Author: Tulunada Surya

ಹೆಬ್ರಿ, ಆ. 8: ಧನಲಕ್ಷ್ಮೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಸದಸ್ಯರು ಮರುಪಾವತಿಸಿದ ಸಾಲದ ಹಣವನ್ನು ಒಕ್ಕೂಟದ ಖಾತೆಗೆ ಜಮಾ ಮಾಡದೆ, ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು ₹28.19 ಲಕ್ಷ ಹಣವನ್ನು ದುರುಪಯೋಗಪಡಿಸಿಕೊಂಡಿರುವ ಆರೋಪ ಕೇಳಿಬಂದಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಕ್ಕೂಟದಲ್ಲಿ ಸುಮಾರು 8 ವರ್ಷಗಳಿಂದ ಮುಖ್ಯ ಪುಸ್ತಕ ಬರಹಗಾರರಾಗಿ (ಮುಖ್ಯ ಬುಕ್ ಕೀಪರ್) ಕಾರ್ಯನಿರ್ವಹಿಸುತ್ತಿದ್ದ ನಂದಿನಿ ಎಂಬವರ ವಿರುದ್ಧ ದೂರು ನೀಡಲಾಗಿದೆ.ದೂರಿನ ಪ್ರಕಾರ, 2020ರಿಂದ 2026ರವರೆಗೆ ವಿವಿಧ ಸ್ವಸಹಾಯ ಸಂಘಗಳ ಸದಸ್ಯರು ಸಾಲದ ಕಂತು ಹಾಗೂ ಮರುಪಾವತಿ ರೂಪದಲ್ಲಿ ಒಕ್ಕೂಟಕ್ಕೆ ನೀಡಿದ ಹಣವನ್ನು ಸಮರ್ಪಕವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡದೆ, ಎರಡು ಪ್ರತ್ಯೇಕ ಖಾತೆ ಪುಸ್ತಕಗಳು ಹಾಗೂ ರಶೀದಿ ಪುಸ್ತಕಗಳನ್ನು ನಿರ್ವಹಿಸಿ, ವ್ಯತ್ಯಾಸದ ದಾಖಲೆಗಳನ್ನು ಸೃಷ್ಟಿಸಲಾಗಿದೆ ಎಂದು ಆರೋಪಿಸಲಾಗಿದೆ.ಅಲ್ಲದೆ, ಒಕ್ಕೂಟದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಯವರ ಸಹಿಗಳನ್ನು ನಕಲು ಮಾಡಿ ದಾಖಲೆಗಳನ್ನು ಸಿದ್ಧಪಡಿಸಿ, ಸದಸ್ಯರಿಂದ ಸಂಗ್ರಹಿಸಲಾದ ಒಟ್ಟು ₹28,19,489 ಹಣವನ್ನು ಸ್ವಂತ ಬಳಕೆಗೆ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.ಈ ಮೂಲಕ ಒಕ್ಕೂಟದ…

Read More

ಮುದರಂಗಡಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿ ಪೇಟೆಯಲ್ಲಿ ಹಾಡಹಗಲೇ ಕಾಂಗ್ರೆಸ್ ಮುಖಂಡ ಹಾಗೂ ಮುದರಂಗಡಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜಾ (ಪ್ರಿನ್ಸ್) ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಕಾಪು ಪೊಲೀಸ್ ಠಾಣೆಯ ಪಿಎಸ್‌ಐ ತೇಜಸ್ವಿ ಹಾಗೂ ಕಾಪು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರಸನ್ನ ಅವರ ನೇತೃತ್ವದ ಪೊಲೀಸ್ ತಂಡ ಬಂಧಿಸಿ ಕರೆದೊಯ್ಯುತ್ತಿದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. ಬಂಧನಕ್ಕೆ ಪ್ರತಿರೋಧ ತೋರಿದ ಆರೋಪಿಯು ಪೊಲೀಸರ ಮೇಲೆ ಹಲ್ಲೆಗೆ ಮುಂದಾದನು ಎನ್ನಲಾಗಿದ್ದು, ಈ ಸಂದರ್ಭದಲ್ಲಿ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ ಎಂದು ತಿಳಿದುಬಂದಿದೆ. ಗುಂಡೇಟಿನಿಂದ ಗಾಯಗೊಂಡ ಆರೋಪಿಯನ್ನು ತಕ್ಷಣವೇ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆಯ ಬಳಿಕ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಹರಿರಾಮ್ ಶಂಕರ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡ ಆರೋಪಿಯ ವಿಚಾರಣೆ ನಡೆಸಿದ್ದಾರೆ. ಮುದರಂಗಡಿ ಪೇಟೆಯಲ್ಲಿ ನಡೆದಿದ್ದ ಈ…

Read More

ಉಡುಪಿ, ಆ. 7: ಉಡುಪಿ ನಗರದ ನಾರಾಯಣ ಗುರು ಸಭಾಂಗಣದಲ್ಲಿ ಇಂದು ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಭೇಟಿ ನೀಡಿದ ಸಂದರ್ಭದಲ್ಲಿ, ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ತುಳುನಾಡಿನ ಸಾಂಸ್ಕೃತಿಕ ಗುರುತಿನ ಪ್ರತೀಕವಾದ ಸೂರ್ಯ–ಚಂದ್ರ ಚಿಹ್ನೆ ಹೊಂದಿರುವ ಶಾಲನ್ನು ಹೊದಿಸಿ, ಪುಷ್ಪಗುಚ್ಛ ನೀಡಿ ಗೌರವಿಸಲಾಯಿತು. ಬಳಿಕ ಇದೇ ಆಗಸ್ಟ್ 16ರಂದು ನಡೆಯಲಿರುವ “ಆಟಿಡೊಂಜಿ ದಿನ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನೀಡಿ, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಆಹ್ವಾನಿಸಲಾಯಿತು. ನಟ ಚೇತನ್ ಅಹಿಂಸಾ ಅವರು ತುಳುನಾಡಿನ ಸಂಸ್ಕೃತಿ, ಭಾಷೆ ಹಾಗೂ ಪರಂಪರೆಯ ಸಂರಕ್ಷಣೆಗೆ ತುಳುನಾಡ ರಕ್ಷಣಾ ವೇದಿಕೆ ಕೈಗೊಂಡಿರುವ ವಿವಿಧ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಆಟಿಡೊಂಜಿ ದಿನದಂತಹ ಕಾರ್ಯಕ್ರಮಗಳು ತುಳುನಾಡಿನ ವೈಶಿಷ್ಟ್ಯಪೂರ್ಣ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಅವರು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ತುಳುನಾಡ ರಕ್ಷಣಾ…

Read More

ಉಡುಪಿ (ಕಾಪು): ಕಾಂಗ್ರೆಸ್ ಮುಖಂಡ, ಉಡುಪಿ ಹಾಗೂ ಮುದರಂಗಡಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜಾ (ಪ್ರಿನ್ಸ್) ಅವರ ಮೇಲೆ ದುಷ್ಕರ್ಮಿಗಳು ದಿಢೀರ್ ಗುಂಡಿನ ದಾಳಿ ನಡೆಸಿ ಭೀಕರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.ಸ್ಥಳೀಯವಾಗಿ ಅತ್ಯಂತ ಪ್ರಭಾವಿ ಹಾಗೂ ಜನಪ್ರಿಯ ನಾಯಕರಾಗಿದ್ದ ಡೇವಿಡ್ ಡಿಸೋಜಾ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಈ ಹಠಾತ್ ಶೂಟೌಟ್ ಘಟನೆಯಿಂದಾಗಿ ಕಾಪು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ಆತಂಕ ಹಾಗೂ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.ಗುಂಡಿನ ದಾಳಿಗೆ ನಿಖರವಾದ ಕಾರಣ ಏನೆಂಬುದು ತನಿಖೆಗೆ ತಿಳಿದುಬಂದಿಲ್ಲ. ಹತ್ಯೆಯ ಹಿಂದೆ ವೈಯಕ್ತಿಕ ದ್ವೇಷ, ಹಣಕಾಸು ವ್ಯವಹಾರ ಅಥವಾ ಇತರ ರಾಜಕೀಯ ಕಾರಣಗಳಿವೆಯೇ ಎಂಬ ಸತ್ಯಾಸತ್ಯತೆಯನ್ನು ಪೊಲೀಸರು ಜಾಲ ಬೀಸಿದ್ದಾರೆ.

Read More

ಬಂಟ್ವಾಳ, ಆ. 6: ಬಿ.ಸಿ.ರೋಡ್ ಸಮೀಪದ ಎನ್.ಜಿ. ಸರ್ಕಲ್‌ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್‌ನ ಹಿಂಬದಿ ಸವಾರ ಮೃತಪಟ್ಟಿದ್ದು, ಪ್ರಕರಣ ಸಂಬಂಧ ಟಿಪ್ಪರ್ ಚಾಲಕನನ್ನು ಬಂಟ್ವಾಳ ಸಂಚಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪೊಲೀಸ್ ಮಾಹಿತಿಯ ಪ್ರಕಾರ, ಬಂಟ್ವಾಳ ತಾಲೂಕಿನ ಪಲ್ಲಂಬೆಟ್ಟು ನಿವಾಸಿ ಸಲ್ಮಾನ್ ಫಾರೂಕ್ (33) ಚಾಲನೆ ಮಾಡುತ್ತಿದ್ದ ಟಿಪ್ಪರ್ ಲಾರಿಯು ಅತಿವೇಗ ಮತ್ತು ಅಜಾಗರೂಕತೆಯಿಂದ ಸಂಚರಿಸುತ್ತಿದ್ದ ವೇಳೆ ಮಂಗಳೂರಿನಿಂದ ಧರ್ಮಸ್ಥಳದ ಕಡೆಗೆ ಸರ್ವಿಸ್ ರಸ್ತೆಯಲ್ಲಿ ತೆರಳುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತ ಗುರುವಾರ ಸಂಜೆ ಸುಮಾರು 6 ಗಂಟೆಗೆ ನಡೆದಿದೆ.ಡಿಕ್ಕಿಯ ಪರಿಣಾಮ ಸ್ಕೂಟರ್ ಸವಾರ ದಯಾನಂದ ಹಾಗೂ ಹಿಂಬದಿ ಸವಾರ ಯಶ್ವಂತ್ ಕುಲಾಲ್ ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರನ್ನೂ ತಕ್ಷಣ ಮಂಗಳೂರಿನ ಜಿಲ್ಲಾ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯಶ್ವಂತ್ ಕುಲಾಲ್ ಅವರು ಮಧ್ಯರಾತ್ರಿ ಮೃತಪಟ್ಟಿದ್ದಾರೆ. ದಯಾನಂದ ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಸಂಬಂಧ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಅಪರಾಧ…

Read More

ಮಂಗಳೂರು, ಆ. 6: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮದ್ಯದೊಂದಿಗೆ ಆಹಾರ ಪೂರೈಸುವ (ಬಾರ್ ಅಂಡ್ ರೆಸ್ಟೋರೆಂಟ್) ಬಾರ್‌ಗಳ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ಬುಧವಾರ ರಾತ್ರಿ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಕಾರ್ಯಾಚರಣೆ ವೇಳೆ ಬಾರ್‌ಗಳಿಗೆ ಆಗಮಿಸಿದ್ದ ಗ್ರಾಹಕರ ಗುರುತಿನ ಚೀಟಿಗಳನ್ನು ಪರಿಶೀಲಿಸಿ, ಅಪ್ರಾಪ್ತ ವಯಸ್ಕರು ಮದ್ಯ ಸೇವಿಸುತ್ತಿರುವ ಬಗ್ಗೆ ವಿಶೇಷ ನಿಗಾ ವಹಿಸಲಾಯಿತು. ಅಲ್ಲದೆ, ಬಾರ್‌ಗಳ ಸನ್ನದುದಾರರು ಮತ್ತು ಸಿಬ್ಬಂದಿಗೆ ಯಾವುದೇ ಸಂದರ್ಭದಲ್ಲೂ ಅಪ್ರಾಪ್ತ ವಯಸ್ಕರಿಗೆ ಮದ್ಯ ಪೂರೈಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು. ಅಪ್ರಾಪ್ತರಿಗೆ ಮದ್ಯ ಪೂರೈಸಿರುವುದು ಕಂಡುಬಂದಲ್ಲಿ ಸಂಬಂಧಪಟ್ಟ ಬಾರ್‌ಗಳ ವಿರುದ್ಧ ಅಬಕಾರಿ ಕಾಯ್ದೆಯಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದರು. ಸಾರ್ವಜನಿಕರ ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆಯ ಹಿತದೃಷ್ಟಿಯಿಂದ ಇಂತಹ ವಿಶೇಷ ತಪಾಸಣೆಗಳನ್ನು ಮುಂದಿನ ದಿನಗಳಲ್ಲಿಯೂ ಮುಂದುವರಿಸಲಾಗುವುದು ಎಂದು ತಿಳಿಸಿದರು. ಅಬಕಾರಿ ಉಪ ಆಯುಕ್ತೆ ಬಿಂದುಶ್ರೀ ಅವರ ನಿರ್ದೇಶನದಂತೆ ನಡೆದ ಈ ಕಾರ್ಯಾಚರಣೆಗೆ ಮಂಗಳೂರು ಉಪವಿಭಾಗ–1ರ ಅಬಕಾರಿ ಉಪ…

Read More

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.), ಮಂಗಳೂರು ಇದರ ನೀರುಮಾರ್ಗ ಶಾಖೆಯ ಚತುರ್ಥ ವಾರ್ಷಿಕೋತ್ಸವದ ಪ್ರಯುಕ್ತ 113ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಹಾಗೂ ದಂತ ಚಿಕಿತ್ಸಾ ಶಿಬಿರವನ್ನು 2026ರ ಆಗಸ್ಟ್ 8ರಂದು (ಶನಿವಾರ) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 12.30ರವರೆಗೆ ಸುಬ್ರಹ್ಮಣ್ಯ ಭಜನಾ ಮಂದಿರ ಸಭಾಭವನ, ನೀರುಮಾರ್ಗ ಇಲ್ಲಿ ಆಯೋಜಿಸಲಾಗಿದೆ. ಶಿಬಿರದಲ್ಲಿ ಮಂಗಳೂರು ಮೆಡಿಕಲ್ ಕಾಲೇಜು, ಮಂಗಳೂರು ಆಸ್ಪತ್ರೆ ಹಾಗೂ ಮಂಗಳೂರು ಕಿಡ್ನಿ ಫೌಂಡೇಶನ್, ಕದ್ರಿ ಇವುಗಳ ನುರಿತ ವೈದ್ಯರ ತಂಡದಿಂದ ವಿವಿಧ ವೈದ್ಯಕೀಯ ಸೇವೆಗಳು ಲಭ್ಯವಿರಲಿವೆ. ಅವುಗಳಲ್ಲಿ:ನೇತ್ರ ತಪಾಸಣೆಅಗತ್ಯವಿರುವವರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಮಧುಮೇಹ ತಪಾಸಣೆರಕ್ತದೊತ್ತಡ (ಬಿ.ಪಿ.) ತಪಾಸಣೆಸಾಮಾನ್ಯ ವೈದ್ಯಕೀಯ ಸಲಹೆಕಿವಿ, ಮೂಗು ಹಾಗೂ ಗಂಟಲು ತಪಾಸಣೆಹಾಳಾದ ಹಲ್ಲುಗಳನ್ನು ಕೀಳುವುದುಹುಳುಕು ಹಲ್ಲುಗಳಿಗೆ ಫಿಲ್ಲಿಂಗ್ ಮಾಡುವುದುಹಲ್ಲುಗಳ ಸ್ವಚ್ಛತೆ (ಸ್ಕೇಲಿಂಗ್)ಹೆಚ್ಚಿನ ಚಿಕಿತ್ಸೆಗೆ ಹಸಿರು ಕಾರ್ಡ್ ವಿತರಣೆಇತರೆ ವೈದ್ಯಕೀಯ ಸೇವೆಗಳುಅಗತ್ಯವಿರುವವರಿಗೆ ಉಚಿತ ಕನ್ನಡಕ ವಿತರಣೆ ಸಹ ಮಾಡಲಾಗುವುದು.ಇದು ಸಂಘದ ವತಿಯಿಂದ ಆಯೋಜಿಸಲಾಗುತ್ತಿರುವ 113ನೇ ಉಚಿತ ವೈದ್ಯಕೀಯ ಶಿಬಿರವಾಗಿದ್ದು, ಲಯನ್ಸ್ ಕ್ಲಬ್ ಮಂಗಳೂರು ಆದಿತ್ಯ, ಶ್ರೀ ಸುಬ್ರಹ್ಮಣ್ಯ…

Read More

ಮಂಗಳೂರು, ಆ. 6: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ–ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಹಲವು ಬಾಗಗಳಲ್ಲಿ ಕಾರ್ಯಚರಣೆ ಕೈಗೊಂಡಿರುತ್ತಾರೆ. ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆ ಹಾಗೂ ಬಂಟ್ವಾಳ ವಿಭಾಗದ ಸಾರಿಗೆ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ನಡೆಸಿದ ಶಾಲಾ ವಾಹನಗಳ ವಿಶೇಷ ತಪಾಸಣೆ ಮತ್ತು ನಿಯಮ ಉಲ್ಲಂಘಿಸಿದ ವಾಹನಗಳ ವಿರುದ್ಧ ಕೈಗೊಂಡ ಕ್ರಮವನ್ನು ಜನತಾದಳ (ಜಾತ್ಯತೀತ) ದಕ್ಷಿಣ ಕನ್ನಡ ಜಿಲ್ಲಾ ಘಟಕ ಸ್ವಾಗತಿಸಿದೆ. ರಾಷ್ಟ್ರೀಯ ಹೆದ್ದಾರಿ–73ರ ಬೆಳ್ತಂಗಡಿ ಹಾಗೂ ಉಜಿರೆ ವ್ಯಾಪ್ತಿಯಲ್ಲಿ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ಶಾಲಾ ವಾಹನಗಳ ದಾಖಲೆಗಳು, ಫಿಟ್ನೆಸ್ ಪ್ರಮಾಣಪತ್ರ, ವಿಮೆ, ಚಾಲನಾ ಪರವಾನಗಿ, ವಾಹನಗಳ ತಾಂತ್ರಿಕ ಸ್ಥಿತಿ ಹಾಗೂ ಸುರಕ್ಷತಾ ಮಾನದಂಡಗಳನ್ನು ಪರಿಶೀಲಿಸಿ, ನಿಯಮ ಉಲ್ಲಂಘನೆ ಕಂಡುಬಂದ ವಾಹನಗಳಿಗೆ ದಂಡ (ಚಾಲನ್) ವಿಧಿಸಿರುವುದು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಅಗತ್ಯ ಕ್ರಮವಾಗಿದೆ. ಶಾಲಾ ಮಕ್ಕಳ ಸುರಕ್ಷತೆಯ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕವು ಆಗಸ್ಟ್ 5ರಂದು ಪ್ರಾದೇಶಿಕ ಸಾರಿಗೆ…

Read More

ಉಡುಪಿ, ಆ. 6: ಕಳೆದ 17 ವರ್ಷಗಳಿಂದ ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಹಾಗೂ ಜನಪದ ಆಚರಣೆಗಳನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಕೆಲಸಮಾಡುತ್ತಿರುವ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿ ಬ್ರಹ್ಮಗಿರಿಯಲ್ಲಿ ದಿನಾಂಕ 16-08-2026 ರಂದು ಆಯೋಜಿಸಲಾಗಿರುವ ‘ಆಟಿಡೊಂಜಿ ದಿನ’ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಉಡುಪಿಯ ಶ್ರೀ ಶೀರೂರು ಮಠದ 31ನೇ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಇಂದು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಸ್ವಾಮೀಜಿಯವರು ತುಳುನಾಡಿನ ಸಂಸ್ಕೃತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ತುಳುನಾಡ ರಕ್ಷಣಾ ವೇದಿಕೆ ನಿರಂತರವಾಗಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿ, ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಸ್ವಾಮೀಜಿಯವರ ಪೂರ್ವಾಶ್ರಮದ ತಂದೆ ಶ್ರೀ ಉದಯ ಕುಮಾರ್ ಸರಳ್ತಾಯ ಅವರು ಉಪಸ್ಥಿತರಿದ್ದು, ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಈ ಸಂದರ್ಭದಲ್ಲಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಅಧ್ಯಕ್ಷ ಫ್ರಾಂಕಿ ಡಿಸೋಜ ಕೊಳಲಗಿರಿ, ಮಹಿಳಾ…

Read More

ಮಂಗಳೂರು, ಆ. 5: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ಸಾಗಿಸುವ ವಾಹನಗಳಲ್ಲಿ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು, ನಿಗದಿತ ಆಸನ ಸಾಮರ್ಥ್ಯಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳ ಸಾಗಣೆಗೆ ತಡೆ ವಿಧಿಸುವುದು ಹಾಗೂ ಹಳೆಯ ಶಾಲಾ ವಾಹನಗಳ ವಿಶೇಷ ಫಿಟ್ನೆಸ್ ಮತ್ತು ಸುರಕ್ಷತಾ ತಪಾಸಣೆ ನಡೆಸುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಜನತಾದಳ (ಜಾತ್ಯತೀತ) ನಿಯೋಗವು ಬುಧವಾರ ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್‌ಟಿಒ) ಅವರಿಗೆ ಮನವಿ ಸಲ್ಲಿಸಿತು. ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಅವರ ನಿರ್ದೇಶನದ ಮೇರೆಗೆ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪುರವರು ಮನವಿ ಸಲ್ಲಿಸಿ, ಜಿಲ್ಲೆಯ ಅನೇಕ ಶಾಲಾ ಹಾಗೂ ಕಾಲೇಜು ವಾಹನಗಳಲ್ಲಿ ನಿಗದಿತ ಆಸನ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ತುಂಬಿಸಿಕೊಂಡು ಸಂಚರಿಸಲಾಗುತ್ತಿದೆ ಎಂಬ ಬಗ್ಗೆ ಸಾರ್ವಜನಿಕರು, ಪೋಷಕರು ಹಾಗೂ ವಿದ್ಯಾರ್ಥಿಗಳಿಂದ ನಿರಂತರ ದೂರುಗಳು ವ್ಯಕ್ತವಾಗುತ್ತಿವೆ ಎಂದು ಅಧಿಕಾರಿಗಳ ಗಮನ ಸೆಳೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಾಧ್ಯಕ್ಷರಾದ ಇಕ್ಬಾಲ್ ಮುಲ್ಕಿ ಹಾಗೂ ವಸಂತ…

Read More