮತ್ತು ಚಂದ್ರಶೇಖರ್ ಪನ್ನೆ ಅವರು ಜವಾಬ್ದಾರಿ ವಹಿಸಲಿದ್ದಾರೆ. ಖಜಾಂಚಿಯಾಗಿ ಸತೀಶ್ ದೇವಾಡಿಗ ಅವರನ್ನು ನೇಮಕ ಮಾಡಲಾಗಿದೆ. ಜಿಲ್ಲಾ ಪ್ರಾಭಾರಿಯನ್ನಾಗಿ ಸೀತಾರಾಮ್ ಬೆಳಾಲ್ ರವರನ್ನು ನೇಮಕ ಮಾಡಲಾಗಿದೆ ನೂತನ ಪದಾಧಿಕಾರಿಗಳು ಪಕ್ಷದ ಸಂಘಟನೆ ಬಲವರ್ಧನೆ, ಓಬಿಸಿ ಸಮುದಾಯದ ಹಕ್ಕುಗಳು ಹಾಗೂ ಅಭಿವೃದ್ಧಿ ಕುರಿತ ವಿಚಾರಗಳಲ್ಲಿ…

Read More

ಬೆಂಗಳೂರು: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಪ್ರಸ್ತಾಪದ ಹಿನ್ನೆಲೆ, ಆಂಧ್ರಪ್ರದೇಶದಲ್ಲಿ ಹೆಚ್ಚುವರಿ ಅಧಿಕೃತ ಭಾಷೆ ಘೋಷಣೆಯ ಸಂದರ್ಭದಲ್ಲಿ ಅನುಸರಿಸಿದ ಮಾನದಂಡಗಳ ಅಧ್ಯಯನಕ್ಕಾಗಿ ಸರ್ಕಾರ ನೇಮಿಸಿದ್ದ ಸಮಿತಿ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಂದಿನ ನಿರ್ದೇಶಕಿ ಕೆ.ಎಂ. ಗಾಯತ್ರಿ ಅವರ ಅಧ್ಯಕ್ಷತೆಯಲ್ಲಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರ ಉಪಸ್ಥಿತಿಯಲ್ಲಿ ಆರು ಸದಸ್ಯರ ಸಮಿತಿ ರಚಿಸಲಾಗಿತ್ತು. ಸಮಿತಿಯು ಜನವರಿ 19 ಮತ್ತು 20ರಂದು ಆಂಧ್ರಪ್ರದೇಶ ರಾಜ್ಯದ ಸಚಿವಾಲಯ ಹಾಗೂ ವಿವಿಧ ಇಲಾಖೆಗಳು ಮತ್ತು ಕಚೇರಿಗಳಿಗೆ ಭೇಟಿ ನೀಡಿ, ಅಲ್ಲಿ ಉರ್ದು ಭಾಷೆಯನ್ನು ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ವೇಳೆ ಅನುಸರಿಸಿದ ವಿಧಿವಿಧಾನಗಳು ಮತ್ತು ಆಡಳಿತಾತ್ಮಕ ಮಾನದಂಡಗಳ ಬಗ್ಗೆ ವಿವರವಾದ ಅಧ್ಯಯನ ನಡೆಸಿತು. ಅಧ್ಯಯನದ ಬಳಿಕ ಸಿದ್ಧಪಡಿಸಿದ ವರದಿಯನ್ನು ವಿಕಾಸ ಸೌಧದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಜೆ. ಮಂಜುನಾಥ್ ಅವರಿಗೆ ಸಮಿತಿ ಸದಸ್ಯರು ಅಧಿಕೃತವಾಗಿ ಸಲ್ಲಿಸಿದರು.…

Read More

🌼 ಬಂಗಾರಿ ಪರ್ಬೊದ ಸಭಿ ನೆನಪು – 2026 🌼 (56ನೇ ವರ್ಷದ ಕಡೀರ್ದ ತುಳು ಸಂಘಟನೆ) 📅 ದಿನಾಂಕ: 09–03–2026, ಸೋಮವಾರ⏰ ಸಮಯ: ಕಾಂಡೆ 10.00 ಗಂಟೆ – ಮಧ್ಯಾಹ್ನ 1.00 ಗಂಟೆ📍 ಸ್ಥಳ: ಮಂಗಳೂರು ಥಿಯೋಸೋಫಿಕಲ್ ಸೊಸೈಟಿ (ರಿ.), ಪಿ.ವಿ.ಎಸ್. ವೃತ್ತದ ಬಳಿ ⸻ ಗುರ್ಕಾರ್ ಶ್ರೀಮತಿ ಹೇಮಾ ದಾಮೋದರ ನಿಸರ್ಗಗುರ್ಕಾರ್, ತುಳುನಾಡ ಕೂಟ (ರಿ.), ಕುಡ್ಲ ⸻ ಉದ್ಘಾಟನೆ ಶ್ರೀಮತಿ ಪಿ. ಕೆ. ಗೌರವಿ ರಾಜಶೇಖರ್ಉದ್ಯಮಿ ಹಾಗೂ ಅಭಿವೃದ್ಧಿ ಸಮಿತಿ ಸದಸ್ಯರುಶ್ರೀ ಗೋಕರ್ನ ನಾಥ ಕ್ಷೇತ್ರ, ಕೂದ್ರೋಳಿ, ಮಂಗಳೂರು ⸻ ಗಣ್ಯ ಅತಿಥಿಗಳು ಶ್ರೀ ನಿತ್ಯಾನಂದ ಶೆಟ್ಟಿ, ತುಪ್ಪೆಕಲ್ಉದ್ಯಮಿಗುರ್ಕಾರ್, ಮಂಗಳೂರು ಥಿಯೋಸೋಫಿಕಲ್ ಸೊಸೈಟಿ (ರಿ.) ಶ್ರೀಮತಿ ಕುಸುಮಾ ಹೆಚ್. ದೇವಾಡಿಗಅಧ್ಯಕ್ಷರು, ಜಿಲ್ಲಾ ಸಣ್ಣ ಕೈಗಾರಿಕಾ ಸಂಘ ⸻ 🎭 ಸಾಂಸ್ಕೃತಿಕ ಕಾರ್ಯಕ್ರಮ 🎭 ಶ್ರೀಮತಿ ಬಾಲಿನಿ ಎಸ್. ಕರ್ಕೇರ ಹಾಗೂ ತಂಡ ಇವರಿಂದ‘ಸತ್ಯದಪ್ಪೆ ದೇಯಿ ಬೈದೆದಿ’ಎಂಬ ಕಿರು ರೂಪಕ ಪ್ರದರ್ಶನ ⸻ ✍️ ಮಾತೆರ್ನಾ ಮೋಕೆಡ್ ಎದ್ಕೊನುನ•…

Read More

ದಕ್ಷಿಣ ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಹಿರಿಯ ಅಧಿಕಾರಿಯೊಬ್ಬರ ವಿರುದ್ಧ ಅತ್ಯಾಚಾರ ಹಾಗೂ ಕ್ರಿಮಿನಲ್ ಬೆದರಿಕೆ ಆರೋಪದಡಿ ಪ್ರಕರಣ ದಾಖಲಾಗಿರುವ ಘಟನೆ ಬೆಳಕಿಗೆ ಬಂದಿದೆ. ಸಂಸ್ಥೆಯ ಮಾಜಿ ಮಹಿಳಾ ನೌಕರಿಯೊಬ್ಬರು ಅಧಿಕೃತ ಸಭೆಗಳ ನೆಪದಲ್ಲಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನ ಪ್ರಕಾರ, ಜಯನಗರದ ಅಶೋಕ ಪಿಲ್ಲರ್ ಸಮೀಪದಲ್ಲಿರುವ ಖಾಸಗಿ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ತ್ರಿವಿಕ್ರಮ್ ರಾವ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸುಮಾರು ಮೂರು ತಿಂಗಳ ಹಿಂದೆ ಸಂಸ್ಥೆಗೆ ಸೇರಿದ್ದ ಮಹಿಳೆಯನ್ನು ವಿವಿಧ ಗ್ರಾಹಕರ ಹಾಗೂ ಹೂಡಿಕೆದಾರರ ಸಭೆಗಳಿಗೆ ತನ್ನೊಂದಿಗೆ ಬರಲು ಅವರು ಒತ್ತಾಯಿಸುತ್ತಿದ್ದರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ದೂರುದಾರಿಯ ಪ್ರಕಾರ, ವೃತ್ತಿಪರ ಚರ್ಚೆಗಳ ಹೆಸರಿನಲ್ಲಿ ಖಾಸಗಿ ಸ್ಥಳಗಳಲ್ಲಿ ಭೇಟಿಯಾಗಲು ಕರೆಸಿಕೊಂಡು, ಅನಾಚಾರ ವರ್ತನೆ ತೋರಲಾಗುತ್ತಿತ್ತು. ಕೆಲವೊಮ್ಮೆ ಕಚೇರಿ ಹೊರಗಿನ ಸಭೆಗಳ ಹೆಸರಿನಲ್ಲಿ ತಾರಾ ಹೋಟೆಲ್‌ಗಳಿಗೆ ಕರೆದೊಯ್ಯಲಾಗುತ್ತಿತ್ತು ಎಂದು ಅವರು ಆರೋಪಿಸಿದ್ದಾರೆ. ಒಂದು ಸಂದರ್ಭದಲ್ಲಿ ಎಂ.ಜಿ. ರಸ್ತೆಯ ಓಬೆರಾಯ್ ಹೋಟೆಲ್‌ನ ಕೊಠಡಿಯಲ್ಲಿ ತನ್ನ ಮೇಲೆ ಅತ್ಯಾಚಾರ…

Read More

ಮಲ್ಪೆ: ಉಡುಪಿ ಜಿಲ್ಲೆಯ ಹಿಂದೂ ಸಂಘಟನೆಯ ಮುಖಂಡರಾದ ಮಂಜು ಕೊಳ ಅವರ ಮೇಲೆ ಮಂಗಳವಾರ ರಾತ್ರಿ ಮಲ್ಪೆ ಬೀಚ್ ಸಮೀಪ ಚೂರಿ ಇರಿತ ನಡೆದ ಘಟನೆ ಸಂಭವಿಸಿದೆ. ಗಾಯಗೊಂಡ ಅವರನ್ನು ತಕ್ಷಣವೇ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಮಂಜು ಕೊಳ ಅವರು ಹಿಂದೂ ಯುವಸೇನೆಯ ಮುಖಂಡರಾಗಿದ್ದು, ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿಯಾಗಿದ್ದಾರೆ. ಬೀಚ್ ಬಳಿ ಜೋಡಿಯೊಂದರ ಪ್ರೇಮ ಸಂಬಂಧಿತ ವಿಚಾರವಾಗಿ ರಾಜಿ ಪಂಚಾಯಿತಿ ನಡೆಸಲು ಅವರು ತೆರಳಿದ್ದ ವೇಳೆ ವಾಗ್ವಾದ ಜಗಳಕ್ಕೆ ತಿರುಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಧನುಷ್ ಎಂಬ ಯುವಕನ ವಿಚಾರದಲ್ಲಿ ಮಾತಿನ ಚಕಮಕಿ ತೀವ್ರಗೊಂಡು, ಯುವಕನೊಬ್ಬ ಹೊಟ್ಟೆ ಭಾಗಕ್ಕೆ ಚೂರಿ ಇರಿದಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ತೀವ್ರವಾಗಿ ಗಾಯಗೊಂಡ ಮಂಜು ಕೊಳ ಅವರು ಅಲ್ಲೇ ಕುಸಿದಿದ್ದು, ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರೆ. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಆದರ್ಶ್…

Read More