- ಮೂಡುಬಿದಿರೆಯಲ್ಲಿ ಆಗಸ್ಟ್ 7-8ರಂದು ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ ಮೇಳ 300ಕ್ಕೂ ಅಧಿಕ ಕಂಪನಿಗಳ ಭಾಗಿ; ಸಾವಿರಾರು ಉದ್ಯೋಗಾವಕಾಶಗಳ ನಿರೀಕ್ಷೆ
- ಪಡಿತರ ಚೀಟಿ ಸಮಸ್ಯೆ: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಜೆಡಿಎಸ್ ನಿಯೋಗ ಭೇಟಿ, ಅಧಿಕಾರಿಗಳಿಗೆ ತರಾಟೆ
- ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕ ಹಾಗೂ ಮುಖ್ಯೋಪಾಧ್ಯಾಯನ ವಿರುದ್ಧ ಪ್ರಕರಣ
- ಬೆಳಗಾವಿ ಸಮೀಪ ಭೀಕರ ರಸ್ತೆ ಅಪಘಾತ: ಲಾರಿಗೆ ಬೆಂಕಿ, 500ಕ್ಕೂ ಹೆಚ್ಚು ಜೋಳದ ಚೀಲಗಳು ಭಸ್ಮ
- ಬಿಡದಿ–ಹಾರೋಹಳ್ಳಿ ಭೂಸ್ವಾಧೀನ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ನಿಂದ ಸರ್ಕಾರಕ್ಕೆ ಮನವಿ
- ಮಂಗಳೂರು ದಕ್ಷಿಣ ಕ್ಷೇತ್ರದ ಜೆಡಿಎಸ್ ಸಭೆ ಯಶಸ್ವಿ – ಹಲವರ ಪಕ್ಷ ಸೇರ್ಪಡೆ, ಸಂಘಟನೆ ಬಲವರ್ಧನೆಗೆ ಸಂಕಲ್ಪ
- ಮದುವೆಯಾಗಿ 48 ದಿನಗಳಲ್ಲೇ ಅಂತ್ಯವಾದ ಬದುಕು: ಕಿರುಕುಳ ತಾಳಲಾರದೆ ನವವಿವಾಹಿತೆ ಆತ್ಮಹತ್ಯೆ, ವೈದ್ಯ ಪತಿ ಬಂಧನ
- ಮಂಗಳೂರು ದಕ್ಷಿಣ ಕ್ಷೇತ್ರದ ಪದಾಧಿಕಾರಿಗಳ ಮಹತ್ವದ ಸಭೆ ಜೂನ್ 19ರಂದು
Author: Tulunada Surya
ಮಂಗಳೂರು, ಜೂನ್ 20: ಗ್ರಾಮೀಣ ಹಾಗೂ ನಗರ ಪ್ರದೇಶದ ಪ್ರತಿಭಾವಂತ ಯುವಕರಿಗೆ ಗುಣಮಟ್ಟದ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಆಯೋಜಿಸಲಾಗುವ ಆಳ್ವಾಸ್ ಪ್ರಗತಿ ಬೃಹತ್ ಉದ್ಯೋಗ ಮೇಳ–2026ರ 16ನೇ ಆವೃತ್ತಿಯು ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ ಎಂದು ಡಾ. ಎಂ. ಮೋಹನ್ ಆಳ್ವ ತಿಳಿಸಿದ್ದಾರೆ. ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2007ರಲ್ಲಿ ಆರಂಭವಾದ ಆಳ್ವಾಸ್ ಪ್ರಗತಿ ಇಂದು ಕರ್ನಾಟಕ ಸೇರಿದಂತೆ ನೆರೆಯ ರಾಜ್ಯಗಳ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ವಿಶ್ವಾಸಾರ್ಹ ಉದ್ಯೋಗ ವೇದಿಕೆಯಾಗಿ ಬೆಳೆದಿದೆ ಎಂದು ಹೇಳಿದರು. ಸಾಮಾಜಿಕ ಹೊಣೆಗಾರಿಕೆ (CSR) ಕಾರ್ಯಕ್ರಮದ ಅಂಗವಾಗಿ ಸಂಪೂರ್ಣ ಉಚಿತವಾಗಿ ಆಯೋಜಿಸಲಾಗುವ ಈ ಮೇಳದಲ್ಲಿ ಅಭ್ಯರ್ಥಿಗಳು ಮತ್ತು ಕಂಪನಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಇದುವರೆಗೆ ನಡೆದ 22 ಉದ್ಯೋಗ ಮೇಳಗಳಲ್ಲಿ 66 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಶಾರ್ಟ್ಲಿಸ್ಟ್ ಆಗಿದ್ದು, 40 ಸಾವಿರಕ್ಕೂ ಅಧಿಕ ಮಂದಿಗೆ ಸ್ಥಳದಲ್ಲೇ ಉದ್ಯೋಗ ಆಫರ್ ದೊರೆತಿದೆ ಎಂದು ಮಾಹಿತಿ ನೀಡಿದರು. ಈ ಬಾರಿಯ ಮೇಳದಲ್ಲಿ 300ಕ್ಕೂ…
ಮಂಗಳೂರು, ಜೂನ್ 20: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪಡಿತರ ಚೀಟಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಜನತಾದಳ (ಜಾತ್ಯತೀತ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ನಿಯೋಗವು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಪಡಿತರ ಚೀಟಿಗಳ ಮಂಜೂರಾತಿಯಲ್ಲಿ ವಿಳಂಬ, ಹೊಸ ಅರ್ಜಿಗಳ ವಿಲೇವಾರಿಯಲ್ಲಿ ನಿರ್ಲಕ್ಷ್ಯ, ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಪ್ರಕ್ರಿಯೆಯಲ್ಲಿನ ತಾಂತ್ರಿಕ ಅಡಚಣೆಗಳು, ಅರ್ಹ ಫಲಾನುಭವಿಗಳಿಗೆ ಪಡಿತರ ಚೀಟಿ ದೊರೆಯದಿರುವುದು ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಅಧಿಕಾರಿಗಳ ಗಮನ ಸೆಳೆದ ಜೆಡಿಎಸ್ ಮುಖಂಡರು, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿದರು. ಬಡವರು, ಕಾರ್ಮಿಕರು ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಪಡಿತರ ಚೀಟಿ ಅತ್ಯಂತ ಅವಶ್ಯಕ ದಾಖಲೆ ಆಗಿದ್ದು, ಇಲಾಖೆಯ ನಿರ್ಲಕ್ಷ್ಯದಿಂದ ಸಾವಿರಾರು ಕುಟುಂಬಗಳು ಸರ್ಕಾರದ ವಿವಿಧ ಸೌಲಭ್ಯಗಳಿಂದ ವಂಚಿತರಾಗುತ್ತಿರುವುದು ಖಂಡನೀಯ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಜನರು…
ಚಿಕ್ಕಮಗಳೂರು, ಜೂನ್ 20: ಜಿಲ್ಲೆಯ ಕಡೂರು ತಾಲೂಕಿನ ಗ್ರಾಮವೊಂದರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ ಮೂವರು ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಶಾಲೆಯ ಶಿಕ್ಷಕ ಹಾಗೂ ಮುಖ್ಯೋಪಾಧ್ಯಾಯನ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ಬೆಳಕಿಗೆ ಬಂದಿದೆ. ಲಭ್ಯವಾದ ಮಾಹಿತಿಯ ಪ್ರಕಾರ, ಶಾಲೆಯ ಶಿಕ್ಷಕ ನಾಗರಾಜಪ್ಪ ಎಂಬಾತ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿಯರ ಬಳಿ ಮನೆಯಿಂದ ಮೊಬೈಲ್ ಫೋನ್ ತರಿಸಿಕೊಳ್ಳುತ್ತಿದ್ದ ಆತ, ಬಳಿಕ ಅಶ್ಲೀಲ ವಿಡಿಯೋಗಳು ಹಾಗೂ ಅಸಭ್ಯ ಸಂದೇಶಗಳನ್ನು ಕಳುಹಿಸುತ್ತಿದ್ದ ಎನ್ನಲಾಗಿದೆ. ಅಲ್ಲದೆ, ವಿದ್ಯಾರ್ಥಿನಿಯರು ಧರಿಸಿಕೊಂಡು ಬರುತ್ತಿದ್ದ ಉಡುಪುಗಳ ಬಗ್ಗೆ ಅನಗತ್ಯ ಪ್ರಶ್ನೆಗಳನ್ನು ಕೇಳಿ, ಅವರ ವೈಯಕ್ತಿಕ ಗೌರವಕ್ಕೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ವರ್ತಿಸುತ್ತಿದ್ದ ಆರೋಪವೂ ವ್ಯಕ್ತವಾಗಿದೆ. ಈ ವಿಚಾರವನ್ನು ವಿದ್ಯಾರ್ಥಿನಿಯರು ತಮ್ಮ ಪೋಷಕರ ಗಮನಕ್ಕೆ ತಂದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಪೋಷಕರು ಹಾಗೂ ಗ್ರಾಮಸ್ಥರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಿದ್ದು, ಘಟನೆ ಕುರಿತು ಸಮಗ್ರ ತನಿಖೆ…
ಬೆಳಗಾವಿ, ಜೂನ್ 20: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ. ಹುಬ್ಬಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಲಾರಿಗೆ ಬೆಂಕಿ ಕಾಣಿಸಿಕೊಂಡು 500ಕ್ಕೂ ಹೆಚ್ಚು ಗೋವಿನ ಜೋಳದ ಚೀಲಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಕಿತ್ತೂರು ಮಾರ್ಗವಾಗಿ ಬೆಳಗಾವಿ ಕಡೆಗೆ ಬರುತ್ತಿದ್ದ ಹಾಲಿನ ಟ್ಯಾಂಕರ್, ಜೋಳದ ಚೀಲಗಳನ್ನು ತುಂಬಿಕೊಂಡು ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ಸಂಪೂರ್ಣ ವಾಹನವನ್ನು ಆವರಿಸಿದೆ. ಲಾರಿಯಲ್ಲಿ ಸಾಗಿಸುತ್ತಿದ್ದ 500ಕ್ಕೂ ಹೆಚ್ಚು ಗೋವಿನ ಜೋಳದ ಚೀಲಗಳು ಬೆಂಕಿಗಾಹುತಿಯಾಗಿ ಸುಟ್ಟು ಕರಕಲಾಗಿವೆ. ಅಪಘಾತದ ತೀವ್ರತೆ ಭಾರೀ ಪ್ರಮಾಣದಲ್ಲಿದ್ದರೂ, ಎರಡೂ ವಾಹನಗಳ ಚಾಲಕರು ಸಮಯಪ್ರಜ್ಞೆಯಿಂದ ವಾಹನಗಳಿಂದ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಅಗ್ನಿ ನಂದಿಸುವ ಕಾರ್ಯಾಚರಣೆ…
ಮಂಗಳೂರು, ಜೂನ್ 20: ಬಿಡದಿ ಮತ್ತು ಹಾರೋಹಳ್ಳಿ ಹೋಬಳಿಗಳ ವ್ಯಾಪ್ತಿಯಲ್ಲಿರುವ ಫಲವತ್ತಾದ ಕೃಷಿ ಭೂಮಿಯ ಭೂಸ್ವಾಧೀನ ಪ್ರಕ್ರಿಯೆಯನ್ನು ತಕ್ಷಣವೇ ಕೈಬಿಡುವಂತೆ ಒತ್ತಾಯಿಸಿ, ಜನತಾದಳ (ಜಾತ್ಯತೀತ) ಪಕ್ಷದ ನಿಯೋಗವು ಜಿಲ್ಲಾದ್ಯಕ್ಷರಾದ ಜಾಕೆ ಮಾಧವ ಗೌಡರವರ ಮಾರ್ಗದರ್ಶನದಲ್ಲಿ ದಿನಾಂಕ 20-06-2026ರಂದು ಬೆಳಿಗ್ಗೆ 11 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಮನವಿ ಸಲ್ಲಿಸಿತು.ಮನವಿಯಲ್ಲಿ, ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ ಭೂಸ್ವಾಧೀನ ಯೋಜನೆಯು ರೈತ ವಿರೋಧಿ ನೀತಿಯಾಗಿದ್ದು, ಇದರಿಂದ ಸಾವಿರಾರು ರೈತ ಕುಟುಂಬಗಳ ಜೀವನಾಧಾರಕ್ಕೆ ಗಂಭೀರ ಧಕ್ಕೆಯಾಗುವ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ. ಮೊದಲ ಹಂತದಲ್ಲೇ ಸುಮಾರು 498.34 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯಿಂದ 755 ರೈತ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಲಿದ್ದು, ಇವರಲ್ಲಿ ಬಹುಪಾಲು ಸಣ್ಣ ಹಾಗೂ ಅತಿ ಸಣ್ಣ ರೈತರಾಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಮುಂದಿನ ಹಂತಗಳಲ್ಲಿ 7,500 ಎಕರೆಗಿಂತಲೂ ಹೆಚ್ಚು ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಸ್ತಾವನೆಯಿಂದ ರೈತ ಸಮುದಾಯದಲ್ಲಿ ತೀವ್ರ ಆತಂಕ ಮನೆಮಾಡಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.…
ಮಂಗಳೂರು, ಜೂನ್ 19: ಜನತಾದಳ (ಜಾತ್ಯತೀತ) ಪಕ್ಷದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ–203ರ ಮಹತ್ವದ ಸಂಘಟನಾ ಸಭೆಯು ಕ್ಷೇತ್ರಾಧ್ಯಕ್ಷರಾದ ಎನ್.ಪಿ. ಪುಷ್ಪರಾಜನ್ ಅವರ ಅಧ್ಯಕ್ಷತೆಯಲ್ಲಿ ನಗರದ ವುಡ್ಲ್ಯಾಂಡ್ಸ್ ಹೋಟೆಲ್ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಕ್ಷೇತ್ರದ ಸಂಘಟನೆಯನ್ನು ಮತ್ತಷ್ಟು ಸದೃಢಗೊಳಿಸುವುದು, ಸದಸ್ಯತ್ವ ಅಭಿಯಾನವನ್ನು ತೀವ್ರಗೊಳಿಸುವುದು, ಮುಂಬರುವ ರಾಜಕೀಯ ಹಾಗೂ ಸಾಮಾಜಿಕ ಕಾರ್ಯಕ್ರಮಗಳ ರೂಪುರೇಷೆಗಳನ್ನು ಸಿದ್ಧಪಡಿಸುವುದು ಮತ್ತು ಜನಸಾಮಾನ್ಯರ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ಸಭೆಯ ಆರಂಭದಲ್ಲಿ ಪಕ್ಷದ ಬೆಳವಣಿಗೆ, ಸಂಘಟನಾ ಚಟುವಟಿಕೆಗಳು ಹಾಗೂ ಕ್ಷೇತ್ರದ ರಾಜಕೀಯ ಪರಿಸ್ಥಿತಿಯ ಕುರಿತು ವಿಸ್ತೃತವಾಗಿ ಚರ್ಚೆ ನಡೆಯಿತು. ಪಕ್ಷವನ್ನು ಬೂತ್ ಮಟ್ಟದಿಂದ ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾರ್ಯಕರ್ತರೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕೆಂದು ಮುಖಂಡರು ಕರೆ ನೀಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಕಾರ್ಯಾಧ್ಯಕ್ಷ ವಸಂತ ಪೂಜಾರಿ ಅವರು, ಜೆಡಿಎಸ್ ಪಕ್ಷದ ತತ್ವ-ಸಿದ್ಧಾಂತಗಳು, ರೈತಪರ ಹಾಗೂ ಜನಪರ ಕಾರ್ಯಕ್ರಮಗಳನ್ನು ಮನೆಮನೆಗೆ ತಲುಪಿಸುವ ಕಾರ್ಯವನ್ನು ಪ್ರತಿಯೊಬ್ಬ ಕಾರ್ಯಕರ್ತರೂ ಕೈಗೊಳ್ಳಬೇಕು ಎಂದು ಹೇಳಿದರು. ಸದಸ್ಯತ್ವ ನೋಂದಣಿ ಅಭಿಯಾನವನ್ನು ಇನ್ನಷ್ಟು ವ್ಯಾಪಕವಾಗಿ ನಡೆಸಿ…
ಥಾಣೆ (ಮುಂಬೈ): ಮದುವೆಯಾಗಿ ಕೇವಲ 48 ದಿನಗಳಷ್ಟೇ ಕಳೆದಿದ್ದ ವೇಳೆ ನವವಿವಾಹಿತೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಥಾಣೆ ಜಿಲ್ಲೆಯ ಅಂಬರ್ನಾಥ್ನಲ್ಲಿ ಬೆಳಕಿಗೆ ಬಂದಿದೆ. ಕುಟುಂಬಸ್ಥರ ಆರೋಪದಂತೆ, ಪತಿ ಹಾಗೂ ಅತ್ತೆ-ಮಾವನ ನಿರಂತರ ದೈಹಿಕ ಮತ್ತು ಮಾನಸಿಕ ಕಿರುಕುಳವೇ ಈ ದುರ್ಘಟನೆಗೆ ಕಾರಣವಾಗಿದೆ. ಮೃತೆಯನ್ನು ವಿಶಾಖಾ ತಿಲ್ಕರ್ (26) ಎಂದು ಗುರುತಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪತಿ ಹಾಗೂ ವೈದ್ಯರಾಗಿರುವ ನಿತಿನ್ ತಿಲ್ಕರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಏಪ್ರಿಲ್ 30ರಂದು ವಿಶಾಖಾ ಮತ್ತು ನಿತಿನ್ ಅವರ ವಿವಾಹ ನೆರವೇರಿತ್ತು. ಆದರೆ ಮದುವೆಯಾದ ಕೆಲವೇ ದಿನಗಳಲ್ಲಿ ವರದಕ್ಷಿಣೆ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸಿ ಅತ್ತೆ-ಮಾವಂದಿರು ಕಿರುಕುಳ ನೀಡಲು ಆರಂಭಿಸಿದ್ದರು ಎಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ. ಇದರ ಜೊತೆಗೆ, ಪತಿ ನಿತಿನ್ ಮನೆಯ ಒಳಗೆ ಮತ್ತು ಹೊರಭಾಗದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಪತ್ನಿಯ ಪ್ರತಿಯೊಂದು ಚಲನವಲನದ ಮೇಲೂ ನಿಗಾ ಇಡುತ್ತಿದ್ದನು ಎನ್ನಲಾಗಿದೆ. ವಿಶಾಖಾಳ ವೈಯಕ್ತಿಕ ಸ್ವಾತಂತ್ರ್ಯ ಹಾಗೂ ಗೌಪ್ಯತೆಯನ್ನು ಸಂಪೂರ್ಣವಾಗಿ ಕಸಿದುಕೊಂಡು, ಅನುಮಾನ ಮತ್ತು…
ಮಂಗಳೂರು, ಜೂನ್ 18: ಜನತಾದಳ (ಜಾತ್ಯತೀತ) ಪಕ್ಷದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ–203ರ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸದಸ್ಯರ ಮಹತ್ವದ ಸಭೆಯು ಜೂನ್ 19, 2026ರಂದು ಶುಕ್ರವಾರ ಬೆಳಿಗ್ಗೆ 10.30 ಗಂಟೆಗೆ ನಗರದ ವುಡ್ಲ್ಯಾಂಡ್ಸ್ ಹೋಟೆಲ್ ಸಭಾಂಗಣದಲ್ಲಿ ನಡೆಯಲಿದೆ.ಕ್ಷೇತ್ರದ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವುದು, ಸದಸ್ಯತ್ವ ಅಭಿಯಾನವನ್ನು ವಿಸ್ತರಿಸುವುದು, ಮುಂಬರುವ ಕಾರ್ಯಕ್ರಮಗಳ ರೂಪುರೇಷೆ ಸಿದ್ಧಪಡಿಸುವುದು ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ನಡೆಸುವ ಉದ್ದೇಶದಿಂದ ಈ ಸಭೆಯನ್ನು ಆಯೋಜಿಸಲಾಗಿದೆ.ಸಭೆಯಲ್ಲಿ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಜಾಕೆ ಮಾಧವ ಗೌಡ ಹಾಗೂ ಜಿಲ್ಲೆಯ ಪ್ರಮುಖ ನಾಯಕರು ಭಾಗವಹಿಸಿ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಲಿದ್ದಾರೆ. ಕ್ಷೇತ್ರದ ಸಂಘಟನಾ ಚಟುವಟಿಕೆಗಳು, ಮುಂದಿನ ಕಾರ್ಯಯೋಜನೆಗಳು ಹಾಗೂ ಪಕ್ಷದ ಬೆಳವಣಿಗೆಗೆ ಸಂಬಂಧಿಸಿದ ಹಲವು ಮಹತ್ವದ ವಿಷಯಗಳ ಕುರಿತು ಸಮಾಲೋಚನೆ ನಡೆಯಲಿದೆ.ಆದ್ದರಿಂದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಎಲ್ಲಾ ಪದಾಧಿಕಾರಿಗಳು, ಬೂತ್ ಮಟ್ಟದ ಮುಖಂಡರು, ಕಾರ್ಯಕರ್ತರು ಹಾಗೂ ಸದಸ್ಯರು ಕಡ್ಡಾಯವಾಗಿ ಸಭೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಸಭೆಯ ಮಂಗಳೂರು ದಕ್ಷಿಣ ವಿಧಾನಸಭಾ…
ಮಂಗಳೂರು, ಜೂನ್ 17: ಜಪ್ಪಿನಮೊಗರು ಕಡೆಕಾರು ಶ್ರೀ ಮಲ್ಲಿಕಾರ್ಜುನ ಕ್ಷೇತ್ರದ ಪುನರ್ನಿರ್ಮಾಣ ಕಾರ್ಯಕ್ಕೆ ಬುಧವಾರ ಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ ವೈಭವದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿತು. ಬ್ರಹ್ಮಶ್ರೀ ವೇದಮೂರ್ತಿ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಯವರ ವೈದಿಕ ನೇತೃತ್ವದಲ್ಲಿ ನಡೆದ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶಿಲಾನ್ಯಾಸ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಆಶೀರ್ವಚನ ನೀಡಿ, ಕ್ಷೇತ್ರದ ಅಭಿವೃದ್ಧಿ ಹಾಗೂ ಭಕ್ತರ ಸಮೃದ್ಧಿಗಾಗಿ ಶುಭ ಹಾರೈಸಿದರು. ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ಹರಿಪ್ರಸಾದ್ ಜೆ. ಮಾತನಾಡಿ, ಸುಮಾರು 680 ವರ್ಷಗಳ ಐತಿಹಾಸಿಕ ಹಿನ್ನೆಲೆ ಹೊಂದಿರುವ ಶ್ರೀ ಮಲ್ಲಿಕಾರ್ಜುನ ಕ್ಷೇತ್ರವನ್ನು ಐದು ಅಡಿ ಎತ್ತರಿಸಿ ಪುನರ್ನಿರ್ಮಿಸುವ ಮಹತ್ವಾಕಾಂಕ್ಷಿ ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು. ಭಕ್ತರ ಸಹಕಾರ ಮತ್ತು ದಾನಿಗಳ ನೆರವಿನಿಂದ ಕ್ಷೇತ್ರದ ಪುನರ್ನಿರ್ಮಾಣ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಸಂಕಲ್ಪ ಹೊಂದಿರುವುದಾಗಿ ಅವರು ಹೇಳಿದರು. ಕಾರ್ಯಕ್ರಮದಲ್ಲಿ ಕ್ರಷ್ಣ ಪಾಲೆಮಾರ್, ವೀಣಾಮಂಗಳ, ಶಿವಾನಂದ ರಾವ್, ಜೆ. ಜಗದೀಶ್ ರಾವ್, ಜೆ. ಕೊರಗಪ್ಪ, ರಾಧಾಕೃಷ್ಣ, ನವೀನ್ಚಂದ್ರ,…
ಬೆಂಗಳೂರು : ಇತ್ತೀಚೆಗೆ ಹೋಟೆಲ್ ಸ್ಯಾಂಕ್ ಹೋಟೆಲ್ ಗಾಂಧಿನಗರ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾಧ್ಯಕ್ಷರ ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಎಂ ಬಸವರಾಜ್ ಪಡಕೋಟೆ ಅಧ್ಯಕ್ಷತೆಯಲ್ಲಿ ಜಿಲ್ಲಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡದ ಉಸ್ತುವಾರಿಗಳಾದ ಸುಜಯ್ ಪೂಜಾರಿಯವರ ಸಮ್ಮುಖದಲ್ಲಿ ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿಯಾದ ಲಕ್ಷ್ಮಿ ಇವರು ನಮ್ಮ ಕರ್ನಾಟಕ ಸೇನೆ ನೂತನ ಉಡುಪಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಶ್ರೀಮತಿ ಅನಿತಾ ಬಿವಿ ಅವರನ್ನು ಆಯ್ಕೆಮಾಡಲಾಯಿತು. ನಂತರ ಅವರಿಗೆ ಶಾಲು ಧರಿಸಿ ಸನ್ಮಾನಿಸಲಾಯಿತು. ನಮ್ಮಕರ್ನಾಟಕ ಸೇನೆಯ ಉಡುಪಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡದ ಉಸ್ತುವಾರಿಯಾಗಿ ಸುಜಯ್ ಪೂಜಾರಿರವರನ್ನು ರಾಜ್ಯಾಧ್ಯಕ್ಷರಾದ ಶ್ರೀ ಎಂ ಬಸವರಾಜ ಪಡುಕೋಟೆ ಯವರು ರಾಜ್ಯಸಭೆಯಲ್ಲಿ ಹೂ ಕುಚ್ಚ ನೀಡಿ ಅಭಿನಂದನೆಸಿದ್ರು ಉಡುಪಿ ಸಂಘಟನೆಯನ್ನು ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಹಾಗೂ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಅನಿತಾ ಬಿವಿ ನೇತೃತ್ವದಲ್ಲಿ ಮುನ್ನಡೆಸಿಕೊಂಡು ಹೋಗುವಂತೆ ಸೂಚನೆ ನೀಡಿರು ತ್ತಾರೆ. ಈ ಸಂದರ್ಭದಲ್ಲಿ ಕರವೇ ರಾಜ್ಯ ಗೌರವಾಧ್ಯಕ್ಷರು ಹಾಗೂ ಕನ್ನಡ ಚಲನಚಿತ್ರ ಖ್ಯಾತ ನಟರು.…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
