Author: Tulunada Surya

ಮಂಗಳೂರು, ಜೂನ್ 9: ಜೆಇಇ ಅಡ್ವಾನ್ಸ್-2026 ಪರೀಕ್ಷೆಯಲ್ಲಿ ಆಲ್ ಇಂಡಿಯಾ ರ‍್ಯಾಂಕ್ (ಎಐಆರ್) 79 ಹಾಗೂ ಜೆಇಇ ಮೈನ್ಸ್-2026 ಪರೀಕ್ಷೆಯಲ್ಲಿ ಆಲ್ ಇಂಡಿಯಾ ರ‍್ಯಾಂಕ್ 335 ಗಳಿಸುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬೆಂದೂರ್ ವೆಲ್ ನಿವಾಸಿ ಪ್ರತಿಭಾವಂತ ವಿದ್ಯಾರ್ಥಿ ಬಿ. ವಿಶ್ರುತ್ ಕೃಷ್ಣ ಆರ್. ಭಟ್ ಅವರ ಮನೆಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ ನೀಡಿ ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ದೇಶದ ಅತ್ಯಂತ ಕಠಿಣ ಮತ್ತು ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಒಂದಾದ ಜೆಇಇ ಅಡ್ವಾನ್ಸ್‌ನಲ್ಲಿ ವಿಶ್ರುತ್ ಸಾಧಿಸಿರುವ ಯಶಸ್ಸು ದಕ್ಷಿಣ ಕನ್ನಡ ಜಿಲ್ಲೆಯ ಯುವ ಸಮುದಾಯಕ್ಕೆ ಪ್ರೇರಣಾದಾಯಕವಾಗಿದೆ ಎಂದು ಹೇಳಿದರು. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಟಾಪರ್ ಆಗಿ ಹೊರಹೊಮ್ಮಿರುವುದರ ಜೊತೆಗೆ ಕರ್ನಾಟಕದ ಅಗ್ರ ಹತ್ತು ವಿದ್ಯಾರ್ಥಿಗಳ ಪೈಕಿ ಸ್ಥಾನ ಪಡೆದಿರುವುದು ಜಿಲ್ಲೆಯ ಶೈಕ್ಷಣಿಕ ಸಾಮರ್ಥ್ಯವನ್ನು ರಾಷ್ಟ್ರ ಮಟ್ಟದಲ್ಲಿ ಅನಾವರಣಗೊಳಿಸಿದೆ ಎಂದು…

Read More

ಮಂಗಳೂರು, ಜೂನ್ 9: ಸಮಾಜಸೇವೆಯ ಮೂಲಕ ದಿವಂಗತ ತಾಯಿಯ ಆದರ್ಶವನ್ನು ಜೀವಂತವಾಗಿರಿಸುವ ಉದ್ದೇಶದಿಂದ ಮೂಡುಶೆಡ್ಡೆ ಹೊಸಲಕ್ಕೆ ಕುಟುಂಬವು ಮಾನವೀಯ ಕಾರ್ಯವೊಂದನ್ನು ನೆರವೇರಿಸಿದೆ. ದಿವಂಗತ ದೇವಕಿ ಸಂಜೀವ ಶೆಟ್ಟಿ ಅವರ ನಾಲ್ಕನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಬಡ ಕುಟುಂಬಕ್ಕೆ ನೂತನವಾಗಿ ನಿರ್ಮಿಸಲಾದ ಸುಸಜ್ಜಿತ ಮನೆಯ ಹಸ್ತಾಂತರ ಕಾರ್ಯಕ್ರಮ ಮಂಗಳವಾರ ನೆರವೇರಿತು. ಮೂಡುಶೆಡ್ಡೆ ನೇಜಿಗುರಿಯ ನಿವಾಸಿ ಗಿರಿಜ ಅವರ ಕುಟುಂಬವು ಹಲವು ವರ್ಷಗಳಿಂದ ವಾಸದ ಸಂಕಷ್ಟ ಅನುಭವಿಸುತ್ತಿದ್ದು, ಅವರ ಮನೆ ಸಂಪೂರ್ಣವಾಗಿ ಕುಸಿದುಬಿದ್ದ ಹಿನ್ನೆಲೆಯಲ್ಲಿ ವಕೀಲ ಉಮೇಶ್ ಶೆಟ್ಟಿ ಹೊಸಲಕ್ಕೆ ಹಾಗೂ ಅವರ ಸಹೋದರರು ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ನೂತನ ಮನೆ ನಿರ್ಮಿಸಿ ಕೊಟ್ಟಿದ್ದಾರೆ. ಕಾರ್ಯಕ್ರಮದಲ್ಲಿ ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿ, ಮನೆಯ ಕೀಲಿಯನ್ನು ಕುಟುಂಬಕ್ಕೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಕೀಲ ಉಮೇಶ್ ಶೆಟ್ಟಿ ಹೊಸಲಕ್ಕೆ, “ನಮ್ಮ ತಾಯಿ ದೇವಕಿ ಶೆಟ್ಟಿಯವರು ಸಂಕಷ್ಟದಲ್ಲಿರುವವರಿಗೆ ನೆರವಾಗುವುದನ್ನೇ ಜೀವನದ ಧ್ಯೇಯವನ್ನಾಗಿಸಿಕೊಂಡಿದ್ದರು. ಅವರ ಆದರ್ಶಗಳಿಂದ ಪ್ರೇರಿತರಾಗಿ ಸಮಾಜಕ್ಕೆ ಉಪಯುಕ್ತವಾದ ಸೇವೆ ಸಲ್ಲಿಸಬೇಕೆಂಬ…

Read More

ಮಹಾಕಾವ್ಯಗಳ ವಾಚನ – ಪ್ರವಚನದಿಂದ ಪುರಾಣದ ಅರಿವು: ಡಾ| ಸತೀಶ್ ಭಂಡಾರಿ ಮಂಗಳೂರು: ‘ಹಿಂದೆ ಮಳೆಗಾಲ ಆರಂಭವಾಗಿ ಯಕ್ಷಗಾನ ಮೇಳಗಳು ಒಳ ಸೇರಿದಾಗ ಮನೆ ಮನೆಗಳಲ್ಲಿ ಪುರಾಣ ವಾಚನ ನಡೆಯುತ್ತಿತ್ತು. ನಮ್ಮ ಹಿರಿಯರು ಅವಿದ್ಯಾವಂತರಾಗಿದ್ದರೂ ಪುರಾಣ ಪುಣ್ಯ ಕಥೆಗಳನ್ನು ತಿಳಿದುಕೊಂಡದ್ದು ಭಾರತೀಯ ಮಹಾಕಾವ್ಯಗಳ ವಾಚನ – ಪ್ರವಚನಗಳಿಂದ’ ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ನಿಕಟ ಪೂರ್ವ ಉಪಕುಲಪತಿ ಡಾ| ಸತೀಶ್ ಕುಮಾರ್ ಭಂಡಾರಿ ಹೇಳಿದ್ದಾರೆ. ಕರ್ನಾಟಕ ಗಮಕ ಕಲಾ ಪರಿಷತ್ತು ಮಂಗಳೂರು ತಾಲೂಕು ಘಟಕ ಮತ್ತು ತುಳು ಅಧ್ಯಯನ ಕೇಂದ್ರ ನಿಟ್ಟೆ ವಿಶ್ವವಿದ್ಯಾನಿಲಯ ಇದರ ಸಹಯೋಗದಲ್ಲಿ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಆಯೋಜಿಸಿದ್ದ ಕವಿ ಮಂದಾರ ಕೇಶವ ಭಟ್ಟ ವಿರಚಿತ ತುಳು ಮಹಾಕಾವ್ಯ ‘ಮಂದಾರ ರಾಮಾಯಣ’ ಸಪ್ತಾಹದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.ವೇದಮೂರ್ತಿ ಕೃಷ್ಣರಾಜ ತಂತ್ರಿ ಕುಡುಪು ಮತ್ತು ವೇದಮೂರ್ತಿ ಹರಿ ಉಪಾಧ್ಯಾಯ ವಾಮಂಜೂರು, ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಧರ್ಮದರ್ಶಿ ಡಾ| ಹರಿಕೃಷ್ಣ ಪುನರೂರು ಸಭೆಯ ಅಧ್ಯಕ್ಷತೆ…

Read More

ದಾವಣಗೆರೆ, ಜೂನ್ 9: ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಬಸವಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪ ಕೇಳಿಬಂದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಾಹಿತಿಯ ಪ್ರಕಾರ, ಜೂನ್ 3ರಂದು ಈ ದುರ್ಘಟನೆ ನಡೆದಿದ್ದು, ಕೃತ್ಯ ಎಸಗಿದ ಆರೋಪಿಗಳು ಘಟನೆಯ ವಿಡಿಯೊವನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದಾಗಿ ತಿಳಿದುಬಂದಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪೊಲೀಸ್ ಇಲಾಖೆ ತೀವ್ರ ಕ್ರಮ ಕೈಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 10 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಘಟನೆಯ ಗಂಭೀರತೆಯನ್ನು ಗಮನಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಟಿ. ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆಯನ್ನು ವೇಗಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಂತ್ರಸ್ತ ಮಹಿಳೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಗತ್ಯ ವೈದ್ಯಕೀಯ ಹಾಗೂ ಮಾನಸಿಕ ಆರೈಕೆಯನ್ನು ಒದಗಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣ ದಾಖಲಿಸಿಕೊಂಡಿರುವ ಬಸವಪಟ್ಟಣ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದು, ಆರೋಪಿಗಳ…

Read More

ಮಂಗಳೂರು, ಜೂನ್ 9: ನಗರದ ಖ್ಯಾತ ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್‌ಗೆ ಒಳಪಡಿಸಿ ಖಾಸಗಿ ಫೋಟೋ ಹಾಗೂ ವಿಡಿಯೊಗಳನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್ ನಡೆಸಿ ಕೋಟ್ಯಂತರ ರೂಪಾಯಿ ಹಣ ವಸೂಲಿ ಮಾಡಿದ ಆರೋಪದ ಮೇರೆಗೆ ಯುವ ಕಾಂಗ್ರೇಸ್ ಮುಖಂಡ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಉದ್ಯಮಿ ನೀಡಿದ ದೂರಿನ ಪ್ರಕಾರ, 2024ರಲ್ಲಿ ಜಿತೇಶ್ ಎಂಬಾತ ಉದ್ಯಮಿಯ ಖಾಸಗಿ ಫೋಟೋ ಮತ್ತು ವಿಡಿಯೊಗಳನ್ನು ತನ್ನ ವಶದಲ್ಲಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಲು ಆರಂಭಿಸಿದ್ದಾನೆ ಎನ್ನಲಾಗಿದೆ. ಈ ದೃಶ್ಯಗಳನ್ನು ಉದ್ಯಮಿಯ ಪತ್ನಿಗೆ ತೋರಿಸುವುದಾಗಿ ಬೆದರಿಕೆ ಹಾಕಿ ಆರಂಭದಲ್ಲಿ ₹35 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ವಿಚಾರವನ್ನು ಉದ್ಯಮಿ ತನ್ನ ಪರಿಚಯಸ್ಥನಾದ ನಿಝಾಮ್‌ಗೆ ತಿಳಿಸಿದ ಬಳಿಕವೂ ಸಮಸ್ಯೆ ಬಗೆಹರಿಯದೇ, ನಿಝಾಮ್ ಕೂಡ ಜಿತೇಶ್ ಜೊತೆ ಸೇರಿ ಮತ್ತಷ್ಟು ಹಣಕ್ಕಾಗಿ ಒತ್ತಡ ಹೇರಿದ್ದಾನೆ ಎಂದು ಆರೋಪಿಸಲಾಗಿದೆ. ಬಳಿಕ ಜಿತೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸುಳ್ಳು ಕಥೆಯನ್ನು ಸೃಷ್ಟಿಸಿ, ಆತ ಬರೆದಿದ್ದಾನೆ ಎನ್ನಲಾದ ಡೆತ್ ನೋಟ್‌ನಲ್ಲಿ…

Read More

ಬೆಂಗಳೂರು, ಜೂನ್ 9: ರಾಜ್ಯದ ಯುವಜನರ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಅಪ್ರಾಪ್ತ ವಯಸ್ಕರಿಗೆ ಮದ್ಯ ಲಭ್ಯವಾಗುವುದನ್ನು ತಡೆಯಲು ಕರ್ನಾಟಕ ಸರ್ಕಾರ ಮಹತ್ವದ ಹಾಗೂ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಬೆಂಗಳೂರಿನಲ್ಲಿ ಅಪ್ರಾಪ್ತ ವಯಸ್ಕರು ಸುಲಭವಾಗಿ ಮದ್ಯ ಪಡೆಯುತ್ತಿರುವ ಬಗ್ಗೆ ವ್ಯಕ್ತವಾಗುತ್ತಿರುವ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ನಗರದಲ್ಲಿನ ಎಲ್ಲಾ ಪಬ್‌ಗಳು, ಬ್ರೂವರೀಸ್‌, ಬಾರ್‌ಗಳು, ಕ್ಲಬ್‌ಗಳು, ಲಾಂಜ್‌ಗಳು ಹಾಗೂ ಮದ್ಯ ಪೂರೈಸುವ ರೆಸ್ಟೋರೆಂಟ್‌ಗಳಲ್ಲಿ ಕಡ್ಡಾಯ ವಯೋಮಿತಿ ಪರಿಶೀಲನೆ ಜಾರಿಗೊಳಿಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಇತ್ತೀಚೆಗೆ ನಡೆಸಲಾದ ಮಹತ್ವದ ಅಧ್ಯಯನವೊಂದರಲ್ಲಿ ಬೆಂಗಳೂರಿನ 4,000ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಸಮೀಕ್ಷೆಗೆ ಒಳಪಡಿಸಲಾಗಿದ್ದು, ಸುಮಾರು ಮೂರರಲ್ಲಿ ಒಬ್ಬ ಯುವಕ ಅಥವಾ ಯುವತಿ ಮದ್ಯ ಅಥವಾ ತಂಬಾಕು ಬಳಕೆಯಿಂದ ಆರೋಗ್ಯ ಸಮಸ್ಯೆಗಳ ಅಪಾಯದಲ್ಲಿರುವುದು ಬೆಳಕಿಗೆ ಬಂದಿದೆ. ಇನ್ನೂ ಆತಂಕಕಾರಿ ಸಂಗತಿಯೆಂದರೆ, ಕೆಲವರು 17 ವರ್ಷ ತುಂಬುವ ಮುನ್ನವೇ ಮದ್ಯ ಸೇವನೆ ಆರಂಭಿಸಿರುವುದು ಅಧ್ಯಯನದಲ್ಲಿ ಬಹಿರಂಗಗೊಂಡಿದೆ. ಈ ಅಂಶಗಳು ಸರ್ಕಾರದ ಗಮನ ಸೆಳೆದಿದ್ದು,…

Read More

ಮಿಂಡಾನಾವೊ (ಫಿಲಿಪ್ಪೀನ್ಸ್): ಮಿಂಡಾನಾವೊ ಪ್ರಾಂತ್ಯದಲ್ಲಿ ಸಂಭವಿಸಿದ ಪ್ರಬಲ ಭೂಕಂಪವು ಶಾಲೆಗಳ ಪುನರಾರಂಭದ ಮೊದಲ ದಿನವೇ ಸಂಭವಿಸಿದ್ದು, ಸಾವಿರಾರು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ತೀವ್ರ ಆತಂಕ ಹಾಗೂ ಭೀತಿಯನ್ನು ಉಂಟುಮಾಡಿದೆ. ಸುದೀರ್ಘ ರಜೆಯ ಬಳಿಕ ಮಕ್ಕಳು ಹೊಸ ಉತ್ಸಾಹದೊಂದಿಗೆ ಶಾಲೆಗೆ ಆಗಮಿಸಿದ್ದ ಸಂದರ್ಭದಲ್ಲಿ ಈ ಪ್ರಕೃತಿ ವಿಕೋಪ ಸಂಭವಿಸಿರುವುದು ದುರಂತದ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಸೋಮವಾರ ಮುಂಜಾನೆ ವಿವಿಧ ಶಾಲೆಗಳಲ್ಲಿ ಧ್ವಜಾರೋಹಣ ಮತ್ತು ಪ್ರಾರ್ಥನಾ ಸಭೆಗಳು ನಡೆಯುತ್ತಿದ್ದ ವೇಳೆ ಏಕಾಏಕಿ ಭೂಮಿ ಭಾರೀ ಪ್ರಮಾಣದಲ್ಲಿ ಕಂಪಿಸಲು ಆರಂಭಿಸಿತು. ಮಹಾಯಾಹಾಯ್ ಪ್ರಾಥಮಿಕ ಶಾಲೆ ಸೇರಿದಂತೆ ಹಲವು ಶಾಲೆಗಳಲ್ಲಿ ನೂರಾರು ವಿದ್ಯಾರ್ಥಿಗಳು ಸಾಲಾಗಿ ನಿಂತಿದ್ದಾಗಲೇ ಭೂಕಂಪ ಸಂಭವಿಸಿದ್ದು, ಪರಿಸ್ಥಿತಿ ಕೆಲ ಕ್ಷಣಗಳಲ್ಲೇ ಭಯಾನಕ ರೂಪ ಪಡೆದುಕೊಂಡಿತು. ಭೂಕಂಪದ ತೀವ್ರತೆಗೆ ಬೆಚ್ಚಿಬಿದ್ದ ಮಕ್ಕಳು ಕಿರುಚಾಡುತ್ತಾ, ಅಳುತ್ತಾ ಪ್ರಾಣಭಯದಿಂದ ಎಲ್ಲೆಡೆ ಓಡಲಾರಂಭಿಸಿದರು. ಅನೇಕ ಶಾಲೆಗಳಲ್ಲಿ ಉಂಟಾದ ಗೊಂದಲ ಮತ್ತು ಆತಂಕದಿಂದ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಜ್ಞೆ ತಪ್ಪಿ ಬಿದ್ದಿರುವುದಾಗಿ ವರದಿಯಾಗಿದೆ. ಕೆಲವು ಹಳೆಯ ಶಾಲಾ ಕಟ್ಟಡಗಳ ಮೇಲ್ಛಾವಣಿಗಳ ಶೆಡ್‌ಗಳು…

Read More

ಉಡುಪಿ, ಜೂನ್ 7: ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಜನತಾದಳ (ಜಾತ್ಯತೀತ) ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕ್ಷೇತ್ರ ಮಟ್ಟದ ಪ್ರಮುಖರ ಸಭೆಯು ಭಾನುವಾರ ಸಂಜೆ ಕ್ಷೇತ್ರಾಧ್ಯಕ್ಷರಾದ ಜಯ ಪೂಜಾರಿ ಲಕ್ಷಿನಗರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಪಕ್ಷದ ಸಂಘಟನೆ, ಸದಸ್ಯತ್ವ ವಿಸ್ತರಣೆ ಹಾಗೂ ಮುಂಬರುವ ರಾಜಕೀಯ ಸವಾಲುಗಳನ್ನು ಎದುರಿಸುವ ಕುರಿತು ಸಭೆಯಲ್ಲಿ ವ್ಯಾಪಕ ಚರ್ಚೆ ನಡೆಯಿತು. ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಜೆಡಿಎಸ್ ಉಡುಪಿ ಜಿಲ್ಲಾ ಅಧ್ಯಕ್ಷರಾದ ಯೋಗೀಶ್ ವಿ. ಶೆಟ್ಟಿ ಬಾಲಾಜಿ ಅವರು, ಪಕ್ಷದ ಇತಿಹಾಸ, ತತ್ವಸಿದ್ಧಾಂತಗಳು ಹಾಗೂ ರಾಷ್ಟ್ರ ಮತ್ತು ರಾಜ್ಯ ರಾಜಕಾರಣದಲ್ಲಿ ಜೆಡಿಎಸ್ ಪಕ್ಷದ ಪಾತ್ರದ ಬಗ್ಗೆ ವಿವರಿಸಿದರು. ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಜನಪರ ಆಡಳಿತ, ರೈತಪರ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳನ್ನು ಸ್ಮರಿಸಿದ ಅವರು, ಪಕ್ಷದ ಕಾರ್ಯಕರ್ತರು ಈ ಸಾಧನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಮೂಲಕ ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕೆಂದು ಕರೆ ನೀಡಿದರು. ಸಭೆಯಲ್ಲಿ ಜಿಲ್ಲಾ ಮಾಜಿ ಅಧ್ಯಕ್ಷರಾದ…

Read More

ಬೆಂಗಳೂರು, ಜೂನ್ 6: ಮಾಜಿ ಶಾಸಕರು ಹಾಗೂ ಗ್ರೇಟರ್ ಬೆಂಗಳೂರು ಪಕ್ಷದ ರಾಜ್ಯಾಧ್ಯಕ್ಷರಾದ ಎಚ್.ಎಂ. ರಮೇಶ್ ಗೌಡ ಅವರ ಅಧ್ಯಕ್ಷತೆಯಲ್ಲಿ ಇಂದು ಜೆ.ಪಿ. ಭವನದಲ್ಲಿ ಗ್ರೇಟರ್ ಬೆಂಗಳೂರು ಪಕ್ಷದ ಮುಸ್ಲಿಂ ಅಲ್ಪಸಂಖ್ಯಾತರ ವಿಭಾಗದ ಪ್ರಮುಖ ಸಭೆ ನಡೆಯಿತು. ಮುಂಬರುವ ಜಿಬಿಎ (ಗ್ರೇಟರ್ ಬೆಂಗಳೂರು ಅಥಾರಿಟಿ) ಚುನಾವಣೆಯ ಪೂರ್ವ ಸಿದ್ಧತೆ, ಪಕ್ಷದ ಸಂಘಟನೆ ಬಲವರ್ಧನೆ, BLA-1 ಮತ್ತು BLA-2 ನೇಮಕಾತಿ, ಅವರ ಕರ್ತವ್ಯಗಳು ಹಾಗೂ ಜವಾಬ್ದಾರಿಗಳ ಕುರಿತು ಸಭೆಯಲ್ಲಿ ಸಮಗ್ರ ಚರ್ಚೆ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಎಚ್.ಎಂ. ರಮೇಶ್ ಗೌಡ ಅವರು, ಚುನಾವಣಾ ಯಶಸ್ಸಿಗೆ ಸಂಘಟನೆಯ ಬಲವರ್ಧನೆ ಹಾಗೂ ಮತದಾರರೊಂದಿಗೆ ನಿರಂತರ ಸಂಪರ್ಕ ಅತ್ಯಂತ ಅಗತ್ಯವಾಗಿದೆ ಎಂದು ಹೇಳಿದರು. ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿಯೂ ಪಕ್ಷದ ಸಂಘಟನೆಯನ್ನು ಇನ್ನಷ್ಟು ಗಟ್ಟಿಗೊಳಿಸುವ ಜೊತೆಗೆ, ಮತದಾರರ ಪಟ್ಟಿಯಲ್ಲಿನ ಲೋಪದೋಷಗಳನ್ನು ಸರಿಪಡಿಸುವ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision -…

Read More

ಮಂಗಳೂರು, ಜೂನ್ 6: ಪ್ರತಿಷ್ಠಿತ ಪಿ.ಪಿ. ಗೋಮತಿ ಸ್ಮಾರಕ ಉಪನ್ಯಾಸ ಮಾಲಿಕೆ-2026ರ ಅಂಗವಾಗಿ ಖ್ಯಾತ ಲೇಖಕಿ ಹಾಗೂ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮವು ಜೂನ್ 9ರಂದು ಬೆಳಿಗ್ಗೆ 10.30ಕ್ಕೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ಈ ಕುರಿತು ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪ್ರೊ. ಪಿ.ಎಲ್. ಧರ್ಮ ರವರು ಪಿ.ಪಿ. ಗೋಮತಿ ಎಜುಕೇಶನ್ ಟ್ರಸ್ಟ್, ಮಂಗಳೂರು ವಿಶ್ವವಿದ್ಯಾನಿಲಯ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು. ಈ ವರ್ಷದ ಉಪನ್ಯಾಸದಲ್ಲಿ ದೀಪಾ ಭಸ್ತಿ ಅವರು “ಚಿಂತನೆಯೇ ಭಿನ್ನಮತವಾದಾಗ: ಭಾಷೆ ಮತ್ತು ಸಂಸ್ಕೃತಿ ಕುರಿತು ಕೆಲವು ಆಲೋಚನೆಗಳು” ಎಂಬ ವಿಷಯದ ಕುರಿತು ಮಾತನಾಡಲಿದ್ದಾರೆ. ಭಾಷೆ, ಸಂಸ್ಕೃತಿ, ವೈವಿಧ್ಯತೆ ಮತ್ತು ಭಿನ್ನಾಭಿಪ್ರಾಯಗಳ ಮಹತ್ವವನ್ನು ಸಮಕಾಲೀನ ಸಾಮಾಜಿಕ ಸನ್ನಿವೇಶದಲ್ಲಿ ವಿಶ್ಲೇಷಿಸುವ ಈ ಉಪನ್ಯಾಸವು ಸಾಹಿತ್ಯಾಸಕ್ತರು, ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರಿಗೆ ಹೊಸ ದೃಷ್ಟಿಕೋನ…

Read More