Author: Tulunada Surya

ಮಂಗಳೂರು, ಜುಲೈ 9: ಸುರತ್ಕಲ್ ಸಮೀಪದ ಕಾಟಿಪಳ್ಳದ ಅಲ್ ಬದ್ರಿಯಾ ಮದರಸಕ್ಕೆ ನುಗ್ಗಿ ಉಸ್ತಾದ್ ಮೇಲೆ ಹಲ್ಲೆ ನಡೆಸಿದ ಆರೋಪದಡಿ ದಂಪತಿ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಲಭ್ಯ ಮಾಹಿತಿಯಂತೆ, ಮದರಸೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 12 ವರ್ಷದ ಬಾಲಕನಿಗೆ ಶಿಸ್ತು ಕ್ರಮದ ಭಾಗವಾಗಿ ಉಸ್ತಾದ್ ಉಮರ್ ಫಾರೂಕ್ ಬೆತ್ತದಿಂದ ಹೊಡೆದಿದ್ದಾರೆ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಬಾಲಕನ ತಂದೆ ಸಂಬುದ್ದೀನ್ ಹಾಗೂ ಅವರ ಪತ್ನಿ ಮದರಸೆಗೆ ಆಗಮಿಸಿ ಉಸ್ತಾದ್ ಉಮರ್ ಫಾರೂಕ್ ಅವರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ಘಟನೆ ವೇಳೆ ಮದರಸೆಯೊಳಗೆ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಹಲ್ಲೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.ಈ ಸಂಬಂಧ ಅಲ್ ಬದ್ರಿಯಾ ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಎಂ.ಎ. ಹನೀಫ್ ನೀಡಿದ ದೂರಿನ ಮೇರೆಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಸಂಬುದ್ದೀನ್ ಹಾಗೂ ಅವರ ಪತ್ನಿಯ ವಿರುದ್ಧ ಪ್ರಕರಣ ದಾಖಲಾಗಿದೆ.ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಕಲಂ…

Read More

ಉಡುಪಿ, ಜು. 9: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಆದರ್ಶ ಆಸ್ಪತ್ರೆಯ ರಕ್ತಸಂಗ್ರಹ ಘಟಕ ಹಾಗೂ ಉಡುಪಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ಕುರಿತು ಹರಿದಾಡುತ್ತಿರುವ ಆರೋಪಗಳು ಮತ್ತು ವದಂತಿಗಳು ಸಂಪೂರ್ಣ ಆಧಾರರಹಿತವಾಗಿದ್ದು, ಆಸ್ಪತ್ರೆಗಳ ಕಾರ್ಯವೈಖರಿ ಕಾನೂನುಬದ್ಧ ಹಾಗೂ ಸರ್ಕಾರದ ನಿಯಮಾವಳಿಗಳ ಅನುಸಾರವೇ ನಡೆಯುತ್ತಿದೆ ಎಂದು ಆದರ್ಶ ಆಸ್ಪತ್ರೆಯ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ. ಆದರ್ಶ ಆಸ್ಪತ್ರೆಯಲ್ಲಿ ತೆರೆದ ಹೃದಯ ಶಸ್ತ್ರಚಿಕಿತ್ಸೆ, ಕ್ಯಾನ್ಸರ್ ಚಿಕಿತ್ಸೆಗಳು, ನರರೋಗ ಶಸ್ತ್ರಚಿಕಿತ್ಸೆಗಳು, ತುರ್ತು ಅಪಘಾತ ಚಿಕಿತ್ಸೆಗಳು ಸೇರಿದಂತೆ ಅನೇಕ ವಿಶೇಷ ಚಿಕಿತ್ಸಾ ವಿಭಾಗಗಳು ಕಾರ್ಯನಿರ್ವಹಿಸುತ್ತಿವೆ. ಇಂತಹ ಸಂಕೀರ್ಣ ಚಿಕಿತ್ಸೆಗಳಿಗಾಗಿ ಹೆಚ್ಚಿನ ಪ್ರಮಾಣದಲ್ಲಿ ಸುರಕ್ಷಿತ ರಕ್ತದ ಅಗತ್ಯವಿರುವುದರಿಂದ ಆಸ್ಪತ್ರೆಯಲ್ಲಿ ಅಧಿಕೃತ ಅನುಮತಿ ಪಡೆದ ರಕ್ತಸಂಗ್ರಹ ಘಟಕ (Blood Storage Centre) ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದೆ. ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ರಕ್ತನಿಧಿ (Blood Bank) ಅಲ್ಲ, ಬದಲಾಗಿ ಸಂಬಂಧಿತ ಅಧಿಕಾರಿಗಳ ಅನುಮತಿ ಹಾಗೂ ಪರವಾನಗಿಯೊಂದಿಗೆ ಕಾರ್ಯನಿರ್ವಹಿಸುವ ರಕ್ತಸಂಗ್ರಹ ಘಟಕವಾಗಿದೆ. ಈ ಘಟಕವು ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿಯಮಗಳು, ಆರೋಗ್ಯ ಇಲಾಖೆಯ ಮಾರ್ಗಸೂಚಿಗಳು…

Read More

ಮಂಗಳೂರು, ಜುಲೈ 9: ಸುರತ್ಕಲ್‌ನ ಕೃಷ್ಣಾಪುರದಲ್ಲಿ ಉಸ್ತಾದರೊಬ್ಬರ ಮೇಲೆ ನಡೆದಿರುವ ಹಲ್ಲೆ ಘಟನೆ ಅತ್ಯಂತ ಖಂಡನೀಯವಾಗಿದ್ದು, ಘಟನೆಯಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಪೊಲೀಸ್ ಇಲಾಖೆ ಯಾವುದೇ ಒತ್ತಡಕ್ಕೂ ಮಣಿಯದೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಅಧ್ಯಕ್ಷರು, ಸುರತ್ಕಲ್ ಮದರಸಾ ಮ್ಯಾನೇಜ್‌ಮೆಂಟ್ ಹಾಗೂ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಾಧ್ಯಕ್ಷ ಇಕ್ಬಲ್ ಮೂಲ್ಕಿ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಧಾರ್ಮಿಕ ಶಿಕ್ಷಣದ ಮೂಲಕ ಸಮಾಜದಲ್ಲಿ ನೈತಿಕ ಮೌಲ್ಯಗಳು, ಶಿಸ್ತು ಹಾಗೂ ಸೌಹಾರ್ದತೆಯನ್ನು ಬೆಳೆಸುವ ಜವಾಬ್ದಾರಿಯನ್ನು ಹೊತ್ತಿರುವ ಉಸ್ತಾದರ ಮೇಲೆ ಹಲ್ಲೆ ನಡೆಸಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತಹ ದುರ್ಘಟನೆಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ. ಯಾವುದೇ ವ್ಯಕ್ತಿಯ ವಿರುದ್ಧ ಅಸಮಾಧಾನ, ಭಿನ್ನಾಭಿಪ್ರಾಯ ಅಥವಾ ಆರೋಪಗಳಿದ್ದರೂ ಅವುಗಳನ್ನು ಕಾನೂನಿನ ಚೌಕಟ್ಟಿನೊಳಗೆ ಪರಿಹರಿಸಬೇಕು. ಮಸೀದಿ ಆಡಳಿತ ಮಂಡಳಿ, ಮದರಸಾ ಸಮಿತಿ ಅಥವಾ ಪೊಲೀಸ್ ಇಲಾಖೆಯ ಮೂಲಕ ಸೂಕ್ತ ದೂರು ನೀಡಿ ನ್ಯಾಯ ಪಡೆಯುವ ಅವಕಾಶ ಇರುವಾಗ, ಕಾನೂನನ್ನು ಕೈಗೆತ್ತಿಕೊಂಡು ಹಲ್ಲೆ ನಡೆಸುವುದು…

Read More

ಸುಳ್ಯ, ಜುಲೈ 8: ಜನತಾದಳ (ಜಾತ್ಯತೀತ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಮುಖ ಪದಾಧಿಕಾರಿಗಳ ಸಭೆಯು ಜುಲೈ 12ರಂದು ಸುಳ್ಯ ತಾಲೂಕು ಕಚೇರಿ ಬಳಿಯ ಬ್ರಹ್ಮ ಶ್ರೀ ಸಭಾಂಗಣದಲ್ಲಿ ರವಿವಾರ ಬೆಳಿಗ್ಗೆ 10 ಗಂಟೆಗೆ ಸುಳ್ಯ ತಾಲೂಕು ಅದ್ಯಕ್ಷ ಸುಕುಮಾರ್ ಕೋಡ್ತುಗುಳಿ ಯವರ ಅದ್ಯಕ್ಷತೆಯಲ್ಲಿ ಜರಗಲಿರುವುದು, ಪಕ್ಷದ ಸಂಘಟನೆ ಬಲವರ್ಧನೆ ಹಾಗೂ ತಳಮಟ್ಟದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬುವ ಉದ್ದೇಶದಿಂದ ಈ ಸಭೆಯನ್ನು ಆಯೋಜಿಸಲಾಗಿದೆ. ಸಭೆಯಲ್ಲಿ ಜಿಲ್ಲಾ ಸಂಘಟನೆಯನ್ನು ಇನ್ನಷ್ಟು ಬಲಿಷ್ಠಗೊಳಿಸುವ ಕುರಿತು ಸಮಗ್ರ ಚರ್ಚೆ ನಡೆಯಲಿದ್ದು, ಮುಂಬರುವ ರಾಜಕೀಯ ಬೆಳವಣಿಗೆಗಳು, ಸದಸ್ಯತ್ವ ಅಭಿಯಾನ, ಪಕ್ಷದ ಕಾರ್ಯಕ್ರಮಗಳ ವಿಸ್ತರಣೆ ಹಾಗೂ ಗ್ರಾಮ ಮಟ್ಟದಲ್ಲಿ ಸಂಘಟನೆಯನ್ನು ಪರಿಣಾಮಕಾರಿಯಾಗಿ ಮಾಡುವ ಬಗ್ಗೆ ವಿಶೇಷ ಕಾರ್ಯಯೋಜನೆ ರೂಪಿಸಲಾಗುತ್ತದೆ. ಸಭೆಯಲ್ಲಿ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಜಾಕೆ ಮಾಧವ ಗೌಡ ಹಾಗೂ ರಾಜ್ಯ ಉಪಾಧ್ಯಕ್ಷರಾದ ಎಂ.ಬಿ ಸದಾಶಿವರವರು, ಮಾಜಿ ಜಿಲ್ಲಾದ್ಯಕ್ಷರಾದ ಮಹಮ್ಮದ್ ಕುಂಇ್, ಜಿಲ್ಲಾ ಕಾರ್ಯದ್ಯಕ್ಷರುಗಳಾದ ಇಕ್ಬಲ್ ಅಹಮದ್ ಮುಲ್ಕಿ , ವಸಂತ ಪೂಜಾರಿ , ಶಶಿರಾಜ್…

Read More

ಪುತ್ತೂರು, ಜುಲೈ 8: ಕಂಬಳ ಕ್ಷೇತ್ರದ ಖ್ಯಾತ ವೀಕ್ಷಕ ವಿವರಣೆಗಾರ, ಕಾಂಗ್ರೆಸ್ ಮುಖಂಡ ಹಾಗೂ ಪುತ್ತೂರು ಭೂನ್ಯಾಯ ಮಂಡಳಿ ಸದಸ್ಯ ನಿರಂಜನ್ ರೈ ಮಠಂತಬೆಟ್ಟು (60) ಅವರು ಬುಧವಾರ ಹೃದಯಾಘಾತದಿಂದ ನಿಧನ ಹೊಂದಿದರು. ಪುತ್ತೂರಿನ ಸಹಾಯಕ ಆಯುಕ್ತರ ಕಚೇರಿಯಲ್ಲಿ ನಡೆಯುತ್ತಿದ್ದ ಭೂನ್ಯಾಯ ಮಂಡಳಿ ನ್ಯಾಯಾಲಯದ ಕಲಾಪದಲ್ಲಿ ಭಾಗವಹಿಸಿದ್ದ ವೇಳೆ ಅವರಿಗೆ ಏಕಾಏಕಿ ತೀವ್ರ ಹೃದಯಾಘಾತ ಸಂಭವಿಸಿ ಕುಸಿದುಬಿದ್ದರು. ತಕ್ಷಣವೇ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ವೈದ್ಯರ ಎಲ್ಲಾ ಪ್ರಯತ್ನಗಳ ನಡುವೆಯೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು. ನಿರಂಜನ್ ರೈ ಮಠಂತಬೆಟ್ಟು ಅವರು ಕಂಬಳ ಲೋಕದಲ್ಲಿ ತಮ್ಮ ವಿಶಿಷ್ಟ ತುಳು ವೀಕ್ಷಕ ವಿವರಣೆ ಹಾಗೂ ಮನಮೋಹಕ ನಿರೂಪಣೆಯ ಮೂಲಕ ಅಪಾರ ಜನಮನ್ನಣೆ ಗಳಿಸಿದ್ದರು. ಅವರ ಧ್ವನಿ ಮತ್ತು ಶೈಲಿ ಕಂಬಳ ಪ್ರೇಮಿಗಳ ಮನಸ್ಸಿನಲ್ಲಿ ವಿಶೇಷ ಸ್ಥಾನ ಪಡೆದಿತ್ತು. ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿಯೂ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಕೋಡಿಂಬಾಡಿ ಮಹಿಷಮರ್ದಿನಿ ದೇವಳದ ಆಡಳಿತ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ, ಪುತ್ತೂರು ಕೋಟಿ-ಚೆನ್ನಯ ಕಂಬಳ…

Read More

ಉಡುಪಿ, ಜುಲೈ 8: ಉಡುಪಿ ಜಿಲ್ಲೆಯ ಹಿರಿಯಡ್ಕ ಸಮೀಪದ ಖಾಸಗಿ ರೆಸಾರ್ಟ್‌ನಲ್ಲಿ ಅಂದರ್-ಬಾಹರ್ ಇಸ್ಪೀಟು ಜುಗಾರಿ ಆಟ ನಡೆಯುತ್ತಿದ್ದ ವೇಳೆ ಪೊಲೀಸರು ದಿಢೀರ್ ದಾಳಿ ನಡೆಸಿ 26 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಮಾಹಿತಿಯ ಪ್ರಕಾರ, ರೆಸಾರ್ಟ್‌ನಲ್ಲಿ ಮೆಹಂದಿ ಕಾರ್ಯಕ್ರಮ ಮುಕ್ತಾಯಗೊಂಡ ಬಳಿಕ ಕೆಲವರು ಸೇರಿ ಹಣ ಪಣಕ್ಕಿಟ್ಟು ಅಂದರ್-ಬಾಹರ್ ಜುಗಾರಿ ಆಟದಲ್ಲಿ ತೊಡಗಿದ್ದರು. ಈ ಜುಗಾರಿ ಅಡ್ಡೆಯಲ್ಲಿ ಕೆಲವು ಉದ್ಯಮಿಗಳು ಸಹ ಭಾಗಿಯಾಗಿದ್ದರು ಎನ್ನಲಾಗಿದೆ.ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ 26 ಮಂದಿಯನ್ನು ವಶಕ್ಕೆ ಪಡೆದು, ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳದಿಂದ ಜುಗಾರಿ ಆಟಕ್ಕೆ ಬಳಸಲಾಗುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಂಡಿರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.ಬಂಧಿತರ ಸಂಪೂರ್ಣ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದ್ದು, ವಶಕ್ಕೆ ಪಡೆದವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಬಹಿರಂಗವಾಗುವ ನಿರೀಕ್ಷೆಯಿದೆ.

Read More

ಬೆಂಗಳೂರು, ಜುಲೈ 8: ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ ನಡೆಸುವ ಪ್ರಕ್ರಿಯೆಗೆ ರಾಜ್ಯ ಚುನಾವಣಾ ಆಯೋಗ ಅಧಿಕೃತವಾಗಿ ವೇಗ ನೀಡಿದೆ. ರಾಜ್ಯ ಸರ್ಕಾರದಿಂದ ಚುನಾವಣೆ ಸಿದ್ಧತೆಗಳಿಗೆ ಸಂಬಂಧಿಸಿದಂತೆ ಮಹತ್ವದ ಸೂಚನೆಗಳನ್ನು ಈಗಾಗಲೇ ಹೊರಡಿಸಲಾಗಿದ್ದು, ಗ್ರಾಮೀಣ ಭಾಗದಲ್ಲಿ ಚುನಾವಣೆಯ ಕಾವೇರತೊಡಗಿದೆ.2027ರ ಮಾರ್ಚ್ ಅಂತ್ಯದೊಳಗೆ ಅವಧಿ ಮುಕ್ತಾಯಗೊಳ್ಳಲಿರುವ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಹೊಸದಾಗಿ ಪುನರ್‌ರಚನೆಯಾಗಿರುವ 42 ಗ್ರಾಮ ಪಂಚಾಯಿತಿಗಳಿಗೆ ನಿಗದಿತ ಅವಧಿಯಲ್ಲಿ ಚುನಾವಣೆ ನಡೆಸುವ ಉದ್ದೇಶದಿಂದ ಜಿಲ್ಲಾಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆಯೋಗ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.ಚುನಾವಣೆ ಪ್ರಕ್ರಿಯೆಯನ್ನು ಅತ್ಯಂತ ಸುಗಮ ಮತ್ತು ಪಾರದರ್ಶಕವಾಗಿ ನಡೆಸಲು ಆಯೋಗ ಅಧಿಕಾರಿಗಳಿಗೆ ಹೊಸದೊಂದು ಮಾರ್ಗಸೂಚಿಯನ್ನು ಸಿದ್ಧಪಡಿಸಿದೆ. ಇದರ ಪ್ರಕಾರ, ಪ್ರತಿ ಗ್ರಾಮ ಪಂಚಾಯಿತಿಗೊಂದು ‘ಗ್ರೂಪ್-ಬಿ’ ವರ್ಗದ ಅಧಿಕಾರಿಯನ್ನು ಚುನಾವಣಾಧಿಕಾರಿಯಾಗಿ ನೇಮಿಸಲಾಗುತ್ತದೆ. ಈ ಚುನಾವಣಾಧಿಕಾರಿಗಳ ಕೆಲಸದಲ್ಲಿ ನಿರ್ವಾಹಕರು, ಶಿರಸ್ತೇದಾರ್, ಸೂಪರಿಂಟೆಂಡೆಂಟ್ ಅಥವಾ ವ್ಯವಸ್ಥಾಪಕ ಹುದ್ದೆಯ ಅಧಿಕಾರಿಗಳನ್ನು ಸಹಾಯಕ ಚುನಾವಣಾಧಿಕಾರಿಗಳಾಗಿ ನಿಯೋಜಿಸಲು ಸೂಚಿಸಲಾಗಿದೆ. ಯಾರದ್ದೇ ಕಾರಣಕ್ಕೂ ಅಧಿಕಾರಿಗಳ ಸ್ವಂತ ಊರು ಅಥವಾ ಅವರ ಕ್ಷೇತ್ರಕ್ಕೆ ಅವರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಬಾರದು…

Read More

ಹೆಬ್ರಿ, ಜುಲೈ 7: ಹೆಬ್ರಿ ತಾಲೂಕಿನಲ್ಲಿ ಪೊಲೀಸ್ ಇಲಾಖೆ, ಸರ್ಕಾರಿ ಶಾಲೆಗಳು ಹಾಗೂ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಉಂಟಾಗಿರುವ ತೀವ್ರ ಸಿಬ್ಬಂದಿ ಕೊರತೆಯನ್ನು ತುರ್ತಾಗಿ ನಿವಾರಿಸಿ, ಖಾಲಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಒತ್ತಾಯಿಸಿ ಜೆಡಿಎಸ್ ಹೆಬ್ರಿ ತಾಲೂಕು ಅಧ್ಯಕ್ಷ ಶ್ರೀಕಾಂತ್ ಪೂಜಾರಿ ಕುಚ್ಚೂರು ಅವರು ಉಡುಪಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಮನವಿಯಲ್ಲಿ, ಹೆಬ್ರಿ ತಾಲೂಕಿನ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕೊರತೆಯಿಂದ ಸಾರ್ವಜನಿಕರಿಗೆ ಅಗತ್ಯ ಸೇವೆಗಳು ಸಮರ್ಪಕವಾಗಿ ದೊರೆಯುತ್ತಿಲ್ಲ. ಇದರಿಂದ ಜನರು ದಿನನಿತ್ಯ ಸರ್ಕಾರಿ ಕಚೇರಿಗಳಿಗೆ ಅಲೆದಾಡುವಂತಾಗಿದ್ದು, ಆಡಳಿತದ ಕಾರ್ಯಕ್ಷಮತೆಯ ಮೇಲೂ ಪ್ರತಿಕೂಲ ಪರಿಣಾಮ ಉಂಟಾಗಿದೆ ಎಂದು ತಿಳಿಸಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಅಗತ್ಯ ಸಂಖ್ಯೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇಲ್ಲದಿರುವ ಕಾರಣ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಅಪರಾಧ ತಡೆಗಟ್ಟುವುದು, ಸಾರ್ವಜನಿಕರ ದೂರುಗಳಿಗೆ ತ್ವರಿತ ಸ್ಪಂದನೆ ನೀಡುವುದು ಹಾಗೂ ಸಂಚಾರ ನಿಯಂತ್ರಣ ಸೇರಿದಂತೆ ಹಲವು ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ತೊಂದರೆಯಾಗುತ್ತಿದೆ. ಈ ಪರಿಸ್ಥಿತಿ ಸಾರ್ವಜನಿಕರಲ್ಲಿ ಆತಂಕವನ್ನು ಉಂಟುಮಾಡಿದೆ…

Read More

ಮಂಗಳೂರು, ಜುಲೈ 7: ಕೆಲವೇ ವರ್ಷಗಳ ಹಿಂದೆ ತೀವ್ರ ಹೃದಯಾಘಾತವಾದರೆ ಸರ್ಕಾರಿ ಆಸ್ಪತ್ರೆಯ ರೋಗಿಗಳು ದುಬಾರಿ ಖಾಸಗಿ ಆಸ್ಪತ್ರೆಗಳತ್ತ ಅಥವಾ ದೂರದ ನಗರಗಳತ್ತ ಧಾವಿಸಬೇಕಾಗುತ್ತಿತ್ತು. ಚಿಕಿತ್ಸೆಯಲ್ಲಿ ಉಂಟಾಗುತ್ತಿದ್ದ ವಿಳಂಬ ಅನೇಕ ಜೀವಗಳನ್ನು ಕಸಿದುಕೊಳ್ಳುತ್ತಿತ್ತು. ಆದರೆ ಇಂದು ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ಮಂಗಳೂರಿನ ಸರ್ಕಾರಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಕ್ಯಾಥ್ ಲ್ಯಾಬ್ ಸಾವಿರಾರು ಕುಟುಂಬಗಳಿಗೆ ಹೊಸ ಜೀವ ತುಂಬುವ ಕೇಂದ್ರವಾಗಿ ರೂಪುಗೊಂಡಿದೆ. 2025ರ ಸೆಪ್ಟೆಂಬರ್ 21ರಂದು ಕೆಎಂಸಿ ಮಂಗಳೂರು ಸಹಭಾಗಿತ್ವದಲ್ಲಿ ಸಾರ್ವಜನಿಕ–ಖಾಸಗಿ ಪಾಲುದಾರಿಕೆ (PPP) ಮಾದರಿಯಲ್ಲಿ ಆರಂಭಗೊಂಡ ಈ ಅತ್ಯಾಧುನಿಕ ಕ್ಯಾಥ್ ಲ್ಯಾಬ್, ಕೇವಲ ಕೆಲವೇ ತಿಂಗಳಲ್ಲಿ 1,000ಕ್ಕೂ ಅಧಿಕ ಯಶಸ್ವಿ ಹೃದಯ ಚಿಕಿತ್ಸಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಮಾದರಿ ಯೋಜನೆಯಾಗಿ ಹೊರಹೊಮ್ಮಿದೆ. ಆಡಳಿತ, ವೈದ್ಯಕೀಯ ಪರಿಣತಿ ಮತ್ತು ತಂಡದ ಸಮರ್ಪಣೆಯ ಫಲ ಈ ಸಾಧನೆಯ ಹಿಂದೆ ಹಲವರ ಪರಿಶ್ರಮ ಅಡಗಿದೆ. ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಶಿವಪ್ರಕಾಶ್ (DMO) ಅವರ ಆಡಳಿತಾತ್ಮಕ ನಾಯಕತ್ವ, ಹಿರಿಯ ಹೃದಯ ತಜ್ಞ ಡಾ. ನರಸಿಂಹ…

Read More

ಮಂಗಳೂರು, ಜುಲೈ 7: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 41ನೇ ಸೆಂಟ್ರಲ್ ವಾರ್ಡಿನ ಮಹಾಮ್ಮಾಯ ದೇವಸ್ಥಾನದ ಹಿಂಭಾಗದ ಚರಂಡಿಯ ಉಳಿದ ಕಾಮಗಾರಿ ಹಾಗೂ ಗೌರಿಮಠ ರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಸ್ಥಳೀಯ ನಿವಾಸಿಗಳ ಬಹುಕಾಲದ ಬೇಡಿಕೆಗೆ ಸ್ಪಂದಿಸಿ ₹60 ಲಕ್ಷ ವಿಶೇಷ ಅನುದಾನದಲ್ಲಿ ಈ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು. ಚರಂಡಿ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಸಾರ್ವಜನಿಕರಿಗೆ ಉತ್ತಮ ಮೂಲಸೌಕರ್ಯ ದೊರೆಯಲಿದ್ದು, ಸಂಚಾರ ಹಾಗೂ ಮಳೆಗಾಲದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಲಿದೆ. ಕಾಮಗಾರಿಯನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಸಮರ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ನಿಕಟಪೂರ್ವ ಸದಸ್ಯೆ ಶ್ರೀಮತಿ ಪೂರ್ಣಿಮಾ, ಮಂಡಲದ ಪ್ರರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ, ವಾರ್ಡಿನ ಪ್ರಮುಖರಾದ ಮುರಳೀಧರ್…

Read More