- ಮಹಾಮ್ಮಾಯ ದೇವಸ್ಥಾನದ ಹಿಂಭಾಗದ ಚರಂಡಿಯ ಉಳಿದ ಕಾಮಗಾರಿ ಹಾಗೂ ಗೌರಿಮಠ ರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಗುದ್ದಲಿ ಪೂಜೆ
- ನಂಬಿಕೆಯ ಮುಖವಾಡದ ಹಿಂದೆ ₹23 ಲಕ್ಷ ವಂಚನೆ! ಪದ್ಮ ಕಮಲ ಸಂಜೀವಿನಿ ಒಕ್ಕೂಟದಲ್ಲಿ ಹಣ ದುರ್ಬಳಕೆ ಪ್ರಕರಣ: ಮುಖ್ಯ ಪುಸ್ತಕ ಬರಹಗಾರ್ತಿ ಹಾಗೂ ಪತಿ ಬಂಧನ
- ಭಗಿನಿ ಸಮಾಜ ಸಭಾಂಗಣದಲ್ಲಿ ರತ್ನ ಶೆಟ್ಟಿ ಪುಣ್ಯಸ್ಮರಣೆ; ಆತ್ಮಶಾಂತಿಗಾಗಿ ವಿಶೇಷ ಪ್ರಾರ್ಥನೆ
- ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ ಅವರ ನಿಧನಕ್ಕೆ ಜೆಡಿಎಸ್ ಜಿಲ್ಲಾದ್ಯಕ್ಷ ಜಾಕೆ ಮಾಧವ ಗೌಡ ತೀವ್ರ ಸಂತಾಪ
- ಬ್ರಿಡ್ಜ್ಮ್ಯಾನ್ ಆಫ್ ಇಂಡಿಯಾ’ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ ಅವರ ನಿಧನಕ್ಕೆ ಜೆಡಿಎಸ್ ಜಿಲ್ಲಾದ್ಯಕ್ಷ ಜಾಕೆ ಮಾಧವ ಗೌಡ ತೀವ್ರ ಸಂತಾಪ
- ತೂಗುಸೇತುವೆಗಳ ಸರದಾರ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ ನಿಧನ
- ಬಿ.ಜೆ.ಎಂ ಮಲ್ಲಾರು-ಮಜೂರು ಜುಮ್ಮಾ ಮಸ್ಜಿದ್ನಲ್ಲಿ ಎಸ್ಐಆರ್ ಮಾಹಿತಿ ಹಾಗೂ ಕಾನೂನು ಜಾಗೃತಿ ಶಿಬಿರ
- ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ: 14 ಆರೋಪಿಗಳ ಗುರುತು ಬಹಿರಂಗ – ತಲೆಮರೆಸಿಕೊಂಡವರ ಪತ್ತೆಗೆ ಸಾರ್ವಜನಿಕರ ಸಹಕಾರ ಕೋರಿದ ಪೊಲೀಸರು
Author: Tulunada Surya
ಮಂಗಳೂರು, ಜುಲೈ 7: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 41ನೇ ಸೆಂಟ್ರಲ್ ವಾರ್ಡಿನ ಮಹಾಮ್ಮಾಯ ದೇವಸ್ಥಾನದ ಹಿಂಭಾಗದ ಚರಂಡಿಯ ಉಳಿದ ಕಾಮಗಾರಿ ಹಾಗೂ ಗೌರಿಮಠ ರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಸ್ಥಳೀಯ ನಿವಾಸಿಗಳ ಬಹುಕಾಲದ ಬೇಡಿಕೆಗೆ ಸ್ಪಂದಿಸಿ ₹60 ಲಕ್ಷ ವಿಶೇಷ ಅನುದಾನದಲ್ಲಿ ಈ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು. ಚರಂಡಿ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಸಾರ್ವಜನಿಕರಿಗೆ ಉತ್ತಮ ಮೂಲಸೌಕರ್ಯ ದೊರೆಯಲಿದ್ದು, ಸಂಚಾರ ಹಾಗೂ ಮಳೆಗಾಲದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಲಿದೆ. ಕಾಮಗಾರಿಯನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಸಮರ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ನಿಕಟಪೂರ್ವ ಸದಸ್ಯೆ ಶ್ರೀಮತಿ ಪೂರ್ಣಿಮಾ, ಮಂಡಲದ ಪ್ರರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ, ವಾರ್ಡಿನ ಪ್ರಮುಖರಾದ ಮುರಳೀಧರ್…
ಉಡುಪಿ, ಜುಲೈ 7: ಗ್ರಾಮೀಣ ಮಹಿಳಾ ಸ್ವಸಹಾಯ ಸಂಘಗಳ ಅಭಿವೃದ್ಧಿಗೆ ಮೀಸಲಾಗಿದ್ದ ಸಂಜೀವಿನಿ ಯೋಜನೆಯ ಒಕ್ಕೂಟದಲ್ಲೇ ಕೋಟ್ಯಂತರ ನಂಬಿಕೆಗೆ ಧಕ್ಕೆ ಉಂಟುಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಡೂರು ಗ್ರಾಮದ ಪದ್ಮ ಕಮಲ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದಲ್ಲಿ ಸುಮಾರು ₹23 ಲಕ್ಷ ಹಣ ದುರ್ಬಳಕೆ ಮತ್ತು ವಂಚನೆ ನಡೆಸಿದ ಆರೋಪದಡಿ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರ್ತಿ ಸುಗಂಧಿ ಹಾಗೂ ಆಕೆಯ ಪತಿ ಸಂತೋಷ್ ಅವರನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ತನಿಖೆ ಪ್ರಕಾರ, ಸುಗಂಧಿ ಅವರು 2023ರಿಂದ 2025ರವರೆಗೆ ಮುಖ್ಯ ಪುಸ್ತಕ ಬರಹಗಾರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಸದಸ್ಯರಿಂದ ಸಂಗ್ರಹಿಸಲಾದ ಸಾಲ ಮರುಪಾವತಿ ಹಣವನ್ನು ದಾಖಲೆಗಳಲ್ಲಿ ನಮೂದಿಸಿದ್ದರೂ, ಅದನ್ನು ಒಕ್ಕೂಟದ ಬ್ಯಾಂಕ್ ಖಾತೆಗೆ ಜಮೆ ಮಾಡದೇ ಸ್ವಂತ ದುರ್ಬಳಕೆಗೆ ಬಳಸಿರುವ ಆರೋಪ ಎದುರಿಸುತ್ತಿದ್ದಾರೆ. ಇದರೊಂದಿಗೆ, ವಿವಿಧ ಸ್ವಸಹಾಯ ಸಂಘಗಳ ಹೆಸರಿನಲ್ಲಿ ಒಕ್ಕೂಟದ ಚೆಕ್ಗಳಿಗೆ ಅಧ್ಯಕ್ಷರು ಹಾಗೂ ಕಾರ್ಯದರ್ಶಿಯ ನಕಲಿ ಸಹಿಗಳನ್ನು ಮಾಡಿ ಬ್ಯಾಂಕ್ನಿಂದ ಹಣ ಪಡೆದಿರುವುದು…
ಮಂಗಳೂರು, ಜುಲೈ 7: ಸಮಾಜಮುಖಿ ಚಿಂತನೆ, ಸರಳ ವ್ಯಕ್ತಿತ್ವ ಹಾಗೂ ಮಾನವೀಯ ಮೌಲ್ಯಗಳಿಂದ ಎಲ್ಲರ ಪ್ರೀತಿ ಗಳಿಸಿದ್ದ ದಿವಂಗತ ರತ್ನ ಶೆಟ್ಟಿ ಅವರ ಮೊದಲ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವು ಮಂಗಳೂರಿನ ಮೊರ್ಗನ್ಗೇಟ್ನಲ್ಲಿರುವ ಭಗಿನಿ ಸಮಾಜ ಸಭಾಂಗಣದಲ್ಲಿ ಭಾವಪೂರ್ಣವಾಗಿ ನಡೆಯಿತು.ಕಾರ್ಯಕ್ರಮದಲ್ಲಿ ರತ್ನ ಶೆಟ್ಟಿ ಅವರ ಮಕ್ಕಳು ಸಂತೋಷ್ ಶೆಟ್ಟಿ ಹಾಗೂ ನವೀನ್ ಶೆಟ್ಟಿ, ಸೊಸೆಯರಾದ ಸರಸ್ವತಿ ಮತ್ತು ಗೀತಾ, ಕುಟುಂಬದ ಸದಸ್ಯರು, ಬಂಧು-ಬಳಗ ಹಾಗೂ ಆಪ್ತ ಮಿತ್ರರು ಭಾಗವಹಿಸಿ, ದಿವಂಗತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು. ಬಳಿಕ ಅವರ ಆತ್ಮಶಾಂತಿಗಾಗಿ ವಿಶೇಷ ಪ್ರಾರ್ಥನೆ ನಡೆಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು, ರತ್ನ ಶೆಟ್ಟಿ ಅವರು ಸಮಾಜದಲ್ಲಿ ಉತ್ತಮ ವ್ಯಕ್ತಿತ್ವ, ಪ್ರಾಮಾಣಿಕತೆ ಮತ್ತು ಮಾನವೀಯ ಗುಣಗಳಿಂದ ಎಲ್ಲರ ಹೃದಯದಲ್ಲಿ ಅಚ್ಚಳಿಯದ ಸ್ಥಾನ ಪಡೆದಿದ್ದರು. ಅವರ ಸರಳ ಜೀವನ, ಸಹೃದಯತೆ ಹಾಗೂ ಸಮಾಜದ ಮೇಲಿನ ಕಾಳಜಿ ಸದಾ ಸ್ಮರಣೀಯವಾಗಿರಲಿದೆ. ಅವರ ಆದರ್ಶಗಳು ಮುಂದಿನ ಪೀಳಿಗೆಗೂ ಪ್ರೇರಣೆಯಾಗಲಿ…
ಮಂಗಳೂರು, ಜುಲೈ 7: ದೇಶದ ಗ್ರಾಮೀಣ ಭಾಗಗಳಿಗೆ ತೂಗುಸೇತುವೆಗಳ ನಿರ್ಮಾಣದ ಮೂಲಕ ಶಾಶ್ವತ ಸಂಪರ್ಕ ಕಲ್ಪಿಸಿ, ಲಕ್ಷಾಂತರ ಜನರ ಬದುಕಿನಲ್ಲಿ ಹೊಸ ಆಶಾಕಿರಣ ಮೂಡಿಸಿದ್ದ ‘ಬ್ರಿಡ್ಜ್ಮ್ಯಾನ್ ಆಫ್ ಇಂಡಿಯಾ’ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ ಅವರ ನಿಧನಕ್ಕೆ ಜನತಾದಳ (ಜಾತ್ಯತೀತ) ದಕ್ಷಿಣ ಕನ್ನಡ ಜಿಲ್ಲಾ ಘಟಕವು ತೀವ್ರ ಸಂತಾಪ ವ್ಯಕ್ತಪಡಿಸಿದೆ. ಗ್ರಾಮೀಣ ಭಾರತದ ಅಭಿವೃದ್ಧಿಯನ್ನು ತಮ್ಮ ಜೀವನದ ಧ್ಯೇಯವನ್ನಾಗಿಸಿಕೊಂಡಿದ್ದ ಡಾ. ಗಿರೀಶ್ ಭಾರದ್ವಾಜ ಅವರು 125ಕ್ಕೂ ಅಧಿಕ ತೂಗುಸೇತುವೆಗಳನ್ನು ನಿರ್ಮಿಸುವ ಮೂಲಕ ಸಾವಿರಾರು ಗ್ರಾಮಗಳ ಜನರಿಗೆ ಸುರಕ್ಷಿತ ಸಂಚಾರದ ವ್ಯವಸ್ಥೆ ಕಲ್ಪಿಸಿ, ಅಭಿವೃದ್ಧಿಯ ಹೊಸ ಅಧ್ಯಾಯವನ್ನು ಬರೆದಿದ್ದರು. ಕಡಿಮೆ ವೆಚ್ಚದ, ಪರಿಸರ ಸ್ನೇಹಿ ತಂತ್ರಜ್ಞಾನದ ಮೂಲಕ ಗ್ರಾಮೀಣ ಮೂಲಸೌಕರ್ಯ ಕ್ಷೇತ್ರದಲ್ಲಿ ಅವರು ಸಲ್ಲಿಸಿದ ಸೇವೆ ಅನನ್ಯ ಹಾಗೂ ಅನುಕರಣೀಯವಾಗಿದೆ. ಪದ್ಮಶ್ರೀ ಸೇರಿದಂತೆ ಹಲವು ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಗೌರವಗಳಿಗೆ ಭಾಜನರಾಗಿದ್ದ ಅವರು ತಮ್ಮ ಸಾಧನೆಗಳ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ರಾಷ್ಟ್ರಮಟ್ಟದಲ್ಲಿ ಕಂಗೊಳಿಸುವಂತೆ ಮಾಡಿದ್ದರು.…
ಮಂಗಳೂರು, ಜುಲೈ 7: ದೇಶದ ಗ್ರಾಮೀಣ ಭಾಗಗಳಿಗೆ ತೂಗುಸೇತುವೆಗಳ ನಿರ್ಮಾಣದ ಮೂಲಕ ಶಾಶ್ವತ ಸಂಪರ್ಕ ಕಲ್ಪಿಸಿ, ಲಕ್ಷಾಂತರ ಜನರ ಬದುಕಿನಲ್ಲಿ ಹೊಸ ಆಶಾಕಿರಣ ಮೂಡಿಸಿದ್ದ ‘ಬ್ರಿಡ್ಜ್ಮ್ಯಾನ್ ಆಫ್ ಇಂಡಿಯಾ’ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ ಅವರ ನಿಧನಕ್ಕೆ ಜನತಾದಳ (ಜಾತ್ಯತೀತ) ದಕ್ಷಿಣ ಕನ್ನಡ ಜಿಲ್ಲಾ ಘಟಕವು ತೀವ್ರ ಸಂತಾಪ ವ್ಯಕ್ತಪಡಿಸಿದೆ. ಗ್ರಾಮೀಣ ಭಾರತದ ಅಭಿವೃದ್ಧಿಯನ್ನು ತಮ್ಮ ಜೀವನದ ಧ್ಯೇಯವನ್ನಾಗಿಸಿಕೊಂಡಿದ್ದ ಡಾ. ಗಿರೀಶ್ ಭಾರದ್ವಾಜ ಅವರು 125ಕ್ಕೂ ಅಧಿಕ ತೂಗುಸೇತುವೆಗಳನ್ನು ನಿರ್ಮಿಸುವ ಮೂಲಕ ಸಾವಿರಾರು ಗ್ರಾಮಗಳ ಜನರಿಗೆ ಸುರಕ್ಷಿತ ಸಂಚಾರದ ವ್ಯವಸ್ಥೆ ಕಲ್ಪಿಸಿ, ಅಭಿವೃದ್ಧಿಯ ಹೊಸ ಅಧ್ಯಾಯವನ್ನು ಬರೆದಿದ್ದರು. ಕಡಿಮೆ ವೆಚ್ಚದ, ಪರಿಸರ ಸ್ನೇಹಿ ತಂತ್ರಜ್ಞಾನದ ಮೂಲಕ ಗ್ರಾಮೀಣ ಮೂಲಸೌಕರ್ಯ ಕ್ಷೇತ್ರದಲ್ಲಿ ಅವರು ಸಲ್ಲಿಸಿದ ಸೇವೆ ಅನನ್ಯ ಹಾಗೂ ಅನುಕರಣೀಯವಾಗಿದೆ. ಪದ್ಮಶ್ರೀ ಸೇರಿದಂತೆ ಹಲವು ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಗೌರವಗಳಿಗೆ ಭಾಜನರಾಗಿದ್ದ ಅವರು ತಮ್ಮ ಸಾಧನೆಗಳ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು ರಾಷ್ಟ್ರಮಟ್ಟದಲ್ಲಿ ಕಂಗೊಳಿಸುವಂತೆ ಮಾಡಿದ್ದರು.…
125ಕ್ಕೂ ಅಧಿಕ ತೂಗುಸೇತುವೆಗಳ ನಿರ್ಮಾಣದ ಮೂಲಕ ಗ್ರಾಮೀಣ ಭಾರತಕ್ಕೆ ಹೊಸ ಸಂಪರ್ಕ ಕಲ್ಪಿಸಿದ್ದ ‘ಬ್ರಿಡ್ಜ್ಮ್ಯಾನ್ ಆಫ್ ಇಂಡಿಯಾ’ ಇನ್ನಿಲ್ಲ ಸುಳ್ಯ, ಜುಲೈ 7: ತೂಗುಸೇತುವೆಗಳ ನಿರ್ಮಾಣದ ಮೂಲಕ ದೇಶದ ಗ್ರಾಮೀಣ ಭಾಗಗಳಿಗೆ ಹೊಸ ಬದುಕಿನ ದಾರಿ ತೋರಿದ್ದ, ‘ಬ್ರಿಡ್ಜ್ಮ್ಯಾನ್ ಆಫ್ ಇಂಡಿಯಾ’ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ ಅವರು ಮಂಗಳವಾರ ಮುಂಜಾನೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 76 ವರ್ಷ ವಯಸ್ಸಾಗಿತ್ತು. ಹೃದಯ ಸಂಬಂಧಿ ಅನಾರೋಗ್ಯದಿಂದಾಗಿ ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಕೊನೆಯುಸಿರೆಳೆದರು. ಅವರ ಅಗಲಿಕೆಯಿಂದ ದೇಶವು ಗ್ರಾಮೀಣ ಮೂಲಸೌಕರ್ಯ ಕ್ಷೇತ್ರದ ಅಪರೂಪದ ಸಾಧಕನನ್ನು ಕಳೆದುಕೊಂಡಂತಾಗಿದೆ. ದೇಶದಾದ್ಯಂತ ಹಳ್ಳಿಗಳನ್ನು ಸಂಪರ್ಕಿಸುವ ಉದ್ದೇಶದಿಂದ 125ಕ್ಕೂ ಹೆಚ್ಚು ತೂಗುಸೇತುವೆಗಳನ್ನು ನಿರ್ಮಿಸಿ ಸಾವಿರಾರು ಗ್ರಾಮಸ್ಥರ ಬದುಕಿಗೆ ಹೊಸ ದಾರಿಯನ್ನು ತೆರೆದಿದ್ದ ಡಾ. ಭಾರದ್ವಾಜ ಅವರಿಗೆ ‘ಸೇತುಬಂಧು’ ಹಾಗೂ ‘ಬ್ರಿಡ್ಜ್ಮ್ಯಾನ್ ಆಫ್ ಇಂಡಿಯಾ’ ಎಂಬ ಗೌರವ ಬಿರುದುಗಳು ಲಭಿಸಿದ್ದವು. ಅವರ ಅಸಾಧಾರಣ…
ಕಾಪು, ಜುಲೈ 6: ಬದ್ರಿಯ ಜುಮ್ಮಾ ಮಸ್ಜಿದ್, ಮಲ್ಲಾರು-ಮಜೂರು ಆಶ್ರಯದಲ್ಲಿ ಎಸ್ಐಆರ್ (SIR) ಮಾಹಿತಿ ಶಿಬಿರ ಹಾಗೂ ದೇಶದ ಕಾನೂನು-ಸಂವಿಧಾನದ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಸ್ಜಿದ್ ಅಧ್ಯಕ್ಷ ಡಾ. ಫಾರೂಕ್ ಚಂದ್ರನಗರ ವಹಿಸಿ ಮಾತನಾಡಿ, ಎಸ್ಐಆರ್ ಕುರಿತು ಸಮಗ್ರ ಮಾಹಿತಿ ಪಡೆದು ಸರ್ಕಾರದ ನಿರ್ದೇಶನಗಳಿಗೆ ಅನುಗುಣವಾಗಿ ದೇಶದ ಕಾನೂನು ಹಾಗೂ ಸಂವಿಧಾನಕ್ಕೆ ಎಲ್ಲರೂ ಸಹಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು. ಕಾರ್ಯಕ್ರಮವನ್ನು ಮಸ್ಜಿದ್ ಖತೀಬರಾದ ಅಬ್ದುಲ್ ರಶೀದ್ ಸಖಾಫಿ ಅಲ್-ಖಾಮಿಲ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಮಾಜಮುಖಿ ಹಾಗೂ ಜನಪರ ಕಾರ್ಯಕ್ರಮಗಳು ನಿರಂತರವಾಗಿ ನಡೆಯುವುದರಿಂದ ಸಮಾಜದಲ್ಲಿ ಉತ್ತಮ ಬದಲಾವಣೆ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನ್ಯಾಯವಾದಿ ಅಬ್ದುಲ್ ರೆಹಮಾನ್ ಎಸ್ಐಆರ್ ಪ್ರಕ್ರಿಯೆ ಹಾಗೂ ದೇಶದ ಕಾನೂನು-ಸಂವಿಧಾನದ ಕುರಿತು ಮಾಹಿತಿ ನೀಡಿದರು. ಭಾರತದ ಸಂವಿಧಾನ, ಕಾನೂನು ಮತ್ತು ನಾಗರಿಕರ ಹಕ್ಕು-ಕರ್ತವ್ಯಗಳ ಬಗ್ಗೆ ಅರಿವು ಹೊಂದಿರುವುದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು. ಎಸ್ಐಆರ್…
ಮಂಗಳೂರು, ಜುಲೈ 6: ನಗರದ ಬೈಕಂಪಾಡಿ ಸಮೀಪ ಚಿನ್ನದ ವ್ಯಾಪಾರಿಯನ್ನು ಅಡ್ಡಗಟ್ಟಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ನಗದು ದರೋಡೆ ನಡೆಸಿದ ಬಹುಚರ್ಚಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಅವರ ಫೋಟೋಗಳು ಹಾಗೂ ಗುರುತು ವಿವರಗಳನ್ನು ಸಾರ್ವಜನಿಕರಿಗೆ ಬಿಡುಗಡೆ ಮಾಡಿದ್ದಾರೆ. ಪೊಲೀಸ್ ತನಿಖೆಯಲ್ಲಿ ಈ ದರೋಡೆ ಕೃತ್ಯದ ಮಾಸ್ಟರ್ ಮೈಂಡ್ ಪಾಂಡಿಚೇರಿ ಮೂಲದ ಶಿಬಿನ್ ಗಂಗಾಧರನ್ ಎಂಬುದು ಬೆಳಕಿಗೆ ಬಂದಿದ್ದು, ಪ್ರಕರಣದಲ್ಲಿ ಒಟ್ಟು 14 ಮಂದಿ ಆರೋಪಿಗಳು ಭಾಗಿಯಾಗಿರುವುದು ದೃಢಪಟ್ಟಿದೆ. ಆರೋಪಿಗಳ ವಿರುದ್ಧ ವಿವಿಧ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಅವರ ಬಂಧನಕ್ಕಾಗಿ ವಿಶೇಷ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ. ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಕೇರಳದ ವಿವಿಧ ಜಿಲ್ಲೆಗಳು ಹಾಗೂ ಕೇರಳ-ಕರ್ನಾಟಕ ಗಡಿ ಭಾಗಗಳಲ್ಲಿ ತಲೆಮರೆಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸರು ಕೇರಳ ಪೊಲೀಸರೊಂದಿಗೆ ಸಮನ್ವಯ ಸಾಧಿಸಿ ಹಲವು ಸ್ಥಳಗಳಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪೊಲೀಸರು ಗುರುತು ಬಹಿರಂಗಪಡಿಸಿರುವ…
ಉಳ್ಳಾಲ, ಜುಲೈ 5 (ತುಳುನಾಡ ಸೂರ್ಯ): ಉಳ್ಳಾಲ ಸಮೀಪದ ಕೋಟೆಕಾರ್ನಲ್ಲಿ ಉದ್ಯಮಿ, ಸಮಾಜಸೇವಕ ಹಾಗೂ ಕೋಟೆಕಾರು ಪಟ್ಟಣ ಪಂಚಾಯತ್ ಸದಸ್ಯರಾದ ರಾಘವ ಗಟ್ಟಿ ಮತ್ತು ಭಾರತಿ ರಾಘವ ಗಟ್ಟಿ ದಂಪತಿಗಳ ಕನಸಿನ ಯೋಜನೆಯಾದ ನೂತನ ಆರ್.ಬಿ. ಕಾಂಪ್ಲೆಕ್ಸ್ (R.B. Complex) ಭಾನುವಾರ ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈಭವದ ನಡುವೆ ಲೋಕಾರ್ಪಣೆಗೊಂಡಿತು. ಮಾಡೂರು ಶಿವದುರ್ಗಾಂಭ ಮಠದ ಪೂಜ್ಯ ದುರ್ಗಾನಂದ ಸ್ವಾಮೀಜಿ ಅವರು ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಬಳಿಕ ಮಾತನಾಡಿದ ಅವರು, “ಯಶಸ್ವಿ ಉದ್ಯಮಿಯ ನಿಜವಾದ ಸಾಧನೆ ಸಮಾಜದ ಅಭಿವೃದ್ಧಿಯಲ್ಲಿ ಕಾಣಿಸಬೇಕು. ಉದ್ಯಮವು ಕೇವಲ ಲಾಭದ ವ್ಯವಹಾರವಾಗದೆ ಉದ್ಯೋಗ ಸೃಷ್ಟಿ, ಜನಸೇವೆ ಹಾಗೂ ಸಾಮಾಜಿಕ ಬದ್ಧತೆಯ ಪ್ರತೀಕವಾಗಬೇಕು. ಅಂತಹ ಉದ್ಯಮಗಳೇ ಸಮಾಜಕ್ಕೆ ಶಾಶ್ವತ ಕೊಡುಗೆ ನೀಡುತ್ತವೆ,” ಎಂದು ಹೇಳಿದರು. ನೂತನ ಆರ್.ಬಿ. ಕಾಂಪ್ಲೆಕ್ಸ್ ಸ್ಥಳೀಯ ವ್ಯಾಪಾರ ಚಟುವಟಿಕೆಗಳಿಗೆ ಹೊಸ ಚೈತನ್ಯ ನೀಡುವುದರೊಂದಿಗೆ ಕೋಟೆಕಾರ್ ಭಾಗದ ಆರ್ಥಿಕ ಬೆಳವಣಿಗೆಗೆ ಪೂರಕವಾಗಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬಿಜೆಪಿ ದಕ್ಷಿಣ ಕನ್ನಡ…
ಉಳ್ಳಾಲ, ಜುಲೈ 5: ಉಳ್ಳಾಲ ಸಮೀಪದ ಕೋಟೆಕಾರ್ನಲ್ಲಿ ಉದ್ಯಮಿ ಹಾಗೂ ಕೋಟೆಕಾರು ಪಟ್ಟಣ ಪಂಚಾಯತ್ ಸದಸ್ಯರಾದ ರಾಘವ ಗಟ್ಟಿ ಮತ್ತು ಭಾರತಿ ರಾಘವ ಗಟ್ಟಿ ದಂಪತಿಗಳ ಮಾಲಕತ್ವದ ನೂತನ ಆರ್.ಬಿ. ಕಾಂಪ್ಲೆಕ್ಸ್ (R.B. Complex) ಉದ್ಘಾಟನಾ ಸಮಾರಂಭವು ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ವಾತಾವರಣದಲ್ಲಿ ಅದ್ದೂರಿಯಾಗಿ ನೆರವೇರಿತು. ಮಾಡೂರು ಶಿವದುರ್ಗಾಂಭ ಮಠದ ಪೂಜ್ಯ ದುರ್ಗಾನಂದ ಸ್ವಾಮೀಜಿ ಅವರು ನೂತನ ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಉದ್ಯಮವು ಕೇವಲ ಲಾಭ ಗಳಿಸುವ ಸಾಧನವಾಗಿರದೆ ಸಮಾಜದ ಅಭಿವೃದ್ಧಿ, ಉದ್ಯೋಗ ಸೃಷ್ಟಿ ಹಾಗೂ ಸೇವಾ ಮನೋಭಾವವನ್ನು ಬೆಳೆಸುವ ಮಾಧ್ಯಮವಾಗಬೇಕು ಎಂದು ತಿಳಿಸಿದರು. ನೂತನ ಕಟ್ಟಡವು ವ್ಯಾಪಾರ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಜೊತೆಗೆ ಸ್ಥಳೀಯ ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಲಿ ಎಂದು ಹಾರೈಸಿದರು. ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಮುಖಂಡರಾದ ಚಂದ್ರಶೇಖರ್ ಉಚ್ಚಿಲ, ಸತ್ಯಶಂಕರ ಬೊಳ್ಳವ, ತುಳುನಾಡು ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಯೋಗೀಶ್ ಶೆಟ್ಟಿ…
ತುಳುನಾಡ ಸೂರ್ಯ ಪ್ರತಿಕೆ ಚಂದಾದಾರರಾಗಿ ಪ್ರೋತ್ಸಾಹಿಸಬೇಕಾಗಿ ವಿನಂತಿ.
ತುಳುನಾಡಿನ ಅಚಾರ ವಿಚಾರ ಪರಂಪರೆ ಮತ್ತು ಪ್ರಸ್ತುತ ಹಲವಾರು ವಿಚಾರಗಳನ್ನು ಪ್ರಕಟಿಸುವ ಪತ್ರಿಕೆ ಯಾಗಿದೆ. ತಾವು ಚಂದಾದಾರ ರಾಗಿದಲ್ಲಿ tulunadasurya.com web News ನಲ್ಲಿ ಪ್ರತಿ ದಿನದ ನ್ಯೂಸ್ ಗಳು ನೀವು ವೀಕ್ಷಿಸಬಹುದು . ಮತ್ತು ಪ್ರತಿ ತಿಂಗಳು ನಿಮ್ಮ ವಿಳಾಸಕ್ಕೆ ಗೌರವಯುತ ವಾಗಿ ಅಂಚೆ ಮೂಲಕ ತುಳುನಾಡ ಸೂರ್ಯ ಪ್ರತಿಕೆ ಮನೆ ತಲುಪುತ್ತದೆ.
