- ಪುತ್ತೂರು: ಜೆಡಿಎಸ್ ಮಹಿಳಾ ಘಟಕದ ಸಭೆ: ಪಕ್ಷ ಸಂಘಟನೆಗೆ ಒತ್ತು, ಹೊಸ ಸದಸ್ಯರ ಸೇರ್ಪಡೆ
- ತುಳುನಾಡ ರಕ್ಷಣಾ ವೇದಿಕೆ ಬ್ರಹ್ಮಾವರ ತಾಲೂಕು ಸಭೆ: ಸಂಘಟನೆ ಬಲವರ್ಧನೆಗೆ ಒತ್ತು
- ಉಡುಪಿ : ತುಳುನಾಡ ರಕ್ಷಣಾ ವೇದಿಕೆ (ರಿ.)ಬೈರಂಪಳ್ಳಿ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ನಿಶಾಂತ್ ಪೂಜಾರಿ ಶಿರೂರು ಆಯ್ಕೆ
- ಸುಳ್ಯ: ಜೆಡಿಎಸ್ ಜಿಲ್ಲಾ ಪ್ರಮುಖ ಪದಾಧಿಕಾರಿಗಳ ಸಭೆ: ಸುಕುಮಾರ್ ಕೋಡ್ತುಗುಳಿ ಮರು ಆಯ್ಕೆ, ಕಡಬ ತಾಲೂಕಿಗೆ ಮೀರ್ ಸಾಹೇಬ್ ಅಧ್ಯಕ್ಷರಾಗಿ ನೇಮಕ,2028ರಲ್ಲಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ತರಲು ಈಗಿನಿಂದಲೇ ಪಣ ತೊಡಿ: ಜಾಕೆ ಮಾಧವ ಗೌಡ ಕರೆ
- ಬೆಂಗಳೂರು ನಗರ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಜಿಬಿಎ (GBA) ಉಪಾಧ್ಯಕ್ಷರಾಗಿ ಶೋಯಬ್ ಬಾಬಾ ಜಿ ನೇಮಕ
- ಮಂಗಳೂರು ವಿಧಾನಸಭಾ ಕ್ಷೇತ್ರ ಜೆಡಿಎಸ್ ಅಧ್ಯಕ್ಷರಾಗಿ ಪ್ರಕಾಶ್ ಶೆಟ್ಟಿ ಅಸೈಗೋಳಿ ನೇಮಕ,ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡ ಘೋಷಣೆ – ಪಕ್ಷ ಸಂಘಟನೆಗೆ ಹೊಸ ಚೈತನ್ಯ, ತಳಮಟ್ಟದಿಂದ ಬಲವರ್ಧನೆಗೆ ಆದ್ಯತೆ
- ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ: ಖಾಸಗಿ ಬಸ್ ಕಂಡಕ್ಟರ್ ಬಂಧನ
- ಕೆಎಸ್ಬಿಸಿ ಚುನಾವಣೆಯಲ್ಲಿ ಶ್ಯಾಮಲಾ ಭಂಡಾರಿ ಐತಿಹಾಸಿಕ ಗೆಲುವು; ಅವಳಿ ಜಿಲ್ಲೆಗಳ ಮೊದಲ ಮಹಿಳಾ ಪ್ರತಿನಿಧಿಯಾಗಿ ಹೊಸ ದಾಖಲೆ
Author: Tulunada Surya
ಪುತ್ತೂರು, ಜುಲೈ 12: ಜನತಾದಳ (ಜಾತ್ಯತೀತ) ಪಕ್ಷದ ಪುತ್ತೂರು ವಿಧಾನಸಭಾ ಕ್ಷೇತ್ರ ಮಹಿಳಾ ಘಟಕದ ಸಭೆಯು ಭಾನುವಾರ ಸಂಜೆ 3.00 ರಿಂದ ನಡೆಯಿತು. ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆಯೋಜಿಸಲಾದ ಈ ಸಭೆಯಲ್ಲಿ ಸಂಘಟನೆ ವಿಸ್ತರಣೆ, ಮಹಿಳೆಯರ ಸಕ್ರಿಯ ಭಾಗವಹಿಸುವಿಕೆ ಹಾಗೂ ಸದಸ್ಯತ್ವ ಅಭಿಯಾನದ ಕುರಿತು ಸಮಗ್ರ ಚರ್ಚೆ ನಡೆಯಿತು. ಸಭೆಯಲ್ಲಿ ಪಕ್ಷದ ಬಲವರ್ಧನೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪ್ರಥಮ ಹಂತದ ಮಹಿಳಾ ಸಂಘಟನಾ ಸಭೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಹಲವು ಮಹಿಳೆಯರನ್ನು ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳಿಸಲಾಯಿತು. ಸಭೆಯಲ್ಲಿ ಜೆಡಿಎಸ್ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ರಮೀಜಾ ಭಾನು ಅವರು ಮಾತನಾಡಿ, ಮಹಿಳೆಯರು ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಾಗ ಮಾತ್ರ ಪಕ್ಷ ಮತ್ತಷ್ಟು ಸದೃಢವಾಗಲಿದೆ ಎಂದು ಹೇಳಿದರು. ಗ್ರಾಮ ಮಟ್ಟದಿಂದ ಮಹಿಳಾ ಸಂಘಟನೆಯನ್ನು ವಿಸ್ತರಿಸಿ ಪಕ್ಷವನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ನಿರಂತರ ಕಾರ್ಯನಿರ್ವಹಿಸುವಂತೆ ಕರೆ ನೀಡಿದರು. ಈ ಸಂದರ್ಭದಲ್ಲಿ ಮಹಿಳಾ…
ಬ್ರಹ್ಮಾವರ, ಜುಲೈ 12: ತುಳುನಾಡ ರಕ್ಷಣಾ ವೇದಿಕೆ (ರಿ.) ಬ್ರಹ್ಮಾವರ ತಾಲೂಕು ಘಟಕದ ಪದಾಧಿಕಾರಿಗಳ ಸಭೆಯು ಭಾನುವಾರ ಮಧ್ಯಾಹ್ನ ನಡೆಯಿತು. ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜಾ ಕೊಳಲಗಿರಿ ಅವರ ಸೂಚನೆಯಂತೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಹಾವಂಜೆ ಅವರ ನೇತೃತ್ವದಲ್ಲಿ ಸಭೆ ಜರುಗಿತು. ಸಭೆಯಲ್ಲಿ ಸಂಘಟನೆಯ ಸಂಘಟನಾ ಶಕ್ತಿ ಹಾಗೂ ಸದಸ್ಯತ್ವವನ್ನು ಮತ್ತಷ್ಟು ಬಲಪಡಿಸುವ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು. ಸಂಘದ ಎಲ್ಲಾ ವಲಯದ ಪದಾಧಿಕಾರಿಗಳು ಹಾಗೂ ಸದಸ್ಯರು ಕಡ್ಡಾಯವಾಗಿ ಗುರುತಿನ ಚೀಟಿ (ಐಡಿ ಕಾರ್ಡ್) ಮತ್ತು ಸಂಘದ ಶಾಲು ಪಡೆದುಕೊಳ್ಳುವಂತೆ ಸೂಚಿಸಲಾಯಿತು. ಇದೇ ವೇಳೆ ಆಗಸ್ಟ್ 16ರಂದು ಬ್ರಹ್ಮಾವರ ತಾಲೂಕು ಘಟಕದ ವತಿಯಿಂದ ನಡೆಯಲಿರುವ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲು ಅಗತ್ಯ ಪೂರ್ವಸಿದ್ಧತೆಗಳ ಕುರಿತು ಚರ್ಚೆ ನಡೆಸಲಾಯಿತು. ಜೊತೆಗೆ ಆರೂರು ಗ್ರಾಮದಲ್ಲಿ ತಲೆದೋರಿರುವ ಕುಡಿಯುವ ನೀರಿನ ಸರಬರಾಜು ಸಮಸ್ಯೆಗೆ ಸಂಬಂಧಿಸಿದಂತೆ ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಕೈಗೊಳ್ಳಬಹುದಾದ ಹೋರಾಟ ಹಾಗೂ ಮುಂದಿನ ಕ್ರಮಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಯಿತು.…
ಉಡುಪಿ, ಜುಲೈ 12: ತುಳುನಾಡ ರಕ್ಷಣಾ ವೇದಿಕೆ (ರಿ.) ಭೈರಂಪಳ್ಳಿ ಘಟಕದ ಪದಾಧಿಕಾರಿಗಳ ಸಭೆಯು ಭಾನುವಾರ ಸಂಜೆ ಭೈರಂಪಳ್ಳಿ ಸಾಂತ್ಯಾರ್ ಅಂಬೇಡ್ಕರ್ ಸಭಾಭವನದಲ್ಲಿ ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜಾ ಕೊಳಲಗಿರಿ ಅವರ ನೇತೃತ್ವದಲ್ಲಿ ಹಾಗೂ ಕಾಪು ತಾಲೂಕು ಅಧ್ಯಕ್ಷ ನಿತಿನ್ ಕುಮಾರ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ನಡೆಯಿತು. ಸಭೆಯಲ್ಲಿ ಸಂಘಟನೆಯ ಬಲವರ್ಧನೆ, ಸದಸ್ಯತ್ವ ವಿಸ್ತರಣೆ, ಸಂಘಟನಾ ಚಟುವಟಿಕೆಗಳು ಹಾಗೂ ಮುಂದಿನ ಕಾರ್ಯಕ್ರಮಗಳ ಕುರಿತು ಸಮಗ್ರ ಚರ್ಚೆ ನಡೆಯಿತು. ಇದೇ ವೇಳೆ ಭೈರಂಪಳ್ಳಿ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ನಿಶಾಂತ್ ಪೂಜಾರಿ ಮುಟ್ಟಿಕಲ್ಲು, ಶಿರೂರು ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜಾ ಅವರು ತುಳುನಾಡ ಸೂರ್ಯ-ಚಂದ್ರ ಚಿಹ್ನೆಯ ಧ್ವಜವನ್ನು ನೀಡಿ ಅಭಿನಂದಿಸಿ, ಅಧಿಕಾರವನ್ನು ಅಧಿಕೃತವಾಗಿ ಹಸ್ತಾಂತರಿಸಿದರು. ಬರುವ ಆಗಸ್ಟ್ 2ರಂದು ಭೈರಂಪಳ್ಳಿ ಘಟಕದ ವತಿಯಿಂದ ಬೃಹತ್ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಯಿತು. ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಕುರಿತು ಸಭೆಯಲ್ಲಿ ಸವಿಸ್ತಾರವಾಗಿ ಚರ್ಚಿಸಲಾಯಿತು. ಜೊತೆಗೆ ಭೈರಂಪಳ್ಳಿಯಲ್ಲಿ ಮಹಿಳಾ ಘಟಕವನ್ನು ಆರಂಭಿಸುವ ಕುರಿತು ಸಹ…
ಸುಳ್ಯ, ಜುಲೈ 12: ಜನತಾದಳ (ಜಾತ್ಯತೀತ) ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಪ್ರಮುಖ ಪದಾಧಿಕಾರಿಗಳ ಸಭೆಯು ಸುಳ್ಯದ ಬ್ರಹ್ಮಶ್ರೀ ಸಭಾಂಗಣದಲ್ಲಿ ಸುಳ್ಯ ತಾಲೂಕು ಅಧ್ಯಕ್ಷರಾದ ಸುಕುಮಾರ್ ಕೋಡ್ತುಗುಳಿ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 12-07-2026 ರಂದು ಬೆಳಿಗ್ಗೆ 10.30 ರಿಂದ ಉತ್ಸಾಹಭರಿತವಾಗಿ ನಡೆಯಿತು. ಇತ್ತೀಚೆಗೆ ನಿಧನರಾದ ತೂಗುಸೇತುವೆ ಸರದಾರ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು ಸಭೆಯನ್ನುದ್ದೇಶಿಸಿ ಮಾತನಾಡಿದ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡ, 2028ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಗುರಿಯೊಂದಿಗೆ ಪ್ರತಿಯೊಬ್ಬ ಕಾರ್ಯಕರ್ತರೂ ಈಗಿನಿಂದಲೇ ಸಂಘಟನಾ ಕಾರ್ಯದಲ್ಲಿ ಸಂಪೂರ್ಣ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.ಪ್ರತಿ ತಾಲೂಕಿನಲ್ಲಿ ಜಿಲ್ಲಾ ಪದಾಧಿಕಾರಿಗಳ ಸಭೆಯನ್ನು ನಡೆಸಬೇಕು ಎಂದು ಕಳೆದ ಜಿಲ್ಲಾ ಘಟಕದ ತೀರ್ಮಾನಿಸಲಾಗಿತ್ತು. ಗ್ರಾಮ ಮಟ್ಟದಿಂದ ಬೂತ್ ಮಟ್ಟದವರೆಗೆ ಪಕ್ಷವನ್ನು ಬಲಿಷ್ಠಗೊಳಿಸುವ ಮೂಲಕ ಜನರ ವಿಶ್ವಾಸ ಗಳಿಸಲು ಒಗ್ಗಟ್ಟಿನ ಪ್ರಯತ್ನ ಅಗತ್ಯ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ…
ಬೆಂಗಳೂರು, ಜುಲೈ 12: ಜನತಾದಳ (ಜಾತ್ಯತೀತ) ಪಕ್ಷದ ಬೆಂಗಳೂರು ನಗರ ಅಲ್ಪಸಂಖ್ಯಾತ ಘಟಕದ ಜಿಬಿಎ (GBA) ವಿಭಾಗದ ಉಪಾಧ್ಯಕ್ಷರಾಗಿ ಶ್ರೀ ಶೋಯಬ್ ಬಾಬಾ ಜಿ ಅವರನ್ನು ನೇಮಕ ಮಾಡಲಾಗಿದೆ. ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ಅಲ್ಪಸಂಖ್ಯಾತ ಸಮುದಾಯದ ನಡುವೆ ಪಕ್ಷದ ತತ್ವ, ಸಿದ್ಧಾಂತ ಮತ್ತು ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ ಈ ನೇಮಕಾತಿ ಮಾಡಲಾಗಿದೆ. ಇದರೊಂದಿಗೆ ಪಕ್ಷ ಸಂಘಟನೆಯ ಹಿತದೃಷ್ಟಿಯಿಂದ ಇನ್ನೂ ಕೆಲವು ಹೆಚ್ಚುವರಿ ಜವಾಬ್ದಾರಿಗಳನ್ನು ಸಹ ವಿವಿಧ ಪದಾಧಿಕಾರಿಗಳಿಗೆ ವಹಿಸಲಾಗಿದೆ. ಈ ನೇಮಕಾತಿಯಿಂದ ಬೆಂಗಳೂರು ನಗರದಲ್ಲಿ ಜನತಾದಳ (ಜಾತ್ಯತೀತ) ಪಕ್ಷದ ಅಲ್ಪಸಂಖ್ಯಾತ ಘಟಕದ ಸಂಘಟನೆಗೆ ಹೊಸ ಚೈತನ್ಯ ದೊರೆಯಲಿದ್ದು, ಪಕ್ಷದ ಬೆಳವಣಿಗೆಗೆ ಶೋಯಬ್ ಬಾಬಾ ಜಿ ಅವರು ಸಮರ್ಥವಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಲಾಗಿದೆ. ಈ ಸಂದರ್ಭದಲ್ಲಿ ಬೆಂಗಳೂರು ನಗರ ಜಿಬಿಎ (GBA) ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಫ್ರೋಜ್ ಬೈಗ್ ಅವರು ಶ್ರೀ ಶೋಯಬ್ ಬಾಬಾ ಜಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ, ನೂತನ ಜವಾಬ್ದಾರಿಯನ್ನು ಯಶಸ್ವಿಯಾಗಿ…
ಮಂಗಳೂರು, ಜುಲೈ 11: ಜನತಾದಳ (ಜಾತ್ಯತೀತ) ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಪ್ರಕಾಶ್ ಶೆಟ್ಟಿ ಅಸೈಗೋಳಿ ಅವರನ್ನು ಮಂಗಳೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡ ತಿಳಿಸಿದ್ದಾರೆ. ಉಳ್ಳಾಲ ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ನೇಮಕಾತಿಯನ್ನು ಅಧಿಕೃತವಾಗಿ ಘೋಷಿಸಿದ ಅವರು, ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಕ್ಕೆ ಹೊಸ ಚೈತನ್ಯ ತುಂಬುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು. ಪ್ರಕಾಶ್ ಶೆಟ್ಟಿ ಅಸೈಗೋಳಿ ಅವರು ವಿದ್ಯಾರ್ಥಿ ಜೀವನದಿಂದಲೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡಿದ್ದು, ಸರ್ಕಾರಿ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಬಳಿಕ ಜನತಾದಳ (ಜಾತ್ಯತೀತ) ಪಕ್ಷದ ವತಿಯಿಂದ ಮಂಗಳೂರು ತಾಲೂಕು ಪಂಚಾಯತ್ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿ ಜನಪರ ಆಡಳಿತ ಮತ್ತು ಸಂಘಟನಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಪಕ್ಷದ ಮೇಲಿನ ನಿಷ್ಠೆ, ಸಂಘಟನಾ…
ಮಂಗಳೂರು, ಜುಲೈ 11: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಖಾಸಗಿ ಬಸ್ ಕಂಡಕ್ಟರ್ನನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸಮೀಪದ ಕಲ್ಲಾಪು ನಿವಾಸಿ, ಮೂಲತಃ ಕೇರಳದ 32 ವರ್ಷದ ಇಫ್ಖಾನ್ ಎಂದು ಗುರುತಿಸಲಾಗಿದೆ. ಈತ ಮಂಗಳೂರು–ವಿಟ್ಲ ಮಾರ್ಗದಲ್ಲಿ ಸಂಚರಿಸುವ ‘ಸೆಲೆನ್’ ಖಾಸಗಿ ಬಸ್ಸಿನಲ್ಲಿ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದನು. ಘಟನೆಯ ವಿವರ ಜುಲೈ 9ರಂದು ಸಂಜೆ ಸುಮಾರು 5 ಗಂಟೆಯ ವೇಳೆಗೆ ಕಾಲೇಜು ವಿದ್ಯಾರ್ಥಿನಿಯರು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಆರೋಪಿ ಇಫ್ಖಾನ್ ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಅಸಭ್ಯ ಸನ್ನೆಗಳನ್ನು ಮಾಡಿದ್ದಾನೆ ಎನ್ನಲಾಗಿದೆ. ಅಲ್ಲದೆ, ತನ್ನ ಗುಪ್ತಾಂಗವನ್ನು ಪ್ರದರ್ಶಿಸಿ, ಬಸ್ಸಿನ ಹಿಂದಿನ ಸೀಟಿಗೆ ಬರುವಂತೆ ವಿದ್ಯಾರ್ಥಿನಿಯರನ್ನು ಕರೆಯುವ ಮೂಲಕ ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಘಟನೆಯಿಂದ ಆತಂಕಗೊಂಡ ವಿದ್ಯಾರ್ಥಿನಿಯರು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಆಧಾರದಲ್ಲಿ…
ಕುಂದಾಪುರ, ಜುಲೈ 11: ಕರ್ನಾಟಕ ರಾಜ್ಯ ವಕೀಲರ ಪರಿಷತ್ (ಕೆಎಸ್ಬಿಸಿ) ಚುನಾವಣೆಯಲ್ಲಿ ಕುಂದಾಪುರದ ಹಿರಿಯ ನ್ಯಾಯವಾದಿ ಶ್ಯಾಮಲಾ ಭಂಡಾರಿ ಅವರು ಗಮನಾರ್ಹ ವಿಜಯ ಸಾಧಿಸಿ ಅವಳಿ ಜಿಲ್ಲೆಗಳ ಕಾನೂನು ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದ್ದಾರೆ. ಈ ಗೆಲುವಿನೊಂದಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಇತಿಹಾಸದಲ್ಲೇ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಸದಸ್ಯೆಯಾಗಿ ಆಯ್ಕೆಯಾದ ಮೊದಲ ಮಹಿಳೆ ಎಂಬ ಅಪೂರ್ವ ಗೌರವಕ್ಕೆ ಅವರು ಪಾತ್ರರಾಗಿದ್ದಾರೆ.. ಹಲವು ದಶಕಗಳಿಂದ ವಕೀಲ ವೃತ್ತಿಯಲ್ಲಿ ಸಕ್ರಿಯರಾಗಿರುವ ಶ್ಯಾಮಲಾ ಭಂಡಾರಿ ಅವರು ನ್ಯಾಯಾಂಗ ಸೇವೆಯ ಜೊತೆಗೆ ಶೈಕ್ಷಣಿಕ, ಸಾಮಾಜಿಕ ಹಾಗೂ ಕಾನೂನು ಜಾಗೃತಿ ಕ್ಷೇತ್ರಗಳಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ಜನಪರ ಚಿಂತನೆ, ಸೇವೆ ಮತ್ತು ಸಮಾಜಮುಖಿ ಕಾರ್ಯಗಳ ಮೂಲಕ ಅವರು ವಕೀಲ ಸಮುದಾಯದಲ್ಲಿ ವಿಶಿಷ್ಟ ಸ್ಥಾನವನ್ನು ಗಳಿಸಿದ್ದಾರೆ. ಮಹಿಳಾ ಸಬಲೀಕರಣ, ಹಾಗೂ ಪ್ರಗತಿಪರ ಚಳವಳಿಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅವರು, ರಾಜಕೀಯ ಮತ್ತು ಸಾರ್ವಜನಿಕ ಬದುಕಿನಲ್ಲಿಯೂ ತಮ್ಮ ಛಾಪು ಮೂಡಿಸಿದ್ದಾರೆ. ಪ್ರಸ್ತುತ ಕರ್ನಾಟಕ ರಾಜ್ಯ ನೋಟರಿ ವಕೀಲರ ಸಂಘದ…
ಕಲಬುರ್ಗಿ, ಜುಲೈ 11: ನಗರದ ಅತ್ಯಂತ ಜನನಿಬಿಡ ಹಾಗೂ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಒಂದಾದ ಜಗತ್ ವೃತ್ತದಲ್ಲಿ ಮಂಗಳವಾರ ರಾತ್ರಿ ನಡೆದ ದಾರುಣ ಘಟನೆಯೊಂದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಕರ್ತವ್ಯದಲ್ಲಿದ್ದ ಜಿಲ್ಲಾ ಸಶಸ್ತ್ರ ಮೀಸಲು ಪಡೆ (CAR)ಯ ಪೊಲೀಸ್ ಕಾನ್ಸ್ಟೇಬಲ್ ಪೊಲೀಸ್ ಕಾನ್ಸ್ಟೇಬಲ್ ಶಿವಕುಮಾರ ನರಿಬೋಳ ತಮ್ಮ ಸೇವಾ ರೈಫಲ್ನಿಂದ ತಮಗೆ ತಾವೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಸಾರ್ವಜನಿಕರ ಸಂಚಾರ ಹೆಚ್ಚಿರುವ ಜಗತ್ ವೃತ್ತದಲ್ಲಿ ಈ ಘಟನೆ ನಡೆದಿದ್ದು, ಗುಂಡಿನ ಸದ್ದು ಕೇಳುತ್ತಿದ್ದಂತೆಯೇ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಮಾಹಿತಿ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸ್ಥಳೀಯ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಮೃತ ಕಾನ್ಸ್ಟೇಬಲ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ವೈಯಕ್ತಿಕ ಅಥವಾ ಸೇವಾ ಸಂಬಂಧಿತ ಯಾವುದೇ ಕಾರಣಗಳಿದ್ದವೆಯೇ ಎಂಬ ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆಗೆ…
ಮೂಡುಬಿದಿರೆ, ಜುಲೈ 10: ಡಿಜಿಟಲ್ ಜಗತ್ತಿನಲ್ಲಿ ತಮ್ಮದೇ ಆದ ವಿಶಿಷ್ಟ ಗುರುತನ್ನು ಮೂಡಿಸಿ, ಉದ್ಯಮಶೀಲತೆ ಹಾಗೂ ಸೃಜನಶೀಲತೆಯ ಮೂಲಕ ಅಸಂಖ್ಯಾತ ಯುವಕರಿಗೆ ಸ್ಫೂರ್ತಿಯಾಗಿದ್ದ ಮೂಲತಃ ಮಿಜಾರು–ತೋಡಾರು ಕೇರ್ದಿಲದವರಾದ ಶ್ರೀ ಅತುಲ್ ಹೆಗ್ಡೆ ಅವರು ಜುಲೈ 7, 2026ರಂದು ಮುಂಬೈನ ತಮ್ಮ ಸ್ವಂತ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದ ಸುದ್ದಿ ಅತ್ಯಂತ ದುಃಖಕರವಾಗಿದೆ ಎಂದು ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ, ಶ್ರೀ ದಿಗಂಬರ ಜೈನ ಮಠ, ಮೂಡುಬಿದಿರೆ ಅವರು ಸಂತಾಪ ಸೂಚಿಸಿದ್ದಾರೆ.ಮಾರ್ಚ್ 27, 1973ರಂದು ಜನಿಸಿದ ಶ್ರೀ ಅತುಲ್ ಹೆಗ್ಡೆ ಅವರು ಕರ್ನಾಟಕದ ಮಣ್ಣಿನಲ್ಲಿ ಜನಿಸಿ, ಮುಂಬೈಯನ್ನು ತಮ್ಮ ಕಾರ್ಯಕ್ಷೇತ್ರವನ್ನಾಗಿ ಮಾಡಿಕೊಂಡು ಜಾಗತಿಕ ಡಿಜಿಟಲ್ ಕ್ಷೇತ್ರದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದರು. ಅವರು ಕೇವಲ ಯಶಸ್ವಿ ಉದ್ಯಮಿಯಾಗಿರದೆ, ಹೊಸ ತಲೆಮಾರಿನ ಕನಸುಗಳಿಗೆ ದಿಕ್ಕು ತೋರಿದ ಸೃಜನಶೀಲ ಚಿಂತಕರಾಗಿ ಗುರುತಿಸಿಕೊಂಡಿದ್ದರು. ಅಲ್ಪಾಯುಷ್ಯದಲ್ಲೇ ಸಾಧನೆಯ ಶಿಖರ ತಲುಪಿ ಸಮಾಜಕ್ಕೆ ಮಾದರಿಯಾಗಿರುವುದು ಅವರ ಜೀವನದ ವಿಶೇಷತೆಯಾಗಿದೆ.ಅವರ ತಂದೆ ಶ್ರೀ ಜೀವಂಧರ ಹೆಗ್ಡೆ ಅವರು ಇಂಡಿಯನ್ ಏರ್ಲೈನ್ಸ್ನಲ್ಲಿ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
