- ಪಿಲಿಕುಳ ನಿಸರ್ಗಧಾಮಕ್ಕೆ ಟಿ.ಎ. ಶರವಣ ಭೇಟಿ – ಅಭಿವೃದ್ಧಿ ಕುರಿತ ಸಭೆಯಲ್ಲಿ ಭಾಗವಹಿಸಿ ಸಮಾಲೋಚನೆ
- ಬರಿಮಾರು ಬಳಿ ಶಾಲಾ ಬಸ್ ಮೇಲೆ ಮರ ಉರುಳಿ ದುರಂತ: 6 ವರ್ಷದ ಬಾಲಕಿ ಮೃತ್ಯು, ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ
- ಜೆಡಿಎಸ್ ರಾಜ್ಯ ನಾಯಕ, ಶಾಸಕ ಟಿ.ಎ. ಶರವಣ ಅವರಿಗೆ ಬಜ್ಪೆ ವಿಮಾನ ನಿಲ್ದಾಣದಲ್ಲಿ ಸ್ವಾಗತ
- ರಾಷ್ಟ್ರೀಯ ಪ್ರಶಸ್ತಿಯ ಗರಿಮೆಗೆ ಕರಾವಳಿಯ ಕಿರೀಟ: 500 ರೂ. ಸಂಭಾವನೆಯಿಂದ ರಾಷ್ಟ್ರದ ಶ್ರೇಷ್ಠ ಪೋಷಕ ನಟಿ ಪ್ರಶಸ್ತಿವರೆಗೆ ರೂಪಶ್ರೀ ವರ್ಕಾಡಿಯ ಸ್ಪೂರ್ತಿದಾಯಕ ಪಯಣ
- ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಸರ್ವಿಸ್ ರಸ್ತೆಗೆ ಬೃಹತ್ ಮರ ಉರುಳಿ; 3 ಗಂಟೆಗಳ ಬಳಿಕ ಸಂಚಾರ ಪುನರಾರಂಭ ತುರ್ತು ಸ್ಪಂದನೆಯಲ್ಲಿ ಅಗ್ನಿಶಾಮಕ ದಳಕ್ಕೆ ಮೆಚ್ಚುಗೆ – ಇತರೆ ಇಲಾಖೆಗಳ ವಿಳಂಬಕ್ಕೆ ತುಳುನಾಡ ರಕ್ಷಣಾ ವೇದಿಕೆ ಆಕ್ರೋಶ
- ಎಂ. ದೇವದಾಸ್ ನಿಧನಕ್ಕೆ ತುಳುನಾಡ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ಅವರ ಸಂತಾಪ
- ಡೊಂಕ ಬಂದರಿನಲ್ಲಿ ಭೀಕರ ಅಗ್ನಿ ಅವಘಡ: ಪರ್ಷಿಯನ್ ಮೀನುಗಾರಿಕಾ ಬೋಟ್ ಸಂಪೂರ್ಣ ಭಸ್ಮ – ₹30 ಲಕ್ಷಕ್ಕೂ ಅಧಿಕ ನಷ್ಟ
- ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೊಲೀಸ್ ಲಾಠಿ ಚಾರ್ಜ್ ಖಂಡಿಸಿ ಪ್ರಧಾನಿ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ – ರಾಹುಲ್, ಪ್ರಿಯಾಂಕಾ ಸೇರಿ ಹಲವು ನಾಯಕರು ವಶಕ್ಕೆ
Author: Tulunada Surya
ಮಂಗಳೂರು, ಜು. 24: ಜನತಾದಳ (ಜಾತ್ಯತೀತ) ರಾಜ್ಯ ನಾಯಕರೂ, ವಿಧಾನ ಪರಿಷತ್ ಸದಸ್ಯರೂ ಹಾಗೂ ಕರ್ನಾಟಕ ವಿಧಾನಮಂಡಲದ ಅಧೀನ ಶಾಸನ ರಚನಾ ಸಮಿತಿಯ ಸದಸ್ಯರೂ ಆದ ಟಿ.ಎ. ಶರವಣ ಅವರು ಇಂದು ಮಂಗಳೂರಿನ ಪಿಲಿಕುಳ ನಿಸರ್ಗಧಾಮಕ್ಕೆ ಭೇಟಿ ನೀಡಿ ಅಲ್ಲಿನ ವಿವಿಧ ಅಭಿವೃದ್ಧಿ ಯೋಜನೆಗಳು ಹಾಗೂ ಮೂಲಸೌಕರ್ಯಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿಯವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ, ಪಿಲಿಕುಳ ನಿಸರ್ಗಧಾಮದ ಸಮಗ್ರ ಅಭಿವೃದ್ಧಿ, ಪ್ರವಾಸೋದ್ಯಮದ ಉತ್ತೇಜನ, ಪರಿಸರ ಸಂರಕ್ಷಣೆ, ಸಾರ್ವಜನಿಕರಿಗೆ ಉತ್ತಮ ಸೌಲಭ್ಯಗಳ ಕಲ್ಪನೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಸಭೆಯಲ್ಲಿ ಪಿಲಿಕುಳವನ್ನು ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಪ್ರಮುಖ ಪ್ರವಾಸಿ ತಾಣವಾಗಿ ಇನ್ನಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಚರ್ಚೆ ನಡೆಯಿತು. ಅಭಿವೃದ್ಧಿ ಯೋಜನೆಗಳನ್ನು ವೇಗಗೊಳಿಸಿ, ಸಾರ್ವಜನಿಕರ ನಿರೀಕ್ಷೆಗೆ ತಕ್ಕಂತೆ ಗುಣಮಟ್ಟದ ಸೌಲಭ್ಯಗಳನ್ನು ಕಲ್ಪಿಸುವ ಅಗತ್ಯವಿದೆ ಎಂದು ಟಿ.ಎ. ಶರವಣ ಅವರು ಅಭಿಪ್ರಾಯ…
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಸಮೀಪದ ಕಲ್ಲೆಟ್ಟಿ ದೈವಸ್ಥಾನದ ಬಳಿ ಬುಧವಾರ ಸಂಜೆ ನಡೆದ ಭೀಕರ ಅವಘಡದಲ್ಲಿ ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದ ಪೂರ್ವ ಪ್ರಾಥಮಿಕ (ಎಲ್ಕೆಜಿ/ಯುಕೆಜಿ) ತರಗತಿಯ ಆರು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದು, ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ.ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ ಕಲ್ಲೆಟ್ಟಿ ಸಮೀಪ ಸಂಚರಿಸುತ್ತಿದ್ದ ವೇಳೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರ ಏಕಾಏಕಿ ಬಸ್ ಮೇಲೆ ಉರುಳಿ ಬಿದ್ದಿದೆ. ಮರ ಬಸ್ನ ಮೇಲ್ಭಾಗಕ್ಕೆ ಬಿದ್ದ ಪರಿಣಾಮ ಬಸ್ನೊಳಗಿದ್ದ ಮಕ್ಕಳು ಸಿಲುಕಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.ಘಟನೆಯ ತಕ್ಷಣ ಸ್ಥಳೀಯರು ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ಬಸ್ನೊಳಗಿದ್ದ ಮಕ್ಕಳನ್ನು ಸುರಕ್ಷಿತವಾಗಿ ಹೊರತೆಗೆದರು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಆರು ವರ್ಷದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.ಅವಘಡದಲ್ಲಿ ಗಾಯಗೊಂಡ ನಾಲ್ವರು ವಿದ್ಯಾರ್ಥಿಗಳನ್ನು ಸ್ಥಳೀಯರ ನೆರವಿನಿಂದ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಇತರ ವಿದ್ಯಾರ್ಥಿಗಳು ಹಾಗೂ ಬಸ್ ಸಿಬ್ಬಂದಿಯನ್ನು ಸಹ ಸುರಕ್ಷಿತವಾಗಿ…
ಮಂಗಳೂರು: ಜನತಾದಳ (ಜಾತ್ಯತೀತ) ರಾಜ್ಯ ನಾಯಕರೂ, ವಿಧಾನ ಪರಿಷತ್ ಸದಸ್ಯರೂ ಹಾಗೂ ಕರ್ನಾಟಕ ವಿಧಾನಮಂಡಲದ ಅಧೀನ ಶಾಸನ ರಚನಾ ಸಮಿತಿಯ ಸದಸ್ಯರೂ ಆದ ಟಿ.ಎ. ಶರವಣ ಅವರು ಇಂದು ರಾತ್ರಿ 8.30 ಗಂಟೆಗೆ ಮಂಗಳೂರು ಅಂತರರಾಷ್ಟ್ರೀಯ (ಬಜ್ಪೆ) ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರು ಹಾಗೂ ಪಕ್ಷದ ಪದಾಧಿಕಾರಿಗಳು ಅವರನ್ನು ಹೂ ಗುಚ್ಚ ನೀಡಿ ಆತ್ಮೀಯವಾಗಿ ಸ್ವಾಗತಿಸಿ, ಪಕ್ಷದ ಸಂಘಟನೆ ಹಾಗೂ ಜಿಲ್ಲೆಯ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ಸಂಕ್ಷಿಪ್ತವಾಗಿ ಮಾತುಕತೆ ನಡೆಸಿದರು. ಈ ವೇಳೆ ಜೆಡಿಎಸ್ ಕಾರ್ಯಾಧ್ಯಕ್ಷ ವಸಂತ್ ಪೂಜಾರಿ, ಜೆಡಿಎಸ್ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು, ರಾಜ್ಯ ಮೀನುಗಾರ ಘಟಕದ ಅಧ್ಯಕ್ಷ ರತ್ನಾಕರ ಸುವರ್ಣ, ಪ್ರಶಾಂತ್ ಭಟ್ ಕಡಬ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು
ಮಂಗಳೂರು: ಕರಾವಳಿಯ ಪ್ರತಿಭೆಗೆ ಮತ್ತೊಂದು ಐತಿಹಾಸಿಕ ಗೌರವ ಲಭಿಸಿದೆ. ಮಂಗಳೂರಿನ ಪ್ರತಿಭಾನ್ವಿತ ನಟಿ ರೂಪಶ್ರೀ ವರ್ಕಾಡಿ (ರೂಪಾ ವರ್ಕಾಡಿ) ಅವರು ಕನ್ನಡದ ‘ಮಿಥ್ಯ’ ಚಿತ್ರದ ಅದ್ಭುತ ಅಭಿನಯಕ್ಕಾಗಿ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ‘ಅತ್ಯುತ್ತಮ ಪೋಷಕ ನಟಿ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಸಾಧನೆಯೊಂದಿಗೆ ರಾಷ್ಟ್ರೀಯ ಪ್ರಶಸ್ತಿಯಲ್ಲಿ ಈ ವಿಭಾಗದಲ್ಲಿ ಗೌರವ ಪಡೆದ ಕನ್ನಡದ ಮೊದಲ ನಟಿ ಎಂಬ ಅಪರೂಪದ ಹೆಗ್ಗಳಿಕೆಯನ್ನು ಅವರು ತಮ್ಮದಾಗಿಸಿಕೊಂಡಿದ್ದಾರೆ. ಈ ಪ್ರಶಸ್ತಿ ಕೇವಲ ರೂಪಶ್ರೀ ಅವರ ವೈಯಕ್ತಿಕ ಸಾಧನೆಯಷ್ಟೇ ಅಲ್ಲ, ಕರಾವಳಿಯ ರಂಗಭೂಮಿ ಪರಂಪರೆ, ತುಳು-ಕನ್ನಡ ಚಿತ್ರರಂಗ ಹಾಗೂ ಕನ್ನಡ ಸಿನೆಮಾದ ಕಲಾತ್ಮಕ ಸಾಮರ್ಥ್ಯಕ್ಕೆ ರಾಷ್ಟ್ರಮಟ್ಟದಲ್ಲಿ ದೊರೆತ ಗೌರವವಾಗಿದೆ. ಪ್ರಶಸ್ತಿ ಘೋಷಣೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರೂಪಶ್ರೀ ವರ್ಕಾಡಿ, ತಮ್ಮ ಕಲಾ ಬದುಕಿನ ಆರಂಭದ ದಿನಗಳನ್ನು ನೆನೆದು ಭಾವುಕರಾದರು. “ಒಮ್ಮೆ ನಾಟಕವೊಂದರಲ್ಲಿ ಅಭಿನಯಿಸಿದ್ದಕ್ಕೆ ಕೇವಲ 500 ರೂಪಾಯಿ ಸಂಭಾವನೆ ಸಿಕ್ಕಿತ್ತು. ಅಲ್ಲಿಂದ ಆರಂಭವಾದ ನನ್ನ ಪಯಣ ಇಂದು ರಾಷ್ಟ್ರೀಯ ಪ್ರಶಸ್ತಿಯ ವೇದಿಕೆಗೆ ತಲುಪಿದೆ. ಇದು ನನ್ನೊಬ್ಬಳ ಸಾಧನೆಯಲ್ಲ,…
ಉಡುಪಿ, ಜು.22: ಉಡುಪಿ ಸಂತೆಕಟ್ಟೆಯ ರಾಷ್ಟ್ರೀಯ ಹೆದ್ದಾರಿ–66ರ ಉಡುಪಿಯಿಂದ ಬ್ರಹ್ಮಾವರ ಕಡೆ ಸಾಗುವ ಸರ್ವಿಸ್ ರಸ್ತೆಗೆ ಬುಧವಾರ ಬೆಳಗ್ಗೆ ಸುಮಾರು 10 ಗಂಟೆಗೆ ಬೃಹತ್ ಮರ ಉರುಳಿ ಬಿದ್ದ ಪರಿಣಾಮ ಮೂರು ಗಂಟೆಗಳಿಗೂ ಅಧಿಕ ಕಾಲ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತು. ಘಟನೆ ನಡೆದ ವೇಳೆ ರಸ್ತೆಯಲ್ಲಿ ವಾಹನ ಸಂಚಾರ ವಿರಳವಾಗಿದ್ದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸದೇ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಮರ ರಸ್ತೆಯ ಮಧ್ಯೆ ಅಡ್ಡವಾಗಿ ಬಿದ್ದ ಪರಿಣಾಮ ಎರಡೂ ದಿಕ್ಕಿನ ವಾಹನಗಳು ಸಾಲುಗಟ್ಟಿ ನಿಂತಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸಿದರು. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ತುಳುನಾಡ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಅಧ್ಯಕ್ಷ ಫ್ರ್ಯಾಂಕಿ ಡಿಸೋಜಾ ಕೊಳಲಗಿರಿ ಸ್ಥಳಕ್ಕೆ ಭೇಟಿ ನೀಡಿ ಅಗ್ನಿಶಾಮಕ ದಳ, ನಗರಸಭೆ, ಅರಣ್ಯ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಆದರೆ ತುರ್ತು ಸ್ಪಂದನೆ ನೀಡಿದ್ದು ಅಗ್ನಿಶಾಮಕ ದಳ ಮಾತ್ರ ಎನ್ನಲಾಗಿದೆ. ಅಗ್ನಿಶಾಮಕ ದಳದ ನಾಲ್ಕೈದು ಸಿಬ್ಬಂದಿ ಸ್ಥಳೀಯರ ಸಹಕಾರದೊಂದಿಗೆ…
ಮಂಗಳೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಿ.ಎಸ್.ಎಸ್.)ಯ ಸಂಸ್ಥಾಪಕರಲ್ಲಿ ಪ್ರಮುಖರೂ, ರಾಜ್ಯ ಸಂಘಟನಾ ಸಂಚಾಲಕರಾಗಿದ್ದ ಹಿರಿಯ ಹೋರಾಟಗಾರ ಎಂ. ದೇವದಾಸ್ ಅವರ ನಿಧನದ ಸುದ್ದಿ ಅತ್ಯಂತ ದುಃಖವನ್ನುಂಟು ಮಾಡಿದೆ ಎಂದು ತುಳುನಾಡ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಎಂ. ದೇವದಾಸ್ ಅವರು ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಶೋಷಿತ ಸಮುದಾಯಗಳ ಹಕ್ಕುಗಳಿಗಾಗಿ ತಮ್ಮ ಜೀವನವನ್ನೇ ಸಮರ್ಪಿಸಿಕೊಂಡ ಅಪರೂಪದ ಹೋರಾಟಗಾರರಾಗಿದ್ದರು. ಕರ್ನಾಟಕ ದಲಿತ ಸಂಘರ್ಷ ಸಮಿತಿಯನ್ನು ರಾಜ್ಯದ ಪ್ರಬಲ ಜನಾಂದೋಲನವಾಗಿ ಬೆಳೆಸುವಲ್ಲಿ ಅವರು ಸಲ್ಲಿಸಿದ ಸೇವೆ ಮತ್ತು ನಾಯಕತ್ವ ಸದಾ ಸ್ಮರಣೀಯವಾಗಿದೆ. ಬಜ್ಪೆ ನಾಗರಿಕ ಹಿತ ರಕ್ಷಣಾ ವೇದಿಕೆಯಲ್ಲಿ ಅನೇಕ ಜನಪರ ಹೋರಾಟಗಳಲ್ಲಿ ಅವರೊಂದಿಗೆ ಕೈಜೋಡಿಸುವ ಅವಕಾಶ ನಮಗೆ ದೊರೆತಿತ್ತು. ಜನಸಾಮಾನ್ಯರ ಸಮಸ್ಯೆಗಳ ಪರಿಹಾರಕ್ಕಾಗಿ ಅವರು ತೋರಿದ ಬದ್ಧತೆ, ನೇರ ನಿಲುವು ಹಾಗೂ ಹೋರಾಟದ ಮನೋಭಾವ ಎಲ್ಲರಿಗೂ ಮಾದರಿಯಾಗಿದೆ. ಅವರ ಅಗಲಿಕೆ ದಲಿತ ಚಳವಳಿಗೆ, ಸಾಮಾಜಿಕ ನ್ಯಾಯದ ಹೋರಾಟಕ್ಕೆ ಹಾಗೂ ರಾಜ್ಯದ ಪ್ರಗತಿಪರ ಶಕ್ತಿಗಳಿಗೆ…
ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡಿನ ಡೊಂಕ ಬಂದರಿನಲ್ಲಿ ಲಂಗರು ಹಾಕಲಾಗಿದ್ದ ಪರ್ಷಿಯನ್ ಮೀನುಗಾರಿಕಾ ಬೋಟ್ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೋಟ್ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯ ಮೀನುಗಾರರು ಹಾಗೂ ಸಾರ್ವಜನಿಕರು ಜಾಗರೂಕರಾಗಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಆದರೆ ಬೆಂಕಿಯ ತೀವ್ರತೆ ಹೆಚ್ಚಿದ್ದರಿಂದ ಬೋಟ್ ಅನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಪರಿಣಾಮ, ಬೋಟ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಅದರಲ್ಲಿದ್ದ ಬೆಲೆಬಾಳುವ ಮೀನುಗಾರಿಕಾ ಬಲೆಗಳು, ಲಕ್ಷಾಂತರ ರೂಪಾಯಿ ಮೌಲ್ಯದ ಇಂಜಿನ್ಗಳು ಹಾಗೂ ಇತರ ಮೀನುಗಾರಿಕಾ ಉಪಕರಣಗಳು ಬೆಂಕಿಗಾಹುತಿಯಾಗಿವೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಅಗ್ನಿ ಅವಘಡದಿಂದ ಸುಮಾರು ₹30 ಲಕ್ಷಕ್ಕೂ ಅಧಿಕ ಮೌಲ್ಯದ ಆಸ್ತಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಂಕಿ ಅವಘಡಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಗ್ನಿ ಅವಘಡದ ಕಾರಣ ಹಾಗೂ ನಷ್ಟದ ನಿಖರ…
ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್ನ್ನು ತೀವ್ರವಾಗಿ ಖಂಡಿಸಿ ಕಾಂಗ್ರೆಸ್ ಪಕ್ಷವು ಮಂಗಳವಾರ ನವದೆಹಲಿಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಲೋಕ ಕಲ್ಯಾಣ ಮಾರ್ಗದಲ್ಲಿರುವ ಅಧಿಕೃತ ನಿವಾಸದ ಮುಂಭಾಗ ಭಾರೀ ಪ್ರತಿಭಟನೆ ನಡೆಸಿತು. ಪ್ರತಿಭಟನೆಯ ನೇತೃತ್ವವನ್ನು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಹಿಸಿದ್ದರು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಅನೇಕ ಸಂಸದರು, ಹಿರಿಯ ನಾಯಕರು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದರು. ವಿದ್ಯಾರ್ಥಿಗಳ ಮೇಲೆ ಪೊಲೀಸರು ಬಲಪ್ರಯೋಗ ನಡೆಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿತು. ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಿದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ನಡೆಸಿರುವುದನ್ನು ತೀವ್ರವಾಗಿ ಖಂಡಿಸಿದ ಕಾಂಗ್ರೆಸ್, ಈ ಘಟನೆಯ ನೈತಿಕ ಹೊಣೆಯನ್ನು ಕೇಂದ್ರ ಸರ್ಕಾರವೇ ಹೊತ್ತುಕೊಳ್ಳಬೇಕು ಎಂದು ಆಗ್ರಹಿಸಿತು. ಪ್ರತಿಭಟನೆಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕರು, ವಿದ್ಯಾರ್ಥಿಗಳ ವಿರುದ್ಧ ನಡೆದ ಪೊಲೀಸ್ ಕ್ರಮದ ಕುರಿತು ನ್ಯಾಯಸಮ್ಮತ ಹಾಗೂ…
ಮುಂಬೈ, ಜುಲೈ 19: ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.) ಮಹತ್ವಾಕಾಂಕ್ಷೆಯ ಯೋಜನೆಯಾದ ಮೂಲ್ಕಿಯ ಡಾ. ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳುತ್ತಿರುವ ಭವ್ಯ ಸಭಾಭವನವನ್ನು 2026ರ ಡಿಸೆಂಬರ್ 31ರೊಳಗೆ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂಬ ದೃಢ ಸಂಕಲ್ಪವನ್ನು ವ್ಯಕ್ತಪಡಿಸಿದ ಮುಂಬೈಯ ಪ್ರಮುಖ ದಾನಿಗಳು ಹಾಗೂ ಸಮಾಜದ ಮುಖಂಡರು, ಯೋಜನೆ ಪೂರ್ಣಗೊಳಿಸಲು ಅಗತ್ಯವಿರುವ ಸಂಪೂರ್ಣ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು. ಈ ಸಂಬಂಧ ಮುಂಬೈ ಬಂಟರ ಸಂಘದ ಕುರ್ಲಾ ಪೂರ್ವದ ಬಂಟರ ಭವನದ ಅನೆಕ್ಸ್ ಕಟ್ಟಡದಲ್ಲಿರುವ ಶ್ರೀಮತಿ ರಂಜನಿ ಸುಧಾಕರ್ ಹೆಗ್ಡೆ ಸಭಾಂಗಣದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.) ವತಿಯಿಂದ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ನಿರ್ಮಾಣ ಹಂತದಲ್ಲಿರುವ ಸಭಾಭವನದ ಪ್ರಗತಿ ಪರಿಶೀಲನೆ ನಡೆಸಿ, ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವ ಕುರಿತು ವಿಸ್ತೃತ ಚರ್ಚೆ ನಡೆಸಲಾಯಿತು.ಸಭೆಯಲ್ಲಿ ಮಾತನಾಡಿದ ಒಕ್ಕೂಟದ ವಿಶೇಷ ಮಹಾ ನಿರ್ದೇಶಕರು, “ಜಾಗತಿಕ ಬಂಟರ ಸಂಘವು ಬಂಟ ಸಮುದಾಯದ ಅಮೂಲ್ಯ ಆಸ್ತಿಯಾಗಿದೆ. ಸಮಾಜದ ಎಲ್ಲ ವರ್ಗದ ಬಂಧುಗಳನ್ನು ಸಮಾನವಾಗಿ ಕಾಣುವ…
ಉಡುಪಿ: ಬ್ರಹ್ಮಾವರ ಸಮೀಪದ ಕಲ್ಲುಗೊಳಿ ಸರ್ಕಾರಿ ಹಾಡಿಯಲ್ಲಿ ಅಕ್ರಮವಾಗಿ ಅಂದರ್-ಬಾಹರ್ ಇಸ್ಪೀಟು ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಆಧರಿಸಿ ಬ್ರಹ್ಮಾವರ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ದಾಳಿ ವೇಳೆ ಉಳಿದ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಬಂಧಿತರನ್ನು ಸುಕೇಶ್ ಶೆಟ್ಟಿ ಹಾಗೂ ಪ್ರತಾಪ್ ಶೆಟ್ಟಿ ಎಂದು ಗುರುತಿಸಲಾಗಿದ್ದು, ವಿಜಯ ನಾಯ್ಕ್ ಮುದ್ದುಮನೆ, ಗಣೇಶ್ ಬೆಳ್ವೆ, ಬಾಲಕೃಷ್ಣ ಕೀರಾಡಿ ಸೇರಿದಂತೆ ಇನ್ನಿತರರು ಪರಾರಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಜುಲೈ 19ರಂದು ಬ್ರಹ್ಮಾವರ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕ ಜಯಕರ ಎ. ಅವರಿಗೆ ದೊರೆತ ಮಾಹಿತಿಯಂತೆ, 34ನೇ ಕುದಿ ಗ್ರಾಮದ ನುಕ್ಕೂರು ವ್ಯಾಪ್ತಿಯ ಕಲ್ಲುಗೊಳಿ ಸರ್ಕಾರಿ ಹಾಡಿಯಲ್ಲಿ ಹಣವನ್ನು ಪಣಕ್ಕಿಟ್ಟು ಜೂಜಾಟ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಲಾಯಿತು. ಪೊಲೀಸರು ಸ್ಥಳಕ್ಕೆ ತಲುಪುತ್ತಿದ್ದಂತೆಯೇ ಜೂಜಾಟದಲ್ಲಿ ತೊಡಗಿದ್ದವರು ಓಡಿಹೋಗಲು ಯತ್ನಿಸಿದ್ದು, ಸಿಬ್ಬಂದಿ ಸುಕೇಶ್ ಶೆಟ್ಟಿ ಮತ್ತು ಪ್ರತಾಪ್ ಶೆಟ್ಟಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾದರು. ಆರೋಪಿಗಳಿಂದ ಜೂಜಾಟಕ್ಕೆ ಬಳಸಲಾಗಿದ್ದ ₹21,700 ನಗದು, ಇಸ್ಪೀಟು ಎಲೆಗಳು, ಒಂದು ಕಂದು…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
