- ಏಪ್ರಿಲ್ 12ರಂದು 3 ಗಂಟೆಗೆ ಉಡುಪಿಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಪ್ರಮುಖ ಸಭೆ, ಸದಸ್ಯರಿಗೆ ಕಡ್ಡಾಯ ಹಾಜರಾತಿ, ಸಂಘಟನಾ ಅಭಿವೃದ್ಧಿಗೆ ಮಹತ್ವದ ಚರ್ಚೆ
- ಅಜೆಕಾರು ಕಲಾಭಿಮಾನಿ ಬಳಗದ ರಜತ ಪರ್ವ – ಮುಂಬಯಿ ಯಕ್ಷಗಾನ ಸಮ್ಮೇಳನ-2026 : ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಪ್ರವೀಣ್ ಭೋಜ ಶೆಟ್ಟಿ ನೇಮಕ
- ಮಂಗಳೂರು : ಗುರುಪುರ ಲಾರಿ -ಬಸ್ಸಿನ ನಡುವೆ ಭೀಕರ ಅಪಘಾತ,ಚಾಲಕ ಸೇರಿ ಹಲವರಿಗೆ ಗಾಯ
- ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸೆ ಶಿಬಿರ
- ತಂದೆ-ಮಗ ಹತ್ಯೆ ಪ್ರಕರಣದಲ್ಲಿ ಐತಿಹಾಸಿಕ ತೀರ್ಪು ತೂತುಕುಡಿ ಲಾಕಪ್ ಸಾವು ಪ್ರಕರಣ: 9 ಪೊಲೀಸರಿಗೆ ಮರಣದಂಡನೆ
- ಮತದಾನದ ಮಹತ್ವ ಸಾರುವ ಕಂದಮ್ಮ – ಐದು ಭಾಷೆಗಳಲ್ಲಿ ಜಾಗೃತಿ ಮೂಡಿಸುತ್ತಿರುವ ಸನ್ನಿಧಿ
- ಬಾವುಟ ಗುಡ್ಡ ತುಳುನಾಡ ಸ್ವಾತಂತ್ರ್ಯ ದಿನಾಚರಣೆ ಭಕ್ತಿಭಾವದಿಂದ ಆಚರಣೆ – ಅಮರಸುಳ್ಯ ಕ್ರಾಂತಿಯ ಸ್ಮರಣೆ
- ಕಾರ್ಕಳ-ಹೆಬ್ರಿ : ಜೆಡಿಎಸ್ ರಜತ ಮಹೋತ್ಸವ ಭರ್ಜರಿ ಯಶಸ್ಸು – ಜನಸಾಗರದ ನಡುವೆ ಅದ್ದೂರಿ ಸಂಭ್ರಮಾಚರಣೆ
Author: Tulunada Surya
ಉಡುಪಿ : ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ಮಹತ್ವದ ಸಭೆ ಏಪ್ರಿಲ್ 12, 2026 (ಭಾನುವಾರ) ರಂದು ಸಂಜೆ 3.00 ಗಂಟೆಗೆ ಉಡುಪಿ ನಗರದ ಸಿಟಿ ಬಸ್ ನಿಲ್ದಾಣ ಬಳಿಯ ಕಾಪಿಯಾ ಹೋಟೆಲ್ ಸಮೀಪದ ಅಕ್ಷಯ ಟವರ್ಸ್ನಲ್ಲಿ ಇರುವ ತುಳುನಾಡ ರಕ್ಷಣಾ ವೇದಿಕೆ ಜಿಲ್ಲಾ ಕಚೇರಿಯಲ್ಲಿ ನಡೆಯಲಿದೆ. ಸಭೆಯನ್ನು ಜಿಲ್ಲಾ ಅಧ್ಯಕ್ಷರಾದ ಫ್ರಾಂಕಿ ಡಿಸೋಜ ಕೊಳಲಗಿರಿ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಗುತ್ತಿದ್ದು, ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಯೋಗಿಶ್ ಶೆಟ್ಟಿ ಜಪ್ಪು ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ. ಸಭೆಗೆ ಕಾರ್ಮಿಕ ಘಟಕ, ಯುವ ಘಟಕ, ಮಹಿಳಾ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸೇರಿದಂತೆ ಜಿಲ್ಲಾ ವ್ಯಾಪ್ತಿಯ ಎಲ್ಲಾ ಪದಾಧಿಕಾರಿಗಳು, ತಾಲೂಕು ಅಧ್ಯಕ್ಷರು ಮತ್ತು ಸದಸ್ಯರು ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಲಾಗಿದೆ. ಸಭೆಯಲ್ಲಿ ಸಂಘಟನೆಯ ಅಭಿವೃದ್ಧಿ, ಮುಂದಿನ ಕಾರ್ಯಕ್ರಮಗಳ ರೂಪುರೇಷೆ ಹಾಗೂ ಸಂಘಟನಾ ಬಲವರ್ಧನೆ ಕುರಿತು ಮಹತ್ವದ ಚರ್ಚೆಗಳು ನಡೆಯಲಿದ್ದು, ಎಲ್ಲಾ ಸದಸ್ಯರು ಸಮಯಕ್ಕೆ ಸರಿಯಾಗಿ ಹಾಜರಾಗಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಪ್ರಧಾನ…
ಯಕ್ಷಗಾನ ಸಮ್ಮೇಳನದ ಯಶಸ್ಸಿಗೆ ಎಲ್ಲರ ಸಹಕಾರವಿರಲಿ: ಪ್ರವೀಣ್ ಬಿ. ಶೆಟ್ಟಿ ಮುಂಬಯಿ: ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಇದರ ರಜತ ಪರ್ವದ ಅಂಗವಾಗಿ ಅಕ್ಟೋಬರ್ನಲ್ಲಿ ನಡೆಯಲಿರುವ ಎರಡು ದಿನಗಳ ಮುಂಬಯಿ ಯಕ್ಷಗಾನ ಸಮ್ಮೇಳನ-2026 ಇದರ ಸಮಾಲೋಚನಾ ಸಭೆಯು ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಎ. 6ರಂದು ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ಟಿ. ಭಂಡಾರಿ ಸಭಾಗೃಹದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಮ್ಮೇಳನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರನ್ನಾಗಿ ಪ್ರವೀಣ್ ಭೋಜ ಶೆಟ್ಟಿಯವರನ್ನು ಸರ್ವಾನುಮತದಿಂದ ನೇಮಕ ಮಾಡಲಾಯಿತು.ವಿಜ್ಞಾಪನಾ ಪತ್ರ ಬಿಡುಗಡೆ:ಸಭೆಯಲ್ಲಿ ಮುಂಬಯಿ ಯಕ್ಷಗಾನ ಸಮ್ಮೇಳನದ ವಿಜ್ಞಾಪನಾ ಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದ ಪ್ರವೀಣ್ ಬಿ.ಶೆಟ್ಟಿ ಅವರು ‘ಒಂದು ಕಲಾ ಸಂಘಟನೆ ಮರಾಠಿ ಮಣ್ಣಿನಲ್ಲಿ ಬೆಳ್ಳಿಹಬ್ಬವನ್ನು ಆಚರಿಸುತ್ತಿರುವುದೆಂದರೆ ಸಾಮಾನ್ಯ ವಿಷಯವಲ್ಲ ; ಯಕ್ಷಗುರು ಅಜೆಕಾರು ಬಾಲಕೃಷ್ಣ ಶೆಟ್ಟಿಯವರು ಕಳೆದ 25 ವರ್ಷಗಳಿಂದ ಊರಿನ ಕಲಾವಿದರನ್ನು ಆಹ್ವಾನಿಸಿ ಮಹಾನಗರದಲ್ಲಿ ಸರಣಿ ಯಕ್ಷಗಾನ ತಾಳಮದ್ದಳೆ ಕೂಟ ಮತ್ತು ಯಕ್ಷಗಾನ ಬಯಲಾಟ ಪ್ರದರ್ಶನಗಳನ್ನು…
ಮಂಗಳೂರು : ಗುರುಪುರ ಬಳಿಯ ಭಾಮಿ ಶಾಲೆಯ ಬಳಿ ಲಾರಿ ಹಾಗೂ ಬಸ್ಸಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಹಲವರಿಗೆ ಗಂಭೀರ ಗಾಯವಾದ ಘಟನೆ ವರದಿಯಾಗಿದೆ. ಲಾರಿ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ ಸಂಭವಿಸಿದೆ ಎಂದು ಮಾಹಿತಿ ದೊರೆತಿದೆ.ಬಸ್ಸು ಮಂಗಳೂರಿನಿಂದ ಮೂಡಬಿದರೆಗೆ ಹೊರಟಿದ್ದು ಲಾರಿ ಗುರುಪುರದಿಂದ ಮಂಗಳೂರಿನ ಕಡೆಗೆ ಹೊರಟಿತ್ತೆಂದು ಮಾಹಿತಿ ದೊರೆತಿದೆ.ಘಟನೆಯಲ್ಲಿ ಬಸ್ಸು ಹಾಗೂ ಲಾರಿ ಚಾಲಕನಿಗೆ ಗಂಭೀರ ಗಾಯಗಳಾಗಿದೆ .ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ೭ ಮಂದಿ ಪ್ರಯಾಣಿಕರಿಗೂ ಗಾಯಗಳಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಬಸ್ ನಜ್ಜುಗುಜ್ಜಾಗಿದೆ ಹಾಗೂ ಲಾರಿಯ ಮುಂಭಾಗ ಕೂಡ ಸಂಪೂರ್ಣ ಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಹಿತಿಯ ಪ್ರಕಾರ, ಮಂಗಳೂರಿನಿಂದ ಮೂಡಬಿದರೆ ಕಡೆಗೆ ತೆರಳುತ್ತಿದ್ದ ಪ್ರಯಾಣಿಕರ ಬಸ್ ಮತ್ತು ಗುರುಪುರದಿಂದ ಮಂಗಳೂರಿನತ್ತ ಬರುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಲಾರಿ ಚಾಲಕನ ಅಜಾಗರೂಕತೆ ಈ ಅಪಘಾತಕ್ಕೆ ಪ್ರಮುಖ ಕಾರಣವೆಂದು ಪ್ರಾಥಮಿಕ…
ಆತ್ಮಶಕ್ತಿ ಮಾಡೂರು ಶಾಖೆಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸೆ ಶಿಬಿರ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಇದರ ಮಾದೂರು ಶಾಖೆಯ 14ನೇ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಶಿರಡಿ ಸಾಯಿ ಬಾಬಾ ಮಂದಿರ (ರಿ.) ಮಾಡೂರು, ಶ್ರೀ ಶಾಸ್ತಾರ ಬಳಗ (ರಿ.), ಶ್ರೀ ಶಾಸ್ತಾರ ಮಹಿಳಾ ಮಂಡಳಿ ಹಾಗೂ ಭಜಕ ವೃಂದ, ಮಡ್ಯಾರ್ ಹಾಗೂ ಎನ್.ಜಿ.ಒ ವರ್ಲ್ಡ್ ಚಾರಿಟೇಬಲ್ ಟ್ರಸ್ಟ್ (ರಿ) ಮಂಗಳೂರು ಇವರ ಸಂಯುಕ್ತ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೆನೆಪೊಯ ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾಲಯ, ದೇರಳಕಟ್ಟೆ ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ, ಯೆನೆಪೊಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಇವರ ನುರಿತ ತಜ್ಞ ವೈದ್ಯ ತಂಡದವರಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ಚಿಕಿತ್ಸೆ ಶಿಬಿರವು ಮಾಡೂರು ಶಾಖೆಯ ಆವರಣದಲ್ಲಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಕಾರ್ಯಕ್ರಮವನ್ನು ಸಮುದಾಯ…
ಚೆನ್ನೈ, ಏಪ್ರಿಲ್ 6: ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದ ತೂತುಕುಡಿ ಜಿಲ್ಲೆಯ ಲಾಕಪ್ ದೆತ್ತ್ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಆರು ವರ್ಷಗಳ ಹಿಂದೆ ವ್ಯಾಪಾರಿ ಪಿ. ಜಯರಾಜ್ ಮತ್ತು ಅವರ ಪುತ್ರ ಜೆ. ಬೆನಿಕ್ಸ್ ಅವರ ಸಾವಿಗೆ ಸಂಬಂಧಿಸಿದ ಪ್ರಕರಣದಲ್ಲಿ ತಮಿಳುನಾಡಿನ ಮಧುರೈ ಜಿಲ್ಲಾ ನ್ಯಾಯಾಲಯವು ಸೋಮವಾರ ಒಂಬತ್ತು ಪೊಲೀಸರಿಗೆ ಮರಣದಂಡನೆ ವಿಧಿಸಿದೆ. ಈ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾದವರು ಇನ್ಸ್ಪೆಕ್ಟರ್ ಶ್ರೀಧರ್, ಸಬ್-ಇನ್ಸ್ಪೆಕ್ಟರ್ಗಳಾದ ಬಾಲಕೃಷ್ಣನ್ ಮತ್ತು ರಘು ಗಣೇಶ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಮುರುಗನ್, ಸಮದುರೈ, ಮುತ್ತುರಾಜ, ಚೆಲ್ಲಾದುರೈ, ಥಾಮಸ್ ಫ್ರಾನ್ಸಿಸ್ ಮತ್ತು ವೇಲುಮುತ್ತು ಎಂದು ಗುರುತಿಸಲಾಗಿದೆ. ತೀರ್ಪು ಪ್ರಕಟಿಸುವ ವೇಳೆ ನ್ಯಾಯಾಲಯವು ಇದನ್ನು “ಅಧಿಕಾರ ದುರುಪಯೋಗದ ಗಂಭೀರ ಪ್ರಕರಣ” ಎಂದು ಹೇಳಿ, ರಾಜ್ಯದಲ್ಲಿ ಅನೇಕ ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳು ಸೇವೆ ಸಲ್ಲಿಸುತ್ತಿದ್ದಾರೆ ಎಂಬುದನ್ನೂ ಸ್ಪಷ್ಟಪಡಿಸಿದೆ. “ಈ ತೀರ್ಪು ಸತ್ಯನಿಷ್ಠ ಪೊಲೀಸರಲ್ಲಿ ಭಯ ಹುಟ್ಟಿಸುವುದಿಲ್ಲ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಘಟನೆಯ ವಿವರಗಳನ್ನು ಉಲ್ಲೇಖಿಸಿದ ನ್ಯಾಯಾಲಯ, “ತಂದೆ ಮತ್ತು ಮಗನನ್ನು ವಿವಸ್ತ್ರಗೊಳಿಸಿ…
ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಸಾಮಾನ್ಯವಾಗಿ ಪ್ರೌಢ ವಯಸ್ಸಿನವರಿಂದ ನಡೆಯುವುದು ಸಾಮಾನ್ಯ. ಆದರೆ ಮಂಗಳೂರು–ಬಂಟ್ವಾಳದ ಪ್ರತಿಭಾವಂತ ಬಾಲಕಿ ಸನ್ನಿಧಿ ಕಶೆಕೋಡಿ ಈ ಧಾರಣೆಯನ್ನು ಸಂಪೂರ್ಣವಾಗಿ ಬದಲಿಸಿದ್ದಾರೆ. ಕೇವಲ ಹನ್ನೊಂದು ವರ್ಷದ ಈ ಕಂದಮ್ಮ ತನ್ನ ವಿಶಿಷ್ಟ ಪ್ರಯತ್ನಗಳ ಮೂಲಕ ಚುನಾವಣಾ ಪ್ರಕ್ರಿಯೆಯ ಮಹತ್ವವನ್ನು ಜನಸಾಮಾನ್ಯರಿಗೆ ತಲುಪಿಸುತ್ತಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಬಾಲವಯಸ್ಸಿನಲ್ಲೇ ಮಹತ್ತರ ಚಿಂತನೆ ಸನ್ನಿಧಿ ಕಶೆಕೋಡಿ ತನ್ನ ಬಾಲ್ಯದಲ್ಲೇ ಸಮಾಜದ ಜವಾಬ್ದಾರಿಯನ್ನು ಅರಿತುಕೊಂಡಿದ್ದಾಳೆ. ಮತದಾನವು ಪ್ರಜಾಪ್ರಭುತ್ವದ ಮೂಲಭೂತ ಹಕ್ಕು ಎಂಬ ಅರಿವು ಜನರಿಗೆ ಮೂಡಿಸುವ ಉದ್ದೇಶದಿಂದ ಅವಳು ಹಲವು ಪ್ರದೇಶಗಳಲ್ಲಿ ಸಂಚರಿಸುತ್ತಿದ್ದಾಳೆ. ಮಂಗಳೂರು, ಬಂಟ್ವಾಳ ಮಾತ್ರವಲ್ಲದೆ ಮಂಜೇಶ್ವರ, ಕಾಸರಗೋಡು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತೆರಳಿ ಜನರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುತ್ತಿರುವುದು ವಿಶೇಷ. ಐದು ಭಾಷೆಗಳ ಪಾಂಡಿತ್ಯ – ಜಾಗೃತಿಗೆ ಶಕ್ತಿ ಇನ್ನೂ ಆರುನೇ ತರಗತಿಯಲ್ಲಿ ಓದುತ್ತಿರುವ ಸನ್ನಿಧಿ, ಐದು ಭಾಷೆಗಳನ್ನು ಕಲಿತಿರುವುದು ಅವಳಿಗೆ ದೊಡ್ಡ ಶಕ್ತಿ. ಭಾಷಾ ಸಾಮರ್ಥ್ಯವನ್ನು ಬಳಸಿ ವಿವಿಧ ಪ್ರದೇಶಗಳ ಜನರೊಂದಿಗೆ ಸುಲಭವಾಗಿ ಸಂವಹನ ನಡೆಸಿ,…
ಮಂಗಳೂರು ಬಾವುಟಗುಡ್ಡೆ: ತುಳುನಾಡ ರಕ್ಷಣಾ ವೇದಿಕೆ ಹಾಗೂ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನ ಸಮಿತಿ ಸಂಯುಕ್ತ ಆಶ್ರಯದಲ್ಲಿ 1837ನೇ ತುಳುನಾಡ ಸ್ವಾತಂತ್ರ್ಯ ದಿನಾಚರಣೆಯನ್ನು ಏಪ್ರಿಲ್ 5ರಂದು ಭಕ್ತಿಭಾವ ಮತ್ತು ಗೌರವದೊಂದಿಗೆ ಆಚರಿಸಲಾಯಿತು. ಬಾವುಟ ಗುಡ್ಡದಲ್ಲಿ ಬ್ರಿಟಿಷರ ಬಾವುಟ ತೆಗೆದು ತುಳುನಾಡ ಬಾವುಟ ಹಾರಿಸಿ ಸ್ವಾತಂತ್ರ ಘೋಷಣೆ ಮಾಡಿದ ದಿನದ ನೆನಪಿನ ಅಂಗವಾಗಿ ಅಮರಸುಳ್ಯ ಕ್ರಾಂತಿ ಹೋರಾಟ ಸ್ಮರಣಾರ್ಥವಾಗಿ ಬೆಳಗ್ಗೆ 10 ಗಂಟೆಗೆ ಬಾವುಟಗುಡ್ಡೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಪುಷ್ಪಾರ್ಚನೆ ಸಲ್ಲಿಸಿ, ಸ್ಮರಣಾ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಕ್ರಾಂತಿಯ ವೀರರನ್ನು ಸ್ಮರಿಸಿ, ಅವರ ತ್ಯಾಗ ಮತ್ತು ಹೋರಾಟವನ್ನು ನೆನಪಿಸಿಕೊಂಡರು. ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಗಣ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತುಳುನಾಡಿನ ಇತಿಹಾಸದಲ್ಲಿ ಅಮರಸುಳ್ಯ ಕ್ರಾಂತಿಯ ಮಹತ್ವವನ್ನು ವಿವರಿಸಿದರು. ಈ ರೀತಿಯ ಆಚರಣೆಗಳ ಮೂಲಕ ಇತಿಹಾಸದ ಮಹತ್ವವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಅತ್ಯಂತ ಅಗತ್ಯವೆಂದು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ…
ಕಾರ್ಕಳ : ಜನತಾದಳ (ಜೆಡಿಎಸ್) ಪಕ್ಷದ 25ನೇ ವರ್ಷದ ರಜತ ಮಹೋತ್ಸವವು ಏಪ್ರಿಲ್ 4ರಂದು ಹೆಬ್ರಿ ಸಮೀಪದ ಪರಿಮಳ ಲೇಔಟ್ನಲ್ಲಿ ಅತ್ಯಂತ ಅದ್ದೂರಿಯಾಗಿ, ಶಿಸ್ತುಬದ್ಧವಾಗಿ ಹಾಗೂ ಭರ್ಜರಿ ಯಶಸ್ಸಿನೊಂದಿಗೆ ನೆರವೇರಿತು. ರಾಜಕೀಯ ಉತ್ಸಾಹ, ಸಾಂಸ್ಕೃತಿಕ ವೈಭವ ಮತ್ತು ಜನಸಾಮಾನ್ಯರ ಭಾರೀ ಭಾಗವಹಿಸುವಿಕೆಯಿಂದ ಈ ಕಾರ್ಯಕ್ರಮ ವಿಶೇಷ ಮೆರುಗು ಪಡೆದುಕೊಂಡಿತು. ಸಂಜೆ 6 ಗಂಟೆಗೆ ಕಾರ್ಯಕ್ರಮ ಪ್ರಾರಂಭವಾಗುತ್ತಿದ್ದಂತೆಯೇ ನೂರಾರು ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವಜನಿಕರು ಆಗಮಿಸಿ ಸ್ಥಳವನ್ನು ಜನಸಾಗರವಾಗಿಸಿದರು. ಪಕ್ಷದ ಧ್ವಜಗಳು, ಬ್ಯಾನರ್ಗಳು ಹಾಗೂ ಘೋಷಣೆಗಳು ಕಾರ್ಯಕ್ರಮದ ವಾತಾವರಣವನ್ನು ಮತ್ತಷ್ಟು ಉತ್ಸಾಹಭರಿತಗೊಳಿಸಿತು. ಸಾಂಸ್ಕೃತಿಕ ಕಾರ್ಯಕ್ರಮಗಳು ಈ ಸಂಭ್ರಮಾಚರಣೆಯ ಪ್ರಮುಖ ಆಕರ್ಷಣೆಯಾಗಿದ್ದು, ಹಾಸ್ಯ ಪ್ರದರ್ಶನಗಳು, ನೃತ್ಯ ಕಾರ್ಯಕ್ರಮಗಳು ಹಾಗೂ ಲೈವ್ ಮ್ಯೂಸಿಕ್ ಪ್ರೇಕ್ಷಕರನ್ನು ಮನರಂಜಿಸಿತು. ವಿಶೇಷವಾಗಿ ZEE ಕನ್ನಡ ಕಾಮಿಡಿ ಕಿಲಾಡಿ ತಂಡದ ಕಲಾವಿದರು ನೀಡಿದ ಮನರಂಜನಾ ಕಾರ್ಯಕ್ರಮಗಳು ಜನರಿಂದ ಭಾರೀ ಮೆಚ್ಚುಗೆ ಪಡೆದವು. ಪ್ರೇಕ್ಷಕರು ಹರ್ಷೋದ್ಗಾರಗಳೊಂದಿಗೆ ಕಲಾವಿದರನ್ನು ಅಭಿನಂದಿಸಿದರು. ರಾತ್ರಿ 8 ಗಂಟೆಗೆ ನಡೆದ ಪ್ರಮುಖ ಸಭಾ ಕಾರ್ಯಕ್ರಮವನ್ನು ಜೆಡಿಎಸ್ ಉಡುಪಿ ಜಿಲ್ಲಾಧ್ಯಕ್ಷರಾದ ಕಾಪು…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿನ 34 ಶಾಖೆಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು 2025-26ನೇ ಸಾಲಿನಲ್ಲಿ ರೂ. 3.50 ಕೋಟಿಗೂ ಅಧಿಕ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್ ತಿಳಿಸಿದ್ದಾರೆ. 2012ರಲ್ಲಿ ಕೇವಲ 1200 ಸದಸ್ಯರೊಂದಿಗೆ ಆರಂಭವಾದ ಈ ಸಂಘ ಇಂದು 9079 ಸದಸ್ಯರನ್ನು ಹೊಂದಿದ್ದು, ರೂ. 1.80 ಕೋಟಿಗೂ ಅಧಿಕ ಷೇರು ಬಂಡವಾಳವನ್ನು ಹೊಂದಿದೆ. ರೂ. 22 ಲಕ್ಷ ಠೇವಣಿಯಿಂದ ಆರಂಭಗೊಂಡ ಸಂಸ್ಥೆ ಇದೀಗ ರೂ. 305 ಕೋಟಿಗೂ ಅಧಿಕ ಠೇವಣಿಯನ್ನು ಹೊಂದಿದೆ. ಜೊತೆಗೆ ರೂ. 278 ಕೋಟಿಗೂ ಅಧಿಕ ಸಾಲ ವಿತರಣೆ ಮಾಡಿ ಸಹಕಾರಿ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿದೆ. ಸಂಘವು ಪ್ರತಿವರ್ಷ ಲೆಕ್ಕ ಪರಿಶೋಧನೆಯಲ್ಲಿ ‘A’ ಶ್ರೇಣಿಯನ್ನು ಪಡೆದುಕೊಂಡು ತನ್ನ ಸ್ಥಿರತೆಯನ್ನು ಸಾಬೀತುಪಡಿಸಿದೆ. ಆರಂಭದಲ್ಲಿ ಮೂವರು ಸಿಬ್ಬಂದಿಗಳಿಂದ ಕಾರ್ಯಾರಂಭ ಮಾಡಿದ ಸಂಸ್ಥೆ ಇಂದು 95% ಮಹಿಳಾ ಸಿಬ್ಬಂದಿಯನ್ನು ಹೊಂದಿದ್ದು ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡುತ್ತಿದೆ. ಪ್ರಮುಖ ಸಾಧನೆಗಳು: ಸೇವೆಗಳು ಮತ್ತು ಯೋಜನೆಗಳು:…
ಮಂಗಳೂರು : ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಶತಮಾನಕ್ಕೂ ಅಧಿಕ ಇತಿಹಾಸ ಹೊಂದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ಸಿಡಿಸಿಸಿ ಬ್ಯಾಂಕ್) 2025-26ನೇ ಸಾಲಿನಲ್ಲಿ ಅಪೂರ್ವ ಸಾಧನೆ ಮಾಡಿ ಮತ್ತೊಮ್ಮೆ ತನ್ನ ಶಕ್ತಿ ಪ್ರದರ್ಶಿಸಿದೆ. ಆಧುನಿಕ ತಂತ್ರಜ್ಞಾನ ಮತ್ತು ಗ್ರಾಹಕ ಸ್ನೇಹಿ ಸೇವೆಗಳ ಸಮನ್ವಯದಿಂದ ಬ್ಯಾಂಕ್ ಈಗ ರಾಜ್ಯ ಮಟ್ಟದಲ್ಲೇ ಮಾದರಿ ಸಂಸ್ಥೆಯಾಗಿ ಹೊರಹೊಮ್ಮಿದೆ. 🚀 ದಾಖಲೆ ವ್ಯವಹಾರ – ಹೊಸ ಮೈಲುಗಲ್ಲು ಈ ಆರ್ಥಿಕ ವರ್ಷದಲ್ಲಿ ಬ್ಯಾಂಕ್ ಒಟ್ಟು ರೂ. 20,226.19 ಕೋಟಿ ವ್ಯವಹಾರ ದಾಖಲಿಸಿದ್ದು, ಕಳೆದ ಸಾಲಿನ ರೂ.17,366.68 ಕೋಟಿಗೆ ಹೋಲಿಸಿದರೆ ಶೇ.16.47ರಷ್ಟು ಏರಿಕೆ ಕಂಡಿದೆ. ಈ ಸಾಧನೆಯೊಂದಿಗೆ ಬ್ಯಾಂಕ್ ರಾಜ್ಯದ ಸಹಕಾರಿ ಬ್ಯಾಂಕ್ಗಳಲ್ಲಿ ಮುಂಚೂಣಿಯಲ್ಲಿ ತನ್ನ ಸ್ಥಾನವನ್ನು ಮತ್ತಷ್ಟು ಬಲಪಡಿಸಿದೆ.ಇದೀಗ 2026-27ನೇ ಸಾಲಿಗೆ ರೂ. 22,500 ಕೋಟಿ ವ್ಯವಹಾರ ಗುರಿ ಹೊಂದಿರುವುದು ಬ್ಯಾಂಕ್ನ ಮಹತ್ವಾಕಾಂಕ್ಷೆಯನ್ನು ತೋರಿಸುತ್ತದೆ. 💰 ಲಾಭದಲ್ಲಿ ದಾಖಲೆ – ಆರ್ಥಿಕ ಶಕ್ತಿಯ ದೃಢತೆ ಬ್ಯಾಂಕ್ 2025-26ರಲ್ಲಿ ರೂ. 131.14 ಕೋಟಿ ಲಾಭ ಗಳಿಸಿದ್ದು,…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
