- ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ (27) ಸಾವು
- ಮಂಗಳೂರು : ಮೂಡುಬಿದಿರೆ ಇನ್ಸ್ಪೆಕ್ಟರ್ ವಿರುದ್ಧದ ಆರೋಪಗಳು ಸುಳ್ಳು — ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟನೆ
- ಕೇರಳ, ತಮಿಳುನಾಡು, ಪಾಂಡಿಚೇರಿ, ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳ ಚುನಾವಣೆ: 90ಕ್ಕೂ ಹೆಚ್ಚು ನಾಯಕರು ನಿಯೋಜನೆ
- ಉಡುಪಿ : ‘ಸಮಾಧಾನ ಮಹೋತ್ಸವ’ಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ – ಪ್ರಶಾಂತ್ ಜತ್ತನ್ನ
- ದಕ್ಷಿಣ ಕನ್ನಡ ಜಿಲ್ಲಾ ವಿದ್ಯಾರ್ಥಿ ಜನತಾದಳದ ಜಿಲ್ಲಾಧ್ಯಕ್ಷ ಪದಗ್ರಹಣದ ಬಳಿಕ ಹಿರಿಯ ನಾಯಕರನ್ನು ಭೇಟಿ ಮಾಡಿದ ನಿಹಾಲ್ ಎಸ್ ಕೋಡ್ತುಗುಳಿ
- ನಾಳೆ ಮಾರ್ಚ್ 20 ರಂದು ಈದುಲ್ ಫಿತ್ರ್ (ಶವ್ವಾಲ್ 1) ಆಚರಣೆ — ಉಡುಪಿಯಲ್ಲಿ ಚಂದ್ರದರ್ಶನ ದೃಢೀಕರಣ
- ದಕ್ಷಿಣ ಕನ್ನಡ ವಿದ್ಯಾರ್ಥಿ ಜನತಾದಳಕ್ಕೆ ಹೊಸ ಮುಖ – ನಿಹಾಲ್ ಎಸ್ ಕೋಡ್ತುಗುಳಿ ನೇಮಕ ,ಜಿಲ್ಲಾ ಅಧ್ಯಕ್ಷ ಜಾಕೆ ಮಾಧವ ಗೌಡರಿಂದ ಘೋಷಣೆ | ಯುವ ನಾಯಕನಿಗೆ ಎಂ.ಬಿ. ಸದಾಶಿವರ ಮಾರ್ಗದರ್ಶನ
- ಉಡುಪಿ: ಉಪ್ಪೂರು–ಕೊಳಲಗಿರಿ ಯುವ ವಿಚಾರ ವೇದಿಕೆ ರಜತ ಸಂಭ್ರಮದಲ್ಲಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾದ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ಸೇರಿದಂತೆ ಹಲವು ಗಣ್ಯರಿಗೆ ಸನ್ಮಾನ
Author: Tulunada Surya
ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ (27) ಮೃತಪಟ್ಟ ಘಟನೆ ರಾಜ್ಯದಾದ್ಯಂತ ದುಃಖದ ವಾತಾವರಣ ನಿರ್ಮಿಸಿದೆ. ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ ಅವರು ಗುರುವಾರ ರಾತ್ರಿ ಸುಮಾರು 11:45ರ ವೇಳೆ ಮೃಗಾಲಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ‘ಸನ್ ಕಾನರ್’ ಹಕ್ಕಿಗೆ ಚಿಕಿತ್ಸೆ ನೀಡುವ ವೇಳೆ, ಅಲ್ಲಿದ್ದ ಗರ್ಭಿಣಿ ನೀರಾನೆಯ ಆರೋಗ್ಯ ತಪಾಸಣೆಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಥರ್ಮಲ್ ಕ್ಯಾಮೆರಾ ಮೂಲಕ ಪರೀಕ್ಷೆ ನಡೆಸಲು ನೀರಾನೆಯ ಆವರಣದೊಳಗೆ ಪ್ರವೇಶಿಸಿದ ವೇಳೆ, ಏಕಾಏಕಿ ಕೆರಳಿದ ನೀರಾನೆ ಅವರ ಮೇಲೆ ದಾಳಿ ನಡೆಸಿದೆ. ತೀವ್ರವಾಗಿ ಗಾಯಗೊಂಡ ಅವರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತುರ್ತು ಶಸ್ತ್ರಚಿಕಿತ್ಸೆ ನಡೆದರೂ ಗಂಭೀರ ಗಾಯಗಳಿಂದಾಗಿ ಅವರು ಇಂದು ಮುಂಜಾನೆ 6:30ರ ಸುಮಾರಿಗೆ ನಿಧನರಾದರು. ಇತ್ತೀಚೆಗಷ್ಟೇ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಅವರು ತರಬೇತಿ ಹಂತದಲ್ಲಿದ್ದರು ಎಂದು ತಿಳಿದುಬಂದಿದೆ. ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ…
ಮಂಗಳೂರು : ಮೂಡುಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಇತ್ತೀಚೆಗೆ ಇಬ್ಬರು ಮಹಿಳೆಯರು ಮಾಡಿದ್ದ ಲೈಂಗಿಕ ಕಿರುಕುಳ ಆರೋಪಗಳು ಸಂಪೂರ್ಣವಾಗಿ ಸುಳ್ಳು ಹಾಗೂ ದುರುದ್ದೇಶಪೂರಿತವಾಗಿವೆ ಎಂದು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಈ ಪ್ರಕರಣದ ಕುರಿತು ನಡೆಸಲಾದ ಸಮಗ್ರ ಪ್ರಾಥಮಿಕ ತನಿಖೆಯಲ್ಲಿ, ಸುಮತಿ ನಾಯಕ್ ಮತ್ತು ಅವಿತಾ ಮೆನೆಜಸ್ ಸಲ್ಲಿಸಿದ ದೂರುಗಳಲ್ಲಿ ಯಾವುದೇ ಸತ್ಯಾಂಶ ಪತ್ತೆಯಾಗಿಲ್ಲ ಎಂದು ಆಯುಕ್ತರು ಸ್ಪಷ್ಟಪಡಿಸಿದ್ದಾರೆ. ದುರುದ್ದೇಶದಿಂದ ಸುಳ್ಳು ದೂರು: ತನಿಖೆಯ ಪ್ರಕಾರ, ಇಬ್ಬರು ಮಹಿಳೆಯರು ಸಲ್ಲಿಸಿದ ದೂರುಗಳು ದುರುದ್ದೇಶದಿಂದ ಪ್ರೇರಿತವಾಗಿದ್ದು, ಸಂಬಂಧಿತ ಅಧಿಕಾರಿಯನ್ನು ಬಲೆಗೆ ಬೀಳಿಸುವ ಉದ್ದೇಶ ಹೊಂದಿದ್ದವು. ಆರೋಪಗಳನ್ನು ದೃಢೀಕರಿಸಲು ಯಾವುದೇ ಪೂರಕ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದು ಅವರು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದ ಆಡಿಯೋ-ವೀಡಿಯೊ ಕುರಿತು ಸ್ಪಷ್ಟನೆ: ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆಡಿಯೋ ಹಾಗೂ ವೀಡಿಯೊ ತುಣುಕುಗಳ ಬಗ್ಗೆ ಮಾತನಾಡಿದ ಆಯುಕ್ತರು, ಅವುಗಳಲ್ಲಿ ಕಾಣಿಸಿಕೊಳ್ಳುವ ಮಹಿಳೆಯರು ಆ ತುಣುಕುಗಳು ತಮ್ಮದೇ ಎಂದು ಒಪ್ಪಿಕೊಂಡಿದ್ದಾರೆ. ಆದರೆ, ಇನ್ಸ್ಪೆಕ್ಟರ್…
ಬೆಂಗಳೂರು : ದಕ್ಷಿಣ ಭಾರತದ ರಾಜಕೀಯ ಸಮೀಕರಣಗಳಲ್ಲಿ ತಮ್ಮ ಪಾದಾರ್ಪಣೆ ಬಲಪಡಿಸುವ ಉದ್ದೇಶದಿಂದ ರಾಜ್ಯ ಬಿಜೆಪಿ ಮಹತ್ವದ ತಂತ್ರ ರೂಪಿಸಿದೆ. ಕೇರಳ, ತಮಿಳುನಾಡು, ಪಾಂಡಿಚೇರಿ , ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಕರ್ನಾಟಕದಿಂದ ಸಂಸದರು, ಶಾಸಕರು ಸೇರಿದಂತೆ ಒಟ್ಟು 90ಕ್ಕೂ ಹೆಚ್ಚು ಮುಖಂಡರನ್ನು ವಿವಿಧ ಕ್ಷೇತ್ರಗಳಿಗೆ ನಿಯೋಜಿಸಲಾಗಿದೆ. ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಅವರು ನಿಯೋಜಿತ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಹಾಗೂ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ನೆರೆಯ ಕೇರಳದಲ್ಲಿ ಈ ಬಾರಿ ಕನಿಷ್ಠ 20ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಬಿಜೆಪಿ ಹೊಂದಿದ್ದು, ಈ ಹಿನ್ನೆಲೆಯಲ್ಲಿ ಎನ್. ರವಿಕುಮಾರ್, ಕೆ.ಎಸ್. ನವೀನ್, ಹರೀಶ್ ಪೂಂಜ, ವೇದವ್ಯಾಸ ಕಾಮತ್, ಮಹೇಶ್ ಟೆಂಗಿನಕಾಯಿ, ಭರತ್ ಶೆಟ್ಟಿ, ಶಶಿಕಲಾ ಜೊಲ್ಲೆ, ಸಂಸದ ಬೃಜೇಶ್ ಚೌಟ ಸೇರಿದಂತೆ 30 ಮಂದಿ ಮುಖಂಡರನ್ನು ಅಲ್ಲಿ ನಿಯೋಜಿಸಲಾಗಿದೆ. ಇದೇ ವೇಳೆ ತಮಿಳುನಾಡಿನ ವಿವಿಧ ಕ್ಷೇತ್ರಗಳಲ್ಲಿ ಚುನಾವಣಾ ಸಿದ್ಧತೆಗಳಿಗೆ ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲಕ ಕರುಣಾಕರ್ ಖಾಸಲೆ ಸೇರಿದಂತೆ…
ಉಡುಪಿ : ಘನ ಮೋಹನ್ ಸಿ. ಲಾಝರಸ್ ಅವರ ನೇತೃತ್ವದಲ್ಲಿ ಮಾರ್ಚ್ 20ರಿಂದ 22ರವರೆಗೆ ಉಡುಪಿಯ ಮಿಷನ್ ಕಾಂಪೌಂಡ್ನಲ್ಲಿ ನಡೆಯಲಿರುವ ‘ಸಮಾಧಾನ ಮಹೋತ್ಸವ’ ಕಾರ್ಯಕ್ರಮಕ್ಕೆ ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ತೋರಿದೆ ಎಂದು ಭಾರತೀಯ ಕ್ರೈಸ್ತ ಒಕ್ಕೂಟದ ರಾಜ್ಯಾಧ್ಯಕ್ಷರಾದ ಪ್ರಶಾಂತ್ ಜತ್ತನ್ನ ತಿಳಿಸಿದ್ದಾರೆ. ಫೆಲೋಶಿಪ್ ಆಫ್ ಉಡುಪಿ ಚರ್ಚಸ್ ವತಿಯಿಂದ ಮೂರು ದಿನಗಳ ಈ ಮಹೋತ್ಸವವನ್ನು ಆಯೋಜಿಸಲಾಗಿದ್ದು, ಕಳೆದ ಐದಾರು ತಿಂಗಳುಗಳಿಂದ ಇದರಿಗಾಗಿ ಸಮಗ್ರ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಪ್ರಮುಖ ಪ್ರವಚನಕಾರರಾಗಿ ಘನ ಮೋಹನ್ ಸಿ. ಲಾಝರಸ್ ಭಾಗವಹಿಸಲಿದ್ದು, ಅವರು ಇದಕ್ಕೂ ಮೊದಲು ಎರಡು ಬಾರಿ ಉಡುಪಿಗೆ ಭೇಟಿ ನೀಡಿ ಪ್ರವಚನಗಳನ್ನು ನೀಡಿದ್ದರು. ಪ್ರಸ್ತುತ ಕ್ರೈಸ್ತ ಸಮುದಾಯಕ್ಕೆ ತಪಸ್ಸಿನ ಕಾಲವಾಗಿರುವ ಹಿನ್ನೆಲೆಯಲ್ಲಿ ಭಕ್ತಿ ಸಂಜೀವನ ಕೂಟಗಳನ್ನು ಆಯೋಜಿಸುವ ಪರಂಪರೆಯ ಭಾಗವಾಗಿ ಈ ಮಹೋತ್ಸವವನ್ನು ರೂಪಿಸಲಾಗಿದೆ. ಕಾರ್ಯಕ್ರಮದ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸುಮಾರು 20 ದಿನಗಳ ಮುಂಚೆಯೇ ಮಾಹಿತಿ ನೀಡಲಾಗಿತ್ತು. ಆದರೆ ಕೆಲವು ಸಂಘಟನೆಗಳಿಂದ ಕಾರ್ಯಕ್ರಮವನ್ನು ನಡೆಸಲು ಬಿಡುವುದಿಲ್ಲ ಎಂಬ ಬೆದರಿಕೆಗಳು ಮಾಧ್ಯಮಗಳ…
ಮಂಗಳೂರು, ದಿನಾಂಕ : 19-03-2026 ನೂತನವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿದ್ಯಾರ್ಥಿ ಜನತಾದಳದ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ನಿಹಾಲ್ ಎಸ್ ಕೋಡ್ತುಗುಳಿ ಅವರು, ತಮ್ಮ ಪದಗ್ರಹಣದ ಬಳಿಕ ಜಿಲ್ಲೆಯ ಹಿರಿಯ ರಾಜಕೀಯ ನಾಯಕರು ಹಾಗೂ ಗಣ್ಯರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಅವರು ಸಂಘಟನೆಯ ಬಲವರ್ಧನೆ, ವಿದ್ಯಾರ್ಥಿ ಸಮುದಾಯದ ಸಮಸ್ಯೆಗಳ ಪರಿಹಾರ ಹಾಗೂ ಸಂಘಟನೆಯನ್ನು ಇನ್ನಷ್ಟು ಸಕ್ರಿಯಗೊಳಿಸುವ ಬಗ್ಗೆ ಚರ್ಚಿಸಿದರು. ಹಿರಿಯ ನಾಯಕರು ನಿಹಾಲ್ ಅವರಿಗೆ ಶುಭಾಶಯಗಳನ್ನು ತಿಳಿಸಿ, ಸಂಘಟನೆಯನ್ನು ಶಕ್ತಿಯುತವಾಗಿ ಮುನ್ನಡೆಸುವಂತೆ ಸಲಹೆ ನೀಡಿದರು. ನಿಹಾಲ್ ಎಸ್ ಕೋಡ್ತುಗುಳಿ ಅವರು ಮಾತನಾಡಿ, ವಿದ್ಯಾರ್ಥಿ ಜನತಾದಳವನ್ನು ಇನ್ನಷ್ಟು ಬಲಪಡಿಸಿ, ವಿದ್ಯಾರ್ಥಿಗಳ ಹಿತಾಸಕ್ತಿಗಾಗಿ ಕಾರ್ಯನಿರ್ವಹಿಸುವುದಾಗಿ ಹೇಳಿದರು. ಜಿಲ್ಲೆಯಾದ್ಯಂತ ಸಂಘಟನೆಯನ್ನು ವಿಸ್ತರಿಸಿ, ಯುವಜನರಲ್ಲಿ ಜಾಗೃತಿ ಮೂಡಿಸುವತ್ತ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ. ಈ ಭೇಟಿ ಕಾರ್ಯಕ್ರಮದಲ್ಲಿ ಸಂಘಟನೆಯ ಪ್ರಮುಖ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಉಡುಪಿ : ದಿನಾಂಕ 19-03-2026 ಗುರುವಾರ ಸಾಯಂಕಾಲ ಅಸ್ತಮಿಸಿದ ಬಳಿಕ, ಶುಕ್ರವಾರ ರಾತ್ರಿ ಶವ್ವಾಲ್ ತಿಂಗಳ ಪ್ರಥಮ ಚಂದ್ರದರ್ಶನವಾಗಿರುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಖಾಝಿಯಾದ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ಅವರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಇದರಂತೆ, ದಿನಾಂಕ 20-03-2026 ಶುಕ್ರವಾರದಂದು ಶವ್ವಾಲ್ 1, ಅಂದರೆ ಈದುಲ್ ಫಿತ್ರ್ ಹಬ್ಬವನ್ನು ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಆಚರಿಸಲಿದ್ದಾರೆ. ರಂಜಾನ್ ತಿಂಗಳ ಪವಿತ್ರ ಉಪವಾಸ ಅವಧಿ ಮುಕ್ತಾಯಗೊಂಡು, ಶವ್ವಾಲ್ ತಿಂಗಳ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ ಈದ್ ಹಬ್ಬವು ಆಚರಣೆಗೊಳ್ಳುತ್ತದೆ. ಇಸ್ಲಾಮಿಕ್ ಚಂದ್ರಮಾನ ಕ್ಯಾಲೆಂಡರ್ ಪ್ರಕಾರ, ರಂಜಾನ್ ತಿಂಗಳು ಚಂದ್ರದರ್ಶನದಿಂದ ಆರಂಭವಾಗಿ, ಶವ್ವಾಲ್ ತಿಂಗಳ ಚಂದ್ರದರ್ಶನದೊಂದಿಗೆ ಅಂತ್ಯಗೊಳ್ಳುತ್ತದೆ. ಹೀಗಾಗಿ, ಶವ್ವಾಲ್ ಮೊದಲ ದಿನವನ್ನು ‘ಈದುಲ್ ಫಿತ್ರ್’ ಎಂದು ಸಂಭ್ರಮದಿಂದ ಆಚರಿಸಲಾಗುತ್ತದೆ. ರಂಜಾನ್ ತಿಂಗಳಾದ್ಯಂತ ಮುಸ್ಲಿಮರು ಪ್ರಾರ್ಥನೆ, ಉಪವಾಸ, ಧಾರ್ಮಿಕ ಚಿಂತನೆ ಹಾಗೂ ದಾನಧರ್ಮಗಳಲ್ಲಿ ತೊಡಗಿ ಆತ್ಮಶುದ್ಧಿಯನ್ನು ಸಾಧಿಸುತ್ತಾರೆ. ಈ 30 ದಿನಗಳ ಉಪವಾಸದ ಬಳಿಕ ಬರುವ ಈದುಲ್ ಫಿತ್ರ್ ಹಬ್ಬವು ಸಂತೋಷ, ಸಹೋದರತ್ವ…
ಮಂಗಳೂರು, ಮಾರ್ಚ್ 18: ದಕ್ಷಿಣ ಕನ್ನಡ ಜಿಲ್ಲಾ ಜನತಾದಳ ಸಂಘಟನೆಗೆ ಹೊಸ ಚೈತನ್ಯ ತುಂಬುವ ನಿಟ್ಟಿನಲ್ಲಿ, ಜಿಲ್ಲಾ ಅಧ್ಯಕ್ಷರಾದ ಶ್ರೀ ಜಾಕೆ ಮಾಧವ ಗೌಡರವರು ಜಿಲ್ಲಾ ವಿದ್ಯಾರ್ಥಿ ಜನತಾದಳದ ನೂತನ ಅಧ್ಯಕ್ಷರಾಗಿ ವೈದ್ಯಕೀಯ ವಿದ್ಯಾರ್ಥಿ ನಿಹಾಲ್ ಎಸ್ ಕೋಡ್ತುಗುಳಿ ಅವರನ್ನು ನೇಮಿಸಿ ಅಧಿಕೃತವಾಗಿ ಪ್ರಕಟಿಸಿದ್ದಾರೆ. ನೇಮಕಗೊಂಡ ಬಳಿಕ ನಿಹಾಲ್ ಎಸ್ ಕೋಡ್ತುಗುಳಿ ಅವರು ಮುಂಜಾನೆ ಭೇಟಿ ನೀಡಿ ಆಶೀರ್ವಾದ ಹಾಗೂ ಮಾರ್ಗದರ್ಶನ ಕೋರಿದರು. ಈ ವೇಳೆ ಮಾತನಾಡಿದ ಜನತಾದಳ ಉಪಾಧ್ಯಕ್ಷ ಎಂ.ಬಿ. ಸದಾಶಿವರವರು, ನಿಹಾಲ್ ಅವರ ಕುಟುಂಬದ ರಾಜಕೀಯ ಮತ್ತು ಸಾಮಾಜಿಕ ಹಿನ್ನೆಲೆಯನ್ನು ಉಲ್ಲೇಖಿಸಿದರು. ನಿಹಾಲ್ ಅವರ ತಂದೆ ಸುಕುಮಾರ್ ಕೋಡ್ತುಗುಳಿ ಅವರು ಯುವ ಜನತಾದಳದ ಅಧ್ಯಕ್ಷರಾಗಿಯೂ, ಬಳಿಕ ತಾಲೂಕು ಅಧ್ಯಕ್ಷರಾಗಿಯೂ ಪಕ್ಷ ಸಂಘಟನೆಯಲ್ಲಿ ಮಹತ್ವದ ಪಾತ್ರವಹಿಸಿರುವುದನ್ನು ಅವರು ಸ್ಮರಿಸಿದರು. ಯುವಜನೋಚಿತ ಉತ್ಸಾಹ, ವಿದ್ಯಾರ್ಥಿ ಜೀವನದ ವಿಧೇಯತೆ ಮತ್ತು ಕೌಟುಂಬಿಕ ಮೌಲ್ಯಗಳನ್ನು ಹೊಂದಿರುವ ನಿಹಾಲ್, ಭವಿಷ್ಯದಲ್ಲಿ ಸಮರ್ಥ ನಾಯಕನಾಗಿ ಹೊರಹೊಮ್ಮುವ ವಿಶ್ವಾಸ ವ್ಯಕ್ತಪಡಿಸಲಾಯಿತು. ಹಿರಿಯರಿಗಿರುವ ಗೌರವ, ಗೆಳೆಯರ ಬೆಂಬಲ ಮತ್ತು ರಾಜ್ಯ-ರಾಷ್ಟ್ರ…
ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಉಪ್ಪೂರು–ಕೊಳಲಗಿರಿ ಪ್ರದೇಶದಲ್ಲಿ ಯುವ ವಿಚಾರ ವೇದಿಕೆಯ ವತಿಯಿಂದ ಎರಡು ದಿನಗಳ ರಜತ ಸಂಭ್ರಮ ಕಾರ್ಯಕ್ರಮಗಳು ಶನಿವಾರ ಮತ್ತು ಭಾನುವಾರ ವೈಭವವಾಗಿ ನೆರವೇರಿದವು. ಸಮಾಜಮುಖಿ ಚಟುವಟಿಕೆಗಳು, ಸಾಂಸ್ಕೃತಿಕ ವೈಭವ ಮತ್ತು ಯುವಜನರ ಸಕ್ರಿಯ ಭಾಗವಹಿಸುವಿಕೆಯಿಂದ ಕಾರ್ಯಕ್ರಮ ವಿಶೇಷ ಮೆರುಗು ಪಡೆದಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಸಂದೀಪ್ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವರಾದ ಜಯಪ್ರಕಾಶ್ ಹೆಗ್ಡೆ, ಶಾಸಕ ಯಶಪಾಲ್ ಎ ಸುವರ್ಣ, ಉದ್ಯಮಿಗಳಾದ ಸುಗ್ಗಿ ಸುಧಾಕರ್ ಶೆಟ್ಟಿ, ರೋಯಲ್ ರತ್ನಾಕರ್ ಡಿ ಶೆಟ್ಟಿ, ಹರೀಶ್ ಪೂಜಾರಿ ಒಳಮಡಿ ಸೇರಿದಂತೆ ಹಲವರು ಭಾಗವಹಿಸಿದ್ದರು. ಮಾಜಿ ತಾಲೂಕು ಪಂಚಾಯತ್ ಸದಸ್ಯೆ ವೆರೋನಿಕಾ ಕರ್ನೇಲಿಯೋ ಹಾಗೂ ಸಂಸ್ಥಾಪಕ ಅಧ್ಯಕ್ಷ ಜಯಪ್ರಕಾಶ್ ಕುಮಾರ್ ಉಪಸ್ಥಿತರಿದ್ದರು. ಅದ್ಧೂರಿ ಉದ್ಘಾಟನೆ ರಜತ ಸಂಭ್ರಮದ ಅಂಗವಾಗಿ “MRG ಗ್ರೂಪ್ ಮಂಗಳೂರು” ಪ್ರವೇಶ ದ್ವಾರವನ್ನು ಸುಗ್ಗಿ ಸುಧಾಕರ್ ಶೆಟ್ಟಿ ಉದ್ಘಾಟಿಸಿದರು. ಬಳಿಕ ಸಭಾ ಕಾರ್ಯಕ್ರಮಕ್ಕೆ ಗಣ್ಯರು ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಅಧಿಕೃತ ಉದ್ಘಾಟನೆಯನ್ನು…
ಮೂಡಬಿದಿರೆ: ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅವರ ವಿರುದ್ಧ ಕೇಳಿಬಂದಿರುವ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಹೊಸ ತಿರುವು ದೊರೆತಿದೆ. ದೂರುದಾರರಾದ ಸುಮತಿ ನಾಯ್ಕ್ ಅವರ ಅಕ್ಕ ಪ್ರಪುಲ್ಲ ನಾಯ್ಕ್ ಪತ್ರಿಕಾಗೋಷ್ಠಿ ನಡೆಸಿ, ತಮ್ಮ ತಂಗಿಯ ಆರೋಪಗಳನ್ನು ತಳ್ಳಿಹಾಕಿ ಇನ್ಸ್ಪೆಕ್ಟರ್ ಪರವಾಗಿ ಮಾತನಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಪುಲ್ಲ ನಾಯ್ಕ್, “ಇದು ಸಂಪೂರ್ಣ ಕೌಟುಂಬಿಕ ಕಲಹದಿಂದ ಉಂಟಾದ ಪ್ರಕರಣ. ನನ್ನ ತಂಗಿ ಸುಮತಿ ನಾಯ್ಕ್ ಅವರು ಇನ್ಸ್ಪೆಕ್ಟರ್ ಸಂದೇಶ್ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಕುಟುಂಬ ಸಮಸ್ಯೆಯನ್ನು ಇತ್ಯರ್ಥಗೊಳಿಸಲು ಇನ್ಸ್ಪೆಕ್ಟರ್ ಅವರು ಸೂಕ್ತ ಸಲಹೆ ನೀಡಿದ್ದರು. ಆದರೆ ಇದನ್ನು ತಪ್ಪಾಗಿ ಅರ್ಥೈಸಿ ದೂರು ದಾಖಲಿಸಲಾಗಿದೆ” ಎಂದು ಹೇಳಿದ್ದಾರೆ. ಇನ್ನಷ್ಟು ವಿವರಿಸುತ್ತಾ ಅವರು, “ಈ ಹಿಂದೆ ನನ್ನ ತಂಗಿ ತನ್ನ ಗಂಡ ಮತ್ತು ಮಗನನ್ನು ಸೇರಿಸಿಕೊಳ್ಳುವ ವಿಚಾರದಲ್ಲಿ ದೂರು ನೀಡಿದಾಗ, ಇನ್ಸ್ಪೆಕ್ಟರ್ ನಮ್ಮ ಪರವಾಗಿ ನಡೆದುಕೊಂಡಿದ್ದರು. ಅವರು ಒಳ್ಳೆಯ ವ್ಯಕ್ತಿ. ದುರುದ್ದೇಶದಿಂದಲೇ ಈಗ ಈ ಆರೋಪ ಮಾಡಲಾಗಿದೆ” ಎಂದು ತಿಳಿಸಿದ್ದಾರೆ. ಪ್ರಪುಲ್ಲ ನಾಯ್ಕ್…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವಿದ್ಯಾರ್ಥಿ ಜನತಾದಳ (ಜಾತ್ಯಾತೀತ) ವತಿಯಿಂದ ನಡೆದ ಮಹತ್ವದ ಸಭೆಯಲ್ಲಿ ನಿಹಾಲ್ ಎಸ್. ಕೋಡ್ತುಗುಳಿಯನ್ನು ಜಿಲ್ಲಾ ವಿದ್ಯಾರ್ಥಿ ಜನತಾದಳದ ಅಧ್ಯಕ್ಷರಾಗಿ ಅಧಿಕೃತವಾಗಿ ಘೋಷಿಸಿ, ಜಿಲ್ಲಾ ಸಮಿತಿ ರಚನೆಗೆ ಅಗತ್ಯವಾದ ಅಧಿಕಾರವನ್ನು ಹಸ್ತಾಂತರಿಸಲಾಯಿತು. ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಜಾತ್ಯಾತೀತ ಜನತಾದಳದ ಅಧ್ಯಕ್ಷರಾದ ಜಾಕೆ ಮಾಧವ ಗೌಡ ಅವರು ನಿಹಾಲ್ ಎಸ್. ಕೋಡ್ತುಗುಳಿಗೆ ಅಧಿಕಾರ ಹಸ್ತಾಂತರಿಸಿ, ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಯುವ ನಾಯಕರಿಗೆ ಹೆಚ್ಚಿನ ಅವಕಾಶ ನೀಡುವ ಅಗತ್ಯವನ್ನು ಒತ್ತಿ ಹೇಳಿದರು. ವಿದ್ಯಾರ್ಥಿ ಘಟಕವು ಪಕ್ಷದ ಭವಿಷ್ಯವಾಗಿದ್ದು, ಸಂಘಟನೆಯ ವಿಸ್ತರಣೆ ಹಾಗೂ ಯುವಕರನ್ನು ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸುವಲ್ಲಿ ಪ್ರಮುಖ ಪಾತ್ರವಹಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಮಾತನಾಡಿದ ನಿಹಾಲ್ ಎಸ್. ಕೋಡ್ತುಗುಳಿ ಅವರು, ತಮಗೆ ನೀಡಲಾದ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸುವ ಭರವಸೆ ನೀಡಿ, ಜಿಲ್ಲೆಯಾದ್ಯಂತ ವಿದ್ಯಾರ್ಥಿ ಘಟಕವನ್ನು ಬಲಿಷ್ಠಗೊಳಿಸಲು, ಹೊಸ ಸದಸ್ಯರನ್ನು ಸೇರ್ಪಡೆಗೊಳಿಸಲು ಹಾಗೂ ವಿದ್ಯಾರ್ಥಿಗಳ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡುವುದಾಗಿ ಹೇಳಿದರು. ಸಭೆಯಲ್ಲಿ ಮೀನುಗಾರ ಘಟಕದ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
