Author: Tulunada Surya

Madikeri : ನಾಪೋಕ್ಲುವಿನಲ್ಲಿ ಪತ್ರಕರ್ತ ಝಕರಿಯ ಅವರ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪೋಕ್ಲು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸಿದ್ದೀಕ್ (20), ರುಮಾನ್ (21) ಹಾಗೂ ನಾಫಿ (22) ಎಂದು ಗುರುತಿಸಲಾಗಿದೆ. ಬಂಧಿತ ಸಿದ್ದೀಕ್, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ. ಇಸ್ಮಾಯಿಲ್ ಅವರ ಪುತ್ರನಾಗಿದ್ದು, ಪ್ರಕರಣದಲ್ಲಿ ಬಳಸಲಾಗಿದೆ ಎನ್ನಲಾದ ಒಂದು ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇನ್ನೊಬ್ಬ ಪ್ರಮುಖ ಆರೋಪಿ ಮಹಮ್ಮದ್ ಅಲಿ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಕೃತ್ಯಕ್ಕೆ ಬಳಸಲಾಗಿದೆ ಎಂದು ಶಂಕಿಸಲಾಗಿರುವ ಮತ್ತೊಂದು ಗೂಡ್ಸ್ ವಾಹನದ ಪತ್ತೆಗೂ ಪೊಲೀಸರು ಬಲೆ ಬೀಸಿದ್ದಾರೆ. ಘಟನೆ ಸೋಮವಾರ ಸಂಜೆ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಬಾವಲಿ ಗ್ರಾಮದಲ್ಲಿ ನಡೆದಿತ್ತು. ತನಿಖೆ ಪ್ರಕಾರ, ಆರೋಪಿಗಳಲ್ಲಿ ಒಬ್ಬನಾದ ರುಮಾನ್ ಆಟೋ ಬಾಡಿಗೆ ಮಾಡುವ ನೆಪದಲ್ಲಿ ಪತ್ರಕರ್ತ ಝಕರಿಯ ಅವರನ್ನು ನಾಪೋಕ್ಲು ಪಟ್ಟಣದಿಂದ ಬಲಮುರಿ ಕಡೆಗೆ ಕರೆಸಿಕೊಂಡಿದ್ದ ಎನ್ನಲಾಗಿದೆ. ಮಾರ್ಗಮಧ್ಯೆ ವೇನ್ಯೂ ಕಾರಿನಲ್ಲಿ ಬಂದಿದ್ದ ಆರೋಪಿಗಳು…

Read More

ಕಾಪು: ಸುಮಾರು 18 ವರ್ಷಗಳ ಕಾಲ ಶಿರೂರು ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿ ಇದೀಗ ಬೆಂಗಳೂರಿಗೆ ವರ್ಗಾವಣೆಗೊಂಡ ವೈದ್ಯಾಧಿಕಾರಿ ಡಾ. ಪ್ರಭಾ ಎನ್. ಅವರಿಗೆ ತುಳುನಾಡ ರಕ್ಷಣಾ ವೇದಿಕೆ ಕಾಪು ತಾಲೂಕು ಹಾಗೂ ಬೈರಂಪಳ್ಳಿ ಘಟಕದ ವತಿಯಿಂದ ಭಾವಪೂರ್ಣ ಬೀಳ್ಕೊಡುಗೆ ಸಮಾರಂಭ ನಡೆಯಿತು. ಕಾರ್ಯಕ್ರಮವು ಸಂಘಟನೆಯ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಅವರ ಮಾರ್ಗದರ್ಶನದಲ್ಲಿ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ, “ಡಾ. ಪ್ರಭಾ ಎನ್. ಅವರು ಕಳೆದ 18 ವರ್ಷಗಳಿಂದ ಬೆಳ್ಳರಪಾಡಿ, 41ನೇ ಶಿರೂರು ಹಾಗೂ ಬೈರಂಪಳ್ಳಿ ಭಾಗದ ಜನರಿಗೆ ಆಯುರ್ವೇದ ಚಿಕಿತ್ಸೆಯ ಮೂಲಕ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ಕೊರೋನಾ ಮಹಾಮಾರಿ ಸಂದರ್ಭದಲ್ಲೂ ಜನರಿಗೆ ಸೂಕ್ತ ಮಾರ್ಗದರ್ಶನ ನೀಡಿ, ಆರೋಗ್ಯ ಜಾಗೃತಿ ಮೂಡಿಸಿ ಅಪಾರ ವಿಶ್ವಾಸ ಗಳಿಸಿದ್ದಾರೆ” ಎಂದು ಶ್ಲಾಘಿಸಿದರು. ಅವರು ಮುಂದುವರಿದು, “ಇತ್ತೀಚಿನ ದಿನಗಳಲ್ಲಿ ಅಲೋಪತಿ ಚಿಕಿತ್ಸೆಯತ್ತ ಜನರು ಹೆಚ್ಚು ಆಕರ್ಷಿತರಾಗುತ್ತಿರುವ ಸಂದರ್ಭದಲ್ಲೂ ಆಯುರ್ವೇದದ ಮಹತ್ವ, ಔಷಧಿಗಳ…

Read More

ಸುಳ್ಯ: ಜನತಾದಳ ಜಾತ್ಯತೀತ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು ಅವರು ಜೆಡಿಎಸ್ ಸುಳ್ಯ ತಾಲೂಕು ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ ಅವರ ನಿವಾಸಕ್ಕೆ ಆಹ್ವಾನದ ಮೇರೆಗೆ ಗೌರವಯುತ ಸೌಹಾರ್ದ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪಕ್ಷ ಸಂಘಟನೆ ಬಲವರ್ಧನೆ, ಯುವಕರನ್ನು ಪಕ್ಷದತ್ತ ಸೆಳೆಯುವುದು ಹಾಗೂ ಗ್ರಾಮ ಮಟ್ಟದಲ್ಲಿ ಕಾರ್ಯಕರ್ತರನ್ನು ಇನ್ನಷ್ಟು ಸಕ್ರಿಯಗೊಳಿಸುವ ಕುರಿತು ಆತ್ಮೀಯ ಚರ್ಚೆ ನಡೆಯಿತು. ಪಕ್ಷದ ತತ್ವಸಿದ್ಧಾಂತಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಯುವಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ನಾಯಕರು ಅಭಿಪ್ರಾಯಪಟ್ಟರು. ಸುಕುಮಾರ್ ಕೋಡ್ತುಗುಳಿ ಅವರು ಕಾರ್ಯಕರ್ತರ ಏಕತೆ, ನಿಷ್ಠೆ ಹಾಗೂ ಸಮರ್ಪಣಾಭಾವವೇ ಪಕ್ಷದ ನಿಜವಾದ ಶಕ್ತಿಯಾಗಿದೆ ಎಂದು ತಿಳಿಸಿದರು. ವಿದ್ಯಾರ್ಥಿ ಜನತಾದಳ ಜಿಲ್ಲಾಧ್ಯಕ್ಷ ನಿಹಾಲ್ ಕೋಡ್ತುಗುಳಿ ಅವರು ಯುವಕರನ್ನು ಸಮಾಜಮುಖಿ ಹಾಗೂ ರಾಜಕೀಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಪ್ರೇರೇಪಿಸುವ ಕಾರ್ಯ ನಡೆಯುತ್ತಿದೆ ಎಂದು ಹೇಳಿದರು. ಸೌಹಾರ್ದಯುತ ವಾತಾವರಣದಲ್ಲಿ ನಡೆದ ಈ ಭೇಟಿ ಹೊಸ ಉತ್ಸಾಹ ಮತ್ತು ಚೈತನ್ಯ ಮೂಡಿಸಿತು.

Read More

ಕೊಲ್ಕತ್ತಾ, ಮೇ 07: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ Suvendu Adhikari ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಹತ್ಯೆ ಪ್ರಕರಣ ರಾಜ್ಯ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಈ ಘಟನೆ “ಪೂರ್ವಯೋಜಿತ ಹಾಗೂ ತಣ್ಣನೆಯ ರಕ್ತದ ಕೊಲೆ” ಎಂದು ಸುವೇಂದು ಅಧಿಕಾರಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಉತ್ತರ 24 ಪರಗಣ ಜಿಲ್ಲೆಯ Madhyamgram ಪ್ರದೇಶದಲ್ಲಿ ಬುಧವಾರ ರಾತ್ರಿ ಈ ದಾಳಿ ನಡೆದಿದ್ದು, ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಸಮೀಪದಿಂದಲೇ ಚಂದ್ರನಾಥ್ ರಥ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಆಸ್ಪತ್ರೆ ಹೊರಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸುವೇಂದು ಅಧಿಕಾರಿ, “ಇದು ಸಾಮಾನ್ಯ ದಾಳಿ ಅಲ್ಲ. ದಾಳಿಕೋರರು ಎರಡು ರಿಂದ ಮೂರು ದಿನಗಳ ಕಾಲ ಹಿಂಬಾಲಿಸಿ, ಯೋಜಿತವಾಗಿ ಈ ಕೃತ್ಯ ಎಸಗಿದ್ದಾರೆ ಎಂಬ ಮಾಹಿತಿ ದೊರೆತಿದೆ,” ಎಂದು ಹೇಳಿದರು.ಪ್ರಾಥಮಿಕ ತನಿಖೆಯ ಪ್ರಕಾರ, ಚಂದ್ರನಾಥ್ ರಥ್ ಪ್ರಯಾಣಿಸುತ್ತಿದ್ದ ಮಹೀಂದ್ರ ಸ್ಕಾರ್ಪಿಯೋ ವಾಹನವನ್ನು ದುಷ್ಕರ್ಮಿಗಳು ಕಾರು ಮತ್ತು…

Read More

ಸುಳ್ಯ, ಮೇ 06: ಜನತಾದಳ ಜಾತ್ಯತೀತ (ಜೆಡಿಎಸ್) ಪಕ್ಷದ ದಕ್ಷಣ ಕನ್ನಡ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು ಅವರು ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸುಳ್ಯಕ್ಕೆ ಭೇಟಿ ನೀಡಿ, ಅಲ್ಲಿನ ಜೆಡಿಎಸ್ ಕಚೇರಿಯಲ್ಲಿ ಕಾರ್ಯಕರ್ತರೊಂದಿಗೆ ಆತ್ಮೀಯ ಸಂವಾದ ನಡೆಸಿದರು. ಸುಳ್ಯ ನಗರಕ್ಕೆ ಆಗಮಿಸಿದ ವೇಳೆ ಸ್ಥಳೀಯ ನಾಯಕರು ಹಾಗೂ ಕಾರ್ಯಕರ್ತರು ಅವರನ್ನು ಉತ್ಸಾಹಭರಿತವಾಗಿ ಸ್ವಾಗತಿಸಿದರು. ಬಳಿಕ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವ ಅಗತ್ಯವನ್ನು ಒತ್ತಿಹೇಳಿದರು. ಮುಂದಿನ ದಿನದಲ್ಲಿ ಜಿಲ್ಲಾದ್ಯಕ್ಷರಾದ ಜಾಕೆ ಮಾಧವ ಗೌಡರ ನೇತ್ರತ್ವದಲ್ಲಿ ಪಕ್ಷದ ಸಂಘಟನೆ ಬಲವರ್ಧನೆಗೆ ಒತ್ತು ನೀಡುವ ನಿಟ್ಟಿನಲ್ಲಿ “ನಮ್ಮ ನಡಿಗೆ ಕಾರ್ಯಕರ್ತರೆಡೆಗೆ” ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಈ ಕಾರ್ಯಕ್ರಮದ ಮೂಲಕ ಸ್ಥಳೀಯ ಮಟ್ಟದ ಕಾರ್ಯಕರ್ತರೊಂದಿಗೆ ನೇರವಾಗಿ ಭೇಟಿ ಮಾಡಿ ಅವರ ಅಭಿಪ್ರಾಯಗಳು, ಸಮಸ್ಯೆಗಳು ಹಾಗೂ ಸಲಹೆಗಳನ್ನು ಆಲಿಸಲಾಗುತ್ತದೆ. ಕಾರ್ಯಕರ್ತರೇ ಪಕ್ಷದ ಆಧಾರಸ್ತಂಭರಾಗಿದ್ದು, ಅವರ ಜೊತೆ ನಿರಂತರ ಸಂಪರ್ಕ ಬೆಳೆಸುವುದು ಮುಖ್ಯ ಉದ್ದೇಶವಾಗಿದೆ. ಆ ಮೂಲಕ ಹಳೆಯ ಕಾರ್ಯಕರ್ತರು ಮತ್ತು ಹೊಸ…

Read More

ಕಾರ್ಕಳ, ಮೇ 5: ಆಯುರ್ವೇದ ಚಿಕಿತ್ಸೆಯ ಹೆಸರಿನಲ್ಲಿ ಭಾರೀ ವಂಚನೆ ನಡೆದಿರುವ ಆಘಾತಕಾರಿ ಘಟನೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ರೋಗಿಣಿಯ ಗಂಭೀರ ಆರೋಗ್ಯ ಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ವೃದ್ಧ ವ್ಯಕ್ತಿಯಿಂದ ಲಕ್ಷಾಂತರ ರೂಪಾಯಿ ದೋಚಿರುವ ಪ್ರಕರಣ ಇದೀಗ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.ಬೆಳ್ಮಣ್ ಗ್ರಾಮದ ನಿವಾಸಿಯಾದ 68 ವರ್ಷದ ರೊನಾಲ್ಡ್ ರೋಡ್ರಿಗಸ್ ಅವರು ನೀಡಿದ ದೂರಿನ ಪ್ರಕಾರ, ಅವರ ಪತ್ನಿ ರೋಸಿ ಅವರು ಕ್ಯಾನ್ಸರ್ ಹಾಗೂ ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗಾಗಿ 2026ರ ಮಾರ್ಚ್ 23ರಂದು ಮಣಿಪಾಲದ ಕೆ.ಎಂ.ಸಿ. ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭದಲ್ಲಿ ಸಿದ್ದಾರ್ಥ್ ಎಂಬಾತ ಪರಿಚಯವಾಗಿದ್ದು, ತನ್ನ ತಾಯಿ ಇದೇ ರೀತಿಯ ಕಾಯಿಲೆಯಿಂದ ಆಯುರ್ವೇದ ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ ಎಂದು ನಂಬಿಕೆ ಮೂಡಿಸಿದ್ದಾನೆ.ಈ ನಂಬಿಕೆಯನ್ನು ಬಲಪಡಿಸಲು ಸಿದ್ದಾರ್ಥ್, ಮಾಧವ ಎಂಬಾತನ ಸಂಪರ್ಕ ನೀಡಿ, ದುಬಾರಿ ಆಯುರ್ವೇದ ಚಿಕಿತ್ಸೆ ಅಗತ್ಯವಿದೆ ಎಂದು ಹೇಳಿ ಹಣ ವರ್ಗಾವಣೆ ಮಾಡಲು ಪ್ರೇರೇಪಿಸಿದ್ದಾನೆ. ಪ್ರಾರಂಭದಲ್ಲಿ ಗೂಗಲ್ ಪೇ ಮೂಲಕ ಅನಿಲ್ ಪವಾರ್ ಹೆಸರಿನ ಖಾತೆಗೆ…

Read More

ಮಂಗಳೂರು: ತುಳುನಾಡು ಸಿನಿ ಪ್ರೇಮಿಗಳಿಗೆ ಕ್ರಿಕೆಟ್ ಉತ್ಸವದ ರಸದೌತಣ ನೀಡಲು ಸಜ್ಜಾಗಿರುವ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’ ತುಳು ಚಲನಚಿತ್ರವು ಮೇ 22ರಂದು ಕರಾವಳಿ ಜಿಲ್ಲೆಗಳಾದ್ಯಂತ ಭರ್ಜರಿಯಾಗಿ ತೆರೆಕಾಣಲಿದೆ. ಪ್ರಜ್ವಲ್ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡ ಈ ಚಿತ್ರವನ್ನು ಪ್ರಜ್ವಲ್ ಶೆಟ್ಟಿ ನಿರ್ಮಿಸಿ, ಕೀರ್ತನ್ ಭಂಡಾರಿ ಮೊದಲ ಬಾರಿಗೆ ನಿರ್ದೇಶಿಸಿದ್ದಾರೆ. 🏏 ಕ್ರಿಕೆಟ್ ಹಿನ್ನೆಲೆಯ ಕಥೆ – ಭಾವನೆಗಳ ಮಿಶ್ರಣ ದೊಡ್ಡ ಬಜೆಟ್‌ನಲ್ಲಿ ಮೂಡಿಬಂದಿರುವ ಈ ಚಿತ್ರವು ಕ್ರಿಕೆಟ್ ಆಟಗಾರರ ಬದುಕಿನ ಸುತ್ತ ಹೆಣೆದ ಮನಮುಟ್ಟುವ ಕಥೆಯನ್ನು ಒಳಗೊಂಡಿದೆ. ಹಾಸ್ಯ, ಪ್ರೇಮ ಮತ್ತು ಸಮಾಜಮುಖಿ ಸಂದೇಶಗಳ ಸಮತೋಲನದೊಂದಿಗೆ ಚಿತ್ರ ಪ್ರೇಕ್ಷಕರಿಗೆ ಹೊಸ ಅನುಭವ ನೀಡಲು ಸಿದ್ಧವಾಗಿದೆ. 🎭 ತಾರಾಗಣದ ವೈಭವ ಚಿತ್ರದಲ್ಲಿ ತುಳು ಚಿತ್ರರಂಗದ ಜನಪ್ರಿಯ ಕಲಾವಿದರ ಮಹಾ ಬಳಗವೇ ಕಾಣಿಸಿಕೊಳ್ಳಲಿದೆ. ಪ್ರಮುಖವಾಗಿ: ವಿನೀತ್ ಕುಮಾರ್, ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ದೀಪಕ್ ರೈ ಪಾಣಾಜೆ, ಪ್ರಕಾಶ್ ತುಮಿನಾಡು, ಉಮೇಶ್ ಮಿಜಾರು, ಸಮತಾ ಅಮೀನ್, ಅನ್ವಿತಾ…

Read More

ತುಳುನಾಡ ಸೂರ್ಯ : ದೇಶದ ರಾಜಕೀಯ ಪಟಲವನ್ನು ಕದಲಿಸಿದ 2026ರ ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಿದ್ದು, ಹಲವು ರಾಜ್ಯಗಳಲ್ಲಿ ರಾಜಕೀಯ ಸಮೀಕರಣಗಳು ಸಂಪೂರ್ಣವಾಗಿ ಬದಲಾಗಿರುವುದು ಸ್ಪಷ್ಟವಾಗಿದೆ. ಈ ಚುನಾವಣೆಯಲ್ಲಿ ಅನೇಕ ಅಚ್ಚರಿ ಫಲಿತಾಂಶಗಳು ಹೊರಬಿದ್ದಿದ್ದು, ಪರಂಪರागत ಬಲಿಷ್ಠ ಪಕ್ಷಗಳಿಗೆ ಹಿನ್ನಡೆಯಾಗಿರುವುದರ ಜೊತೆಗೆ ಹೊಸ ರಾಜಕೀಯ ಶಕ್ತಿಗಳ ಉದಯವೂ ಗಮನಸೆಳೆದಿದೆ.ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಸಾಧನೆ ಮಾಡಿ ಅಧಿಕಾರವನ್ನು ಕೈಸೇರಿಸಿಕೊಂಡರೆ, ಪುದುಚೇರಿಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮತ್ತೆ ಅಧಿಕಾರಕ್ಕೇರಿದೆ. ಇನ್ನೊಂದೆಡೆ, ತಮಿಳುನಾಡಿನಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಅಚ್ಚರಿ ಮೂಡಿಸುವ ಪ್ರದರ್ಶನ ನೀಡಿದ್ದು, ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸ್ಪಷ್ಟ ಬಹುಮತದೊಂದಿಗೆ ಜಯ ಸಾಧಿಸಿದೆ.ಪಶ್ಚಿಮ ಬಂಗಾಳ: ಬಿಜೆಪಿ ಭರ್ಜರಿ ಗೆಲುವುಮಮತಾ ಬಾನೆರ್ಜಿ ಅವರ ದೀರ್ಘಕಾಲದ ಆಡಳಿತಕ್ಕೆ ಅಂತ್ಯ ಹಾಡುತ್ತ ಬಿಜೆಪಿ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೇರಿದೆ.ಒಟ್ಟು ಕ್ಷೇತ್ರಗಳು: 293• ಬಿಜೆಪಿ: 206 (ಸ್ಪಷ್ಟ ಬಹುಮತ)• ಟಿಎಂಸಿ: 81• ಕಾಂಗ್ರೆಸ್: 02• ಇತರೆ: 03ಅಸ್ಸಾಂ: ಬಿಜೆಪಿಗೆ…

Read More

ಉಡುಪಿ, ಮೇ 1: ತುಳುನಾಡ ರಕ್ಷಣಾ ವೇದಿಕೆ (ರಿ.), ಉಡುಪಿ ಜಿಲ್ಲಾ ಕಾರ್ಮಿಕ ಘಟಕದ ವತಿಯಿಂದ ಇಂದು ಅಂತರರಾಷ್ಟ್ರೀಯ ಕಾರ್ಮಿಕ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಉಡುಪಿ ನಗರದ ಅಕ್ಷಯ ಟವರ್ಸ್ ಸಮೀಪ, ಕಾಪಿಯಾ ಹೋಟೆಲ್ ಬಳಿಯ ಸಿಟಿ ಬಸ್ ನಿಲ್ದಾಣದ ಹತ್ತಿರ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಹಾಗೂ ಜಿಲ್ಲೆಯ ಗಣ್ಯರು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು.ಉದ್ಘಾಟಕರಾಗಿ ಕಾಪು ಬಾಲಜಿ ಯೋಗಿಶ್ .ವಿ .ಶೆಟ್ಟಿ ಮುಖ್ಯ ಅಥಿತಿಗಳಾಗಿ ಉದ್ಯಮಿ ಅಜಿತ್ ಶೆಟ್ಟಿ ಸುಶಂತ್ ಬ್ರಹ್ಮಾವರMember Of Federation Of Kanrataka Chamber of Commerce Bangalore, ಸಂತೋಷ್, ಹಿರಿಯ ಕಾರ್ಮಿಕ ನಿರೀಕ್ಷಕರಾದ ವಿಜೇಂದ್ರ .ಕೆ.ಬಾಗವಹಿಸಿದ್ದರು , ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜೆಡಿಎಸ್ ಉಡುಪಿ ಜಿಲ್ಲಾಧ್ಯಕ್ಷರಾದ ಯೋಗಿಶ್ ವಿ. ಶೆಟ್ಟಿ ಅವರು, ಮುಂದಿನ ದಿನಗಳಲ್ಲಿ H. D. Kumaraswamy ಅವರು ರಾಜ್ಯದ ಮುಖ್ಯಮಂತ್ರಿಯಾಗುವ ಸಂದರ್ಭ ಎದುರಾದರೆ, ತುಳು ಭಾಷೆಯನ್ನು ಭಾರತೀಯ ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವುದು ಹಾಗೂ ರಾಜ್ಯದ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ…

Read More

ಹೆಬ್ರಿ ತಾಲೂಕಿನ ನಾಡ್ಪಾಲ್ ಗ್ರಾಮದ ಜನತಾ ಕಾಲೋನಿ ಸುತ್ತಮುತ್ತ ಅರಣ್ಯ ಪ್ರದೇಶಗಳಲ್ಲಿ ಕಸದ ಸಮಸ್ಯೆ ತೀವ್ರ ರೂಪ ಪಡೆದುಕೊಂಡಿದ್ದು, ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಎಲ್ಲೆಂದರಲ್ಲಿ ಸುರಿಯಲಾಗುತ್ತಿರುವ ಕಸದ ರಾಶಿಗಳನ್ನು ದನಗಳು, ನಾಯಿಗಳು ಹಾಗೂ ಕಾಡು ಪ್ರಾಣಿಗಳು ತಿಂದು ಇಡೀ ಪರಿಸರಕ್ಕೆ ಹರಡುವ ಸ್ಥಿತಿ ಉಂಟಾಗಿದೆ. ಇದರಿಂದ ಪರಿಸರ ಮಾಲಿನ್ಯ ಹೆಚ್ಚಾಗುವುದರ ಜೊತೆಗೆ ಆರೋಗ್ಯ ಸಮಸ್ಯೆಗಳ ಭೀತಿಯೂ ಎದುರಾಗಿದೆ. ಗ್ರಾಮದಲ್ಲಿ ತ್ಯಾಜ್ಯ ವಿಲೇವಾರಿ ವ್ಯವಸ್ಥೆಗೆ ಮೂಲಭೂತ ಸೌಕರ್ಯಗಳ ಕೊರತೆ ಸ್ಪಷ್ಟವಾಗಿ ಗೋಚರಿಸುತ್ತಿದೆ. ಹೆಬ್ರಿ ತಾಲೂಕಿನ ನಾಡ್ಪಾಲ್ ಗ್ರಾಮ ಪಂಚಾಯಿತಿಗೆ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಲು ಸೂಕ್ತ ಜಾಗದ ಕೊರತೆ ಹಲವು ವರ್ಷಗಳಿಂದ ಸಮಸ್ಯೆಯಾಗಿಯೇ ಉಳಿದಿದೆ. ರಾಜ್ಯದ ಎರಡನೇ ಅತಿ ದೊಡ್ಡ ಗ್ರಾಮವೆಂದು ಗುರುತಿಸಿಕೊಂಡಿರುವ ಈ ಭಾಗದಲ್ಲಿ ಹೆಚ್ಚಿನ ಪ್ರದೇಶ ಅರಣ್ಯ ಭೂಮಿಯಿಂದ ಆವೃತವಾಗಿರುವುದರಿಂದ, ಹೊಸ ಘಟಕಕ್ಕೆ ಜಾಗ ಗುರುತಿಸುವುದು ಕಷ್ಟಕರವಾಗಿದೆ. ಪ್ರಸ್ತುತ ಸೋಮೇಶ್ವರ ಪೇಟೆಯ ಕಸವನ್ನು ಪ್ರತಿದಿನ ಹೆಬ್ರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಾಗಿಸಲಾಗುತ್ತಿದೆ. ಇದರಿಂದ ಈಗಿರುವ ವ್ಯವಸ್ಥೆಯ…

Read More