Author: Tulunada Surya

ಮಂಗಳೂರು, ಸೆ.13: ಮಂಗಳೂರಿನ ಕದ್ರಿ ಮಾರ್ಕೆಟ್‌ನಲ್ಲಿ ನೂತನವಾಗಿ ಆರಂಭಗೊಂಡಿರುವ ಕೊಂಕಣ್ ಕ್ಯಾಥೊಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿಯಮಿತದ ಪ್ರಧಾನ ಶಾಖೆಯ ಉದ್ಘಾಟನಾ ಸಮಾರಂಭ ಸೆ.13ರಂದು ಭಾನುವಾರ ಗಣ್ಯರ ಉಪಸ್ಥಿತಿಯಲ್ಲಿ ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ನೆರವೇರಿತು. ಕದ್ರಿ ಮಾರ್ಕೆಟ್‌ನ ಕಚೇರಿ ಸಂಖ್ಯೆ 01 ಮತ್ತು 02ರಲ್ಲಿ ನಡೆದ ಸಮಾರಂಭವನ್ನು ಡಿ.ಕೆ. ಗ್ರೂಪ್ ಆಫ್ ಕಂಪನೀಸ್ ಸಂಸ್ಥಾಪಕ, ಡಿ.ಕೆ. ಬಿಸಿನೆಸ್ ಆ್ಯಂಡ್ ಟೆಕ್ನಾಲಜಿ ಅಡ್ವೈಸರ್ಸ್ ಪ್ರೈವೇಟ್ ಲಿಮಿಟೆಡ್ ಹಾಗೂ ದಕ್ಷಿಣ ಕನ್ನಡ ಮ್ಯೂಚುವಲ್ ಬೆನಿಫಿಟ್ಸ್ ನಿಧಿ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಆಲ್ವಿನ್ ಜೋಯಲ್ ನೊರೊನ್ಹಾ ಹಾಗೂ ಸಿ.ಒ.ಡಿ.ಪಿ. ನಿರ್ದೇಶಕ ರೆ| ಫಾ| ವಿನ್ಸೆಂಟ್ ಡಿಸೋಜಾ ಉದ್ಘಾಟಿಸಿದರು. ಮಂಗಳೂರು ಧರ್ಮಪ್ರಾಂತ್ಯದ ರೆ| ಫಾ| ಬೊನಾವೆಂಚರ್ ನಜರತ್ ಅವರು ಆಶೀರ್ವಚನ ನೀಡಿ, ಸಂಸ್ಥೆಯ ನೂತನ ಶಾಖೆಯು ಜನಸಾಮಾನ್ಯರಿಗೆ ಉತ್ತಮ ಹಣಕಾಸು ಸೇವೆಗಳನ್ನು ಒದಗಿಸುವ ಮೂಲಕ ಸಮಾಜಮುಖಿ ಕಾರ್ಯಗಳಿಗೆ ಪೂರಕವಾಗಲಿ ಎಂದು ಶುಭ ಹಾರೈಸಿದರು. ಗಣ್ಯರ ಉಪಸ್ಥಿತಿ ಉದ್ಘಾಟನಾ ಸಮಾರಂಭದಲ್ಲಿ ಶಾಸಕರಾದ ಡಿ. ವೇದವ್ಯಾಸ ಕಾಮತ್ ಮತ್ತು ಐವನ್…

Read More

ಮಂಗಳೂರು, ಸೆ.12: ಮಂಗಳೂರು ನಗರವನ್ನು ಮಾದಕ ಮುಕ್ತ ನಗರವನ್ನಾಗಿಸುವ ನಿಟ್ಟಿನಲ್ಲಿ ನಗರ ಪೊಲೀಸರು ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾದಕ ವಸ್ತು ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದಡಿ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಒಟ್ಟು ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ. ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಬಗ್ಗೆ ಮಾಹಿತಿ ಹಾಗೂ ಅನುಮಾನಗಳ ಆಧಾರದ ಮೇಲೆ ಪ್ರತ್ಯೇಕ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಪರೀಕ್ಷೆಯಲ್ಲಿ ಮಾದಕ ದ್ರವ್ಯ ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಪಾಂಡೇಶ್ವರ ಠಾಣೆ:ಸೆ.9ರಂದು ಸಂಜೆ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದಡಿ ಮಂಚಿ ಕೊಲ್ನಾಡು ನಿವಾಸಿ **ಅಬ್ದುಲ್ ತೌಫಿಕ್ (21)**ನನ್ನು ಪೊಲೀಸರು ಬಂಧಿಸಿದ್ದಾರೆ. ಕದ್ರಿ ಠಾಣೆ:ಸೆ.10ರಂದು ನಗರದ ಕಾರ್ಮಿಕ ಭವನಕ್ಕೆ ತೆರಳುವ ರಸ್ತೆಯಲ್ಲಿ ಮಾದಕ ವಸ್ತು ಸೇವಿಸಿದ್ದ ಆರೋಪದಡಿ ಕೇರಳ ಮೂಲದ ರಿತುಲ್ ಎಸ್. ಚಂದ್ರನ್ (24), ಅಬ್ದುಲ್ಲಾ (25)…

Read More

ಉಡುಪಿ: ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಪರವಾನಗಿ ಅಥವಾ ಅನುಮತಿ ಪಡೆಯದೆ ಸರಕಾರಿ ಜಮೀನಿನಲ್ಲಿ ಸ್ಫೋಟಕ ವಸ್ತುಗಳನ್ನು ಅನಧಿಕೃತವಾಗಿ ಬಳಸಿ ಬಂಡೆ ಕಲ್ಲುಗಳನ್ನು ಸ್ಫೋಟಿಸಿದ ಆರೋಪದ ಮೇರೆಗೆ ಮಣಿಪಾಲ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಉಡುಪಿ ತಾಲೂಕು ಮರ್ಣೆ ಗ್ರಾಮದ ಕುಕ್ಕಿಪಲ್ಕೆ, ಸರ್ವೆ ನಂ.112/2ರ 1.54 ಎಕರೆ ವಿಸ್ತೀರ್ಣದ ಸರಕಾರಿ ಸ್ಥಿರಾಸ್ತಿ ಜಮೀನಿನಲ್ಲಿ ಈ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಠಾಣೆಯ ಪಿಎಸ್‌ಐ ತಿಮ್ಮೇಶ್ ಬಿ.ಎನ್. ಅವರು ತನಿಖೆ ಕೈಗೊಂಡಿದ್ದು, ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಕೆ. ಗೋವಿಂದರಾಜ್ (40) ಹಾಗೂ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಗುಣಕರ್ಚಿ ಗ್ರಾಮದ ಶೇಖಪ್ಪ ಚಲವಾದಿ ಅಲಿಯಾಸ್ ಚಂದ್ರು (28) ಅವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಡ್ರಿಲ್ಲಿಂಗ್ ಕಂಪ್ರೆಸರ್ ಯಂತ್ರ ಅಳವಡಿಸಿರುವ ಮಹೀಂದ್ರ ಟ್ರ್ಯಾಕ್ಟರ್ ಹಾಗೂ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Read More

ಸಮಾಜ ಸೇವೆಯಲ್ಲಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಚೆನ್ನೈ ಯೂನಿವರ್ಸಿಟಿ ವತಿಯಿಂದ ಡಾಕ್ಟರೆಟ್ ಪದವಿ, ದುಬೈ ಗಡಿನಾಡ ಸಾಂಸ್ಕೃತಿಕ ಅಕಾಡಮಿ (ರಿ)ವತಿಯಿಂದ ಯೂತ್ ಐಕಾನ್ ಅವಾರ್ಡ್ ಸೇರಿದಂತೆ ನೂರಾರು ಸಂಘ ಸಂಸ್ಥೆಗಳಿಂದ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಪ್ರಶಸ್ತಿ ಪಡೆದು ಬದ್ರಿಯ ಜುಮ್ಮಾ ಮಸ್ಜಿದ್ (ರಿ)ಮಲ್ಲಾರು-ಮಜೂರು ಅಧ್ಯಕ್ಷರಾಗಿ ಕಳೆದ 2 ವರ್ಷದಲ್ಲಿ ಮಸ್ಜಿದ್ ನ ಸಮಗ್ರ ಅಭಿವೃದ್ಧಿ ಮಾಡಿ ಅಭಿವೃದ್ಧಿ ಹರಿಕಾರ, ಅಭಿವೃದ್ಧಿ ರತ್ನ ಎಂಬ ಬಿರುದು ಪಡೆದು ಹಾಗೂ ಸರ್ವ ದರ್ಮಿಯರ ನೋಡಬನ್ನಿ ನಮ್ಮ ಮಸೀದಿ ಕಾರ್ಯಕ್ರಮ ಮಾಡಿ 5000 ಕ್ಕೂ ಹೆಚ್ಚಿನ ಜನ ಮಸ್ಜಿದ್ ವೀಕ್ಷಣೆ ಮಾಡಿದ್ದು ಉಡುಪಿ ಜಿಲ್ಲೆಯಲ್ಲಿ ಸೌಹಾರ್ದತೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಹಲವಾರು ಸೌಹಾರ್ದತೆಯ ಕಾರ್ಯಕ್ರಮ ನೀಡಿ ಉತ್ತಮ ಸಾರಾಂಶ ಕೊಟ್ಟು ಜನಮೆಚ್ಚುಗೆ ಪಡೆದ ಸಮಾಜ ಸೇವಕರು ಉದ್ಯಮಿಗಳು ಆಗಿರುವ ಡಾ.ಎಂ ಫಾರೂಕ್ ಚಂದ್ರನಗರ ಇವರಿಗೆ ಸುನ್ನಿ ಯುವ ಸಂಘ, ಕೆ.ಎಂ.ಜೆ, ಎಸ್.ಎಸ್ ಎಫ್ ಮಜೂರು ಘಟಕದ ವತಿಯಿಂದ ಸಿರಾಜುಮ್ಮನ್ನೀರ್ ಮಿಲಾದ್ ಫೆಸ್ಟ್ ಕಾರ್ಯಕ್ರಮದಲ್ಲಿ ಮುಖ್ಯ…

Read More

ಬೆಂಗಳೂರು: ಕರ್ನಾಟಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಆಪ್ತರು ಮತ್ತು ಕುಟುಂಬ ಸದಸ್ಯರಿಗೆ ಸಂಬಂಧಿಸಿದ 21 ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ED) ಸೆಪ್ಟೆಂಬರ್ 9 ಮತ್ತು 10ರಂದು ಶೋಧ ಕಾರ್ಯಾಚರಣೆ ನಡೆಸಿದೆ. ಬೆಂಗಳೂರು ವಲಯ ಕಚೇರಿಯ ಅಧಿಕಾರಿಗಳು ಬೆಂಗಳೂರು, ಬೆಳಗಾವಿ, ಗೋಕಾಕ್ ಹಾಗೂ ಕೋಲ್ಕತ್ತಾ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ನಡೆಸಿದ್ದಾರೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಅಡಿಯಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಜಾರಕಿಹೊಳಿ ಕುಟುಂಬಕ್ಕೆ ಸಂಬಂಧಿಸಿದ ಬಹಿರಂಗಪಡಿಸದ ವಿದೇಶಿ ಹೂಡಿಕೆಗಳು, ಗಡಿ ದಾಟಿದ ಹಣಕಾಸು ವ್ಯವಹಾರಗಳು ಹಾಗೂ ಸಂಭಾವ್ಯ ಹಣಕಾಸು ಅಕ್ರಮಗಳ ಕುರಿತು ದಾಖಲೆ ಮತ್ತು ಸಾಕ್ಷ್ಯ ಸಂಗ್ರಹಿಸುವುದು ಕಾರ್ಯಾಚರಣೆಯ ಉದ್ದೇಶವಾಗಿದೆ ಎಂದು ಇ.ಡಿ. ತಿಳಿಸಿದೆ. ಕುಟುಂಬ ಸದಸ್ಯರು, ಆಪ್ತರ ಸ್ಥಳಗಳಲ್ಲೂ ಪರಿಶೀಲನೆ ಶೋಧ ಕಾರ್ಯಾಚರಣೆಯ ವೇಳೆ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ಸಚಿವರ ಪುತ್ರ ರಾಹುಲ್ ಜಾರಕಿಹೊಳಿ ಹಾಗೂ ಭಾವ ವೈ.ಡಿ. ಮಂಜುನಾಥ್ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲೂ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.…

Read More

ಉಡುಪಿಯಲ್ಲಿ ಗಣೇಶೋತ್ಸವದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಶಾಂತಿ-ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲಾಧಿಕಾರಿ ಸ್ವರೂಪ ಅವರು ನಿರ್ದಿಷ್ಟ ದಿನಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ (Dry Days) ಮಹತ್ವದ ಆದೇಶ ಹೊರಡಿಸಿದ್ದಾರೆ. ಆದೇಶದ ಪ್ರಮುಖ ವಿವರಗಳು ಹಾಗೂ ದಿನಾಂಕಗಳು: ಸೆಪ್ಟೆಂಬರ್ 14 (ಇಡೀ ದಿನ): ಬೆಳಿಗ್ಗೆ 6.00 ರಿಂದ ರಾತ್ರಿ 12.00 ರವರೆಗೆ ಉಡುಪಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಸಂಪೂರ್ಣ ಬಂದ್. ಸೆಪ್ಟೆಂಬರ್ 16 (ಉಡುಪಿ ನಗರ): ಮಧ್ಯಾಹ್ನ 2.00 ರಿಂದ ರಾತ್ರಿ 12.00 ರವರೆಗೆ ಉಡುಪಿ ನಗರ ವ್ಯಾಪ್ತಿಯಲ್ಲಿ ಮಾತ್ರ ಮದ್ಯ ಮಾರಾಟ ನಿಷೇಧ. ಸೆಪ್ಟೆಂಬರ್ 18 (ವಿಸರ್ಜನಾ ಸ್ಥಳಗಳು): ಗಣೇಶ ಮೂರ್ತಿ ವಿಸರ್ಜನೆ ನಡೆಯುವ ವಿವಿಧ ಪೋಲೀಸ್ ಠಾಣಾ ವ್ಯಾಪ್ತಿಗಳಲ್ಲಿ (ಗಂಗೊಳ್ಳಿ, ಕುಂದಾಪುರ ನಗರ ಹಾಗೂ ಕಾಪು ಠಾಣೆ ವ್ಯಾಪ್ತಿಯ ನಿರ್ದಿಷ್ಟ ಗ್ರಾಮಗಳು) ಮಧ್ಯಾಹ್ನ 2.00 ರಿಂದ ರಾತ್ರಿ 12.00 ರವರೆಗೆ ಮದ್ಯ ಮಾರಾಟ ಇರುವುದಿಲ್ಲ. ಸೂಚನೆ: ನಿಗದಿತ ದಿನ ಮತ್ತು ಸಮಯಗಳಲ್ಲಿ ಜಿಲ್ಲೆಯ ಎಲ್ಲಾ ವೈನ್‌ಶಾಪ್,…

Read More

ಮಂಗಳೂರು: ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ರೋಗಿಯೊಬ್ಬರಿಗೆ ತುರ್ತಾಗಿ ರಕ್ತದ ಅವಶ್ಯಕತೆ ಇದೆ ಎಂಬ ಮಾಹಿತಿ ಬಂದ ಹಿನ್ನೆಲೆಯಲ್ಲಿ, ತಕ್ಷಣ ಸ್ಪಂದಿಸಿದ ಮೊಹಮ್ಮದ್ ಅಲ್ತಾಫ್ ಹಾಗೂ ಯಾಶಿನ್ ಅವರು ಆಸ್ಪತ್ರೆಗೆ ತೆರಳಿ ರಕ್ತದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.ತುರ್ತು ಸಂದರ್ಭದಲ್ಲಿ ಯಾವುದೇ ವಿಳಂಬ ಮಾಡದೆ ರಕ್ತದಾನಕ್ಕೆ ಮುಂದಾದ ಇವರ ಸೇವಾ ಮನೋಭಾವ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.ತುಳುನಾಡ ರಕ್ಷಣಾ ವೇದಿಕೆ ಕಾರ್ಮಿಕ ಘಟಕ ಉಪಾದ್ಯಕ್ಷರಾದ ಫೇರಿ ಡಿಸೋಜರವರು ತುಳುನಾಡ ಸೂರ್ಯ ಪತ್ರಿಕೆ ಗಮನಕ್ಕೆ ತಂದಿದ್ದಾರೆ. ರಕ್ತದಾನವು ಮತ್ತೊಬ್ಬರ ಜೀವ ಉಳಿಸುವ ಮಹತ್ವದ ಮಾನವೀಯ ಸೇವೆಯಾಗಿದ್ದು, ಅಗತ್ಯದ ಸಂದರ್ಭದಲ್ಲಿ ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ.ರಕ್ತದ ಅವಶ್ಯಕತೆ ಇದೆ ಎಂಬ ತುರ್ತು ಕರೆ ಬಂದ ತಕ್ಷಣ ಸ್ಪಂದಿಸಿ ರಕ್ತದಾನ ಮಾಡಿದ ಮೊಹಮ್ಮದ್ ಅಲ್ತಾಫ್ ಮತ್ತು ಯಾಶಿನ್ ಅವರ ಸಾಮಾಜಿಕ ಕಳಕಳಿ ಹಾಗೂ ಸೇವಾ ಮನೋಭಾವಕ್ಕೆ ಅಭಿನಂದನೆಗಳು ವ್ಯಕ್ತವಾಗಿವೆ.“ತುರ್ತು ಸಂದರ್ಭದಲ್ಲಿ ಒಂದು ಯೂನಿಟ್ ರಕ್ತವೂ ಒಂದು ಜೀವಕ್ಕೆ ಅಮೂಲ್ಯವಾಗಬಹುದು. ರಕ್ತದಾನ ಮಾಡಿ, ಜೀವ ಉಳಿಸಿ” ಎಂಬ…

Read More

ಸೆ.18ರ ಸಚಿವ ಸಂಪುಟ ಸಭೆಯಲ್ಲೇ ತುಳುವಿಗೆ ದ್ವಿತೀಯ ಅಧಿಕೃತ ಭಾಷೆಯ ಸ್ಥಾನಮಾನ ಘೋಷಿಸಲು ಆಗ್ರಹ ಕಾಪು: ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವುದು ಯಾರ ದಯೆಯೂ ಅಲ್ಲ, ಅದು ತುಳುವರ ಜನ್ಮಸಿದ್ಧ ಹಕ್ಕು ಎಂದು ತುಳುನಾಡು ರಕ್ಷಣಾ ವೇದಿಕೆ ಕಾಪು ತಾಲೂಕು ಅಧ್ಯಕ್ಷ ನಿತಿನ್ ಕುಮಾರ್ ಶೆಟ್ಟಿ ಆಗ್ರಹಿಸಿದ್ದಾರೆ. ಕರಾವಳಿ ಕರ್ನಾಟಕ, ಮಲೆನಾಡು ಹಾಗೂ ಗಡಿ ಪ್ರದೇಶಗಳಲ್ಲಿ ಕೋಟ್ಯಂತರ ಜನರ ಆಡುಭಾಷೆಯಾಗಿರುವ ತುಳು, ತನ್ನದೇ ಆದ ಲಿಪಿ, ಪಾರಂಪರಿಕ ಸಾಹಿತ್ಯ, ಜಾನಪದ ಪರಂಪರೆ ಹಾಗೂ ಶ್ರೀಮಂತ ಸಾಂಸ್ಕೃತಿಕ ಹಿನ್ನೆಲೆಯನ್ನು ಹೊಂದಿದೆ. ಇಂತಹ ಪ್ರಾಚೀನ ಮತ್ತು ವೈಶಿಷ್ಟ್ಯಪೂರ್ಣ ಭಾಷೆಗೆ ಇಂದಿಗೂ ಅಧಿಕೃತ ಸ್ಥಾನಮಾನ ದೊರಕದಿರುವುದು ವಿಷಾದನೀಯ ಎಂದು ಅವರು ತಿಳಿಸಿದ್ದಾರೆ. ತುಳು ಕೇವಲ ಸಂವಹನದ ಭಾಷೆಯಲ್ಲ. ಅದು ತುಳುನಾಡಿನ ಇತಿಹಾಸ, ಸಂಸ್ಕೃತಿ, ಪರಂಪರೆ, ಜಾನಪದ, ದೈವಾರಾಧನೆ, ಕಲೆ ಮತ್ತು ಜನಜೀವನದ ಅವಿಭಾಜ್ಯ ಅಂಗವಾಗಿದೆ. ತುಳು ಭಾಷೆಯೊಂದಿಗೆ ತುಳುನಾಡಿನ ಅಸ್ಮಿತೆ ಮತ್ತು ಸ್ವಾಭಿಮಾನವೂ ಬೆಸೆದುಕೊಂಡಿದೆ. ಆದ್ದರಿಂದ ತುಳುವಿಗೆ ಅಧಿಕೃತ ಸ್ಥಾನಮಾನ ಕಲ್ಪಿಸುವುದು ಕೇವಲ ಭಾಷೆಯ…

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ (ಡಿಸಿಸಿ) ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್‌ನ ‘ಸಂಘಟನ್ ಸೃಜನ್ ಅಭಿಯಾನ’ದ ಭಾಗವಾಗಿ ಈ ನೇಮಕ ನಡೆದಿದೆ. ಅಭಿಯಾನದಡಿ ದಕ್ಷಿಣ ಕನ್ನಡ ಜಿಲ್ಲೆಗೆ ನಿಯೋಜಿಸಲಾಗಿದ್ದ ಎಐಸಿಸಿ ವೀಕ್ಷಕರು ಪಕ್ಷದ ಪದಾಧಿಕಾರಿಗಳು ಹಾಗೂ ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿ, ಜಿಲ್ಲೆಯ ಪಕ್ಷದ ಸಂಘಟನೆ ಕುರಿತು ಸಮಗ್ರ ವರದಿಯನ್ನು ಸಲ್ಲಿಸಿದ್ದರು. ಈ ವರದಿ ಹಾಗೂ ಎಐಸಿಸಿ ವೀಕ್ಷಕರು ಮತ್ತು ಹಿರಿಯ ನಾಯಕರೊಂದಿಗೆ ನಡೆದ ಚರ್ಚೆಯ ಆಧಾರದ ಮೇಲೆ ಪದ್ಮರಾಜ್ ಆರ್.ಪೂಜಾರಿ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಅನುಮೋದನೆ ನೀಡಲಾಗಿದೆ

Read More

ಉಡುಪಿ: ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ವೇ ನಂಬರ್ 293/1A1ರಲ್ಲಿ ಬಡ ಹಾಗೂ ನಿವೇಶನ ರಹಿತರಿಗಾಗಿ ಕಾಯ್ದಿರಿಸಲಾಗಿರುವ 3.20 ಎಕರೆ ಜಾಗವನ್ನು ಶೀಘ್ರವಾಗಿ ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕು ಎಂದು ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ಆಗ್ರಹಿಸಿದೆ. ಈ ಕುರಿತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರಿಗೆ ಮನವಿ ಸಲ್ಲಿಸಿರುವ ವೇದಿಕೆ, ಹಲವು ವರ್ಷಗಳಿಂದ ನಿವೇಶನ ಹಂಚಿಕೆಯಾಗದೆ ಖಾಲಿ ಉಳಿದಿರುವ ಈ ಜಾಗವನ್ನು ವಸತಿ ರಹಿತರಿಗೆ ನಿವೇಶನ ಹಂಚಿಕೆ ನೀಡುವ ಉದ್ದೇಶಕ್ಕೆ ಅನುಗುಣವಾಗಿ ಬಳಸಿಕೊಳ್ಳಬೇಕು ಎಂದು ಒತ್ತಾಯಿಸಿದೆ. ಉಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅನೇಕ ಬಡ ಕುಟುಂಬಗಳು ಸ್ವಂತ ನಿವೇಶನವಿಲ್ಲದೆ ದುಬಾರಿ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿದ್ದು, ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿವೆ. ನಿವೇಶನ ಹೊಂದುವ ಸಾಮರ್ಥ್ಯವಿಲ್ಲದ ಬಡವರು ಸ್ವಂತ ಮನೆ ನಿರ್ಮಿಸಿಕೊಳ್ಳುವ ಕನಸಿನಿಂದ ವಂಚಿತರಾಗಿದ್ದಾರೆ. ಇಂತಹ ಕುಟುಂಬಗಳಿಗೆ ಸರ್ಕಾರದ ವತಿಯಿಂದ ಲಭ್ಯವಿರುವ ಜಾಗವನ್ನು ಸಮರ್ಪಕವಾಗಿ ಬಳಸಿಕೊಂಡು ನಿವೇಶನ ಒದಗಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ವೇದಿಕೆ…

Read More