Author: Tulunada Surya

ಮಂಗಳೂರು, ಜೂನ್ 23: ದಕ್ಷಿಣ ಕನ್ನಡ ಜಿಲ್ಲೆಯ ಖಾಝಿಯಾಗಿ ಸೇವೆ ಸಲ್ಲಿಸಿದ್ದ ಗೌರವಾನ್ವಿತ ಧಾರ್ಮಿಕ ನಾಯಕ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ನಿಧನಕ್ಕೆ ಆರೋಗ್ಯ ಸಚಿವ U. T. Khader ಹಾಗೂ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಅಧ್ಯಕ್ಷೆ ರಮೀಜಾ ನಾಸೀರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಂತಾಪ ಸಂದೇಶದಲ್ಲಿ ಸಚಿವ ಯು.ಟಿ. ಖಾದರ್ ಅವರು, ಮುಸ್ಲಿಯಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಸಮುದಾಯಕ್ಕೆ ದೀರ್ಘಕಾಲ ಧಾರ್ಮಿಕ ಮಾರ್ಗದರ್ಶನ ನೀಡಿದ ಅಪರೂಪದ ಧಾರ್ಮಿಕ ನಾಯಕರಾಗಿದ್ದರು. ತಮ್ಮ ಜೀವನವನ್ನೆಲ್ಲ ಧರ್ಮ, ಶಿಕ್ಷಣ ಹಾಗೂ ಸಮಾಜ ಸೇವೆಗೆ ಸಮರ್ಪಿಸಿ ಸಾವಿರಾರು ಜನರಿಗೆ ದಾರಿದೀಪರಾಗಿದ್ದರು ಎಂದು ಸ್ಮರಿಸಿದ್ದಾರೆ. ಅವರ ಸರಳತೆ, ಆಳವಾದ ಧಾರ್ಮಿಕ ಜ್ಞಾನ, ಮಾನವೀಯತೆ ಹಾಗೂ ಸಮನ್ವಯದ ಮನೋಭಾವ ಎಲ್ಲರಿಗೂ ಪ್ರೇರಣೆಯಾಗಿತ್ತು. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಧಾರ್ಮಿಕ ಮೌಲ್ಯಗಳನ್ನು ಬಲಪಡಿಸುವಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದರು. ಅವರ ಅಗಲಿಕೆ ಮುಸ್ಲಿಂ ಸಮುದಾಯಕ್ಕೆ ಮಾತ್ರವಲ್ಲದೆ ಸಮಸ್ತ ಸಮಾಜಕ್ಕೂ ಅಪಾರ ನಷ್ಟವಾಗಿದೆ…

Read More

ಮಂಗಳೂರು, ಜೂನ್ 23: ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಹೊಸ ಪಡಿತರ ಚೀಟಿ (ರೇಷನ್ ಕಾರ್ಡ್) ವಿತರಣೆಯ ಪ್ರಕ್ರಿಯೆ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ಬಗ್ಗೆ ಜನತಾದಳ (ಜಾತ್ಯತೀತ) ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನಿಯೋಗವು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಮತ್ತು ಜಿಲ್ಲಾಧಿಕಾರಿಗಳ ಮೂಲಕ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರಿಗೆ ಮನವಿ ಸಲ್ಲಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತು. ಮನವಿಯಲ್ಲಿ, ರಾಜ್ಯದಾದ್ಯಂತ ಸಾವಿರಾರು ಅರ್ಹ ಕುಟುಂಬಗಳು ಹೊಸ ಪಡಿತರ ಚೀಟಿ ಪಡೆಯಲು ಎರಡು ವರ್ಷಗಳಿಂದ ಕಾಯುತ್ತಿರುವುದರಿಂದ ಸರ್ಕಾರದ ವಿವಿಧ ಜನಪರ ಯೋಜನೆಗಳು ಹಾಗೂ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗುತ್ತಿರುವ ವಿಚಾರವನ್ನು ಗಂಭೀರವಾಗಿ ಪ್ರಸ್ತಾಪಿಸಲಾಯಿತು. ಹೊಸದಾಗಿ ವಿವಾಹವಾದ ದಂಪತಿಗಳು, ಪ್ರತ್ಯೇಕ ಕುಟುಂಬವಾಗಿ ಜೀವನ ಆರಂಭಿಸಿರುವವರು, ಬಾಡಿಗೆ ಮನೆಗಳಲ್ಲಿ ವಾಸಿಸುವವರು, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳು ಸೇರಿದಂತೆ ಅನೇಕ ನಾಗರಿಕರು ಪಡಿತರ ಚೀಟಿ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿಸಲಾಯಿತು.…

Read More

ಉಡುಪಿ, ಜೂನ್ 23: ಉದ್ಯಾವರ ಪಾಪನಾಶಿನಿ ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನ ಮೃತದೇಹ ಸತತ ಹುಡುಕಾಟದ ಬಳಿಕ ಪತ್ತೆಯಾಗಿದೆ.ಮೃತರನ್ನು ಹರ್ಷಿತ್ ಶೆಟ್ಟಿ (28) ಎಂದು ಗುರುತಿಸಲಾಗಿದ್ದು, ಅವರು ಉದ್ಯಾವರ ಪಿತ್ರೋಡಿ ನಿವಾಸಿಯಾಗಿದ್ದಾರೆ.ಮಾಹಿತಿಯ ಪ್ರಕಾರ, ಸೋಮವಾರ ಮುಂಜಾನೆ ಸುಮಾರು 5 ಗಂಟೆಗೆ ಕ್ರಿಕೆಟ್ ಆಡಲು ಬೋಳಾರುಗುಡ್ಡೆ ಮೈದಾನಕ್ಕೆ ತೆರಳುವುದಾಗಿ ಮನೆಯಿಂದ ಹೊರಟಿದ್ದ ಹರ್ಷಿತ್ ಬಳಿಕ ಮನೆಗೆ ಮರಳಿರಲಿಲ್ಲ. ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತಂಕಗೊಂಡಿದ್ದರು. ಈ ನಡುವೆ ಹರ್ಷಿತ್ ಬಳಸುತ್ತಿದ್ದ ದ್ವಿಚಕ್ರ ವಾಹನ ಉದ್ಯಾವರ ಪಾಪನಾಶಿನಿ ಸೇತುವೆಯ ಮೇಲೆ ಪತ್ತೆಯಾಗಿದ್ದು, ಅವರು ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿತ್ತು.ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಸ್ಥಳೀಯರು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ ನೇತೃತ್ವದ ತಂಡ ಸೇರಿದಂತೆ ಹಲವರು ನದಿಯಲ್ಲಿ ವ್ಯಾಪಕ ಹುಡುಕಾಟ ನಡೆಸಿದರು. ಅಂತಿಮವಾಗಿ ಸತತ ಕಾರ್ಯಾಚರಣೆಯ ಬಳಿಕ ಯುವಕನ ಮೃತದೇಹ ಪತ್ತೆಯಾಗಿದೆ.ಮೃತ ಹರ್ಷಿತ್ ಶೆಟ್ಟಿ ಅವರು ರಮೇಶ್…

Read More

ಬೆಂಗಳೂರು, ಜೂನ್ 22: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಬರುವ ಬಡ ಹಾಗೂ ಸಾಮಾನ್ಯ ಜನರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಆಸ್ಪತ್ರೆಗಳಲ್ಲಿ ರೋಗಿಗಳು ಎದುರಿಸುವ ತೊಂದರೆಗಳು, ದಲ್ಲಾಳಿಗಳ ಹಾವಳಿ, ಅನಧಿಕೃತ ಹಣ ವಸೂಲಿ ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯದ ವಿರುದ್ಧ ದೂರು ಸಲ್ಲಿಸಲು ಆರೋಗ್ಯ ಸಚಿವರ ಕಚೇರಿಯಿಂದಲೇ ನೇರವಾಗಿ ನಿಯಂತ್ರಿಸಲ್ಪಡುವ 24×7 ಸಹಾಯವಾಣಿ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ U. T. Khader ತಿಳಿಸಿದ್ದಾರೆ. ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸಚಿವರು, ಸರ್ಕಾರಿ ಆಸ್ಪತ್ರೆಗಳಲ್ಲಿ ನಡೆಯುವ ಅಕ್ರಮ ಹಣ ವಸೂಲಿ ಹಾಗೂ ರೋಗಿಗಳ ಶೋಷಣೆಗೆ ಈ ವ್ಯವಸ್ಥೆ ಪರಿಣಾಮಕಾರಿ ತಡೆಗೋಡೆಯಾಗಲಿದೆ ಎಂದು ಹೇಳಿದ್ದಾರೆ. ಸಹಾಯವಾಣಿ ಮೂಲಕ ನೇರ ದೂರು ಸಲ್ಲಿಕೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊಸ ಸಹಾಯವಾಣಿ ಸಂಖ್ಯೆಯನ್ನು ಸಾರ್ವಜನಿಕರಿಗೆ ಸ್ಪಷ್ಟವಾಗಿ ಕಾಣುವಂತೆ ಪ್ರದರ್ಶಿಸಲಾಗುವುದು. ರೋಗಿಗಳ ದೂರುಗಳಿಗೆ ತಕ್ಷಣ ಸ್ಪಂದಿಸದ ಅಧಿಕಾರಿಗಳು ಹಾಗೂ…

Read More

ಉಡುಪಿ, ಜೂನ್ 23: ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.ಬೆದರಿಕೆ ಸಂದೇಶದ ಮಾಹಿತಿ ಲಭಿಸುತ್ತಿದ್ದಂತೆ ಉಡುಪಿ ನಗರ ಪೊಲೀಸರು, ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ನ್ಯಾಯಾಲಯ ಸಂಕೀರ್ಣಕ್ಕೆ ಧಾವಿಸಿ ಶೋಧ ಕಾರ್ಯಾಚರಣೆ ಆರಂಭಿಸಿದರು. ನ್ಯಾಯಾಲಯದ ಕಟ್ಟಡ ಹಾಗೂ ಆವರಣದ ವಿವಿಧ ಭಾಗಗಳಲ್ಲಿ ಸುದೀರ್ಘ ಪರಿಶೀಲನೆ ನಡೆಸಲಾಯಿತು.ಭದ್ರತಾ ದೃಷ್ಟಿಯಿಂದ ನ್ಯಾಯಾಲಯ ಸಂಕೀರ್ಣದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ನ್ಯಾಯಾಲಯಕ್ಕೆ ಆಗಮಿಸುವ ಸಾರ್ವಜನಿಕರು ಹಾಗೂ ಸಿಬ್ಬಂದಿಯ ಮೇಲೂ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ.ಇದೇ ವೇಳೆ ಬೆದರಿಕೆ ಸಂದೇಶ ಕಳುಹಿಸಿದವರ ಪತ್ತೆಗಾಗಿ ಪೊಲೀಸರು ತನಿಖೆ ಆರಂಭಿಸಿದ್ದು, ಇಮೇಲ್‌ನ ಮೂಲವನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ.ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ಶೋಧ ಕಾರ್ಯಾಚರಣೆ ಪೂರ್ಣಗೊಂಡ ಬಳಿಕವೇ ಬೆದರಿಕೆ ಸಂದೇಶದ ಸತ್ಯಾಸತ್ಯತೆ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ

Read More

ಮಂಗಳೂರು, ಜೂನ್ 22: ಕೇವಲ ಎರಡು ನಿಮಿಷ ತಡವಾಗಿ ಬಂದ ಕಾರಣಕ್ಕೆ ವಿದ್ಯಾರ್ಥಿನಿಯರನ್ನು NEET ಮರುಪರೀಕ್ಷೆಯಿಂದ ವಂಚಿಸಿರುವ ಘಟನೆ ಶಿಕ್ಷಣ ವ್ಯವಸ್ಥೆಯ ಕ್ರೌರ್ಯ ಮತ್ತು ಅಮಾನವೀಯ ಮುಖವನ್ನು ಬಯಲಿಗೆಳೆದಿದೆ ಎಂದು ಅಂತರಾಷ್ಟೀಯ ತುಳುನಾಡ ರಕ್ಷಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ರಾವ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಧ್ಯಪ್ರದೇಶದ ವಿದಿಶಾದಲ್ಲಿ ನಡೆದ NEET ಮರುಪರೀಕ್ಷೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಕೇವಲ ಎರಡು ನಿಮಿಷ ತಡವಾಗಿ ಬಂದ ಕಾರಣ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ. ಮತ್ತೊಬ್ಬ ವಿದ್ಯಾರ್ಥಿನಿ ಹಳೆಯ ಅಡ್ಮಿಟ್ ಕಾರ್ಡ್ ತಂದಿದ್ದ ಕಾರಣ ಪರೀಕ್ಷೆಯಿಂದ ವಂಚಿತಳಾಗಿದ್ದಾಳೆ. ಇದೇ ಸಂದರ್ಭದಲ್ಲಿ ತಮಿಳುನಾಡಿನಲ್ಲಿ ತಪ್ಪು ಪರೀಕ್ಷಾ ಕೇಂದ್ರಕ್ಕೆ ತೆರಳಿದ್ದ ವಿದ್ಯಾರ್ಥಿಯನ್ನು ಪೊಲೀಸರು ತಮ್ಮ ವಾಹನದಲ್ಲೇ ಸರಿಯಾದ ಪರೀಕ್ಷಾ ಕೇಂದ್ರಕ್ಕೆ ತಲುಪಿಸಿ ಮಾನವೀಯತೆಯ ಉದಾಹರಣೆ ಮೆರೆದಿದ್ದಾರೆ. ಒಂದೆಡೆ ವಿದ್ಯಾರ್ಥಿಯ ಭವಿಷ್ಯ ಉಳಿಸಲು ಆಡಳಿತ ವ್ಯವಸ್ಥೆ ಕೈಜೋಡಿಸುತ್ತಿದ್ದರೆ, ಮತ್ತೊಂದೆಡೆ ಕೇವಲ ಎರಡು ನಿಮಿಷಗಳ ವಿಳಂಬದ ನೆಪದಲ್ಲಿ ವಿದ್ಯಾರ್ಥಿಗಳ ಕನಸುಗಳನ್ನು ನಾಶಪಡಿಸುವ ಧೋರಣೆ ಖಂಡನೀಯವಾಗಿದೆ. ಇದು ಪರೀಕ್ಷಾ ವ್ಯವಸ್ಥೆಯಲ್ಲ, ಶಿಕ್ಷಾ ವ್ಯವಸ್ಥೆಯಾಗಿದೆ…

Read More

ಉಡುಪಿ, ಜೂನ್ 22: ಕಾನೂನುಬದ್ಧ ದತ್ತು ಪ್ರಕ್ರಿಯೆ ಅನುಸರಿಸದೇ ನವಜಾತ ಹೆಣ್ಣು ಮಗುವನ್ನು ಸಾಕುತ್ತಿದ್ದ ಪ್ರಕರಣವೊಂದು ಉಡುಪಿಯಲ್ಲಿ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಯ ವೈದ್ಯರು ಹಾಗೂ ಮಗುವನ್ನು ಸಾಕುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತೆಕಟ್ಟೆ-ನೇಜಾರು ನಿವಾಸಿಗಳಾದ ಪ್ರಕಾಶ್ ಮತ್ತು ಪೂರ್ಣಿಮಾ ದಂಪತಿ ಸುಮಾರು ಒಂದು ತಿಂಗಳ ಹೆಣ್ಣು ಮಗುವನ್ನು ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಸಾಕುತ್ತಿರುವ ಬಗ್ಗೆ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಶಿಶು ಅಭಿವೃದ್ಧಿ ಇಲಾಖೆ ಮತ್ತು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಜೂನ್ 19ರಂದು ದಂಪತಿಯ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತನಿಖೆ ವೇಳೆ ದಂಪತಿಗೆ ವಿವಾಹವಾಗಿ 11 ವರ್ಷಗಳಾದರೂ ಸಂತಾನವಾಗದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂಬುದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ಆಸ್ಪತ್ರೆಯೊಂದರಲ್ಲಿ ನವಜಾತ ಶಿಶು ಇರುವ ಮಾಹಿತಿ ದೊರೆತಿದ್ದು, ಅದರ ಆಧಾರದ ಮೇಲೆ ಉಡುಪಿಯ ಕಾಮತ್ ನರ್ಸಿಂಗ್ ಹೋಂನ ವೈದ್ಯ ಡಾ. ಕೆ. ಸುರೇಂದ್ರ ಕಾಮತ್ ಅವರನ್ನು ಸಂಪರ್ಕಿಸಿ ಮಗುವನ್ನು…

Read More

ಮಂಗಳೂರು, ಜೂನ್ 22: ಮಂಗಳೂರು ಮಹಾನಗರ ಪಾಲಿಕೆ ನಗರ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುತ್ತಿರುವ ಕ್ರಮವು ಬಡ ಹಾಗೂ ದುಡಿಯುವ ವರ್ಗದ ಜನರ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಈ ಕಾರ್ಯಾಚರಣೆಯು ಸಾಮಾಜಿಕ ನ್ಯಾಯದ ತತ್ವಗಳಿಗೆ ವಿರುದ್ಧವಾಗಿದೆ ಎಂದು ತುಳುನಾಡ ರಕ್ಷಣಾ ವೇದಿಕೆ ಕಾರ್ಮಿಕ ಘಟಕದ ರಾಜ್ಯ ಸಂಚಾಲಕ ಪ್ರಶಾಂತ್ ಭಟ್ ಕಡಬ ಅವರು ಆರೋಪಿಸಿದ್ದಾರೆ. ನಗರದ ವಿವಿಧ ಪ್ರದೇಶಗಳಲ್ಲಿ ಹಲವು ವರ್ಷಗಳಿಂದ ಸಣ್ಣ ವ್ಯಾಪಾರ ನಡೆಸಿಕೊಂಡು ಜೀವನ ಸಾಗಿಸುತ್ತಿರುವ ಬೀದಿ ಬದಿ ವ್ಯಾಪಾರಿಗಳನ್ನು ಯಾವುದೇ ಪರ್ಯಾಯ ವ್ಯವಸ್ಥೆ ಅಥವಾ ಪುನರ್ವಸತಿ ಯೋಜನೆ ರೂಪಿಸದೆ ತೆರವುಗೊಳಿಸಲಾಗುತ್ತಿದೆ. ಇದರಿಂದ ನೂರಾರು ಕುಟುಂಬಗಳು ತಮ್ಮ ಜೀವನೋಪಾಯದ ಮೂಲವನ್ನೇ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿಶೇಷವಾಗಿ ಅಂಗವಿಕಲರು, ಮಹಿಳೆಯರು, ವಿಧವೆಯರು, ಹಿರಿಯ ನಾಗರಿಕರು ಹಾಗೂ ನಿರುದ್ಯೋಗಿ ಯುವಕರು ಈ ಕ್ರಮದಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಒಂದು ಕಡೆ ಬದುಕಿಗಾಗಿ ದುಡಿಯುತ್ತಿರುವ ಬಡ ವ್ಯಾಪಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿರುವ ಮಹಾನಗರ…

Read More

ಉಡುಪಿ, ಜೂನ್ 21: ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಮಹಿಳಾ ಘಟಕದ ಪದಾಧಿಕಾರಿಗಳ ಆಯ್ಕೆ ಸಭೆಯು ಭಾನುವಾರ ಉಡುಪಿ ಬಸ್ ನಿಲ್ದಾಣದ ಸಮೀಪದ ಅಕ್ಷಯ ಟವರ್‌ನಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ನಾಗಲಕ್ಷ್ಮಿ ವಹಿಸಿದ್ದರು. ಸಭೆಯಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಮಹಿಳಾ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಆಯ್ಕೆಯಾದ ಪದಾಧಿಕಾರಿಗಳ ವಿವರ ಹೀಗಿದೆ: ಸಭೆಯಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಅಧ್ಯಕ್ಷರಾದ ಫ್ರಾಂಕಿ ಡಿಸೋಜ ಕೊಳಲಗಿರಿ ಅವರು ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳನ್ನು ಅಭಿನಂದಿಸಿ ಸನ್ಮಾನಿಸಿದರು. ಮಹಿಳಾ ಘಟಕದ ಮೂಲಕ ಸಂಘಟನೆಯನ್ನು ಗ್ರಾಮ ಮಟ್ಟದವರೆಗೆ ಬಲಪಡಿಸುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷರಾದ ಜಯ ಪೂಜಾರಿ, ಜಿಲ್ಲಾ ಜೊತೆ ಕಾರ್ಯದರ್ಶಿ ಪ್ರೀತಮ್ ಡಿಕೋಸ್ಟ, ಕಾಪು ತಾಲೂಕು ಘಟಕದ ಅಧ್ಯಕ್ಷ ನಿತಿನ್ ಕುಮಾರ್ ಶೆಟ್ಟಿ, ಕಾಪು ಮಹಿಳಾ ಘಟಕದ ಅಧ್ಯಕ್ಷೆ ಅನುಸೂಯಾ ಶೆಟ್ಟಿ, ಬೈರಂಪಳ್ಳಿ ಘಟಕದ…

Read More

ಮಂಗಳೂರು, ಜೂನ್ 20: ಗ್ರಾಮೀಣ ಹಾಗೂ ನಗರ ಪ್ರದೇಶದ ಪ್ರತಿಭಾವಂತ ಯುವಕರಿಗೆ ಗುಣಮಟ್ಟದ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಆಯೋಜಿಸಲಾಗುವ ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ ಮೇಳ–2026ರ 16ನೇ ಆವೃತ್ತಿಯು ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ ಎಂದು ಡಾ. ಎಂ. ಮೋಹನ್ ಆಳ್ವ ತಿಳಿಸಿದ್ದಾರೆ. ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2007ರಲ್ಲಿ ಆರಂಭವಾದ ಆಳ್ವಾಸ್ ಪ್ರಗತಿ ಇಂದು ಕರ್ನಾಟಕ ಸೇರಿದಂತೆ ನೆರೆಯ ರಾಜ್ಯಗಳ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ವಿಶ್ವಾಸಾರ್ಹ ಉದ್ಯೋಗ ವೇದಿಕೆಯಾಗಿ ಬೆಳೆದಿದೆ ಎಂದು ಹೇಳಿದರು. ಸಾಮಾಜಿಕ ಹೊಣೆಗಾರಿಕೆ (CSR) ಕಾರ್ಯಕ್ರಮದ ಅಂಗವಾಗಿ ಸಂಪೂರ್ಣ ಉಚಿತವಾಗಿ ಆಯೋಜಿಸಲಾಗುವ ಈ ಮೇಳದಲ್ಲಿ ಅಭ್ಯರ್ಥಿಗಳು ಮತ್ತು ಕಂಪನಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಇದುವರೆಗೆ ನಡೆದ 22 ಉದ್ಯೋಗ ಮೇಳಗಳಲ್ಲಿ 66 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಶಾರ್ಟ್‌ಲಿಸ್ಟ್ ಆಗಿದ್ದು, 40 ಸಾವಿರಕ್ಕೂ ಅಧಿಕ ಮಂದಿಗೆ ಸ್ಥಳದಲ್ಲೇ ಉದ್ಯೋಗ ಆಫರ್ ದೊರೆತಿದೆ ಎಂದು ಮಾಹಿತಿ ನೀಡಿದರು. ಈ ಬಾರಿಯ ಮೇಳದಲ್ಲಿ 300ಕ್ಕೂ…

Read More