Author: Tulunada Surya

ಉಡುಪಿ, ಜೂನ್ 4: ಸಮಾಜಮುಖಿ ಚಟುವಟಿಕೆಗಳು, ಸೇವಾ ಮನೋಭಾವ ಹಾಗೂ ಸಂಘಟನಾ ಕೌಶಲ್ಯದ ಮೂಲಕ ಜಿಲ್ಲೆಯಾದ್ಯಂತ ಗುರುತಿಸಿಕೊಂಡಿರುವ ಲಯನ್ ಲೂಯಿಸ್ ಲೋಬೊ ಅವರು ಲಯನ್ಸ್ ಇಂಟರ್‌ನ್ಯಾಷನಲ್ ಜಿಲ್ಲೆ 317ಸಿ ಇದರ ಪ್ರಾಂತ್ಯ 3ರ ಪ್ರಾಂತ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಉಡುಪಿ ಕಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿರುವ ಲೂಯಿಸ್ ಲೋಬೊ ಅವರು ಹಲವು ವರ್ಷಗಳಿಂದ ಸಾಮಾಜಿಕ, ಧಾರ್ಮಿಕ ಹಾಗೂ ಸಹಕಾರ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜನಸೇವೆಯಲ್ಲಿ ತೊಡಗಿದ್ದಾರೆ. ಜಿಲ್ಲೆಯ ವಿವಿಧ ಸಂಘ-ಸಂಸ್ಥೆಗಳ ಬೆಳವಣಿಗೆ ಹಾಗೂ ಸಂಘಟನಾ ಚಟುವಟಿಕೆಗಳಲ್ಲಿ ಮಹತ್ವದ ಕೊಡುಗೆ ನೀಡಿರುವ ಅವರು, ಐಎಫ್‌ಸಿಎ (IFCA) ಸಂಘಟನೆಯ ಸ್ಥಾಪಕ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಉಡುಪಿ ಜಿಲ್ಲೆಯ ಕ್ರೈಸ್ತ ಉದ್ಯಮಿಗಳ ಸಂಘಟನೆಯ ಸ್ಥಾಪನೆ ಮತ್ತು ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಲೂಯಿಸ್ ಲೋಬೊ ಅವರು, ಕಲ್ಮಾಡಿಯ ಸ್ಟೆಲ್ಲಾ ಮಾರಿಸ್ ಪುಣ್ಯಕ್ಷೇತ್ರದ ಉಪಾಧ್ಯಕ್ಷರಾಗಿ ಸೇರಿದಂತೆ ಹಲವು ಸಂಘ-ಸಂಸ್ಥೆಗಳಲ್ಲಿ ವಿವಿಧ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಲಯನ್ಸ್ ಚಳವಳಿಯಲ್ಲಿ ದೀರ್ಘಕಾಲದ ಸೇವೆ ಸಲ್ಲಿಸಿರುವ ಅವರು, ರಾಜ್ಯದ ಪ್ರಥಮ ಲಯನ್ಸ್ ಅಂತರಾಷ್ಟ್ರೀಯ ಸಂಸ್ಥೆಯಾದ…

Read More

ಉಡುಪಿ, ಜೂನ್ 4: ಕರಾವಳಿಯ ಹೆಮ್ಮೆಯ ಪುತ್ರ, ವಿಜಯ ಬ್ಯಾಂಕ್ ಸಂಸ್ಥಾಪಕರಾದ ದಿವಂಗತ ಮುಲ್ಕಿ ಸುಂದರರಾಮ ಶೆಟ್ಟಿಯವರ ಸ್ಮಾರಕವನ್ನು ಏಕಾಏಕಿ ತೆರವುಗೊಳಿಸಿರುವ ಕ್ರಮ ಅತ್ಯಂತ ಖಂಡನೀಯ ಎಂದು ಜೆಡಿಎಸ್ ಉಡುಪಿ ಜಿಲ್ಲಾ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮುಲ್ಕಿ ಸುಂದರರಾಮ ಶೆಟ್ಟಿಯವರು ಕರಾವಳಿ ಭಾಗದ ಸಾವಿರಾರು ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಮೂಲಕ ಅವರ ಬದುಕಿಗೆ ದಾರಿದೀಪರಾಗಿದ್ದರು. ವಿಜಯ ಬ್ಯಾಂಕ್ ಅನ್ನು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆಸಿ, ಲಕ್ಷಾಂತರ ಉದ್ಯಮಿಗಳು ಹಾಗೂ ಸಾಮಾನ್ಯ ಜನರಿಗೆ ಆರ್ಥಿಕ ನೆರವಾಗುವಂತಹ ಬ್ಯಾಂಕಿಂಗ್ ವ್ಯವಸ್ಥೆಯನ್ನು ನಿರ್ಮಿಸುವ ಮೂಲಕ ದೇಶದ ಆರ್ಥಿಕ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಅಂತಹ ಮಹಾನ್ ವ್ಯಕ್ತಿತ್ವದ ಸ್ಮಾರಕವನ್ನು ಯಾವುದೇ ಪೂರ್ವ ಮಾಹಿತಿ ಅಥವಾ ಸಾರ್ವಜನಿಕರ ಅಭಿಪ್ರಾಯ ಪಡೆಯದೇ ತೆರವುಗೊಳಿಸಿರುವುದು ಜನರ ಭಾವನೆಗಳಿಗೆ ಧಕ್ಕೆ ಉಂಟುಮಾಡಿದೆ. ಇದು ಕರಾವಳಿ ಭಾಗದ ಜನತೆ ಹಾಗೂ ಮುಲ್ಕಿ ಸುಂದರರಾಮ ಶೆಟ್ಟಿಯವರ ಅಭಿಮಾನಿಗಳಿಗೆ ನೋವುಂಟುಮಾಡುವ…

Read More

ನವದೆಹಲಿ, ಜೂನ್ 3: ದೆಹಲಿಯ ಮಾಳವೀಯ ನಗರದ ಹೌಜ್ ರಾಣಿ ಪ್ರದೇಶದಲ್ಲಿರುವ ಖಾಸಗಿ ಹೋಟೆಲೊಂದರಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ವಿದೇಶಿಯರು ಸೇರಿದಂತೆ 21 ಮಂದಿ ದುರ್ಮರಣ ಹೊಂದಿದ್ದು, 30ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ. ಬೆಳಗ್ಗೆ ಸುಮಾರು 8.50 ಗಂಟೆಯ ವೇಳೆಗೆ ಐದು ಅಂತಸ್ತಿನ ಹೋಟೆಲ್‌ನ ನೆಲಮಾಳಿಗೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಹೊಗೆ ಮತ್ತು ಜ್ವಾಲೆಗಳು ಕಟ್ಟಡದ ವಿವಿಧ ಭಾಗಗಳಿಗೆ ವ್ಯಾಪಿಸಿವೆ. ಪ್ರಾಣ ಉಳಿಸಿಕೊಳ್ಳಲು ಕೆಲವರು ಕಟ್ಟಡದಿಂದ ಕೆಳಗೆ ಹಾರಿರುವ ಘಟನೆ ಕೂಡ ವರದಿಯಾಗಿದೆ. ಮಾಹಿತಿ ತಿಳಿದ ತಕ್ಷಣ ದೆಹಲಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಎರಡು ವಾಟರ್ ಎಂಜಿನ್‌ಗಳು, ಎರಡು ಬೌಸರ್‌ಗಳು ಹಾಗೂ ಒಂದು ತ್ವರಿತ ಪ್ರತಿಕ್ರಿಯೆ ವಾಹನದ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತು. ಹಲವು ಗಂಟೆಗಳ ಶ್ರಮದ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಸುಮಾರು 25 ಕೊಠಡಿಗಳನ್ನು ಹೊಂದಿರುವ ಈ ಹೋಟೆಲ್‌ನಲ್ಲಿ ಅವಘಡ ಸಂಭವಿಸಿದ ವೇಳೆ 50ಕ್ಕೂ ಹೆಚ್ಚು ಮಂದಿ ತಂಗಿದ್ದರು ಎಂದು…

Read More

ಉಡುಪಿ, ಜೂನ್ 2: ಕನ್ನಡ ನಾಡು, ನುಡಿ, ನೆಲ-ಜಲ, ಸಂಸ್ಕೃತಿ ಹಾಗೂ ಕನ್ನಡಿಗರ ಹಕ್ಕುಗಳ ರಕ್ಷಣೆಯ ಧ್ಯೇಯದೊಂದಿಗೆ “ನಮ್ಮ ಕರ್ನಾಟಕ ಸೇನೆ” ಸಂಘಟನೆಯು ಉಡುಪಿ ಜಿಲ್ಲೆಯಲ್ಲಿ ತನ್ನ ಚಟುವಟಿಕೆಗಳಿಗೆ ಚಾಲನೆ ನೀಡಿದೆ. ಸಂಘಟನೆಯ ಉಡುಪಿ ಜಿಲ್ಲಾಧ್ಯಕ್ಷರಾಗಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿಯಾಗಿ ಸುಜಯ್ ಪೂಜಾರಿ, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಜಯಪ್ರಕಾಶ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಸುಜಯ್ ಪೂಜಾರಿ ಮಾತನಾಡಿ, ಕನ್ನಡ ಭಾಷೆ, ಸಂಸ್ಕೃತಿ, ರೈತರು, ಕಾರ್ಮಿಕರು, ವಿದ್ಯಾರ್ಥಿಗಳು, ಯುವಜನರು ಹಾಗೂ ಮಹಿಳೆಯರ ಹಿತಾಸಕ್ತಿಗಾಗಿ ರಾಜಕೀಯ ರಹಿತವಾಗಿ ಹೋರಾಟ ನಡೆಸುವುದಾಗಿ ತಿಳಿಸಿದರು. ನೂತನ ಪದಾಧಿಕಾರಿಗಳ ನೇಮಕದಿಂದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಂಘಟನೆ ಮತ್ತಷ್ಟು ಬಲಗೊಳ್ಳಲಿದ್ದು, ಕನ್ನಡಪರ ಹೋರಾಟಗಳಿಗೆ ಹೊಸ ವೇದಿಕೆ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ. ಸುಜಯ್ ಪೂಜಾರಿ ಅವರ ನೇತೃತ್ವದಲ್ಲಿ ಸಂಘಟನೆ ಯಾವ ರೀತಿಯಲ್ಲಿ ಬೆಳೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.

Read More

ಬೆಂಗಳೂರು, ಜೂನ್ 3: ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಅಧ್ಯಾಯ ಆರಂಭವಾಗುತ್ತಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ D. K. Shivakumar ಅವರು ಇಂದು ಅಧಿಕಾರ ಸ್ವೀಕರಿಸಲಿದ್ದು, ರಾಜಧಾನಿ ಬೆಂಗಳೂರು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ. ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಈ ಪ್ರತಿಷ್ಠಿತ ಸಮಾರಂಭದಲ್ಲಿ ಸಂಜೆ 4:05ರ ಶುಭ ಮುಹೂರ್ತದಲ್ಲಿ ನೂತನ ಮುಖ್ಯಮಂತ್ರಿಯಾಗಿ ಅವರು ಅಧಿಕಾರ ಹಾಗೂ ಗೌಪ್ಯತೆಯ ಪ್ರತಿಜ್ಞೆ ಸ್ವೀಕರಿಸಲಿದ್ದಾರೆ. Thawar Chand Gehlot ಅವರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಇಂದು ಬೆಳ್ಳಿಗೆ ಮಾಜಿ ಪ್ರಧಾನಿ ಎಚ್ ಡಿ ದೇವೆಗೌಡ ರವರ ಕಾಲು ಹಿಡಿದು ಆಶೀರ್ವಾದ ಪಡೆದರು ಮತ್ತು ಮಾಜಿ ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪ ರವರ ಭೇಟಿ ಮಾಡಿದರು. ಸರಳತೆ ಮತ್ತು ಶಿಸ್ತಿಗೆ ಆದ್ಯತೆ ಕಾಂಗ್ರೆಸ್ ಹೈಕಮಾಂಡ್‌ನ ನಿರ್ದೇಶನದಂತೆ ಪದಗ್ರಹಣ ಸಮಾರಂಭವನ್ನು ಆಡಂಬರದಿಂದ ದೂರವಿಟ್ಟು ಶಿಸ್ತಿನೊಂದಿಗೆ ಆಯೋಜಿಸಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಕಾರ್ಯಕರ್ತರು ಹಾಗೂ ಗಣ್ಯರು ಆಗಮಿಸುತ್ತಿದ್ದರೂ, ಸಾರ್ವಜನಿಕರಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡಲಾಗಿದೆ. ಲೋಕಭವನದ ಸುತ್ತಮುತ್ತ ವಿಶೇಷ ಅಲಂಕಾರ…

Read More

ಬ್ರಹ್ಮಾವರ, ಜೂನ್ 1: ಬ್ರಹ್ಮಾವರ ತಾಲೂಕಿನ ಆರೂರು ಗ್ರಾಮದ ಬೆಳ್ಮಾರು ಸರ್ಕಾರಿ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ನಡೆಯಿತು. ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಗ್ರಾಮಸ್ಥರು ಉತ್ಸಾಹದಿಂದ ಭಾಗವಹಿಸಿದರು. ಕಾರ್ಯಕ್ರಮವನ್ನು ಸಮಾಜಸೇವಕ ಹಾಗೂ ಶಿಕ್ಷಣ ಪ್ರೇಮಿ ಡಾ. ಮನ್ಮಥ್ ಭಟ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಸೌಲಭ್ಯಗಳು ದೊರಕುವುದು ಅತ್ಯಂತ ಮುಖ್ಯವಾಗಿದ್ದು, ಸಮಾಜದ ಸಹಕಾರದಿಂದ ಶಿಕ್ಷಣ ಕ್ಷೇತ್ರ ಮತ್ತಷ್ಟು ಬಲಿಷ್ಠವಾಗಬೇಕೆಂದು ಕರೆ ನೀಡಿದರು. ಡಾ. ಮನ್ಮಥ್ ಭಟ್ ಅವರು ಕಳೆದ ಮೂರು ವರ್ಷಗಳಿಂದ ಶಾಲಾ ಹಾಗೂ ಅಂಗನವಾಡಿ ಮಕ್ಕಳಿಗಾಗಿ ಉಚಿತ ಬಸ್ ವ್ಯವಸ್ಥೆಯನ್ನು ಕಲ್ಪಿಸುತ್ತಿದ್ದು, ಈ ಶೈಕ್ಷಣಿಕ ವರ್ಷದಲ್ಲಿಯೂ ತಮ್ಮ ಸೇವೆಯನ್ನು ಮುಂದುವರಿಸಿರುವುದು ವಿಶೇಷವಾಗಿದೆ. ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಕೈಜೋಡಿಸುತ್ತಿರುವ ಹಲವು ದಾನಿಗಳು ಈ ಸಂದರ್ಭದಲ್ಲಿಯೂ ತಮ್ಮ ಸಹಾಯ ಹಸ್ತ ಚಾಚಿದರು. ರಜತ್…

Read More

ಮಂಗಳೂರು, ಮೇ 31: ನಾರಾಯಣ ಗುರು ಕಾಲೇಜು, ಕುದ್ರೋಳಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಕಾಲೇಜಿನ ಅರ್ಹ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸುವ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಸೌಮ್ಯ ಶೆಟ್ಟಿ ಅವರು, ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಅವರ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡುತ್ತಿರುವ ಹಳೆ ವಿದ್ಯಾರ್ಥಿ ಸಂಘದ ಕಾರ್ಯವನ್ನು ಶ್ಲಾಘಿಸಿದರು. ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಬೇಕು ಎಂದು ಕರೆ ನೀಡಿದರು. ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಹರೀಶ್ ಕುಮಾರ್ ಶೆಟ್ಟಿ ಮಾತನಾಡಿ, ಸಮಾಜಕ್ಕೆ ಉತ್ತಮ ನಾಗರಿಕರನ್ನು ರೂಪಿಸುವಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದಾಗಿದ್ದು, ಆರ್ಥಿಕವಾಗಿ ಹಿಂದುಳಿದರೂ ಪ್ರತಿಭಾವಂತರಾದ ವಿದ್ಯಾರ್ಥಿಗಳಿಗೆ ನೆರವಾಗುವ ಉದ್ದೇಶದಿಂದ ವಿದ್ಯಾರ್ಥಿ ವೇತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ವೇದಿಕೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಖಜಾಂಚಿ ರತ್ನಾಕರ ಕುಡ್ವ, ಉಪನ್ಯಾಸಕರಾದ ಶ್ರೀಮಂಗಳ ರಾವ್ ಕೆ., ಶಾರದಮ್ಮ ಎಚ್.,…

Read More

ಮಂಗಳೂರು, ಮೇ 31 : ಸಾಮಾಜಿಕ ಜಾಲತಾಣಗಳು ಹಾಗೂ ಯೂಟ್ಯೂಬ್‌ ವಾಹಿನಿಗಳಲ್ಲಿ ಪ್ರಸಾರಗೊಂಡಿರುವ ವಿಡಿಯೊವೊಂದರಲ್ಲಿ ಮಾಡಲಾದ ಹೇಳಿಕೆಗಳಿಗೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್‌ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS)ಯ ಸೆಕ್ಷನ್ 196 ಮತ್ತು 353ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.ಪೊಲೀಸರ ಮಾಹಿತಿ ಪ್ರಕಾರ, ವಿಡಿಯೊದಲ್ಲಿನ ಕೆಲವು ಹೇಳಿಕೆಗಳು ಧರ್ಮ, ಭಾಷೆ, ಪ್ರದೇಶ ಅಥವಾ ಇತರೆ ಸಾಮಾಜಿಕ ಗುರುತುಗಳ ಆಧಾರದ ಮೇಲೆ ದ್ವೇಷ, ವೈಮನಸ್ಸು ಹಾಗೂ ಅಸಾಮರಸ್ಯವನ್ನು ಪ್ರಚೋದಿಸುವ ಸಾಧ್ಯತೆ ಹೊಂದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಾನೂನು ಕ್ರಮ ಕೈಗೊಂಡು ಪ್ರಕರಣ ದಾಖಲಿಸಲಾಗಿದೆ.ಈ ಸಂಬಂಧ ದೂರು ಭಾನುವಾರ ಅಧಿಕೃತವಾಗಿ ಸ್ವೀಕರಿಸಲಾಗಿದ್ದು, ಘಟನೆ ನಡೆದ ದಿನ ಸ್ಥಳದಿಂದ ತೆರಳಿದ್ದ ವ್ಯಕ್ತಿಯೊಬ್ಬರು ಬಳಿಕ ಮರಳಿ ಬಂದು ದೂರು ಸಲ್ಲಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಮಂಗಳೂರು ನಗರ ಪೊಲೀಸ್ ಆಯುಕ್ತರು, ಪತ್ರಕರ್ತರು ಹಾಗೂ ಮಾಧ್ಯಮ ಪ್ರತಿನಿಧಿಗಳ ಪ್ರಮುಖ ಜವಾಬ್ದಾರಿ ಸತ್ಯಾಂಶಗಳನ್ನು ನಿಷ್ಪಕ್ಷಪಾತವಾಗಿ ಜನರ ಮುಂದಿಡುವುದಾಗಿದೆ. ವ್ಯಕ್ತಿಗಳು ಅಥವಾ ಸಮುದಾಯಗಳನ್ನು…

Read More

ಮಂಗಳೂರು, ಮೇ 30 : ಜನತಾದಳ ಜಾತ್ಯತೀತ (JDS) ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಮಹಾ ಸಭೆಯು ಶನಿವಾರ ನಗರದ ವುಡ್‌ಲ್ಯಾಂಡ್ಸ್ ಹೋಟೆಲ್‌ನಲ್ಲಿ ಜಿಲ್ಲಾ ಅಧ್ಯಕ್ಷರಾದ ಜಾಕೆ ಮಾಧವ ಗೌಡ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಿಲ್ಲಾ ಕಾರ್ಯದ್ಯಕ್ಷರಾದ ವಸಂತ್ ಪೂಜಾರಿ ಸ್ವಾಗತಿಸಿದ್ದರುಸಭೆಯಲ್ಲಿ ಪಕ್ಷದ ಮಾಜಿ ಜಿಲ್ಲಾಧ್ಯಕ್ಷರಾದ ಎಂ.ಬಿ. ಸದಾಶಿವ ರವರು ನೂತನ ಪದಾಧಿಕಾರಿಗಳಿಗೆ ಹಾಗೂ ಸದಸ್ಯರಿಗೆ ಪ್ರಮಾಣವಚನ ಭೋಧಿಸಿದರು. ಮಹಮ್ಮದ್ ಕುಂಞ ಹಾಗೂ ಹಿರಿಯ ಮುಖಂಡ ಹೈದರ್ ಪರ್ತಿಪಾಡಿ ಅವರು ಗೌರವ ಉಪಸ್ಥಿತರಾಗಿ ಪಧಾದಿಕಾರಿಗಳಿಗೆ ಮಾರ್ಗದರ್ಶನ ನೀಡಿದರು. ಕಾರ್ಯದ್ಯಕ್ಷರುಗಳಾದ ಇಕ್ಬಲ್ ಮುಲ್ಕಿ ಮತ್ತು ಶಶಿರಾಜ್ ಶೆಟ್ಟಿ ಕೊಳಂಬೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಅಜೀಜ್ ಮಾಲರ್ ರವರು ಸಂಘಟನೆ ಬೆಳವಣೆಗೆ ಕುರಿತು ಮಾತನಾಡಿದ್ದರು. ವೀನುಗಾರ ಘಟಕ ರಾಜ್ಯಾದ್ಯಕ್ಷ ರತ್ನಕರ್ ಸುವರ್ಣ,ಜಿಲ್ಲಾ ಯುವ ಘಟಕ ಅದ್ಯಕ್ಷ ಅಕ್ಷಿತ್ ಸುವರ್ಣ, ಜಿಲ್ಲಾ ವಿದ್ಯಾರ್ಥಿ ಜನತಾದಳ ಅದ್ಯಕ್ಷ ನಿಹಾಲ್ ಕೋಡ್ತುಗೋಳಿ, ಮಾಜಿ ನಗರಪಾಲಿಕಾ ಸದಸ್ಯೆ ರಮೀಜಾ ನಾಸೀರ್ ರವರು…

Read More

ಮಂಗಳೂರು, ಮೇ 29: ಮಾನವಕುಲವು ಪ್ರಕೃತಿಯೊಂದಿಗೆ ಹೆಚ್ಚಿನ ವಿನಯ, ಕರುಣೆ ಹಾಗೂ ಪೂಜ್ಯಭಾವನೆಯಿಂದ ಬದುಕಬೇಕು ಎಂದು ಆಧ್ಯಾತ್ಮಿಕ ನಾಯಕಿ ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿ (ಅಮ್ಮ) ಕರೆ ನೀಡಿದರು. ಮಂಗಳೂರಿನ ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದಲ್ಲಿ ನಡೆಯುತ್ತಿರುವ ಬ್ರಹ್ಮಸ್ಥಾನ ಮಹೋತ್ಸವದ ಅಂಗವಾಗಿ ಭಕ್ತರನ್ನುದ್ದೇಶಿಸಿ ಮಾತನಾಡಿದ ಅವರು, ಮನುಷ್ಯನು ಸಹಮಾನವರೊಂದಿಗೆ ಸಹಕಾರದಿಂದ, ಪ್ರಕೃತಿಯೊಂದಿಗೆ ಸೌಹಾರ್ದತೆಯಿಂದ ಹಾಗೂ ಈಶ್ವರನೊಂದಿಗೆ ಆಂತರಿಕ ಸಂಪರ್ಕವಿರಿಸಿಕೊಂಡು ಬದುಕುವುದನ್ನು ಕಲಿಯಬೇಕಾಗಿದೆ ಎಂದು ಹೇಳಿದರು. ಇಂದಿನ ಜಗತ್ತಿನಲ್ಲಿ ಕಾಣಿಸಿಕೊಳ್ಳುತ್ತಿರುವ ಸಾಂಕ್ರಾಮಿಕ ರೋಗಗಳು, ನೈಸರ್ಗಿಕ ವಿಕೋಪಗಳು ಮತ್ತು ಹವಾಮಾನ ವೈಪರೀತ್ಯಗಳು ಪ್ರಕೃತಿಯೊಂದಿಗಿನ ಮಾನವನ ಅಸಮತೋಲನದ ಬದುಕಿನ ಪರಿಣಾಮವಾಗಿದ್ದು, ಅವು ಮಾನವಕುಲಕ್ಕೆ ಎಚ್ಚರಿಕೆಯ ಸಂದೇಶಗಳಾಗಿವೆ ಎಂದು ಅಮ್ಮ ಅಭಿಪ್ರಾಯಪಟ್ಟರು. “ಜನರು, ಸಮುದಾಯಗಳು ಹಾಗೂ ರಾಷ್ಟ್ರಗಳ ನಡುವಿನ ಸಂಘರ್ಷಗಳಲ್ಲಿ ರಾಜಿ ಮತ್ತು ಸಂಧಾನ ಸಾಧ್ಯವಾಗಬಹುದು. ಆದರೆ ಪ್ರಕೃತಿಯೊಂದಿಗೆ ಅದು ಸಾಧ್ಯವಿಲ್ಲ. ಪ್ರಕೃತಿಯನ್ನು ಸಮೀಪಿಸಲು ಇರುವ ಏಕೈಕ ಮಾರ್ಗವೆಂದರೆ ಅಹಂಕಾರವನ್ನು ತೊರೆದು, ತಲೆಬಾಗಿ, ವಿನಯ, ಸ್ನೇಹ ಮತ್ತು ಪೂಜ್ಯಭಾವನೆಯಿಂದ ಆಕೆಯನ್ನು ಆರಾಧಿಸುವುದಾಗಿದೆ” ಎಂದು ಅವರು ಹೇಳಿದರು.…

Read More