Author: Tulunada Surya

ಮಂಗಳೂರು : ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ಪಕ್ಷದ ವರಿಷ್ಠ ನಾಯಕ, ರಾಜಕೀಯ ಭೀಷ್ಮ, ಹಿರಿಯ ಮುತ್ಸದ್ದಿ ಹಾಗೂ “ಮಣ್ಣಿನ ಮಗ” ಎಂದೇ ಖ್ಯಾತರಾಗಿರುವ ಕರ್ನಾಟಕ ರತ್ನ ಶ್ರೀ ಹೆಚ್.ಡಿ. ದೇವೇಗೌಡ ಅವರ ಹುಟ್ಟುಹಬ್ಬದ ಅಂಗವಾಗಿ ದಕ್ಷಿಣಕನ್ನಡ ಜಿಲ್ಲಾ ಯುವ ಜನತಾದಳ (ಜಾತ್ಯತೀತ) ವತಿಯಿಂದ ನಿರಾಶ್ರಿತರಿಗೆ ಊಟ ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಜನ್ಮದಿನವನ್ನು ಆಚರಿಸಲಾಯಿತು. ದಕ್ಷಿಣಕನ್ನಡ ಜಿಲ್ಲಾ ಯುವ ಜನತಾದಳದ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಅವರ ನೇತೃತ್ವದಲ್ಲಿ ನಗರದಲ್ಲಿರುವ ನಿರಾಶ್ರಿತರಿಗೆ ಅನ್ನಸಂತರ್ಪಣೆ ನಡೆಸಿ, ಸಮಾಜಮುಖಿ ಕಾರ್ಯದ ಮೂಲಕ ದೇವೇಗೌಡರವರ ಜನ್ಮದಿನಕ್ಕೆ ವಿಶೇಷ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ದಕ್ಷಿಣಕನ್ನಡ ಜಿಲ್ಲಾ ಯುವ ಜನತಾದಳದ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಅವರು, “ಈ ದೇಶದ 11ನೇ ಪ್ರಧಾನಮಂತ್ರಿಯಾಗಿ ಹೆಚ್.ಡಿ. ದೇವೇಗೌಡರು ತಮ್ಮ ಅಧಿಕಾರಾವಧಿಯಲ್ಲಿ ರೈತಪರ, ಜನಪರ ಮತ್ತು ಅಭಿವೃದ್ಧಿ ಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮಹಿಳಾ ಮೀಸಲಾತಿ, ಕಾಶ್ಮೀರ ಸಮಸ್ಯೆ ಪರಿಹಾರಕ್ಕೆ ಕೈಗೊಂಡ ಕ್ರಮಗಳು, ರೈತರಿಗೆ ರಸಗೊಬ್ಬರ ಸಬ್ಸಿಡಿ, ಕಾವೇರಿ ಹಾಗೂ ಮಹಾದಾಯಿ ನೀರಿನ…

Read More

ಕಾಪು : ಮಜೂರು ಪ್ರೀಮಿಯರ್ ಲೀಗ್ -2026 ಎಂ.ಪಿ.ಎಲ್ ಸೀಸನ್ 05 ಇದರ ಉದ್ಘಾಟನೆಯನ್ನು ಕಾಪು ಪೊಲೀಸ್ ವೃತ್ತ ನಿರೀಕ್ಷಕರಾದ ಆಜ್ಮತ್ ಆಲಿರವರು ನೆರವೇರಿಸಿದರು ನೆರವರೆಸಿ ಮಾತನಾಡಿದ ಅವರು ಈ ರೀತಿಯ ಕ್ರೀಡಾಕೂಟ ಆಯೋಜಿಸಿದ ಯುವಕರ ಬಗ್ಗೆ ಮೆಚ್ಚುಗೆ ವಹಿಸಿದರು ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ಇಲ್ಲಿಯಯುವಕರು ಸಾಮಾಜಿಕ ಕಳಕಳಿ ಹಾಗೂ ಕ್ರೀಡಾಕೂಟಕ್ಕೆ ನೀಡುತ್ತಿರುವ ಪ್ರೋತ್ಸಾಹ ನಿಜಕ್ಕೂ ಸ್ಲಾಘನೀಯ ಎಂದು ಪ್ರೋತ್ಸಹಿಸಿ ಮಾತನಾಡಿದರು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರು ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ ಪ್ರಥಮ ಬಹುಮಾನ ಪಡೆದ ಫೈಝಿ ಬಾಯ್ಸ್ ಹಾಗೂ ದ್ವಿತೀಯ ಬಹುಮಾನ ಪಡೆದ ಫ್ರೆಂಡ್ಸ್ ಮಜೂರು ತಂಡಕ್ಕೆ ಶುಭ ಹಾರೈಸಿದರು ಅತಿಥಿಗಳಾಗಿ ಭಾಗವಹಿಸಿದ ಬದ್ರಿಯ ಜುಮ್ಮಾ ಮಸ್ಜಿದ್ ಮಲ್ಲಾರು-ಮಜೂರು ಅಧ್ಯಕ್ಷರಾದ ಡಾ.ಫಾರೂಕ್ ಚಂದ್ರನಗರ ಮಾತನಾಡಿ ಈ ಕ್ರೀಡಾಕೂಟಕ್ಕೆ ಸಹಕರಿಸಿದ ಪ್ರತಿಯೊಬ್ಬರಿಗೆ ಕೃತಜ್ಞತೆ ಸಲ್ಲಿಸಿದರು ಅನಿವಾಸಿ ಭಾರತೀಯ ಉದ್ಯಮಿ ರೈಟ್ ಚಾಯ್ಸ್ ಇದರ ಮಾಲಕರಾದ ಆಯಾಜ್ ಕೈಕಂಬ,…

Read More

ಮೂಡುಬಿದಿರೆ — ಇಲ್ಲಿನ ಅಚ್ಚರಕಟ್ಟೆ ಪಡುಮಾರ್ನಾಡು ದ.ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಇತ್ತೀಚೆಗೆ ಯಶಸ್ವಿಯಾಗಿ ಸಂಪನ್ನಗೊಂಡಿತು. ಶಿಬಿರದಲ್ಲಿ ಒಟ್ಟು 38 ಮಕ್ಕಳು ಪಾಲ್ಗೊಂಡಿದ್ದು ಈ ಸಂದರ್ಭದಲ್ಲಿ ಮಕ್ಕಳಿಗೆ , ಸಿರಿ ಆರ್ಟ್, ಕ್ರಿಕೆಟ್, ಬಲೂನ್ ಆಟಗಳನ್ನು ಆಡಿಸಲಾಯಿತು. ಮಧ್ಯಾಹ್ನ ಸಿಹಿ ಭೋಜನದ ನಂತರ, ಸಮಾರೋಪ ಸಮಾರಂಭ ನಡೆಯಿತು.ಈ ಕಾರ್ಯಕ್ರಮದಲ್ಲಿ ಪಂಚಾಯತ್ ಆಡಳಿತಧಿಕಾರಿ ಡಾ.ಮಲ್ಲಿಕಾರ್ಜುನ,ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಾಯಿಶ್ ಚೌಟ ,ಅಚ್ಚರಕಟ್ಟೆ ಶಾಲೆಯ ಸ್ಥಾಪಕಾಧ್ಯಕ್ಷರೂ ಮತ್ತು ಪಡುಮಾರ್ನಾಡು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರಾದ ಎಂ ದಯಾನಂದ ಪೈ, ಶಾಲಾ ಮುಖ್ಯ ಶಿಕ್ಷಕಿ ಶಕುಂತಲಾ ಶೆಟ್ಟಿ, ಶಿಕ್ಷಕಿ ಶ್ರೀಮತಿ ನಾಗಶ್ರೀ, ರಾಜು ,ಗ್ರಂಥ ಪಾಲಕಿ ವನಿತಾ ಉಪಸ್ಥಿತರಿದ್ದರು. ಹಾಗೂ ಮಕ್ಕಳ ಪೋಷಕರು, ಗ್ರಾಮಸ್ಥರು ಈ ಕಾರ್ಯಕ್ರಮ ದಲ್ಲಿ ಉತ್ಸಾಹದಲ್ಲಿ ಪಾಲ್ಗೊಂಡಿದ್ದರು. ಮಕ್ಕಳೇ ನಿರ್ವಹಿಸಿದಂಥ ಈ ಸಮಾರಂಭದಲ್ಲಿ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮಕ್ಕಳು ಬೇಸಿಗೆ ಶಿಬಿರದ ಅನಿಸಿಕೆ, ಗಂಡು ಮಕ್ಕಳು ಮಾದಕ ದ್ರವ್ಯ ನಿರ್ಮೂಲನೆ…

Read More

ಮಂಗಳೂರು: ಮಾಜಿ ಪ್ರಧಾನಮಂತ್ರಿ, ಜನತಾದಳ (ಜಾತ್ಯತೀತ) ಪಕ್ಷದ ಹಿರಿಯ ನಾಯಕ ಹಾಗೂ ದೇಶದ ಹಿರಿಯ ರಾಜಕಾರಣಿಗಳಾದ ಶ್ರೀ ಎಚ್.ಡಿ. ದೇವೇಗೌಡರವರ ಜನ್ಮದಿನದ ಅಂಗವಾಗಿ ಜನತಾದಳ (ಜಾತ್ಯತೀತ) ಪಕ್ಷದ ವತಿಯಿಂದ ಮಂಗಳೂರಿನ ಲೇಡಿಗೋಷನ್ ಸಮೀಪದ ರೆಡ್ ಕ್ರಾಸ್ ರಕ್ತ ನಿಧಿ ಕೇಂದ್ರದಲ್ಲಿ ಅರ್ಥಪೂರ್ಣ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ದೇವೇಗೌಡರವರ ಜನ್ಮದಿನವನ್ನು ಆಚರಿಸುವ ಉದ್ದೇಶದಿಂದ ಆಯೋಜಿಸಲಾದ ಈ ಶಿಬಿರದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಯುವಕರು ಉತ್ಸಾಹದಿಂದ ಭಾಗವಹಿಸಿದರು. ಕಾರ್ಯಕ್ರಮವನ್ನು ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಶ್ರೀ ಜಾಕೆ ಮಾಧವ ಗೌಡ ಉದ್ಘಾಟಿಸಿ ಮಾತನಾಡಿ, “ಶ್ರೀ ಎಚ್.ಡಿ. ದೇವೇಗೌಡರು ತಮ್ಮ ರಾಜಕೀಯ ಜೀವನದುದ್ದಕ್ಕೂ ರೈತರು, ಬಡವರು ಹಾಗೂ ಹಿಂದುಳಿದ ವರ್ಗಗಳ ಪರವಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಜನ್ಮದಿನವನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ, ಸಮಾಜಕ್ಕೆ ಉಪಯೋಗವಾಗುವ ಸೇವಾ ಕಾರ್ಯಗಳ ಮೂಲಕ ಸ್ಮರಿಸುವುದು ಪಕ್ಷದ ಉದ್ದೇಶವಾಗಿದೆ. ರಕ್ತದಾನವು ಮಾನವೀಯತೆಯ ಪ್ರತೀಕವಾಗಿದ್ದು, ಒಂದು ರಕ್ತದಾನ ಹಲವಾರು ಜೀವಗಳನ್ನು ಉಳಿಸಬಲ್ಲದು. ಯುವಜನತೆ ಇಂತಹ ಶಿಬಿರಗಳಲ್ಲಿ…

Read More

ಬೆಂಜನಪದವಿನಲ್ಲಿ ವಿಶೇಷ ಪೂಜೆ; ಹೊಸ ಸಿನಿಮಾಗಳ ಯಶಸ್ಸಿಗೆ ದೈವದ ಆಶೀರ್ವಾದ ಪಡೆದ ‘ಡಿಂಪಲ್ ಕ್ವೀನ್’ ರಚಿತಾ ರಾಮ್ ಅವರು ತುಳುನಾಡಿನ ಆರಾಧ್ಯ ಕಾರಣಿಕ ದೈವವಾದ ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ಹರಕೆ ಕೋಲ ಸೇವೆ ಸಲ್ಲಿಸಿ ಭಕ್ತಿಭಾವ ಮೆರೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನಲ್ಲಿರುವ ಪ್ರಸಿದ್ಧ ಕೊರಗಜ್ಜ ಕ್ಷೇತ್ರಕ್ಕೆ ಆಗಮಿಸಿದ ನಟಿ, ಶ್ರದ್ಧಾಭಕ್ತಿಯಿಂದ ವಿಶೇಷ ಪೂಜೆ ಸಲ್ಲಿಸಿ ತಮ್ಮ ಹರಕೆಯನ್ನು ನೆರವೇರಿಸಿದರು. ಕೆಲವು ಪ್ರಮುಖ ಕೆಲಸಗಳು ಯಶಸ್ವಿಯಾಗಿ ನೆರವೇರಿದರೆ ಕೊರಗಜ್ಜ ದೈವಕ್ಕೆ ಕೋಲ ಸೇವೆ ನೀಡುವುದಾಗಿ ಅವರು ಹಿಂದೆ ಹರಕೆ ಹೊತ್ತಿದ್ದು, ಇದೀಗ ಅದು ಈಡೇರಿದ ಹಿನ್ನೆಲೆಯಲ್ಲಿ ಸನ್ನಿಧಿಗೆ ಭೇಟಿ ನೀಡಿ ಸೇವೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ತುಳುನಾಡಿನ ದೈವಾರಾಧನೆ ಮತ್ತು ಕೋಲ ಸಂಪ್ರದಾಯದ ಬಗ್ಗೆ ವಿಶೇಷ ಭಕ್ತಿ ಹೊಂದಿರುವ ಅನೇಕ ಸಿನಿತಾರೆಯರಂತೆ, ರಚಿತಾ ರಾಮ್ ಕೂಡ ದೈವದ ಆಶೀರ್ವಾದ ಪಡೆಯಲು ಕ್ಷೇತ್ರಕ್ಕೆ ಭೇಟಿ ನೀಡಿರುವುದು ಭಕ್ತರಲ್ಲಿ ಸಂತಸ ಮೂಡಿಸಿದೆ. ಸನ್ನಿಧಿಯಲ್ಲಿ ಅವರ ಸರಳತೆ ಹಾಗೂ ಭಕ್ತಿಭಾವ ಸ್ಥಳೀಯರ ಗಮನ…

Read More

ಉಡುಪಿ : ಜನತಾದಳ (ಜಾತ್ಯತೀತ) ಪಕ್ಷದ ಉಡುಪಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾಗಿ ಜಯ ಪೂಜಾರಿ ಲಕ್ಷ್ಮೀನಗರ ಅವರನ್ನು ನೇಮಕ ಮಾಡಲಾಗಿದೆ. ಪಕ್ಷದ ಉಡುಪಿ ಜಿಲ್ಲಾಧ್ಯಕ್ಷ ಯೋಗಿಶ್ ವಿ. ಶೆಟ್ಟಿ ಅವರು ನೇಮಕಾತಿ ಆದೇಶ ಪತ್ರವನ್ನು ನೀಡಿ, ಈ ನೇಮಕ ತಕ್ಷಣದಿಂದಲೇ ಜಾರಿಗೆ ಬರುತ್ತದೆ ಎಂದು ತಿಳಿಸಿದ್ದಾರೆ. ಜಯ ಪೂಜಾರಿ ಲಕ್ಷ್ಮೀನಗರ ಅವರು ಹಲವು ಸಾಮಾಜಿಕ ಹಾಗೂ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದು, ಪಕ್ಷ ಸಂಘಟನೆಗೆ ಅವರ ಕೊಡುಗೆಯನ್ನು ಪರಿಗಣಿಸಿ ಈ ಮಹತ್ವದ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ಯೋಗಿಶ್ ವಿ. ಶೆಟ್ಟಿ ಹೇಳಿದ್ದಾರೆ. ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಿ, ಕಾರ್ಯಕರ್ತರನ್ನು ಒಗ್ಗೂಡಿಸಿ ಸಂಘಟನಾತ್ಮಕ ಚಟುವಟಿಕೆಗಳನ್ನು ಚುರುಕುಗೊಳಿಸುವ ಜವಾಬ್ದಾರಿ ಜಯ ಪೂಜಾರಿ ಅವರ ಮೇಲಿದೆ ಎಂದು ಅವರು ತಿಳಿಸಿದ್ದಾರೆ. ಈ ನೇಮಕಾತಿಯಿಂದ ಕ್ಷೇತ್ರದಲ್ಲಿ ಪಕ್ಷಕ್ಕೆ ಹೊಸ ಚೈತನ್ಯ ದೊರೆಯಲಿದ್ದು, ಮುಂದಿನ ದಿನಗಳಲ್ಲಿ ಜೆಡಿಎಸ್ ಸಂಘಟನೆ ಇನ್ನಷ್ಟು ಬಲಗೊಳ್ಳಲಿದೆ ಎಂಬ ವಿಶ್ವಾಸವನ್ನು ನಾಯಕರು ವ್ಯಕ್ತಪಡಿಸಿದ್ದಾರೆ.ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್…

Read More

Kapu : ಕರಾವಳಿಯ ಸಂಸ್ಕೃತಿ, ಭಕ್ತಿ ಮತ್ತು ಪರಂಪರೆಯ ಅದ್ಭುತ ಸಂಯೋಜನೆಯಾದ ಬ್ರಹ್ಮಮುಗ್ಗೇರ್ಕಳ ಪಿಲಿಚಂಡಿ ದೈವಸ್ಥಾನದ ದ್ವೈವಾರ್ಷಿಕ ಪಿಲಿಕೋಲ ಶನಿವಾರ ಭಾರೀ ಭಕ್ತಿ ಭಾವದಿಂದ ನೆರವೇರಿತು. ಮಧ್ಯಾಹ್ನ 3 ಗಂಟೆಗೆ ಆರಂಭವಾದ ಈ ಅಪರೂಪದ ಆಚರಣೆ ಸಂಜೆವರೆಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ಜರುಗಿತು. ಸಂಪ್ರದಾಯದಂತೆ ಹುಲಿ ವೇಷ ಧರಿಸುವ ದೈವ ನರ್ತಕನಿಗೆ ಮೊದಲು ಪವಿತ್ರ ಸ್ನಾನ ಮಾಡಿಸಿ, ಬಳಿಕ ತೆಂಗಿನ ಗರಿಯಿಂದ ನಿರ್ಮಿಸಿದ ವಿಶೇಷ ಪಂಜರದೊಳಗೆ ಬಣ್ಣಗಾರಿಕೆಗೆ ಕಳುಹಿಸಲಾಯಿತು. ದೇಹಕ್ಕೆ ಹುಲಿ ರೂಪದ ಬಣ್ಣ ಬಳಿದ ಬಳಿಕ ಪಟೇಲರ ಅನುಮತಿ ಪಡೆದು, ಪಿಲಿಚಂಡಿ ಮನೆಯವರು ತೀರ್ಥ ಚಿಮುಕಿಸುವ ಮೂಲಕ ದೈವ ನರ್ತಕನು ಪಂಜರದಿಂದ ಹೊರಬಂದು ಪಿಲಿಕೋಲಕ್ಕೆ ಚಾಲನೆ ನೀಡಿದರು. ಅದಾದ ಬಳಿಕ ಪಿಲಿ ದೈವವು ಬ್ರಹ್ಮರಗುಂಡಕ್ಕೆ ಮೂರು ಸುತ್ತು ಪ್ರದಕ್ಷಿಣೆ ಹಾಕಿ, ಹಳೆ ಮಾರಿಯಮ್ಮ ಗುಡಿಯ ಸಮೀಪ ನೆಟ್ಟಿದ್ದ ಕಂಬವನ್ನೇರಿ ಅದರಲ್ಲಿದ್ದ ಕೋಳಿಯನ್ನು ಬಲಿಯಾಗಿ ಸ್ವೀಕರಿಸಿ ಬೇಟೆಯ ಸಂಪ್ರದಾಯ ನೆರವೇರಿಸಿತು. ಬಳಿಕ ವಿವಿಧ ಪ್ರದೇಶಗಳಿಗೆ ತೆರಳಿ ಹಾಲು ಹಾಗೂ ಸೀಯಾಳ…

Read More

ಮಂಗಳೂರು, ಮೇ 17: ನಗರದ ಕುಂಟಿಕಾನ ಸಮೀಪದ ಆಟೋಲೈನ್ಸ್ ಡೆಲಿವರಿ ಸಂಸ್ಥೆಯ ಕಟ್ಟಡದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದ ಯುವಕ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ.ಮೃತರನ್ನು ಬೆಳಗಂಡಿ ತಾಲೂಕಿನ ಬೆಳಾಲು ಗ್ರಾಮದ ಪೊಂಜಿಕರೆ ನಿವಾಸಿ ನಾಫಲ್ (28) ಎಂದು ಗುರುತಿಸಲಾಗಿದೆ. ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ನಾಫಲ್ ಅವರು ಲಿಫ್ಟ್ ಮೂಲಕ ಮೇಲ್ಮಹಡಿಗೆ ತೆರಳುತ್ತಿದ್ದ ವೇಳೆ ಲಿಫ್ಟ್ ನೆಲಮಹಡಿ ಮತ್ತು ಮೊದಲ ಮಹಡಿ ನಡುವಿನ ಭಾಗದಲ್ಲಿ ತಾಂತ್ರಿಕ ದೋಷದಿಂದ ಸ್ಥಗಿತಗೊಂಡಿತ್ತು ಎಂದು ತಿಳಿದು ಬಂದಿದೆ.ಈ ವೇಳೆ ಲಿಫ್ಟ್‌ನೊಳಗೆ ಸಿಲುಕಿಕೊಂಡಿದ್ದ ನಾಫಲ್ ಅವರು ಹೊರಬರುವ ಪ್ರಯತ್ನದಲ್ಲಿ ಮುಖಭಾಗಕ್ಕೆ ಗಂಭೀರ ಗಾಯಗೊಂಡಿದ್ದರು ಎನ್ನಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಸಹೋದ್ಯೋಗಿಗಳು ರಕ್ಷಣೆ ಕಾರ್ಯಕ್ಕೆ ಮುಂದಾಗಿದ್ದರು. ಲಿಫ್ಟ್ ಮೊದಲ ಮಹಡಿಯಲ್ಲಿ ಅರ್ಧ ಭಾಗ ಮಾತ್ರ ಕಾಣಿಸಿಕೊಂಡಿದ್ದರಿಂದ ಬಾಗಿಲನ್ನು ಬಲವಂತವಾಗಿ ತೆರೆಯಲಾಗಿತ್ತು.ಸಹೋದ್ಯೋಗಿಗಳು ನಾಫಲ್ ಅವರನ್ನು ಕೈಹಿಡಿದು ಮೇಲಕ್ಕೆ ಎಳೆಯುವ ಸಂದರ್ಭದಲ್ಲಿ ಏಕಾಏಕಿ ಲಿಫ್ಟ್ ಚಲನೆಗೊಂಡಿದ್ದು, ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡರು. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ…

Read More

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಅಡ್ಯಾರ್ ಶಾಖೆಯ ಚತುರ್ಥ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಅಡ್ಯಾರ್ ಶಾಖೆಯಲ್ಲಿ ನಡೆಯಿತು.ಸಂಘದ ಗ್ರಾಹಕರಾದ ಶ್ರೀ ಜಯಶೀಲ ಅಡ್ಯಂತಾಯ, ಶ್ರೀ ಉಮೇಶ್ ಶೆಟ್ಟಿ ಹಾಗೂ ಶ್ರೀ ಹರೀಶ್ ಅಡ್ಯಾರ್ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಸದಸ್ಯರಾದ ಶ್ರೀ ಉಮೇಶ್ ಶೆಟ್ಟಿ ಅವರು ಮಾತನಾಡಿ, “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ನೇತೃತ್ವದಲ್ಲಿ ಗ್ರಾಹಕರಿಗೆ ಉತ್ತಮ ರೀತಿಯಲ್ಲಿ ಸೇವೆಯನ್ನು ನೀಡುತ್ತಾ ಬರುತ್ತಿದೆ” ಎಂದರು.ಸಂಘದ ಸದಸ್ಯರಾದ ಶ್ರೀ ಜಯಶೀಲ ಅಡ್ಯಂತಾಯ ಅವರು ಮಾತನಾಡಿ, “ಸಂಘವು 35 ಶಾಖೆಗಳನ್ನು ಹೊಂದಿದ್ದು, ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಹಾಗೂ ಇನ್ನೂ ಮುಂದಕ್ಕೆ ಹೆಚ್ಚಿನ ಶಾಖೆಗಳನ್ನು ಹೊಂದಲಿ” ಎಂದು ಶುಭ ಹಾರೈಸಿದರು.ಸದಸ್ಯರಾದ ಶ್ರೀ ಹರೀಶ್ ಅಡ್ಯಾರ್ ಅವರು ಮಾತನಾಡಿ, “ಅಡ್ಯಾರ್ ಶಾಖೆಯು ಗ್ರಾಹಕರಿಗೆ ಉತ್ತಮ ಶಾಖೆಯಾಗಿ, ಉತ್ತಮ ಸೇವೆಯನ್ನು…

Read More

ಕುಂದಾಪುರ, ಮೇ 16 : ಕ್ರಿಕೆಟ್‌ ಬೆಟ್ಟಿಂಗ್‌ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಆರೋಪದ ಹಿನ್ನೆಲೆ ಉಡುಪಿ ಜಿಲ್ಲೆಯ ಭರತ್‌ ಜಯರಾಮ್‌ ದಾಸ ಎಂಬಾತನಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ. ಭರತ್‌ ಜಯರಾಮ್‌ ದಾಸ (34), ತಂದೆ ಜಯರಾಮ ದಾಸ, ಮೂಡುಬಿರ್ತಿ ನಿವಾಸಿ, ವಾರಂಬಳ್ಳಿ ಗ್ರಾಮ, ಬ್ರಹ್ಮಾವರ ತಾಲೂಕು, ಉಡುಪಿ ಜಿಲ್ಲೆ ಇವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಗಳು ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಮೇ 14ರಂದು ಗಡಿಪಾರು ಆದೇಶ ಹೊರಡಿಸಿದ್ದಾರೆ. ಆರೋಪಿಯ ವಿರುದ್ಧ ಕೋಟ ಮತ್ತು ಕುಂದಾಪುರ ಪೊಲೀಸ್ ಠಾಣೆಗಳಲ್ಲಿ ಕ್ರಿಕೆಟ್‌ ಬೆಟ್ಟಿಂಗ್‌ಗೆ ಸಂಬಂಧಿಸಿದಂತೆ ಒಟ್ಟು ಮೂರು ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಒಂದು ಪ್ರಕರಣದಲ್ಲಿ ಶಿಕ್ಷೆಯಾಗಿದ್ದು, ಉಳಿದ ಎರಡು ಪ್ರಕರಣಗಳು ತನಿಖಾ ಹಂತದಲ್ಲಿವೆ ಎಂದು ತಿಳಿದು ಬಂದಿದೆ. ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಭರತ್‌ ಜಯರಾಮ್‌ ದಾಸನನ್ನು ಬೆಂಗಳೂರು ಕಮಿಷನರೇಟ್‌ ವ್ಯಾಪ್ತಿಯ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ ಎಂದು ಪೊಲೀಸ್…

Read More