Author: Tulunada Surya

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಪ್ರಮಾಣದ ಮಾದಕ ವಸ್ತು ಜಾಲವನ್ನು ಹೆಬ್ಬಾಳ ಪೊಲೀಸರು ಭೇದಿಸಿದ್ದು, ಮೂವರು ವಿದೇಶಿ ಪ್ರಜೆಗಳು ಸೇರಿದಂತೆ ಎಂಟು ಮಂದಿಯನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು ₹35 ಕೋಟಿ ಮೌಲ್ಯದ 17.4 ಕೆ.ಜಿ. ಎಂಡಿಎಂಎ ಕ್ರಿಸ್ಟಲ್ ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಸೆನೆಗಲ್ ಮೂಲದ ಡನ್ಫಾ ಗೆರಾಲ್ಡ್, ತಾಂಜೇನಿಯಾ ಮೂಲದ ಮೆಗ್ರಾತ್, ನೈಜೀರಿಯಾ ಮೂಲದ ಒಬಿಯಾನಿಜ್ ರೀಟಾ, ಹೊಸದಿಲ್ಲಿಯ ರೀನಾ ಯಾದವ್ ಹಾಗೂ ದೆಬಾಶಿಶ್ ಬ್ಯಾನರ್ಜಿ, ಜೊತೆಗೆ ಬೆಂಗಳೂರಿನ ಧೀರಜ್, ಮೊಹಮ್ಮದ್ ಮನ್ಸೂರ್ ಮತ್ತು ಅಬ್ದುಲ್ ಸಮದ್ ಎಂದು ಗುರುತಿಸಲಾಗಿದೆ. ಪೊಲೀಸರ ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ ಬಹಿರಂಗವಾಗಿದ್ದು, ಆರೋಪಿಗಳು ಯಾರಿಗೂ ಅನುಮಾನ ಬಾರದಂತೆ ಸೀರೆ, ಇಸ್ತ್ರಿ ಟೇಬಲ್ ಮತ್ತು ಕುರ್ಚಿಗಳ ಒಳಭಾಗದಲ್ಲಿ ಎಂಡಿಎಂಎ ಕ್ರಿಸ್ಟಲ್ ಅಡಗಿಸಿ ಉಡುಗೊರೆ ಪ್ಯಾಕ್ ಮಾದರಿಯಲ್ಲಿ ಸಿದ್ಧಪಡಿಸುತ್ತಿದ್ದರು. ಬಳಿಕ ರೈಲು ಮಾರ್ಗದ ಮೂಲಕ ದಿಲ್ಲಿಯಿಂದ ಬೆಂಗಳೂರಿಗೆ ಸಾಗಿಸಿ, ನಗರದ ನಿರ್ಜನ ಪ್ರದೇಶಗಳಲ್ಲಿ ಕಾರುಗಳ ಮೂಲಕ ಮಾದಕ ವಸ್ತು ಮಾರಾಟ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಹೆಬ್ಬಾಳದ ಆನಂದನಗರದ ಬಳಿ ಮೊದಲಿಗೆ…

Read More

ಮಂಗಳೂರು: ಕಾವೂರಿನ ಮಾಲಾಡಿಕೋರ್ಟ್ ಮುಖ್ಯ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ಕಾವೂರು ಬಂಟರ ಸಂಘದ ಬಹುನಿರೀಕ್ಷಿತ “ಬಂಟರ ಭವನ” ಜನವರಿ 20, 2027ರಂದು ಭವ್ಯವಾಗಿ ಉದ್ಘಾಟನೆಯಾಗಲಿದ್ದು, ಅದರ ಅಂಗವಾಗಿ ಪೂರ್ವ ಸಿದ್ಧತಾ ಸಭೆ ಸಂಘದ ಅಧ್ಯಕ್ಷ ಆನಂದ ಶೆಟ್ಟಿ ಅಡ್ಯಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಅವರು, ಬಂಟರ ಭವನವು ಸಮುದಾಯದ ಹೆಮ್ಮೆಯ ಪ್ರತೀಕವಾಗಿದ್ದು, ಉದ್ಘಾಟನಾ ಸಮಾರಂಭವನ್ನು ಸಂಘಟಿತ ರೀತಿಯಲ್ಲಿ ನಡೆಸಿ ಯಶಸ್ವಿಗೊಳಿಸಲು ಎಲ್ಲ ಸದಸ್ಯರು ಹಾಗೂ ಸಮಾಜ ಬಾಂಧವರು ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಕಟ್ಟಡ ನಿರ್ಮಾಣ ಸಮಿತಿಯ ಅಧ್ಯಕ್ಷ ಮುಗೇರೋಡಿ ಡಿ. ಸುಧಾಕರ ಶೆಟ್ಟಿ ಮಾತನಾಡಿ, ಸುಮಾರು 10 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಭವನವು ಅಂತಿಮ ಹಂತ ತಲುಪಿದೆ ಎಂದರು. ಕಳೆದ ಎರಡು ವರ್ಷಗಳಿಂದ ಸಮಿತಿಯ ನಿರಂತರ ಪರಿಶ್ರಮ, ದಾನಿಗಳ ಸಹಕಾರ ಹಾಗೂ ಸಮುದಾಯದ ಬೆಂಬಲದಿಂದ ಈ ಮಹತ್ವಾಕಾಂಕ್ಷಿ ಯೋಜನೆ ಸಾಕಾರಗೊಳ್ಳುತ್ತಿದೆ ಎಂದು ಹೇಳಿದರು. ಸುಮಾರು 1,300 ಆಸನ ಸಾಮರ್ಥ್ಯದ ಹವಾ ನಿಯಂತ್ರಿತ ಸಭಾಂಗಣ, ಪ್ರತ್ಯೇಕ…

Read More

ಮಂಗಳೂರು : ಜನತಾದಳ (ಜಾತ್ಯತೀತ) ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಪಕ್ಷದ ಸಂಘಟನೆ ಬಲವರ್ಧನೆ, ಮುಂದಿನ ಕಾರ್ಯಕ್ರಮಗಳ ರೂಪರೇಖೆ ಹಾಗೂ ಮುಂಬರುವ ಚುನಾವಣೆಯ ತಂತ್ರಗಾರಿಕೆ ಕುರಿತು ಚರ್ಚಿಸಲು ಮಹತ್ವದ ಸಭೆಯನ್ನು ಆಯೋಜಿಸಲಾಗಿದೆ. ಈ ಸಭೆಯು ಮೇ 30, 2026 ಶನಿವಾರ ದಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲ್‌ನಲ್ಲಿ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಜಾಕೆ ಮಾಧವ ಗೌಡ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಪಕ್ಷದ ವಿವಿಧ ಘಟಕಗಳ ಪ್ರಮುಖರು, ತಾಲೂಕು ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಪಕ್ಷದ ಸಂಘಟನೆಗೆ ಹೊಸ ಚೈತನ್ಯ ತುಂಬುವ ನಿಟ್ಟಿನಲ್ಲಿ ಸಭೆಯಲ್ಲಿ ಹಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ. ಸಭೆಯಲ್ಲಿ ಪಕ್ಷದ ಸಂಘಟನೆ ಬಲವರ್ಧನೆ, ತಾಲೂಕು ಮಟ್ಟದ ಕಾರ್ಯಕ್ರಮಗಳ ರೂಪರೇಖೆ, ಮುಂಬರುವ ಚುನಾವಣೆಗಳಿಗೆ ಸಂಬಂಧಿಸಿದ ತಂತ್ರಗಾರಿಕೆ, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ ಹಾಗೂ ಸಲಹೆಗಳ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಲಾಗಿದೆ. ಪಕ್ಷದ ಹಿತದೃಷ್ಟಿಯಿಂದ ಈ ಸಭೆ…

Read More

ಮಂಗಳೂರು : ಜನತಾದಳ (ಜಾತ್ಯತೀತ) ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಮತ್ತೋರ್ವ ಕಾರ್ಯಾಧ್ಯಕ್ಷರಾಗಿ ಶ್ರೀ ಇಕ್ಬಲ್ ಅಹಮದ್ ಮುಲ್ಕಿ ಅವರನ್ನು ನೇಮಕ ಮಾಡಲಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ H. D. Kumaraswamy ಅವರು ಇಕ್ಬಲ್ ಅಹಮದ್ ಮುಲ್ಕಿ ಅವರಿಗೆ ಅಧಿಕೃತ ನೇಮಕಾತಿ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಶ್ರೀ ಶಶಿರಾಜ್ ಶೆಟ್ಟಿ ಕೊಳಂಬೆ ಹಾಗೂ ಶ್ರೀ ವಸಂತ್ ಪೂಜಾರಿ ಅವರು ಜಿಲ್ಲಾ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದು, ಇದೀಗ ಇಕ್ಬಲ್ ಅಹಮದ್ ಮುಲ್ಕಿ ಅವರ ಸೇರ್ಪಡೆಯಿಂದ ಜಿಲ್ಲಾ ಜೆಡಿಎಸ್ ಸಂಘಟನೆಗೆ ಮತ್ತಷ್ಟು ಬಲ ದೊರೆತಿದೆ. ಇವರ ನೇಮಕಾತಿಯನ್ನು ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸ್ವಾಗತಿಸಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ಮಂಗಳೂರು : ಉರ್ವ ಶೇಡಿಗುರಿ ಪ್ರದೇಶದಲ್ಲಿ ನಡೆಯುತ್ತಿರುವ ಬಹುಮಹಡಿ ಕಟ್ಟಡ ನಿರ್ಮಾಣ ಕಾಮಗಾರಿಯ ವೇಳೆ ಪಕ್ಕದ ಮನೆಯ ಕಂಪೌಂಡ್ ಕುಸಿದು ಅಪಾಯಕರ ಪರಿಸ್ಥಿತಿ ನಿರ್ಮಾಣವಾದ ಘಟನೆ ಬುಧವಾರ ರಾತ್ರಿ ಸಂಭವಿಸಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ನಡುವೆಯೇ ಈ ಘಟನೆ ಸಂಭವಿಸಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿತು. ಸಂತ್ರಸ್ತ ಮನೆಯವರು ಕರೆ ಬಂದ ತಕ್ಷಣ ರಾತ್ರಿಯೇ ಸ್ಥಳಕ್ಕೆ ಧಾವಿಸಿದ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು ಅವರು ಪರಿಸ್ಥಿತಿಯನ್ನು ಪರಿಶೀಲಿಸಿ ಸ್ಥಳೀಯ ನಿವಾಸಿಗಳೊಂದಿಗೆ ಮಾತುಕತೆ ನಡೆಸಿದರು. ಅಲ್ಲದೆ ಕಟ್ಟಡ ನಿರ್ಮಾಣದ ಮಾಲೀಕರು ಹಾಗೂ ಗುತ್ತಿಗೆದಾರರೊಂದಿಗೆ ತುರ್ತು ಚರ್ಚೆ ನಡೆಸಿ, ಅಪಾಯದಲ್ಲಿದ್ದ ಕುಟುಂಬದ ಸುರಕ್ಷತೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಮಳೆ ಮುಂದುವರಿದಿರುವ ಹಿನ್ನೆಲೆ ಮನೆ ಮತ್ತಷ್ಟು ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇರುವುದರಿಂದ, ಕುಟುಂಬದವರನ್ನು ಮುಂಜಾಗ್ರತಾ ಕ್ರಮವಾಗಿ ಸಮೀಪದ ಹೋಟೆಲಿಗೆ ಸ್ಥಳಾಂತರಿಸುವ ವ್ಯವಸ್ಥೆಯನ್ನು ಮಾಡಲಾಯಿತು. ಅಲ್ಲದೆ ಮನೆಗೆ ಯಾವುದೇ ಹಾನಿಯಾಗದಂತೆ ತಾತ್ಕಾಲಿಕ ರಕ್ಷಣಾತ್ಮಕ…

Read More

ಮಂಗಳೂರು, ಮೇ 20 : ಕ್ಯಾಥೋಲಿಕ್ ಸಭಾ ಮಂಗಳೂರು ಪ್ರದೇಶ (ರಿ.) ವ್ಯಾಪ್ತಿಯ ಎಪಿಸ್ಕೋಪಲ್ ಸಿಟಿ ವರಾಡೊಗೆ ನಡೆದ ಚುನಾವಣೆಯಲ್ಲಿ ತುಳುನಾಡ ರಕ್ಷಣಾ ವೇದಿಕೆ ನಗರ ಕಾರ್ಯದ್ಯಕ್ಷ ಕ್ಲೀಟಸ್ ಲೋಬೊ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮೇ 13ರಂದು ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆಯೊಂದಿಗೆ ವರಾಡೊಗೆ ಹೊಸ ನಾಯಕತ್ವ ದೊರೆತಿದೆ.ನೂತನ ಕಾರ್ಯಕಾರಿ ಸಮಿತಿಯಲ್ಲಿ ಜೆಸಿಂತಾ ಲೋಬೊ ಕಾರ್ಯದರ್ಶಿಯಾಗಿ ಹಾಗೂ ಸ್ಟೀವನ್ ರೋಡ್ರಿಗ್ಸ್ ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ. ಜೊತೆಗೆ ಮಾಜಿ ಅಧ್ಯಕ್ಷೆ ಐಡಾ ಫುರ್ಟಾಡೊ ಸದಸ್ಯೆಯಾಗಿ ಮುಂದುವರಿಯಲಿದ್ದು, ತಮ್ಮ ಅನುಭವದ ಮೂಲಕ ಸಂಘಟನೆಯ ಕಾರ್ಯಚಟುವಟಿಕೆಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ. ಇನ್ನೂ ಏಳು ಮಂದಿ ಸದಸ್ಯರು ವಿವಿಧ ಹುದ್ದೆಗಳಿಗೆ ಆಯ್ಕೆಯಾಗಿದ್ದು, ಸಮಗ್ರ ಕಾರ್ಯಕಾರಿ ತಂಡ ರಚನೆಯಾಗಿದೆ.ಆಧ್ಯಾತ್ಮಿಕ ನಿರ್ದೇಶಕರಾಗಿ ವಂದನೀಯ ಫಾ. ಜಾನ್ ವಾಸ್ ನೇಮಕಗೊಂಡಿದ್ದು, ವರಾಡೊದ ಧಾರ್ಮಿಕ ಹಾಗೂ ಸಾಮಾಜಿಕ ಚಟುವಟಿಕೆಗಳಿಗೆ ಆಧ್ಯಾತ್ಮಿಕ ದಿಕ್ಕು ನೀಡಲಿದ್ದಾರೆ. ಸಂಘಟನೆಯ ಮೌಲ್ಯಾಧಾರಿತ ಸೇವಾ ಕಾರ್ಯಗಳಿಗೆ ಅವರು ಮಾರ್ಗದರ್ಶಕರಾಗಲಿದ್ದಾರೆ.ಚುನಾವಣಾ ಪ್ರಕ್ರಿಯೆಯಲ್ಲಿ ಕ್ಯಾಥೋಲಿಕ್ ಸಭೆಯ ಕೇಂದ್ರ ಸಮಿತಿಯನ್ನು ಪ್ರತಿನಿಧಿಸಿ ಸ್ಟ್ಯಾನಿ ಲೋಬೊ ವೀಕ್ಷಕರಾಗಿ…

Read More

ಮಂಗಳೂರು : ಜನತಾದಳ (ಜಾತ್ಯತೀತ) ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಮತ್ತೋರ್ವ ಕಾರ್ಯಾಧ್ಯಕ್ಷರಾಗಿ ಶ್ರೀ ವಸಂತ್ ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ. ಬೆಂಗಳೂರು ನಗರದ ಜೆಪಿ ಭವನದಲ್ಲಿರುವ ಜೆಡಿಎಸ್ ರಾಜ್ಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ವಸಂತ ಪೂಜಾರಿಯವರಿಗೆ ಅಧಿಕೃತ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು. ಈ ಹಿಂದೆ ಶ್ರೀ ಶಶಿರಾಜ್ ಶೆಟ್ಟಿ ಕೊಳಂಬೆ ಅವರು ಜಿಲ್ಲಾ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದು, ಇದೀಗ ಮತೊರ್ವ ಕಾರ್ಯದ್ಯಕ್ಷರಾಗಿ ವಸಂತ್ ಪೂಜಾರಿ ಅವರು ನೇಮಕಗೊಂಡಿದ್ದು ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Read More

ಮಂಗಳೂರು : ಜನತಾದಳ (ಸೆಕ್ಯುಲರ್) ಪಕ್ಷದ ರಾಜ್ಯ ಮೀನುಗಾರರ ಘಟಕದ ಅಧ್ಯಕ್ಷರಾಗಿ ಶ್ರೀ ರತ್ನಾಕರ ಸುವರ್ಣ ಅವರು ಮರು ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿರುವ ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ H. D. Kumaraswamy ಅವರು ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು. .

Read More

ಮಂಗಳೂರಿನ ಎಜೆ ಆಸ್ಪತ್ರೆಯ ಮುಂಭಾಗದಲ್ಲಿರುವ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುವ ಇನ್ಟಾಮಾರ್ಟ್ ಸಂಸ್ಥೆಯಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಬೆಳ್ತಂಗಡಿ ತಾಲೂಕಿನ ಬೆಳಲು ಪೂಂಜಕೆರೆ ನಿವಾಸಿ ಅವಿವಾಹಿತ 28 ವರ್ಷದ ಯುವಕ ನೌಫಲ್ ಎಂಬುವರು ಸಂಸ್ಥೆಯ ಅವೈಜ್ಞಾನಿಕವಾಗಿ ಯಾವುದೇ ಪರವಾನಿಗೆ ಪಡೆಯದೆ ನಿರ್ಮಿಸಿದ ಲಿಫ್ಟ್ ನಲ್ಲಿ ಸಿಲುಕಿ ಅವಘಡದಿಂದ ಸಾವನ್ನಪ್ಪಿದ್ದು ಈ ಘಟನೆಯು ಅತ್ಯಂತ ದುಃಖಕರ ಹಾಗೂ ಆತಂಕಕಾರಿ ಘಟನೆ ಎಂದು ಎಸ್.ಡಿ.ಟಿ.ಯು ಮಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷರಾದ ಇರ್ಫಾನ್ ಕಾನ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ನಿರಂತರವಾಗಿ ನಿರ್ಮಾಣ ಕಾಮಗಾರಿಗಳು ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡುತ್ತಿರುವ ಪರಿಣಾಮ ಅಮಾಯಕ ಕಾರ್ಮಿಕರು ಜೀವ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಕಾರ್ಮಿಕರ ಸುರಕ್ಷತೆಗಾಗಿ ಅಗತ್ಯವಾದ ತಾಂತ್ರಿಕ ವ್ಯವಸ್ಥೆಗಳು, ನಿಯಮಿತ ಪರಿಶೀಲನೆ ಮತ್ತು ಸುರಕ್ಷತಾ ಮಾನದಂಡಗಳನ್ನು ಪಾಲಿಸದೇ ಇರುವ ಸಂಸ್ಥೆಗಳ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣವಾಗಿದೆ.ಮೃತ ಕಾರ್ಮಿಕನ ಕುಟುಂಬಕ್ಕೆ ತಕ್ಷಣವೇ ಸರ್ಕಾರ ಹಾಗೂ ಸಂಬಂಧಪಟ್ಟ ಸಂಸ್ಥೆ ವತಿಯಿಂದ ಸೂಕ್ತ ಪರಿಹಾರ ಘೋಷಿಸಬೇಕು ಮತ್ತು…

Read More

ಬೆಂಗಳೂರು, ಮೇ 20 : ಆನ್‌ಲೈನ್ ಮೂಲಕ ನಡೆಯುತ್ತಿರುವ ನಿಯಂತ್ರಣರಹಿತ ಔಷಧ ಮಾರಾಟ ವ್ಯವಸ್ಥೆ ವಿರುದ್ಧ ದೇಶದಾದ್ಯಂತ ಔಷಧ ವ್ಯಾಪಾರಿಗಳು ನಡೆಸಿದ ಮೆಡಿಕಲ್ ಶಾಪ್ ಬಂದ್‌ಗೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. All India Organisation of Chemists and Druggists (AIOCD) ನೇತೃತ್ವದಲ್ಲಿ ನಡೆದ ಈ ಹೋರಾಟ ಕೇವಲ ವ್ಯಾಪಾರಿಗಳ ಹಿತಾಸಕ್ತಿಗೆ ಸೀಮಿತವಾಗಿಲ್ಲದೆ, ಸಾರ್ವಜನಿಕ ಆರೋಗ್ಯ ಮತ್ತು ಔಷಧ ಸುರಕ್ಷತೆಯನ್ನು ಕಾಪಾಡುವ ಮಹತ್ವದ ಜನಆಂದೋಲನವಾಗಿದೆ ಎಂದು ಸಂಘಟನೆಗಳು ಅಭಿಪ್ರಾಯಪಟ್ಟಿವೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾವಿರಾರು ಮೆಡಿಕಲ್ ಅಂಗಡಿಗಳು ಬಂದ್‌ಗೆ ಬೆಂಬಲ ಸೂಚಿಸಿದ್ದು, ವಿಶೇಷವಾಗಿ Dakshina Kannada ಜಿಲ್ಲೆಯಲ್ಲಿ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಿಲ್ಲೆಯಾದ್ಯಂತ ಸುಮಾರು 1100ಕ್ಕೂ ಅಧಿಕ ಮೆಡಿಕಲ್ ಶಾಪ್‌ಗಳು ಸ್ವಯಂಪ್ರೇರಿತವಾಗಿ ಬಂದ್ ಪಾಲ್ಗೊಂಡು ಆನ್‌ಲೈನ್ ಔಷಧ ಮಾರಾಟದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿವೆ. ರಾಜಧಾನಿ Bengaluru ಸೇರಿದಂತೆ ಕೆಲವು ನಗರ ಪ್ರದೇಶಗಳಲ್ಲಿ ತುರ್ತು ಆರೋಗ್ಯ ಸೇವೆ ಅಡಚಣೆಯಾಗಬಾರದು ಎಂಬ ಉದ್ದೇಶದಿಂದ ಕೆಲವು ಅಂಗಡಿಗಳು ತೆರೆಯಲ್ಪಟ್ಟಿದ್ದರೂ, ಬಹುತೇಕ…

Read More